Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌! - Vistara News

ಸ್ಯಾಂಡಲ್ ವುಡ್

Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

Actor Darshan: ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

VISTARANEWS.COM


on

Actor Darshan Fans troll ACP Chandan kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿಬರುತ್ತಿದ್ದಕ್ಕೆ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್ ಹಾಗೂ ವಿಜಯನಗರದ ಎಸಿಪಿ ಚಂದನ್‌ ಕುಮಾರ್‌ ಕಾರ್ಯಪ್ರವೃತ್ತರಾಗಿದ್ದರು. ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಎಸಿಪಿ ಚಂದನ್ ಕಾರ್ಯದಕ್ಷತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನಟ ದರ್ಶನ್ ಅಭಿಮಾನಿಗಳು ಮಾತ್ರ ಅವರನ್ನು ಟಾರ್ಗೆಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

ಈ ವರ್ಷ ನಟ ದರ್ಶನ್ ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಎಸಿಪಿ ಚಂದನ್ ಸಹ ಅಲ್ಲಿಗೆ ಹೋಗಿದ್ದರು. ನಟ ದರ್ಶನ್ ಕೈ ಕುಲುಕಿ ಶುಭ ಕೋರಿದ್ದರು. ಈ ವೀಡಿಯೋವನ್ನು ಕೆಲವರು ವೈರಲ್ ಮಾಡಿ `ಹುಲಿ ಅಂತೆ ಹುಲಿ, ಈ ಹುಲಿಗೆ ಹೆಬ್ಬುಲಿ ಡಿ ಬಾಸ್’ ಎಂದು ಹಾಕಿದ್ದಾರೆ.ದರ್ಶನ್ ಸರ್ ಬರ್ತ್‌ಡೇಗೂ ಅವನೇ ಸೆಕ್ಯೂರಿಟಿ ಆಗಿದ್ದ, ಇವಾಗ ಡಿಬಾಸ್ ಜೈಲಿಂದ ರಿಲೀಸ್ ಆಗಬೇಕಾದ್ರೆ ಇವನೇ ಸೆಕ್ಯೂರಿಟಿ ಆಗಿರ್ತಾನೆ ಅಂತೆಲ್ಲಾ ಬರೆದು ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Actor Darshan: ನಿನ್ನೆ ಅಮವಾಸ್ಯೆ ಪ್ರಯುಕ್ತ ಬನಶಂಕರಿ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪತಿಯನ್ನ ಆಚೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಗಳ‌ ಮೋರೆ ಹೋಗಿದ್ದಾರೆ. ಅತ್ತ
ಮಾವನಿಗಾಗಿ ಅಳಿಯ ಕೂಡ ಆರತಿ ಉಕ್ಕಡದಲ್ಲಿ ದರ್ಶನ್ ಅಳಿಯ ಚಂದನ್ ನಿಂದ ವಿಶೇಷ ಪೂಜೆ ನೆರವೇರಿದೆ.

VISTARANEWS.COM


on

Actor Darshan wife Vijayalakshmi darshan temple run
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿ ಮಾಡಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಪೊಲೀಸರು ಈ ವರೆಗೆ ಸುಮಾರು 200 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರಂತೆ. ಇದರ ಬೆನ್ನಲ್ಲೇ ಗಂಡನ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನ ಸುತ್ತುತ್ತಿದ್ದಾರೆ.

ನಿನ್ನೆ ಅಮವಾಸ್ಯೆ ಪ್ರಯುಕ್ತ ಬನಶಂಕರಿ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪತಿಯನ್ನ ಆಚೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಗಳ‌ ಮೋರೆ ಹೋಗಿದ್ದಾರೆ. ಅತ್ತ
ಮಾವನಿಗಾಗಿ ಅಳಿಯ ಕೂಡ ಆರತಿ ಉಕ್ಕಡದಲ್ಲಿ ದರ್ಶನ್ ಅಳಿಯ ಚಂದನ್ ನಿಂದ ವಿಶೇಷ ಪೂಜೆ ನೆರವೇರಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ ಆರತಿ ಉಕ್ಕಡ ದೇಗುಲವಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಂತ್ರಜ್ಞಾನದ ಬಳಕೆಯನ್ನು ಪೊಲೀಸರು ಮಾಡುತ್ತಿದ್ದು ಸಾಕ್ಷ್ಯವನ್ನು ಇನ್ನಷ್ಟು ಪ್ರಬಲಗೊಳಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರುವ ಶೆಡ್, ದರ್ಶನ್ ಮನೆ, ಸ್ಟೂನಿ ಬ್ರೂಕ್ ರೆಸ್ಟೊರೆಂಟ್, ಶೆಡ್​ಗೆ ಹೋಗುವ ರಸ್ತೆ ಇನ್ನೂ ಹಲವು ಕಡೆಗಳಿಂದ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗಿರುವ ಮೊಬೈಲ್ ವಿಡಿಯೋಗಳನ್ನು ಸಹ ಕಲೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಕ್ಷಿಗಳನ್ನು ಇನ್ನಷ್ಟು ಬಲಗೊಳಿಸಲು ವಿಷ್ಯುಯಲ್ ಕಂಪಾರಿಷನ್ ತಂತ್ರಜ್ಞಾನವನ್ನು ಪೊಲೀಸರು ಬಳಸಿದ್ದಾರೆ ಎನ್ನಲಾಗಿದೆ. ವಿಷ್ಯುಲ್ ಕಂಪಾರಿಷನ್​ನಿಂದ ಬೇರೆ ಬೇರೆ ವಿಡಿಯೋಗಳಲ್ಲಿರುವ ವ್ಯಕ್ತಿಗಳು ಒಬ್ಬರೇ ಹೌದೇ ಅಲ್ಲವೆ ಎಂಬುದು ತಿಳಿಯುತ್ತದೆ. ಹಾಗೂ ವಿಡಿಯೋ ನಕಲಿಯೇ, ಅಸಲಿಯೇ, ಗ್ರಾಫಿಕ್ಸ್ ಮಾಡಲಾಗಿದೆಯೇ ಇನ್ನಿತರೆ ವಿಷಯಗಳು ಸಹ ತಿಳಿದು ಬರಲಿದೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ‌ ಪ್ರಮುಖವಾಗಿ ಬಳಸಿರೋ‌ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ‌ ಮಾಡಿರೋದು ತನಿಖೆ ವೇಳೆ ಬೆಳಕಿಗೆ. ಪ್ರಕರಣದ ಆರೋಪಿ ಧನರಾಜ್‌ ಅಮೆಜಾನ್‌ನಲ್ಲಿ ಮೆಗ್ಗರ್ ಡಿವೈಸ್ ಬುಕ್ ಮಾಡಿದ್ದು, ಅದರ ಬೆಲೆ 699 ರೂಪಾಯಿಗಳಾಗಿದೆ. ಇನ್ನು ಬುಕ್ ಮಾಡಿದ ಮೆಗ್ಗರ್ ಅನ್ನು ಸ್ವೀಕರಿಸುವ ವೇಳೆ ಸ್ಕ್ಯಾನರ್ ಮೂಲಕ ಹಣ ಪೇ ಮಾಡಲು ಧನರಾಜ್ ಯತ್ನಿಸಿದ್ದ. ಆದರೆ ಅಮೆಜಾನ್ ಪೇ ಕೋಡ್‌ ಸ್ಕ್ಯಾನ್ ಮಾಡಿದ ವೇಳೆ ಹಣ ಸೆಂಡ್ ಆಗದ ಕಾರಣ ಆನ್ ಲೈನ್ ಮೂಲಕ ಹಣವನ್ನು ಕಳುಹಿಸಿದ್ದ ಧನರಾಜ್. ಆ ಹಣವನ್ನು ಡೆಲಿವರಿ ಬಾಯ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದು ಕಂಪನಿಗೆ ನೀಡಿದ್ದ. ಸದ್ಯ ಆ ಮಾಹಿತಿ ಕಲೆ ಹಾಕಿರೋ ಪೊಲೀಸರು ಮೆಗ್ಗರ್ ಡಿವೈಸ್ ಧನರಾಜ್‌ಗೆ ತಂದುಕೊಟ್ಟ ಡೆಲಿವರಿ ಬಾಯ್‌ನ ವಿಚಾರಣೆ ಮಾಡಿ ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Continue Reading

ಸಿನಿಮಾ

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. “ಮೈ ಮ್ಯಾರೇಜ್ ಈಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ”ದ್ವಾಪರ ದಾಟುತ” ಹಾಡುಗಳು ಹಿಟ್‌ ಆಗಿವೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Krishnam Pranaya Sakhi
Koo

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಹಾಗೂ ಮಾಳವಿಕಾ ನಾಯರ್‌ ನಟಿಸಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾದ ದ್ವಾಪರ ದಾಟುತ ಸೇರಿ ಮೂರು ಹಾಡುಗಳು ಹಿಟ್‌ ಆಗಿವೆ. ಇದರ ಬೆನ್ನಲ್ಲೇ, ಚಿತ್ರತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಸೋನು ನಿಗಮ್‌ ಹಾಡಿರುವ ಹೇ ಗಗನ ಎಂಬ ರೊಮ್ಯಾಂಟಿಕ್‌ ಹಾಡನ್ನು ಭಾನುವಾರ (ಆಗಸ್ಟ್‌ 4) ಬಿಡುಗಡೆ ಮಾಡಲಾಗಿದೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.

“ಮೈ ಮ್ಯಾರೇಜ್ ಈಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಹಿಟ್‌ ಆದ ಬಳಿಕ ಬಿಡುಗಡೆಯಾದ, ಪಂಜಾಬಿ ಗಾಯಕ ಜಸ್‌ಕರಣ್‌ ಸಿಂಗ್‌ ಹಾಡಿರುವ ದ್ವಾಪರ ದಾಟುತ ಹಾಡಂತೂ ಯುಟ್ಯೂಬ್‌ ಸೇರಿ ಎಲ್ಲ ಜಾಲತಾಣಗಳಲ್ಲಿ ದಾಖಲೆ ಬರೆದಿದೆ. ಇದರ ಬೆನ್ನಲ್ಲೇ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇಲ್ಲಿದೆ ರೊಮ್ಯಾಂಟಿಕ್‌ ಸಾಂಗ್‌

ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. “ನಾನು ಗಣೇಶ್‌ ಅವರ ಅಭಿಮಾನಿಯಾಗಿದ್ದೇನೆ. ಅನಿಸುತಿದೆ ಯಾಕೋ ಇಂದು ಹಾಡು ನನಗೆ ಫೇವರಿಟ್ ಆಗಿದೆ. ಈಗ ಕನ್ನಡ ಸಿನಿಮಾದ ಹಾಡು ಹಾಡಿರುವುದು ಖುಷಿ ತಂದಿದೆ. ಕನ್ನಡಿಗರು ನೀಡಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೊಂದು ದಿನ ಸಾಧ್ಯವಾದರೆ ನಾನು ಕನ್ನಡತಿಯನ್ನೇ ಮದುವೆಯಾಗುವೆ” ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ನಟಿ ಮಾಳವಿಕಾ ನಾಯರ್‌ ಅವರು ಹೆಜ್ಜೆ ಹಾಕಿರುವ ದ್ವಾಪರ ದಾಟುತ ಹಾಡು ಯುಟ್ಯೂಬ್‌ನಲ್ಲಿ 1.3 ಕೋಟಿ (13 ದಶಲಕ್ಷ) ವ್ಯೂಸ್‌ ಪಡೆದುಕೊಂಡಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿಯೂ ಹಾಡು ದಾಖಲೆ ಬರೆದಿದೆ. ‌

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Continue Reading

ಸ್ಯಾಂಡಲ್ ವುಡ್

Jaskaran Singh: ಕನ್ನಡತಿಯನ್ನೇ ಮದುವೆ ಆಗುವೆ ಎಂದ ‘ದ್ವಾಪರ’ ಹಾಡಿನ ಗಾಯಕ ಜಸ್‌ಕರಣ್‌ ಸಿಂಗ್!

Jaskaran Singh: ಬೆಂಗಳೂರಿನಲ್ಲಿ ಭಾನುವಾರ (ಆಗಸ್ಟ್‌ 4) ಕೃಷ್ಣಂ ಪ್ರಣಯ ಸಖಿ ಸಿನಿಮಾದ ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗೆಯೆ, ಕನ್ನಡಿಗರು ನೀಡಿದ ಪ್ರೀತಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

Jaskaran Singh
Koo

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ನಟಿಸಿರುವ, ಆಗಸ್ಟ್‌ 15ರಂದು ತೆರೆಗೆ ಬರಲು ಸಿದ್ಧವಾಗಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾದ ‘ದ್ವಾಪರ ದಾಟುತ’ (Dwapara Kannada Song) ಹಾಡು ಕನ್ನಡಿಗರ ಮನ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಡು ವೈರಲ್‌ ಆಗಿದ್ದು, ಜನರು ಕೂಡ ಡಾನ್ಸ್‌ ಮಾಡಿದ ರೀಲ್ಸ್‌ ಹಂಚಿಕೊಳ್ಳುತ್ತಿದ್ದಾರೆ. ಇನ್ನು ದ್ವಾಪರ ದಾಟುತ ಹಾಡು ಹಾಡಿದ ಜಸ್‌ಕರಣ್‌ ಸಿಂಗ್‌ (Jaskaran Singh) ಅವರು ಪಂಜಾಬ್‌ನವರಾದರೂ ಕನ್ನಡಿಗರು ಅವರನ್ನು ಮೆಚ್ಚಿದ್ದಾರೆ. ಅಷ್ಟೇ ಅಲ್ಲ, ಮುಂದೊಂದು ದಿನ ಸಾಧ್ಯವಾದರೆ ಕನ್ನಡತಿಯನ್ನೇ ಮದುವೆಯಾಗುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ (ಆಗಸ್ಟ್‌ 4) ಕೃಷ್ಣಂ ಪ್ರಣಯ ಸಖಿ ಸಿನಿಮಾದ ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. “ನಾನು ಗಣೇಶ್‌ ಅವರ ಅಭಿಮಾನಿಯಾಗಿದ್ದೇನೆ. ಅನಿಸುತಿದೆ ಯಾಕೋ ಇಂದು ಹಾಡು ನನಗೆ ಫೇವರಿಟ್ ಆಗಿದೆ. ಈಗ ಕನ್ನಡ ಸಿನಿಮಾದ ಹಾಡು ಹಾಡಿರುವುದು ಖುಷಿ ತಂದಿದೆ. ಕನ್ನಡಿಗರು ನೀಡಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೊಂದು ದಿನ ಸಾಧ್ಯವಾದರೆ ನಾನು ಕನ್ನಡತಿಯನ್ನೇ ಮದುವೆಯಾಗುವೆ” ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ನಟಿ ಮಾಳವಿಕಾ ನಾಯರ್‌ ಅವರು ಹೆಜ್ಜೆ ಹಾಕಿರುವ ದ್ವಾಪರ ದಾಟುತ ಹಾಡು ಯುಟ್ಯೂಬ್‌ನಲ್ಲಿ 1.3 ಕೋಟಿ (13 ದಶಲಕ್ಷ) ವ್ಯೂಸ್‌ ಪಡೆದುಕೊಂಡಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿಯೂ ಹಾಡು ದಾಖಲೆ ಬರೆದಿದೆ. ‌

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್‌ಟೇನ್‌ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Continue Reading

ಸ್ಯಾಂಡಲ್ ವುಡ್

Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

Actor Kiran Raj: ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್‌ (Ronny Movie Teaser) ಅದನ್ನು ಇನ್ನೊಂದು ಹಂತಕ್ಕೇರಿಸಿದೆ.

VISTARANEWS.COM


on

Kiran Raj Ronny releasing on August 30th
Koo

ಬೆಂಗಳೂರು:ಕನ್ನಡತಿ ಧಾರಾವಾಹಿ (Kannadathi serial) ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್‌ರಾಜ್‌ (Actor Kiran Raj) ನಾಯಕನಾಗಿ ನಟಿಸುತ್ತಿರುವ ʻರಾನಿʼ  ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಸಿನಿಮಾ ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಗುರುತೇಜ್ ಶೆಟ್ಟಿ ನಿರ್ದೇಶನದ ಸ್ಟಾರ್ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾದ ಚಿತ್ರ ರಾನಿ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಈಗಾಗಲೇ ಟೀಸರ್ ಮತ್ತು ಹಾಡು ಬಿಡುಗಡೆ ಯಾಗಿ ಬಾರಿ ಸದ್ದು ಮಾಡಿದೆ. ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿದೆ. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್‌ (Ronny Movie Teaser) ಅದನ್ನು ಇನ್ನೊಂದು ಹಂತಕ್ಕೇರಿಸಿದೆ.

ಕನ್ನಡತಿಯಲ್ಲಿ ಪಕ್ಕದ ಮನೆ ಹುಡುಗನಂತಿದ್ದ ಕಿರಣ್‌ ರಾಜ್‌ನೊಳಗೆ ಇಷ್ಟೊಂದು ಬೆಂಕಿ ಎಲ್ಲಿತ್ತು ಎಂದು ಅಚ್ಚರಿಪಡುವಂತಿದೆ ಟೀಸರ್‌. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನುವುದು ಟೀಸರ್‌ ನೋಡಿದಾಗಲೇ ಗೊತ್ತಾಗುತ್ತದೆ. ʻನಾನು ಮನುಷ್ಯನಾಗಬಯಸುತ್ತೇನೆ, ಡಾನ್‌ ಅಲ್ಲʼ ಎಂದು ಕಿರಣ್‌ರಾಜ್‌ ಅಬ್ಬರಿಸುವ ದೃಶ್ಯವೊಂದು ಇದರಲ್ಲಿದೆ. ಇದರೊಂದಿಗೆ ಇದು ಆಕಸ್ಮಿಕವಾಗಿ ಭೂಗತ ಜಗತ್ತು ಪ್ರವೇಶಿಸಿದ ಅಮಾಯಕ ಯುವಕನೊಬ್ಬನ ಕಥೆಯಂತೆ ಕಾಣಿಸುತ್ತದೆ. ಜತೆಗೆ ಸಖತ್‌ ರೊಮ್ಯಾನ್ಸ್‌ ಕೂಡಾ ಕಾಣಿಸುತ್ತದೆ.

ಇದನ್ನೂ ಓದಿ: Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

ಟೀಸರ್‌ನಲ್ಲಿ ಕಿರಣ್‌ರಾಜ್‌ ಅವರ ಆಕ್ಷನ್‌, ರವಿಶಂಕರ್‌ ಅವರ ಅಬ್ಬರ ಕಣ್ಮನ ತಣಿಸುತ್ತದೆ. ಕಿರಣ್‌ ಅಂತೂ ಕಿಲ್ಲರ್‌ ಲುಕ್‌ನಿಂದ ಕೊಲ್ಲುತ್ತಾರೆ. ಮಣಿಕಾಂತ್‌ ಕದ್ರಿ ಅವರ ಹಿನ್ನೆಲೆ ಸಂಗೀತವೂ ಟೀಸರ್‌ಗೆ ಹೊಸ ರೂಪ ನೀಡಿದೆ.

ಈ ಚಿತ್ರದಲ್ಲಿ ಕಿರಣ್‌ ರಾಜ್‌ ಜತೆಗೆ ರವಿಶಂಕರ್‌, ಮೈಕೋ ನಾಗರಾಜ್‌, ನಾಗತಿಹಳ್ಳಿ ಚಂದ್ರಶೇಖರ್‌, ಬಿ ಸುರೇಶ್‌, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್‌ ಹೆಗ್ಡೆ, ಪ್ರಥ್ವೀರಾಜ್‌, ಯಶ್‌ ಶೆಟ್ಟಿ, ಉಮೇಶ್‌, ಸುಜಯ್‌ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್‌ ಮಲಾನಿ, ಅನಿಲ್‌, ಧರ್ಮೇಂದ್ರ ಅರಸ್‌, ಮನಮೋಹನ ರೈ ಮೊದಲಾದವರು ಇದ್ದಾರೆ. ಪ್ರಮೋದ್‌ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್‌ ಕದ್ರಿ ಟ್ಯೂನ್‌ ಹಾಕಿದ್ದಾರೆ.

ಇದೊಂದು ಪಕ್ಕಾ ಆಕ್ಷನ್‌ ಚಿತ್ರವಾಗಿದೆ. ಆದರೆ, ಅತ್ಯಂತ ಸೂಕ್ಷ್ಮ ಅಂಶಗಳನ್ನು ಬೆಸೆದುಕೊಂಡು ಕಟ್ಟಿದ ದೃಶ್ಯ ಕಾವ್ಯ ಎಂಬುದು ಟೀಸರ್‌ನಿಂದ ಸ್ಪಷ್ಟವಾಗುತ್ತದೆ. ರಾನಿ ಸಿನಿಮಾದಲ್ಲಿ ಆರು ಆಕ್ಷನ್‌ ಸೀನ್‌ಗಳಿವೆ ಎಂದು ಚಿತ್ರತಂಡ ಹೇಳಿದೆ.

Continue Reading
Advertisement
Gold Rate Today
ಚಿನ್ನದ ದರ13 mins ago

Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Actor Darshan wife Vijayalakshmi darshan temple run
ಸ್ಯಾಂಡಲ್ ವುಡ್13 mins ago

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Road Accident
ಬೆಂಗಳೂರು28 mins ago

Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

Rahul Gandhi
ವೈರಲ್ ನ್ಯೂಸ್35 mins ago

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

police inspector death thimmegowda
ಬೆಂಗಳೂರು48 mins ago

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

Road Accident
ತುಮಕೂರು48 mins ago

Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

Pot holes in Belgavi
ಬೆಳಗಾವಿ52 mins ago

Pot Holes: ರಾಜ್ಯ ಹೆದ್ದಾರಿಯ ಯಮಸ್ವರೂಪಿ ರಸ್ತೆ ಗುಂಡಿಗೆ ಗ್ರಾಪಂ ಸದಸ್ಯ ಬಲಿ

Double Ismart Trailer Ram Pothineni Sanjay Dutt
ಟಾಲಿವುಡ್58 mins ago

Double iSmart Trailer:  ಡಬಲ್ ಇಸ್ಮಾರ್ಟ್ ಟ್ರೈಲರ್‌ ಔಟ್‌; ಅಬ್ಬರಿಸಿದ ಸಂಜಯ್ ದತ್‌!

thawar chand gehlot cm siddaramaiah Governor versus state
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

Indian 2 Ott release official date announced
ಒಟಿಟಿ2 hours ago

Indian 2 Ott: ಇಂಡಿಯನ್ 2 ಒಟಿಟಿ ಸ್ಟ್ರೀಮಿಂಗ್ ಡೇಟ್ ಅನೌನ್ಸ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ22 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌