Actor Darshan: ದರ್ಶನ್‌ ಪ್ರಕರಣ; ಶಿವಣ್ಣನ ವಿರುದ್ಧ ಪ್ರಶಾಂತ್‌ ಸಂಬರಗಿ ಆಕ್ರೋಶ! - Vistara News

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಪ್ರಕರಣ; ಶಿವಣ್ಣನ ವಿರುದ್ಧ ಪ್ರಶಾಂತ್‌ ಸಂಬರಗಿ ಆಕ್ರೋಶ!

Actor Darshan: ಪ್ರಶಾಂತ್‌ ಸಂಬರಗಿ ಮತ್ತೊಂದು ದರ್ಶನ್‌ ವಿರುದ್ಧ ಪೋಸ್ಟ್‌ ಮಾಡಿದ್ದಾರೆ. ಹೊಸ ಪೋಸ್ಟ್‌ ಜತೆಗೆ ನಟ ಶಿವರಾಜ್‌ಕುಮಾರ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ʻʻಶಿವಣ್ಣ ಅವರು ದರ್ಶನ್‌ ವಿಚಾರದಲ್ಲಿ ಸೈಲೆಂಟ್‌ ಆಗಿರುವುದು ಯಾಕೆ? ನಿಮ್ಮ ಮೌನ ಸಮ್ಮತಿ ಇದೆಯಲ್ಲ.. ಎಲ್ಲೋ ಒಂದು ಕಡೆ ದುಷ್ಟರನ್ನು, ರೌಡಿಯನ್ನು ಬೆಳೆಸುತ್ತದ್ದೀರಾ ಎಂದು ನೇರ ಆಪಾದನೆ ಮಾಡುತ್ತೇನೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan incident shivarajkumar against by prashant sambaragi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದರ್ಶನ್‌ ಅರೆಸ್ಟ್‌ ಆದ ಬಳಿಕ (Actor Darshan) ಪ್ರಶಾಂತ್‌ ಸಂಬರಗಿ ಅವರು ಒಂದಲ್ಲ ಒಂದು ಹೇಳಿಕೆ ಪೋಸ್ಟ್‌ ಮಾಡುತ್ತಲೇ ಇದ್ದಾರೆ. ಇದೀಗ ದರ್ಶನ್‌ ಕುರಿತಾದ ಹೊಸ ಪೋಸ್ಟ್‌ ಜತೆಗೆ ನಟ ಶಿವರಾಜ್‌ಕುಮಾರ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ʻʻಶಿವಣ್ಣ ಅವರು ದರ್ಶನ್‌ ವಿಚಾರದಲ್ಲಿ ಸೈಲೆಂಟ್‌ ಆಗಿರುವುದು ಯಾಕೆ? ನಿಮ್ಮ ಮೌನ ಸಮ್ಮತಿ ಇದೆಯಲ್ಲ.. ಎಲ್ಲೋ ಒಂದು ಕಡೆ ದುಷ್ಟರನ್ನು, ರೌಡಿಯನ್ನು ಬೆಳೆಸುತ್ತದ್ದೀರಾ ಎಂದು ನೇರ ಆಪಾದನೆ ಮಾಡುತ್ತೇನೆʼʼಎಂದು ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಸಂಬರಗಿ ಮಾತನಾಡಿ ʻʻಶಿವರಾಜಕುಮಾರ್‌ ಅವರಲ್ಲಿ ನಾನು ಕೇಳುವುದು ಏನಂದರೆ ಈ ಘಟನೆಗೆ ನಿಮ್ಮ ಮೌನ ಸಮ್ಮತಿ ಸೂಚಿಸುತ್ತದೆ. ನೀವು ಈವರೆಗೂ ಒಂದೇ ಒಂದು ಮಾತನಾಡದೇ ಇರುವುದು ದರ್ಶನ್‌ ಮಾಡಿರುವ ಕರ್ಮಕಾಂಡಕ್ಕೆ ಸಮ್ಮತಿ ಸೂಚಿಸಿದಂತಾಗುತ್ತದೆ. ದರ್ಶನ್‌ ಅಟ್ಟಹಾಸಕ್ಕ ಮೊದಲು ನೀವು ಬಂದು ಮಾತನಾಡಬೇಕಿದೆ. ಅನೇಕ ಸಣ್ಣ ವಿಚಾರಗಳನ್ನು ಮಾತನಾಡುವ ನೀವು. ಈ ವಿಚಾರದಲ್ಲಿ ಸೈಲೆಂಟ್‌ ಆಗಿರುವುದು ಯಾಕೆ? ನಿಮ್ಮ ಮೌನ ಸಮ್ಮತಿ ಇದೆಯಲ್ಲ ಎಲ್ಲೋ ಒಂದು ಕಡೆ ದುಷ್ಟರನ್ನು, ರೌಡಿಯನ್ನು ಬೆಳೆಸುತ್ತದ್ದೀರಾ ಎಂದು ನೇರ ಆಪಾದನೆ ಮಾಡುತ್ತೇನೆ ಎಂದಿದ್ದಾರೆ. ಇನ್ನು ಹಲವು ಪೋಸ್ಟ್‌ಗಳನ್ನು ಮಾಡಿದ ಪ್ರಶಾಂತ್‌ ಸಂಬರಗಿ ಮತ್ತೊಂದು ದರ್ಶನ್‌ ವಿರುದ್ಧ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

ಪ್ರಶಾಂತ್‌ ಸಂಬರಗಿ ಪೋಸ್ಟ್‌

ʻಸೈಕೋ ಮುಲಾಮ್ ರಾಜಾ. ರೇಣುಕಾ ಸ್ವಾಮಿಗೆ ನ್ಯಾಯ ಸಿಗಲಿ.
ಡಿ ಬಾಸ್ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳತಾದ್ದಾನೆ. (Intermittent Explosive Disorder).
ಕನ್ನಡದಲ್ಲಿ ಈ ಮಾನಸಿಕ ಕಾಯಿಲೆ ಮರುಕಳಿಸುವ ಸ್ಫೋಟಕ ಅಸ್ವಸ್ಥತೆ ಅಂತ ಕರೀತಾರೆ. ನಿಂದನೀಯ, ಆಕ್ರಮಣಕಾರಿ ಮತ್ತು ಹಿಂಸ್ಮಾಕರಾದ ಪ್ರವೃತಿ ಈ ಕಾಹಿಲೆಯ ಲಕ್ಷಣ ಇನ್ನು ಈ ಸ್ಥಿತಿನಲ್ಲಿ ಇವನು ಕುಡಿದು ಮಾದಕ ಸೇವನೆ ಮಾಡಿದಾಗ ಇವನ ಕೈಗೆ ಸಿಕಾಡ್ಕೊಂಡ್ಬಿಟ್ರೆ ಶತ ಕೋಟಿ ದೇವರುಗಳು ಬಡಪಾಯಿಗಳನ್ನ ಉಳಿಸಕ್ಕೆ ಆಗಲ್ಲ.
ಫ್ರೆಂಡ್ಸ್ ನೀವು ಗಮನಿಸಿ ಈ ಸೈಕೋ ವ್ಯಕ್ತಿ ಯ ಎಲ್ಲಾ ಟಿವಿ ಸಂದರ್ಶನಗಳು ಮತ್ತು ಸಾರ್ವಜನಿಕ ಜಾಲತಾಣ ದಲ್ಲಿ ಲಭ್ಯವಿರುವ ಫೋಟೋಗಳನ್ನು ಸರಿಯಾಗಿ ಗಮನಿಸಿ ,ಇವನ ಬಲಗೈ ನಲ್ಲಿ ಬ್ಯಾಂಡೇಜ್ ಇರತ್ತೆ ,ಯಾಕೆ ಅಂದ್ರೆ ಇವನ ಹಿಂದಿನ ರಾತ್ರಿ ಯಾರೋ ಬಡಪಾಯಿಗೆ ಇವನ ವಿಶ್ವ ರೂಪ ನೋಡಿಸಿರ್ತಾನೆ. ಇವನ ಈ ವಿಚಿತ್ರ ನಡವಳಿಕೆ, ರೌಡಿಸಿಮ್ ಕೃತ್ಯಗಳು,ಅನೇಕರ ಮೇಲೆ ಹಲ್ಲೆಗಳು ಎಷ್ಟೋ ಜನರು ನೋಡಿದ್ದರೆ ,ಈ ಹಿಂಸಾ ಕೃತ್ಯವನ್ನು ಹಲವಾರು ಬಾರಿ ಪೊಲೀಸ್ ದೂರಿನ ಮೂಲಕ ದಾಖಲಿಸಲಾಗಿದೆ ಮತ್ತು ಈ ರಾಕ್ಷಸನಿಂದ ಹಲ್ಲೆ ಮತ್ತು ನಿಂದನೆಗೊಳಗಾದ ಜನರ ಪಟ್ಟಿ ದಿನ ದಿನಕ್ಕೆ ಹನುಮಂತನ ಬಾಲ ತರ ಬೆಳಿತಾಯಿದೆ. ಇನೊಂದು ಈ ಸೈಕೋದ ವಿಚಿತ್ರ ನಡವಳಿಕೆ ಗೊತ್ತ?
ಹೇಳ್ತಿನಿ ಕೇಳಿ ಮಾಡೋದಲ್ಲ ಮಾಡ್ಬಿಟ್ಟು ಇವನು ಮರುದಿನ ಬೆಳಿಗ್ಗೆ ತನ್ನ ಕೊಳಕು ವರ್ತನೆಗೆ ಪಶ್ಚಾತ್ತಾಪ ಮಾಡ್ಕೊಂಡು ಅವನೇ ಖುದ್ದಾಗಿ ಹಲ್ಲೆ ಮಾಡಿದ ಬಲಿಪಶುವಿಗೆ ಮುಲಾಮು ಹಚ್ತಾನಂತೆ ಈ ಮುಲಾಮು ರಾಜಾ ,ಮತ್ತೆ ರಾತ್ರಿಯಲ್ಲಿ ಅದೇ ಕ್ರೂರ ದಾಳಿಯನ್ನು ಪುನರಾವರ್ತಿಸುತ್ತಾನೆ.
Dasa is psyco he needs treatment.
ಇವಾಗ ನೀವೇ ಹೇಳಿ ಇವನ್ನನ ಬಿಡಬೇಕಾ?.
ಒಂದ್ angle ನಲ್ಲಿ ನೋಡಿದ್ರೆ ಪಾಪ ಅನ್ಸತ್ತೆ. Dasa needs treatmentʼʼಎಂದು ಬರೆದುಕೊಂಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comments

  1. mshashidhar

    21 ಜೂನ್ 2024, 4:07 ಅಪರಾಹ್ನ at 4:07 ಅಪರಾಹ್ನ

    ಸಾಂಬಾರಗಿ ತಾನೇ ಒಬ್ಬ ದೊಡ್ಡ ಮೇಧಾವಿ ಅನ್ನುವಂತೆ ಪೂರ್ವಾಗ್ರಹಪೀಡಿತ ಆಗಿದೆ,,, ಹಲಾಲ್ ಮತ್ತು ಜಟಕಾ ವಿವಾದದಲ್ಲಿ ತಾನು ಯಾವ ಮಟ್ಟಕ್ಕೂ ಇಳಿಯುವೆ ಅನ್ನುವ ಪ್ರದರ್ಶನ ಮಾಡಿಕೊಂಡವನು,,ಈ ಘಟನೆ ವರದಿಯಾದಾಗಿನಿಂದ,, ಕೆಲವು ಕೂಗುಮಾರಿ ಕೋಮುವ್ಯಾಧಿ ಪುರೋಹಿತಶಾಹಿ ಮೋಧ್ಯಮಗಳು ಮತ್ತು ಬಿಸ್ಕೆಟ್ ಚಾನಲ್ ಗಳು ಮತ್ತು ಒಂದು ಪಂಥದಲ್ಲಿ ಗುರುತಿಸಿಕೊಂಡವರು ಕರುಳು ಕಿತ್ತು ಬರುವಂತೆ ಒದರುವ ಪರಿ ನೋಡಿದರೆ ರಾಜಕೀಯ ಪ್ರೇರಿತ ಈ ಗುಂಪು ಮತ್ತೆ ತಮ್ಮ ಪೂರ್ವಾಗ್ರಹಪೀಡಿತ ಹೇಸಿಗೆಯನ್ನು ಸಾರಿಸುತ್ತಿರುವ ಸಂಶಯಕ್ಕೆ ಕಾರಣವಾಗಿದೆ

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ಸೆ.30ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ಸೆ.30ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿದೆ. ವಿನಯ್‌ ಮೊಬೈಲ್‌ ಮತ್ತೊಮ್ಮೆ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲು ಒಪ್ಪಿಗೆ ನೀಡಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy murder case) ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ (Actor Darshan) ಸೆ. 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿದೆ. ಮಂಗಳವಾರ ತನಿಖಾಧಿಕಾರಿ ಚಂದನ್ ಅವರು ನ್ಯಾಯಾಲಯಕ್ಕೆ ಹಾರ್ಡ್ ಡಿಸ್ಕ್‌ಗಳಲ್ಲಿ ಟೆಕ್ನಿಕಲ್ ಎವಿಡೇನ್ಸ್ ಹಾಗೂ 17 ಪ್ರತಿಗಳನ್ನು ಸಲ್ಲಿಕೆ ಮಾಡಿದರು.

ಈ ವೇಳೆ ಸಿಎಫ್‌ಎಸ್‌ಎಲ್‌ ವರದಿಯನ್ನು ತೆರೆಯಲು ವಕೀಲರು ಅನುಮತಿ ಕೋರಿದರು. ಸಿಎಸ್‌ಎಫ್‌ಎಲ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದ್ದೇವೆ. ನೀವು ಅನುಮತಿ ಕೊಟ್ಟರೆ ಪ್ರಕರಣದ 17 ಆರೋಪಿಗಳಿಗೂ ಸೀಲ್ ಓಪನ್ ಮಾಡಿ ಜೆರಾಕ್ಸ್‌ ಮಾಡಿ ಕಾಪಿ ಕೊಡುತ್ತೇವೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದರು. ಈ ವೇಳೆ ಮುಂದಿನ ವಿಚಾರಣೆಯ ಒಳಗೆ ಸಿಎಸ್‌ಎಫ್‌ಎಲ್ ಜೆರಾಕ್ಸ್‌ ಪ್ರತಿ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.

ವಿನಯ್‌ ಮೊಬೈಲ್‌ ಮತ್ತೊಮ್ಮೆ ಎಫ್‌ಎಸ್‌ಎಲ್‌ಗೆ ರವಾನೆ

ಬಳಿಕ A10 ಆರೋಪಿ ವಿನಯ್‌ ಅವರ ಮೊಬೈಲ್‌ ಅನ್ನು ಮತ್ತೊಮ್ಮೆ ಎಫ್‌ಎಸ್‌ಎಲ್‌ಗೆ ಕಳುಹಿಸಲು ಕೋರ್ಟ್‌ಗೆ ತನಿಖಾಧಿಕಾರಿ ಮನವಿ ಮಾಡಿದರು. ಮೊಬೈಲ್‌ನಲ್ಲಿ ಇನ್ನು‌ ಕೆಲ ಸಾಕ್ಷ್ಯಗಳ ಸಂಗ್ರಹ ಆಗಬೇಕಿದೆ ಎಂದಾಗ ನ್ಯಾಯಾಧೀಶರು ಮನವಿಗೆ ಸಮ್ಮತಿಸಿದರು.

ನಟ ದರ್ಶನ್‌ಗೆ ಬೆನ್ನು ನೋವು

ನಟ ದರ್ಶನ್‌ಗೆ ತುಂಬಾ ಬೆನ್ನು ನೋವು ಇದೆ. ನೆಲದ ಮೇಲೆ ಕೂರಲು ಆಗುತ್ತಿಲ್ಲ. ಚೇರ್ ಕೊಡುವಂತೆ ಕೇಳಿದ್ದರೂ ಚೇರ್ ಕೊಟ್ಟಿಲ್ಲ. ದಯವಿಟ್ಟು ಪ್ಲ್ಯಾಸ್ಟಿಕ್ ಚೇರ್ ವ್ಯವಸ್ಥೆ ಮಾಡಿಕೊಡಿ ಎಂದು ದರ್ಶನ್‌ ಪರ ವಕೀಲರು ಮನವಿ ಮಾಡಿದರು. ಈ ಸಂಬಂಧ ಜೈಲಾಧಿಕಾರಿಗಳ ಬಳಿಯೇ ಮನವಿ ಮಾಡಿ ಎಂದು ನ್ಯಾಯಾಧೀಶರು ತಿಳಿಸಿದರು. ಜೈಲಾಧಿಕಾರಿಗಳಿಗೆ ಮನವಿ ಮಾಡಿದರೂ ಅವರು ಪ್ರತಿಕ್ರಿಯೆ ಕೊಡುತ್ತಿಲ್ಲ ಎಂದು ದರ್ಶನ್ ಪರ ವಕೀಲರು ಉತ್ತರಿಸಿದಾಗ, ಜೈಲಿನ ಮ್ಯಾನುವಲ್‌ ಪ್ರಕಾರ ಕೊಡುತ್ತಾರೆ ಬಿಡಿ ಎಂದು ನ್ಯಾಯಾಧೀಶರು ತಿಳಿಸಿದರು.

ಪವಿತ್ರಗೌಡ ಪರ ವಕೀಲರು ಕುಟುಂಬ ಸದಸ್ಯರಿಗೆ ಭೇಟಿಯಾಗಲು ಜೈಲಾಧಿಕಾರಿಗಳು ಬಿಡುತ್ತಿಲ್ಲ ಎಂದು ಗಮನಕ್ಕೆ ತಂದರು. ಆ ಸಂಬಂಧ ಎಲ್ಲ ಸರಿ ಮಾಡೋಣಾ ಬಿಡಿ, ಊಟ-ತಿಂಡಿಗೆ ಏನಾದರೂ ಸಮಸ್ಯೆ ಇದೇಯಾ ಎಂದು ಕೇಳಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಲಾಯಿತು.

ರೇಣುಕಾಸ್ವಾಮಿ ಕೊಲೆ ಕೇಸ್‌ನ A13 ಆರೋಪಿ ಶಾಸಕ ಮುನಿರತ್ನ ಸಂಬಂಧಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರ್‌ಆರ್ ನಗರ ಶಾಸಕ ಮುನಿರತ್ನ ಹೆಸರು ಕೇಳಿ ಬಂದಿದೆ. ಮುನಿರತ್ನ ಸಂಬಂಧಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ13ನೇ ಆರೋಪಿ ಆಗಿದ್ದಾನೆ. ದರ್ಶನ್ ಗ್ಯಾಂಗ್‌ನ‌ ಎ13 ಆರೋಪಿ ದೀಪಕ್ ಎಂಬಾತ ಶಾಸಕ ಮುನಿರತ್ನರ ಸಂಬಂಧಿಯಾಗಿದ್ದಾನೆ.

ಆರೋಪಿ ದೀಪಕ್ ರೇಣುಕಾಸ್ವಾಮಿ ಹತ್ಯೆ ಮಾಡಿದ ಬಳಿಕ ವಿಡಿಯೊ ಮಾಡಿ ಅದನ್ನು ಶಾಸಕ ಮುನಿರತ್ನ ಅವರಿಗೆ ಕಳಿಸಿದ್ದ ಎನ್ನಲಾಗಿದೆ. ಅದೇ ವಿಡಿಯೊವನ್ನು ಶಾಸಕರ ಸೂಚನೆ ಮೇರೆಗೆ ಕೇಂದ್ರ ಸಚಿವರಿಗೆ ರವಾನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಳಿಕ ಕೇಂದ್ರ ಸಚಿವರನ್ನ ಬಳಸಿಕೊಂಡು ನಗರ ಪೊಲೀಸ್ ಆಯುಕ್ತರಿಗೆ ಬ್ಲ್ಯಾಕ್‌ ಮೇಲ್ ಮಾಡಲಾಗಿದೆ ಎನ್ನಲಾಗಿದೆ. ಶಾಸಕ ಮುನಿರತ್ನ ಅವರ ವೈಯಕ್ತಿಕ ಲಾಭಕ್ಕೆ ದಯಾನಂದ್ ಅವರಿಗೆ ಕರೆ ಮಾಡಿ ಬ್ಲ್ಯಾಕ್‌ ಮೇಲ್ ಮಾಡಿದ್ದಾರೆ ಎನ್ನಲಾಗಿದೆ.

ಸಿಬಿಐ ಹೆಸರು ಹೇಳಿ ಅವರಿಂದ ದಾಳಿ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರಂತೆ. ಈ ಮೂಲಕ ನಗರ ಪೊಲೀಸರನ್ನು ಬೆದರಿಸಿದ್ದರಂತೆ. ರೇಣುಕಾಸ್ವಾಮಿ ಹತ್ಯೆಯ ಬಗ್ಗೆ ಗೊತ್ತಿದ್ದರೂ ಕಾನೂನು ಕ್ರಮದ ಬಗ್ಗೆ ಶಾಸಕರು ಒತ್ತಾಯ ಮಾಡಿದ್ದರಂತೆ. ತನ್ನ ವೈಯಕ್ತಿಕ ವಿಚಾರ ಇತ್ಯಾರ್ಥ ಪಡಿಸಿಕೊಳ್ಳಲು ನಗರ ಪೊಲೀಸರಿಗೆ ಬೆದರಿಕೆ ಹಾಗೂ ತನ್ನ ಸಂಬಂಧಿ ದೀಪಕ್‌ನನ್ನು ಪ್ರಕರಣದಿಂದ ಕೈ ಬಿಡಲು 5 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರಂತೆ. ಈ ಬಗ್ಗೆ ಬಂದ ಮೌಖಿಕ ಮಾಹಿತಿ ಆಧಾರಿತವಾಗಿ ದೂರು ದಾಖಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಕೈವಾಡದ ಬಗ್ಗೆ ತನಿಖೆ ನಡೆಸುವಂತೆ ವಕೀಲ ಜಗದೀಶ್ ಅವರಿಂದ ನಗರ ಪೊಲೀಸ್ ಆಯುಕ್ತರಿಂದ ಇ-ಮೇಲ್ ಮೂಲಕ ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Kaalapatthar Film Review : ಕಾಲಾಪತ್ಥರ್ : ಕಪ್ಪು ಕಲ್ಲಿನ ಪುತ್ಥಳಿ ಸುತ್ತಲು ವಿಸ್ಮಯ ಕಥನ

Kaalapatthar Film Review : ಸೆ.13ಕ್ಕೆ ತೆರೆ ಕಂಡ ಕಾಲಾಪತ್ಥರ್‌ ಕನ್ನಡ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ (Film Review) ವ್ಯಕ್ತವಾಗಿದೆ. ಈ ಚಿತ್ರದಲ್ಲಿ ವಿಕ್ಕಿವರುಣ್ ನಿರ್ದೇಶಕನಾಗಿ ಸೈ ಎನಿಸಿಕೊಳ್ಳುವುದರ ಜತೆಗೆ ನಟನೆಯನ್ನೂ ನಿರ್ವಹಿಸಿರುವುದು ಪ್ರಶಂಸನೀಯ.

VISTARANEWS.COM


on

By

Kaalapatthar film
Koo
Shivaraj DNS

-ಶಿವರಾಜ್ ಡಿ.ಎನ್.ಎಸ್

ಸಾಮಾನ್ಯ ಮನುಷ್ಯನೊಬ್ಬನ ಜೀವನದಲ್ಲಿ ನಡೆಯುವ ವಿಚಿತ್ರ ಘಟನೆ. ಪರಿವರ್ತನೆಯೋ, ಪರಿಸ್ಥಿತಿಯೋ ಏನೋ ಇವತ್ತು ಹೊಗಳುವವರು, ನಾಳೆ ಉಗುಳುತ್ತಾರೆ. ಸೈನಿಕ ಅಂದರೆ ಬಂದೂಕು ಹಿಡಿದು ಗಡಿಯಲ್ಲಿ ಎದೆಯೊಡ್ಡಿ ನಿಲ್ಲುವವರಷ್ಟೆ ಅಲ್ಲ, ಸೇನೆಯ ಅಡುಗೆ ಕೋಣೆಯಲ್ಲಿ ಸೌಟ್ ಹಿಡಿಯುವರು, ಯುದ್ಧ ಭೂಮಿಯಲ್ಲಿ ಸ್ಟೇರಿಂಗ್ ಹಿಡಿಯುವವರೂ ಸೈನಿಕರೆ. ಊರಿನ ಒಳಿತಿಗಾಗಿ ಏನಾದರೂ ತ್ಯಾಗ ಮಾಡಬಹುದು ಆದರೆ ನಮ್ಮ ಜೀವವನ್ನೆ ತ್ಯಾಗ ಮಾಡುವಂತ ಸ್ಥಿತಿ ಎದುರಾದರೆ.? ಇಂತಹ ಹತ್ತಾರು ಗಮನಾರ್ಹ ವಿಷಯಗಳ ಸುತ್ತ ಸುತ್ತುವ ಕಥೆಯೇ ಕಾಲಾಪತ್ಥರ್‌ (Kaalapatthar Film Review).

ಸಿನಿಮಾ ಅದ್ಭುತ ಛಾಯಗ್ರಹಣದೊಂದಿಗೆ ಒಂದು ಸುಂದರ ಹಳ್ಳಿಯ ವಾತಾವರಣ ಸೃಷ್ಟಿಸುತ್ತ ತೆರೆದುಕೊಳ್ಳುತ್ತದೆ. ಕಥೆ ಸಾಗುತ್ತ ಬರಡು ಬಯಲು ಪ್ರದೇಶದ ಕುಗ್ರಾಮದ ಯುವಕ ಶಂಕರ್ ಸೇನೆಯಲ್ಲಿದ್ದಾನೆ. ಅವನ ಊರಿನಲ್ಲಿ ನೀರು, ರಸ್ತೆ, ರಾಜಕೀಯ ಮುಂತಾದ ಸಮಸ್ಯೆಗಳಿವೆ. ಅಣ್ಣಾವ್ರ ಅಭಿಮಾನಿಯಾಗಿರುವ ಶಂಕರ್‌ಗೂ ಅವನದೇ ಆದ ಸಮಸ್ಯೆಯ ಜತೆಗೆ ಅವನಿಗಾಗಿ ಕಾಯತ್ತಿರುವ ಪ್ರೇಯಸಿಯೂ ಇದ್ದಾಳೆ. ಇಂತಹ ವಿಷಯ ಮಂಡನೆ ಮಾಡಿ ಪ್ರೇಕ್ಷಕರೊಂದಿಗೆ ಕನೆಕ್ಟಾಗಲೂ ಶುರುವಾಗುತ್ತದೆ. ಬಂದೂಕು ಹಿಡಿಯುವ ಆಸೆ ಇರುವ ಶಂಕರ್‌ನ ಕೈಯಿಗೆ ಸೇನೆಯಲ್ಲಿ ಸೌಟ್ ಕೊಟ್ಟಿದ್ದಾರೆ. ಅದು ಯಾಂತ್ರಿಕವಾದರು ಆನಂದದಿಂದ ಅನುಭವಿಸುತ್ತಲೆ, ಏನೆ ಮಾಡಿದರೂ ಸ್ಟೈಲಾಗಿ ಮಾಡುತ್ತ, ತನ್ನ ಪಾಡಿಗೆ ತಾನು ಕಾರ್ಯನಿರ್ವಹಿಸುತ್ತಿರುತ್ತಾನೆ.

ಹೀಗೆ ಒಮ್ಮೆ ಸಮಯ ನೋಡಿ ಕ್ಯಾಂಪಿಗೆ ನುಗ್ಗಿ ಏನೊ ಕಿತಾಪತಿ ಮಾಡಲು ಮುಂದಾಗಿದ್ದ ವೈರಿಗಳನ್ನು ಕಾಣುವ ಶಂಕರ ಏಕಾಂಗಿಯಾಗಿ ಸ್ಟೋರ್ ರೂಮು, ಅಡುಗೆ ಕೋಣೆಯನ್ನೆಲ್ಲ ಅಟ್ಟಾಡಿಸಿ, ತನ್ನ ಚಮಚ-ಸೌಟು ಬಕೇಟಿನಲ್ಲಿ ಬಡಿದಾಡಿ ಹೆಡೆಮುರಿಕಟ್ಟಿ, ತಾನೂ ಗಾಯಗೊಂಡು ಆಸ್ಪತ್ರೆ ಸೇರುತ್ತಾನೆ. ಹೀಗೆ ವೈರಿಗಳೊಂದಿಗೆ ಹೋರಾಡಿದ ಕುರಿತು ವಿಶೇಷ ಕಾರ್ಯಕ್ರಮ ಮಾಡಿ ಬಿತ್ತರಿಸುವ ನ್ಯೂಸ್ ಚಾನೆಲ್‌ಗಳೆಲ್ಲ ಶಂಕರನ ಹೀರೋ ಮಾಡುವುದರ ಜತೆಗೆ ಅವನ ಊರನ್ನೂ ತಲುಪಿ, ದೇಶಕ್ಕಾಗಿ ಇಷ್ಟೆಲ್ಲ ಮಾಡಿರುವ ನಿಮ್ಮೂರಿನ ಯೋಧನಿಗಾಗಿ ಗ್ರಾಮಸ್ಥರು ಏನ್ಮಾಡ್ತಿರಿ.? ಎನ್ನುವ ಪ್ರಶ್ನೆ ಮಾಡುತ್ತಾರೆ. ಆಗ ಊರ ಗೌಡರು ಊರು ಕಾಯೋ ಶಿವ ಬೇರೆಯಲ್ಲ, ದೇಶ ಕಾಯೊ ಶಂಕರ ಬೇರೆಯಲ್ಲ, ಅವನದೂ ನಮ್ಮೂರಿನಲ್ಲೊಂದು ಪ್ರತಿಮೆಯನ್ನೇ ಮಾಡಿ ನಿಲ್ಲಿಸುತ್ತೇವೆ ಎಂದು ತೀರ್ಮಾನಿಸುತ್ತಾರೆ.

Kaalapatthar Film

ಸೈನಿಕ ಶಂಕರ ಮನೆಗಷ್ಟೆ ಅಲ್ಲ, ಊರಿಗೆ ಊರೆ ಹೆಮ್ಮೆಪಡುವಂತ ಶಂಕರ್ರಣ್ಣನಾಗಿ ನಿಲ್ಲುತ್ತಾನೆ. ಕೋಟೆ ಬಾಗಿಲ ಬಳಿ ಕರಿಕಲ್ಲಿನಿಂದ ಕೆತ್ತುವ ಅವನ ಪ್ರತಿಮೆಯೂ ನಿಲ್ಲುತ್ತದೆ. ಅದು ಅಲ್ಲಿಯ ರಾಜಕಾರಣಿಗೆ ಹಿಡಿಸುವುದಿಲ್ಲ. ಹೀಗೆ ಕಥೆಯ ವೈಚಿತ್ರ್ಯ ತೆರದು ಕೊಳ್ಳುತ್ತಾ,.. ಪ್ರೇಕ್ಷಕರ ಕುತೂಹಲವನ್ನೂ ಕೆರಳಿಸುತ್ತ ಸಾಗುತ್ತದೆ. ಅಲ್ಲಿಂದಾಚೆಗೆ ಶಂಕರನ ಹಾಗೂ ಊರಿನ ಒಳಗೊರಗೆ ಏನಾಗುತ್ತದೆ ಎನ್ನುವುದೇ ಸಿನಿಮಾ.

ಸಾಮಾನ್ಯವಾಗಿ ಯಾವಾಗ ಮನೆಗೆ ಬರ್ತಿಯಪ್ಪ ಮಗನೇ ಅಂತಾ ತಂದೆ-ತಾಯಿ ಕಣ್ಣೀರು ಹಾಕೋದು ನೋಡಿರುವ ಪ್ರೇಕ್ಷಕರು, ನೀನು ಮನೆಯಿಂದ ಯಾವಾಗ ಹೋಗ್ತಿಯಪ್ಪ ಅಂತ ಕಣ್ಣೀರು ಹಾಕುತ್ತ ಕೈ ಮುಗಿದು ಕೇಳಿಕೊಳ್ಳುವುದನ್ನು ಈ ಸಿನಿಮಾದಲ್ಲಿ ನೋಡಬಹುದು. ನಿಜ ಜೀವನದಲ್ಲಿಯೂ ನಡೆಯಬಹುದಾದ ಕೆಲ ವಿಚಿತ್ರ ಘಟನೆಗಳು ಯಾರೊಬ್ಬರಿಗೂ ಹೇಳಿಕೊಳ್ಳಲಾಗದ, ಹೇಳಿಕೊಂಡರೂ ನಂಬಲಾಗದ ಸಂದಿಗ್ಧ ಸ್ಥಿತಿಗೆ ತಲುಪುವ ಮನುಷ್ಯನ ಪಾಡು, ಕಾಯಕವೇ ಕೈಲಾಸ ಎನ್ನುವ ತತ್ವ ಖುದ್ದು ಅಣ್ಣಾವ್ರೆ (ಡಾ. ರಾಜಕುಮಾರ್‌) ತೆರೆಗೆ ಬಂದು ಹೇಳುವಂತ ವಿಶೇಷ ದೃಶ್ಯವನ್ನೂ ಈ ಸಿನಿಮಾದಲ್ಲಿ ಕಾಣಬಹುದು.

ಕಾಕತಾಳಿಯವೋ, ವಿಧಿ ಲಿಖಿತವೊ, ಕೆಲ ಅಹಂಕಾರ ಪ್ರದರ್ಶನ ದೃಶ್ಯದಲ್ಲಿ ಪ್ರಸ್ತುತದಲ್ಲಿರುವ ಮನಸ್ಥಿತಿಯೊಂದರ ಪರಿಸ್ಥಿತಿಗೆ ಕೈಗನ್ನಡಿ ಅನ್ನಿಸಬಹುದು. ಅಣ್ಣಾವ್ರು ಅಭಿಮಾನಿಗಳನ್ನು ದೇವರು ಎಂದದ್ದು ಯಾಕೆ ಎನ್ನುವುದರ ಹಿಂದಿನ ಸತ್ಯವೂ ಈ ಚಿತ್ರದಲ್ಲಿ ಹೇಳಿರುವಂತೆಯೇ ಇರಬಹುದೇನೂ ಅನಿಸುತ್ತದೆ. ರಾವಣಾ ಕೃತಿಯನ್ನು ಬಹಿರಂಗವಾಗಿ ಒಪ್ಪದ ಒಬ್ಬ ಮನುಷ್ಯ ಅಂತರಂಗದಲ್ಲಿ ತನಗೆ ಗೊತ್ತಿಲ್ಲದಂತೆ ಅಪ್ಪಿಕೊಂಡಿರುತ್ತಾನೆ ಎನ್ನುವ ವಿಷಯ, ದುಡಿಮೆಯೇ ದೇವರು ಎನ್ನುವ ಬರಹದ ಅಡಿಯಲ್ಲಿ ಇಸ್ಪೀಟು ಆಡುವ ದೃಶ್ಯ ನೆನಪಿನಲ್ಲಿ ಉಳಿಯುತ್ತದೆ.

ನಿರ್ದೇಶಕನಾಗುವ ಕನಸು ಹೊತ್ತು ಚಿತ್ರರಂಗ ಪ್ರವೇಶಿಸಿ ಕೆಂಡಸಂಪಿಗೆ ಚಿತ್ರದ ಮೂಲಕ ನಟನಾಗಿ ಸೈ ಎನಿಸಿಕೊಂಡಿದ್ದ ವಿಕ್ಕಿವರುಣ್, ಈ ಚಿತ್ರದಲ್ಲಿ ನಿರ್ದೇಶಕನಾಗಿ ಸೈ ಎನಿಸಿಕೊಳ್ಳುವುದರ ಜತೆಗೆ ನಟನೆಯನ್ನೂ ನಿರ್ವಹಿಸಿರುವುದು ಪ್ರಶಂಸನೀಯ. ನಾಯಕಿಯಾಗಿ ಧನ್ಯ ರಾಮ್ ಕುಮಾರ್, ಊರ ಗೌಡನಾಗಿ ಟಿ.ಎಸ್. ನಾಗಾಭರಣ , ರಾಜಕಾರಣಿಯ ಪಾತ್ರದ ರಾಜೇಶ್ ನಟರಂಗ, ನಟನ ಅಪ್ಪನ ಪಾತ್ರದಲ್ಲಿ ಶಿವಪ್ರಸಾದ್ ಎಲ್ಲರೂ ಪಾತ್ರಗಳಿಗೆ ವಿಶೇಷ ಮೆರಗು ನೀಡಿದ್ದಾರೆ.

ಪ್ರೀತಿ-ಪ್ರೇಮ-ಪ್ರಣಯಕ್ಕೆ ಇನ್ನೂ ತುಸು ಜಾಗ ನೀಡಬೇಕಿತ್ತು ಅನಿಸಬಹುದು. ಆದರೆ ಸಿನಿಮಾದ ಮುಖ್ಯ ಕಥೆ ಅದಲ್ಲದೇ ಇರುವುದರಿಂದ ಈಗ ಎಷ್ಟು ಇದ್ಯೋ ಅಷ್ಟೇ ಚೆಂದ. ಇತ್ತ ಹಳೆ ಮೈಸೂರು ಅಲ್ಲ, ಅತ್ತ ಉತ್ತರ ಕರ್ನಾಟಕದ ಹಳ್ಳಿಯೂ ಅಲ್ಲ. ಅಂತಹದ್ದೇ ಯಾವುದೊ ಹಳ್ಳಿ ಎನ್ನಬಹುದಾದ ಒಂದು ಕಾಲ್ಪನಿಕ ಹಳ್ಳಿಯಲ್ಲಿ ನಡೆಯುವ ಕಥೆ ಎನ್ನುವಂತೆ ಡೈರೆಕ್ಟರ್ ಗಟ್ಟಿ ಮನಸ್ಸು ಮಾಡಿ ಒಂದು ಪ್ರಾದೇಶಿಕತೆಯೊಂದಿಗೆ ಹೆಣೆದಿದ್ದರೇ ಚಿತ್ರ ಇನ್ನೂ ಗಂಭೀರ ಆಗಬಹುದಿತ್ತೇನೊ. ಕೆಲವು ಕಡೆ ಕಲಾ ನಿರ್ದೇಶಕರೂ ಇನ್ನೂ ತುಸು ಶ್ರಮವಹಿಸಬೇಕಿತ್ತು ಅನಿಸಬಹುದು.

ಅನೂಪ್ ಸೀಳಿನ್ 2.0 ಸಂಗೀತ, ವಿ.ನಾಗೇಂದ್ರ ಪ್ರಸಾದ್ ಹಾಗು ಪ್ರಮೋದ್ ಮರವಂತೆ ಅವರ ಸಾಹಿತ್ಯ, ಸಂಭಾಷಣೆ, ಸತ್ಯಪ್ರಕಾಶ್ ಅವರ ಕತೆ ಎಲ್ಲವೂ ವಾವ್ ಎನಿಸುತ್ತದೆ. ಎಲ್ಲ ಕಲಾವಿದರೂ ಅಭಿನಯವೂ ಅಚ್ಚುಕಟ್ಟಾಗಿದೆ, ಛಾಯಾಗ್ರಹಣವು ಇಷ್ಟವಾಗುತ್ತದೆ. ವಿಷಯಗಳಿಗೆ ಪ್ರಮುಖ್ಯತೆ ಕೊಟ್ಟು ಕಟ್ಟಿರುವ ‘ಕಾಲಾಪತ್ಥರ್’ ಒಟ್ಟಾರೆಯಾಗಿ ಎಲ್ಲ ವರ್ಗದ ಪ್ರೇಕ್ಷಕರನ್ನು ರಂಜಿಸಬಹುದಾದ ಸಿ‌ನಿಮಾ ಎನ್ನಬಹುದು. ಯಾವುದೇ ನಿರೀಕ್ಷೆ ಇಲ್ಲದೆ ಚಿತ್ರಮಂದಿರಕ್ಕೆ ಭೇಟಿ ಕೊಟ್ಟರೆ ಕ್ಲಾಸ್ ಸಿನಿ ಪ್ರೇಮಿಗಳಿಗೂ ಇಲ್ಲಿರುವ ಮಾಸ್ ಕೂಡ ಇಷ್ಟವಾಗುತ್ತದೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Actor Darshan : ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮುಂದುವರಿದಿದ್ದು, ನಾಲ್ಕು ದಿನಗಳು ಜೈಲೆಗತಿಯಾಗಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಅರ್ಜಿ ಸಂಬಂಧ ನ್ಯಾಯಾಲಯದ ಒಂದಷ್ಟು ಕಾರ್ಯವಿಧಾನಗಳು ಬಾಕಿ ಇರುವ ಕಾರಣ ಮತ್ತಷ್ಟು ದಿನಗಳವರೆಗೆ ದರ್ಶನ್‌ ಗ್ಯಾಂಗ್‌ಗೆ (Actor Darshan) ಜೈಲೇ ದಿಕ್ಕು . ಜಾಮೀನು ಅರ್ಜಿಗೆ ರಜೆ ದಿನಗಳೇ ಅಡ್ಡಿಯಾಗಿದೆ.

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಮೂರು ದಿನಗಳ ಕಾಲ ನ್ಯಾಯಾಲಯವು ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಆದೇಶ ನೀಡಿತ್ತು. ನಿನ್ನೆ ಗುರುವಾರ ಕೂಡ ಒಂದು ದಿನ ಜ್ಯೂಡಿಷಿಯಲ್ ಕಷ್ಟಡಿಗೆ ಒಳಪಡಿಸಲಾಗಿತ್ತು. ಇಂದು ಶುಕ್ರವಾರ ಮತ್ತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾತಿ ಪಡೆದ ಕೋರ್ಟ್‌ ಸೆ.17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಗಣೇಶ ಹಬ್ಬ ಹಾಗು ರಜಾದಿನಗಳು ಬ್ಯಾಕ್ ಟು ಬ್ಯಾಕ್ ಬಂದ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ಕೂಡ ಆರೋಪಿಗಳ ಕೈ ಸೇರಿರಲಿಲ್ಲ . ಸೋಮವಾರ ಆರೋಪಿಗಳಿಗೆ ಚಾರ್ಜ್ ಶೀಟ್ ಸಿಕ್ಕಿದರೂ ಮುಖ್ಯವಾಗಿ ಬೇಕಾದ ಟೆಕ್ನಿಕಲ್ ಎವಿಡೆನ್ಸ್‌ಗಳು ಹಾಗು ಅದರ ವರದಿ ಸಿಕ್ಕಿರಲಿಲ್ಲ, ಈಗಲೂ ಸಿಕ್ಕಿಲ್ಲ. ಇದೆಲ್ಲಾವೂ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ವಿಳಂಬವಾಗುತ್ತಿದೆ.

ಇನ್ನು ಚಾರ್ಜ್ ಶೀಟ್ ಹಾಗೂ ಡಿಜಿಟಲ್ ಎವಿಡೆನ್ಸ್ ವರದಿಗಳನ್ನು ಅನಾಲೈಝ್ ಮಾಡಿದ ಬಳಿಕವಷ್ಟೇ ಮೂವ್ ಆಗಬಹುದು. ಅದಾದ ಬಳಿಕ ಈ ಪ್ರಕರಣವನ್ನು ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿ, ಅಲ್ಲಿ ನ್ಯಾಯಾಲಯದ ಅನುಮತಿ ಪಡೆದು ಜಾಮೀನು ಅರ್ಜಿ ಸಲ್ಲಿಕೆ ಮಾಡಬೇಕು. ಇನ್ನು ಇದೇ ವೇಳೆ ದರ್ಶನ್ ಪರ ವಕೀಲ ಆದಷ್ಟು ಬೇಗ ವರದಿಗಳನ್ನು ನೀಡಬೇಕು ಜಾಮೀನು ಸಲ್ಲಿಕೆ ಮಾಡುವುದು ಆರೋಪಿಯ ಫಂಡಮೆಂಟಲ್ ರೈಟ್ಸ್ ಎಂದು ವಾದ ಮಂಡಿಸಿದರು. ಸದ್ಯ ನಾಲ್ಕು ದಿನಗಳಲ್ಲಿ ಕೋರ್ಟ್‌ನ ಪೆಂಡಿಂಗ್ ಕೆಲಸಗಳು ಕ್ಲಿಯರ್ ಆದರೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಅಲ್ಲಿವರೆಗೂ ಕೊಲೆ ಆರೋಪಿಗಳಿಗೆ ಜೈಲೇ ಗತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ದಿನ ಸೆರೆವಾಸ; ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್‌

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಒಂದು ದಿನದ ನ್ಯಾಯಾಂಗ ಬಂಧನ ಮುಂದುವರಿದಿದೆ. ಸೆ.13ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ (Actor Darshan) ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಕ್ತಾಯವಾದ ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ವಕೀಲ ಶಿವಕುಮಾರ್ ಹಾಜರಾಗಿದ್ದರು. ಈ ವೇಳೆ ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಟೆಕ್ನಿಕಲ್‌ ಎವಿಡೆನ್ಸ್‌ಗಳನ್ನು ಆರೋಪಿಗಳಿಗೆ ಕೊಟ್ಟ ನಂತರ ಕಮಿಟಲ್ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಾಳೆ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲ ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು.

ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಡಾಕ್ಯುಮೆಂಟ್ಸ್, ಪೆನ್ ಡ್ರೈವ್‌, ಸಿಡಿ, ಡಿವಿಆರ್ ಕೊಟ್ಟಿಲ್ಲ ಅದನ್ನೂ ನಾಳೆಗೆ ಕೇಳಿದ್ದೇವೆ. ಕಮಿಟಲ್ ಆರ್ಡರ್ ಆದ ನಂತರ ಸೆಷನ್ ಕೋರ್ಟ್‌ಗೆ ಜಾಮೀನಿಗೆ ಅರ್ಜಿ ಹಾಕಲಾಗುತ್ತದೆ ಎಂದು ದರ್ಶನ್ ಪರ ವಕೀಲ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ನಟ ದರ್ಶನ್‌, ಪವಿತ್ರಾಗೌಡ ಸೇರಿ ವಿವಿಧ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.13ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ2 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು3 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು3 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು6 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು7 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ7 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್8 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ8 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ15 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌