Site icon Vistara News

Actor Darshan: ದರ್ಶನ್ ಪರ ಇನ್ನೂ ಯಾಕೆ ಬೇಲ್‌‌ಗೆ ಅರ್ಜಿ ಸಲ್ಲಿಕೆ ಮಾಡಿಲ್ಲ? ವಕೀಲರು ಹೇಳೋದು ಏನು?

Actor Darshan D Boss Lawyer Reaction

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renuka Swamy Murder) ಪ್ರಕರಣದಲ್ಲಿ ಇಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ (Actor Darshan) ಸೇರಿ ಎಲ್ಲ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಲಯ (Court) ಆರೋಪಿಯನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ (Police custody) ನೀಡಲಿದೆಯೇ ಅಥವಾ ನ್ಯಾಯಾಂಗ ಬಂಧನ (Judicial custody) ವಿಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಿದೆಯೇ ಎಂದು ತಿಳಿದುಬರಲಿದೆ. ನಟ ದರ್ಶನ್ ಪರ ವಕೀಲ ರಂಗನಾಥ್ ರೆಡ್ಡಿ, ಅನಿಲ್ ಬಾಬು ಆರೋಪಿಗಳ ಭೇಟಿಗೆ ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ.

ʻʻಇವತ್ತು ಆರೋಪಿಗಳನ್ನು ಐದು ಗಂಟೆಗಳ ಒಳಗಡೆ ಪ್ರೊಡ್ಯೂಸ್ ಮಾಡಬೇಕು. ಬಹುತೇಕ ತನಿಖೆ ಮುಗಿದಿರಬಹುದು. ಬೇಲ್ ಸಂಬಂಧ ನಾವು ಚರ್ಚೆ ಮಾಡಿದ್ದೇವೆ. ದರ್ಶನ್‌ ಜತೆ ಮಾತಾಡಿದ್ದೇವೆ. ಅವರ ಆರೋಗ್ಯ ಚೆನ್ನಾಗಿದೆ‌. ಜಾಮೀನು ಅರ್ಜಿ ಹಾಕೋದಕ್ಕೆ ಇನ್ನೂ ಸಮಯ ಇದೆ. ಇನ್ನೂ ಕೆಲವು ದಿನ ಸಮಯ ಹಿಡಿಯುತ್ತೆ. ಒಂದು ವಾರ ಬೇಕಾಗಬಹುದು. ನಾವು ಚರ್ಚೆ ಮಾಡಿ ನಂತರ ಮೂವ್ ಮಾಡುತ್ತೇವೆʼʼಎಂದು ಅನಿಲ್ ಬಾಬು ಹೇಳಿಕೆ ನೀಡಿದರು

ದರ್ಶನ್ ಪರ ವಕೀಲ ರಂಗನಾಥ್ ರೆಡ್ಡಿ ಮಾತನಾಡಿ ʻʻಕಸ್ಟಡಿಗೆ ಕೇಳೋದು ತನಿಖಾಧಿಕಾರಿಗಳ ನಿರ್ಧಾರ. ಆದರೆ ಬಹುತೇಕ ತನಿಖೆ ಮುಗಿದಿರಬಹುದು. ನಿನ್ನೆ ಆರೋಪಿಗಳಿಗೆ ಡಿಎನ್ಎ ಟೆಸ್ಟ್ ಮಾಡಿದ್ದಾಗಿದೆ. ಪರೀಕ್ಷೆಗೆ ಕೋರ್ಟ್ ಅನುಮತಿ ಬೇಕು, ಸ್ಯಾಂಪಲ್ ಪಡೆಯಲು ಬೇಕಾಗುತ್ತದೆ. ಆದರೆ ಪೊಲೀಸರು ತಗೊಂಡಿದ್ದಾರಾ ಇಲ್ವೊ ಗೊತ್ತಿಲ್ಲ. ಡಿಎನ್ಎ ಟೆಸ್ಟ್ ಮಾಡಿದ್ರಾ ಇಲ್ವೊ ಅನ್ನೋದು ನಮಗೆ ಗೊತ್ತಿಲ್ಲ. ಅದೇಲ್ಲಾ ಚಾರ್ಜ್‌ಶೀಟ್‌ನಲ್ಲಿ ಇರುತ್ತದೆ. ಅಲ್ಲಿ ನಮಗೆ ಗೊತ್ತಾಗುತ್ತೆʼʼಎಂದರು.

ಇದನ್ನೂ ಓದಿ: Actor Darshan: ಆಸ್ಪತ್ರೆಗೆ ಕರೆದೊಯ್ಯುವಾಗ ಫುಲ್‌ ಟೆನ್ಷನ್‌ ಆಗಿದ್ರು ಪವಿತ್ರಾ ಗೌಡ! ಜೈಲು ಸೇರಿದ್ರೆ ಗತಿ ಏನು?

ಪತಿ ಮಾಡಿದ ಕೆಲಸದಿಂದ ಪತ್ನಿಗೂ ಸಂಕಷ್ಟ !

ಕೊಲೆ ಆರೋಪದಲ್ಲಿ ದರ್ಶನ್ ಲಾಕ್ ಆಗಿದ್ದು, ಪತ್ನಿ ವಿಜಯಲಕ್ಷ್ಮಿ ನಿನ್ನೆ 5 ಗಂಟೆ 20 ನಿಮಿಷಗಳ ಕಾಲ ವಿಚಾರಣೆ ಎದುರಿಸಿದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಯಲ್ಲಿ ಇದ್ದರು ವಿಜಯಲಕ್ಷ್ಮಿ. ಕೊಲೆ ಕೇಸ್ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆದ ದಿ‌ನ ನೀವು ಮನೆಯಲ್ಲಿ ಇದ್ರಾ..? ದರ್ಶನ್ ಮನೆಗೆ ಎಷ್ಟೊತ್ತಿಗೆ ಬಂದಿದ್ರು..? ಕೊಲೆ ನಡೆದ ದಿನ ದರ್ಶನ್ ಬಳಸಿದ್ದ ಶೂ ನೀವಿದ್ದ ಅಪಾರ್ಟ್ಮೆಂಟ್‌ಗೆ ಬಂದಿದ್ದೇಗೆ..? ನಿಮಗೆ ಕೊಲೆ ನಡೆದಿದ್ದರ ಬಗ್ಗೆ ಗೊತ್ತಿತ್ತಾ..? ಹೀಗೆ ಅನೇಕ ಪ್ರಶ್ನೆಗಳನ್ನ ವಿಜಯಲಕ್ಷ್ಮಿ ಮುಂದಿಟ್ಟಿದ್ದರು ತನಿಖಾಧಿಕಾರಿಗಳು. ಪೊಲೀಸರ ಪ್ರಶ್ನೆಗಳಿಗೆ ಉತ್ತರ ಕೂಡ ನೀಡಿದ್ದಾರೆ ವಿಜಯಲಕ್ಷ್ಮಿ. ರೇಣುಕಾಸ್ವಾಮಿ ಕೊಲೆ ಬಗ್ಗೆ ಗೊತ್ತಿಲ್ಲ.. ದರ್ಶನ್ ಕಾಸ್ಟ್ಯೂಮ್ ಅಸಿಸ್ಟೆಂಟ್ ನಮ್ಮ ಮನೆಗೆ ದರ್ಶನ್ ಶೂ ತಂದಿಟ್ಟಿದ್ದ.. ಬೇರೆ ವಿಚಾರ ಗೊತ್ತಿಲ್ಲ ಎಂದು ವಿಜಯಲಕ್ಷ್ಮಿ ಉತ್ತರ ನೀಡಿದ್ದಾರೆ. ವಿಜಯಲಕ್ಷ್ಮಿ ಹೇಳಿಕೆ ಪಡೆದು ವಿಡಿಯೊ ರೆಕಾರ್ಡ್ ಮಾಡಿಕೊಂಡಿದ್ದಾರೆ ಪೊಲೀಸರು.

ಇಂದು ಕೋರ್ಟ್‌ ಮುಂದೆ ದರ್ಶನ್‌ ಹಾಜರು, ಕಸ್ಟಡಿಗೋ ಜೈಲಿಗೋ ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renuka Swamy Murder) ಪ್ರಕರಣದಲ್ಲಿ ಇಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ (Actor Darshan) ಸೇರಿ ಎಲ್ಲ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಲಯ ಆರೋಪಿಯನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಲಿದೆಯೇ ಅಥವಾ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಿದೆಯೇ ಎಂದು ತಿಳಿದುಬರಲಿದೆ.

ನಟ ದರ್ಶನ್ ಸೇರಿ ಎಲ್ಲ 17 ಮಂದಿ ಆರೋಪಿಗಳನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ದರ್ಶನ್‌ನನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಜೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾನೆ.

Exit mobile version