Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ? - Vistara News

ಸ್ಯಾಂಡಲ್ ವುಡ್

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Actor Darshan: ಪರಪ್ಪನ ಅಗ್ರಹಾರ ಜೈಲಿನೊಳಗೆ ಕೈದಿಗಳ ಜತೆಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕುಳಿತಿದ್ದ ಕಾರಣಕ್ಕೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಳ್ಳಾರಿ/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Chitradurga Renukaswamy murder case) ಬಂಧಿಯಾಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರ ಆಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸಬಾರೆಂದು ಕರೆತಂದಿದ್ದರು. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ರಿಗೆ ಮೊದಲು ಮೆಡಿಕಲ್ ಚೆಕಪ್‌ಗೆ ಕರೆದೊಯ್ದಲಾಗಿತ್ತು. ಬಳಿಕ ದರ್ಶನ್‌ಗೆ ನಿಗದಿ ಮಾಡಿದ್ದ ಸೆಲ್‌ಗೆ ಬಿಡಲಾಗಿದೆ.

ಗಾಡಿಗೆ ಅಡ್ಡ ಬಂದ ಹಸುಗಳು

ನಟ ದರ್ಶನ್‌ ಕರೆತರುವಾಗ ಸೆಂಟ್ರಲ್ ಜೈಲ್ ರಸ್ತೆಯಲ್ಲಿ ಹತ್ತಾರು ಹಸುಗಳು ಅಡ್ಡಬಂದಿದ್ದವು. ಬಳಿಕ ಪೊಲೀಸ್‌ ಸಿಬ್ಬಂದಿಯೇ ಹಸುಗಳು ಬೇಗ ಹೋಗಲಿ ಎಂದು ಓಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಓಡಿಸುವ ವೇಳೆ ಬೆದರಿದ ಘಟನೆಯು ನಡೆದಿದೆ.

ಹೈದರ್‌ಬಾದ್‌ ರಸ್ತೆ ಮೂಲಕ ಬಳ್ಳಾರಿ ತಲುಪಿದ ಪೊಲೀಸರು

ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ಎರಡು ಬೊಲೇರೋ ಹಾಗೂ ಒಂದು ಟಿಟಿ ವಾಹನ ಪ್ರತ್ಯೇಕವಾಗಿ ಗುರುವಾರ ಬೆಳಗ್ಗೆ 5:28ಕ್ಕೆ ದೇವನಹಳ್ಳಿ ಟೋಲ್ ಪಾಸ್ ಆದ ದೃಶ್ಯ ಲಭ್ಯವಾಗಿದೆ. ದೇವನಹಳ್ಳಿ ಸಾದಹಳ್ಳಿ ಟೋಲ್‌ನಲ್ಲಿ ಪೊಲೀಸರಿಂದ ದರ್ಶನ್ ಕರೆದುಕೊಂಡು ಹೋಗುತ್ತಿರುವ ವಾಹನಗಳು ಪಾಸ್ ಮಾಡಿಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾರೆ. ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇತ್ತ ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಕರೆತರಲಿದ್ದಾರೆ. ರಾಜ್ಯದಲ್ಲೇ ಹೈ ಟೆಕ್ ಕಾರಾಗೃಹ ಎಂಬ ಖ್ಯಾತಿ ಹೊಂದಿರುವ ಶಿವಮೊಗ್ಗ ಜೈಲು ಕೊರಿಯನ್ ಮಾದರಿಯಲ್ಲಿದೆ. 270 ಕೊಠಡಿ ಹೊಂದಿರುವ ಕೇಂದ್ರ ಕಾರಗೃಹದಲ್ಲಿ 773 ಜನ ಖೈದಿಗಳು ಇದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದು ಯಾಕಾಗಿ?

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದರು. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿತ್ತು. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆದಿದ್ದರು.

ಯಾವ್ಯಾವ ಜೈಲಿಗೆ ಯಾರು?

  1. 1.ಬಳ್ಳಾರಿ‌ ಜೈಲಿಗೆ ದರ್ಶನ್
    2.ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
  2. 3.ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
  3. 4.ಧಾರವಾಡ ಜೈಲಿಗೆ ಧನರಾಜ್
  4. 5.ವಿಜಯಪುರ ಜೈಲಿಗೆ ವಿನಯ್
  5. 6.ಕಲಬುರುಗಿ ಜೈಲಿಗೆ ನಾಗರಾಜ್
  6. 7.ಬೆಳಗಾವಿ ಜೈಲಿಗೆ ಪ್ರದೂಶ್

ಜೈಲು ಸಿಬ್ಬಂದಿ ಜತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್‌ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್‌ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ. ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್‌ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್‌ಗೆ ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜ್‌ಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜ್‌ಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಚೇತನ್‌ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೆರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೆಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರ ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading
Advertisement
ಪ್ರಮುಖ ಸುದ್ದಿ6 minutes ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ25 minutes ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest21 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest24 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest3 days ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest3 days ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌