Site icon Vistara News

Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

Actor Darshan Chethan Kumar on Darshan Case

ಬೆಂಗಳೂರು: ನಟ ಚೇತನ್‌ ಅಹಿಂಸಾ (Chethan Kumar) ತಮ್ಮ ಹೇಳಿಕೆ ಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದರೂ ಕೂಡ. ಎರಡೆರಡು ಬಾರಿ ಜೈಲಿಗೆ ಕೂಡ ಹೋಗಿ ಬಂದರು. ಇದೀಗ ದರ್ಶನ್ ಬಂಧನ ಕುರಿತು ಮಾಧ್ಯಮದ ಜತೆ ಮಾತನಾಡಿದ್ದಾರೆ. ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸ್ಟಾರ್ ಗಳಿಗೆ ಯೋಗ್ಯತೆ ಮೀರಿ ತುಂಬಾ ಬಿಲ್ಡಪ್ ಸಿಕ್ಕಿದೆ ಎಂದಿದ್ದಾರೆ.

ಚೇತನ್‌ ಅಹಿಂಸಾ ಮಾತನಾಡಿ ʻʻನಾನು ದರ್ಶನ್‌ ಅವರನ್ನು ಹಲವು ಸಲ ಭೇಟಿಯಾಗಿದ್ದೇನೆ. ಅವರು ದೊಡ್ಡ ಸ್ಟಾರ್‌. ಕೋಟಿ ಕಲೆಕ್ಷನ್‌ ಮಾಡುವ ಹೀರೊ. ಆದರೆ ಸಿನಿಮಾ ರಂಗದಲ್ಲಿ ವಿಚಾರಣ, ನಡವಳಿಕೆ, ಅಲೋಚನೆ, ಪ್ರತಿಭೆ ಇದಕೆಲ್ಲ ಬೆಲೆ ಇಲ್ಲ. ಹಣಕ್ಕೆ ಮಾತ್ರ ಬೆಲೆ. ದರ್ಶನ್‌ ಈ ಕೊಲೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆರೋಪಿ ನಿಜ. ಆದರೆ ಅಪರಾಧಿ ಅಲ್ಲ. ಬಹಳ ಗಂಭೀರ ವಾದ ಆರೋಪ ಇದು. ಸುಮ್ಮನೆ ಪೊಲೀಸರು ಸಮಯ ವ್ಯರ್ಥ ಮಾಡಿಕೊಂಡು ಇಲ್ಲದೇ ಇರುವುದನ್ನು ಹುಟ್ಟು ಹಾಕುವುದಿಲ್ಲ. ನಿರ್ಧಾರ ಬರಲಿ. ದರ್ಶನ್‌ ಹಾಗೂ ರೇಣುಕಾ ಸ್ವಾಮಿ ಸಮಸ್ಯೆ ಅಲ್ಲʼʼಎಂದು ಮಾತು ಶುರು ಮಾಡಿದರು.

ʻʻಹೀರೋಗಳು ಸತ್ತಾಗ ಸ್ಮಾರಕಗಳನ್ನು ಅವರೇ ಮಾಡಿಕೊಳ್ಳಲಿ, ಅವರು ಮಾಡಿರುವ ಸಿನಿಮಾಗಳಿಗೆ ಸಂಭಾವನೆ ಪಡೆದಿರುತ್ತಾರೆ. ಕೋಟಿ ಹಣ ಅವರ ಬಳಿ ಇರುತ್ತೆ. , ಚಿತ್ರರಂಗದಲ್ಲಿ ಮೌನ ಬಿಟ್ಟು ಸತ್ಯ ಹೇಳುವ ಕೆಲಸವನ್ನು ಎಲ್ಲರೂ ಮಾಡಬೇಕು ರೇಣುಕಾಸ್ವಾಮಿ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದ್ದು ನಂಬ್ತೀವಿ, ಆದರೆ ಅದೇ ದರ್ಶನ್ ಕೊಲೆ ಆರೋಪಿ ಅಂದ್ರೆ ನಂಬಲ್ಲ, ಹೀಗಾಗಿಯೇ ಸ್ಟಾರ್ ಸಂಸ್ಕೃತಿ ಅನ್ನೋದು ಅಳಿಸಬೇಕು. ಚಿತ್ರರಂಗದ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕ. ದರ್ಶನ್ ಆರೋಪಿಯಷ್ಟೇ ಅಪರಾಧಿಯಲ್ಲ ಆದರೆ ಅವರ ಮೇಲೆ ಗಂಭೀರ ಆರೋಪ ಇದೆʼʼ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ʻʻಸೆಲ್ ಅಲ್ಲಿ ದರ್ಶನ್‌ ಅವರು ಇರಬಹುದು. ಆದರೆ ಬ್ಯಾರೆಕ್ಸ್ ಅಲ್ಲಿ ಇರುವುದು ಕಷ್ಟ. ನಾನು ಹೋರಾಟದ ಮೇಲೆ ಎರಡು ಸಲ ಜೈಲಿಗೆ ಹೋಗಿದ್ದೆ. ಮೊದಲ ಬಾರಿ ನಾನು ಜೈಲಿಗೆ ಹೋದಾಗ 6 ಜನರಿರುವ ಸೆಲ್ ನಲ್ಲಿ ಹಾಕಿದ್ದರು. ಎರಡನೇ ಬಾರಿ 40 ಜನರಿರುವ ಬ್ಯಾರೆಕ್ಸ್ ನಲ್ಲಿ ಹಾಕಿದ್ದರು. ಜೈಲಿನ ಊಟ ನನಗೆ ಯಾವತ್ತು ಸಮಸ್ಯೆಯಾಗಲಿಲ್ಲ ಬದಲಿಗೆ ಜೈಲೂಟ ನನಗೆ ಸಖತ್ ಇಷ್ಟವಾಯಿತು. ಜೈಲಿನಲ್ಲಿ ಮುದ್ದೆ ಸ್ವಲ್ಪ ಗಟ್ಟಿ ಇರುತ್ತದೆ. ನನ್ನ 39ನೇ ಹುಟ್ಟುಹಬ್ಬವನ್ನು ನಾನು ಜೈಲಿನಲ್ಲಿ ಆಚರಿಸಿಕೊಂಡೆ ಆಗ ಪುಳಿಯೋಗರೆ ಮಾಡಿದ್ದರು, ಆಗ ತುಂಬಾ ಚೆನ್ನಾಗಿತ್ತು. ಪುಳಿಯೋಗರೆ ಅಷ್ಟೇ ಅಲ್ಲ ಚಿತ್ರಾನ್ನ, ಅನ್ನ ಸಾಂಬಾರು, ಎಲ್ಲವೂ ಚೆನ್ನಾಗಿತ್ತು ಎಂದು ಹೇಳಿದ್ದಾರೆ. ದರ್ಶನ್ ಅವರಿಗೆ ಜೈಲೂಟ ಯಾಕೆ ಇಷ್ಟವಾಗ್ತಿಲ್ಲ ಎನ್ನುವುದು ಗೊತ್ತಿಲ್ಲʼʼ ಎಂದು ಕೂಡ ಚೇತನ್ ಅಹಿಂಸಾ ಹೇಳಿದ್ದಾರೆ.

Exit mobile version