Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ? - Vistara News

ಸ್ಯಾಂಡಲ್ ವುಡ್

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

Actor Darshan: ಇನ್ನೂ ಇವತ್ತು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್​ರನ್ನ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ. 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮತ್ತೊಂದು ಕಡೆ ಜೈಲು ಊಟಕ್ಕೆ ಬೇಸತ್ತು, ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ.

VISTARANEWS.COM


on

Actor Darshan Judicial Custody Ends Today May Extend Again
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ (Actor Darshan) ಅರೆಸ್ಟ್ ಆಗಿರುವುದು ಗೊತ್ತೇ ಇದೆ. ಇಂದು ದರ್ಶನ್ ಹಾಗೂ ಅವರ ಸಹಚರರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಳ್ಳಲಿದೆ. ಆದರೆ ಈ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗುವ ಸಾಧ್ಯತೆ ಇದೆ. ಯಾಕೆಂದರೆ, ದರ್ಶನ್​ಹಾಗೂ ಇತರ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಪಟ್ಟಿಯನ್ನ ಪೊಲೀಸರು ಸಿದ್ಧ ಪಡಿಸಿದ್ದಾರೆ. ವತ್ತು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೂ ಇವತ್ತು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್​ರನ್ನ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ. 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮತ್ತೊಂದು ಕಡೆ ಜೈಲು ಊಟಕ್ಕೆ ಬೇಸತ್ತು, ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

ದರ್ಶನ್ ಬಂಧನವಾಗಿ 36 ದಿನಗಳಾಗಿವೆ. ಆದರೆ ಇಲ್ಲಿಯವರೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿಲ್ಲ. ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿ ಎಂದು ದರ್ಶನ್ ಪರ ವಕೀಲರು ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ನಟನೆಯ ‘ರೂಪಾಂತರ’ ಚಿತ್ರ ಜು.26ಕ್ಕೆ ರಿಲೀಸ್‌

Kannada New Movie: “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ “ರೂಪಾಂತರ” ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಈ ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ.

VISTARANEWS.COM


on

Raj B Shetty starrer roopanthara is releasing on July 26
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ರೂಪಾಂತರ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ‌. ಟ್ರೇಲರ್‌ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ (Kannada New Movie) ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ರೂಪಾಂತರ” ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೆಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ.

“ರೂಪಾಂತರ” ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ಅವರೆಲ್ಲಾ “ರೂಪಾಂತರ” ಗೊಳ್ಳುವುದೇ ಚಿತ್ರದ ಕಥೆ. “ಒಂದು ಮೊಟ್ಟೆಯ ಕಥೆ ” ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದರು.

ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು. ಇದೇ 26 ರಂದು ಚಿತ್ರ ಬಿಡುಗಡೆಯಾಗಲಿದೆ‌. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸುಹಾನ್ ಪ್ರಸಾದ್.

ಐದು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಮಿಥಿಲೇಶ್ ಎಡವಲತ್.

ಚಿತ್ರದಲ್ಲಿ ನಟಿಸಿರುವ ಅಂಜನ್ ಭಾರದ್ವಾಜ್ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಕುರಿತು ಮಿಥುನ್ ಮುಕುಂದನ್ ಮಾಹಿತಿ ನೀಡಿದರು.

ರಾಜ್ ಬಿ ಶೆಟ್ಟಿ, ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ ಚಿತ್ರಕ್ಕಿದೆ. ಭುವನೇಶ್ ಮಣಿವಣ್ಣನ್ ಸಂಕಲನ ಹಾಗೂ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ನಿರ್ಮಾಣ ವಿನ್ಯಾಸವಿರುವ “ರೂಪಾಂತರ ” ಚಿತ್ರಕ್ಕೆ ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.

ಇದನ್ನೂ ಓದಿ: Uttara Kannada News: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಟಿಸಿ: ಡಾ. ರಮಣ ರೆಡ್ಡಿ

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುದ್ದ ಫಿಲಂಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ. “ರೂಪಾಂತರ” ಟ್ರೇಲರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಬಾಲಕೃಷ್ಣ ಅರ್ವನಕರ್ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

Kannada New Movie: ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ಜೋಡಿಯಾಗಿದ್ದು, ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

VISTARANEWS.COM


on

Kannada New Movie Baila Baila Video Song Hiranya out
Koo

ಬೆಂಗಳೂರು: ರಾಜವರ್ಧನ್‌ ನಾಯಕರಾಗಿರುವ “ಹಿರಣ್ಯ’ (Kannada New Movie) ಚಿತ್ರ ಜುಲೈ 19ಕ್ಕೆ ತೆರೆಕಾಣುತ್ತಿದೆ. ಈಗ ಚಿತ್ರದ ʻಡ್ಯಾನ್ಸಿಂಗ್ ನಂಬರ್ʼ ಅನಾವರಣಗೊಂಡಿದೆ. ʻಬೈಲಾ ಬೈಲಾʼ ಎಂಬ ಹಾಡಿಗೆ ದಿವ್ಯಾ ಸುರೇಶ್ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ಒದಗಿಸಿದ್ದಾರೆ.

ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ಜೋಡಿಯಾಗಿದ್ದು, ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಆ್ಯಕ್ಷನ್‌-ಥ್ರಿಲ್ಲರ್‌ ಜತೆಗೆ ತಾಯಿ ಸೆಂಟಿಮೆಂಟ್‌ ಕಥಾಹಂದರ ಹೊಂದಿರುವ “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

Continue Reading

ಸ್ಯಾಂಡಲ್ ವುಡ್

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Niveditha Gowda: ಇದೀಗ ಸಹೋದರನ ಕುರಿತು ರೀಲ್ಸ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಬಾತ್‌ರೂಮ್‌ ಸಿಂಗರ್‌ ಅಲ್ಲ ಆಯ್ತಾ! ಎಂದು ನಿವೇದಿತಾ ಹೇಳಿದ್ದಕ್ಕೆ ತಮ್ಮ ʻನೀನು ಸಿಂಗರೇ ಅಲ್ಲʼ! ಎಂದು ಕಾಲೆಳೆದಿದ್ದಾರೆ. ಇದೀಗ ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಟ್ಟಿರಬಹುದು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Niveditha Gowda new reels with brother
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಅವರಿಂದ ದೂರವಾದ ಬಳಿಕ ನಿವೇದಿತಾ ಗೌಡ ರೀಲ್ಸ್‌ ಮಾಡುವುದು ಹೆಚ್ಚಾಗಿದೆ. ಎಷ್ಟೇ ಟ್ರೋಲ್ ಆದರೂ ನಿವೇದಿತಾ ತಲೆ ಕೆಡಿಸಿಕೊಳ್ಳದೇ ತಮ್ಮ ಪಾಡಿಗೆ ರೀಲ್ಸ್ ಮಾಡುತ್ತಲೇ ಇದ್ದಾರೆ. ಇದೀಗ ಇವರ ಈ ರೀಲ್ಸ್ ಪ್ರಪಂಚಕ್ಕೆ ಇವರ ಸಹೋದರ ಕೂಡ ಬಂದಿದ್ದಾರೆ. ಇದೀಗ ಸಹೋದರನ ಕುರಿತು ರೀಲ್ಸ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಬಾತ್‌ರೂಮ್‌ ಸಿಂಗರ್‌ ಅಲ್ಲ ಆಯ್ತಾ! ಎಂದು ನಿವೇದಿತಾ ಹೇಳಿದ್ದಕ್ಕೆ ತಮ್ಮ ʻನೀನು ಸಿಂಗರೇ ಅಲ್ಲʼ! ಎಂದು ಕಾಲೆಳೆದಿದ್ದಾರೆ. ಇದೀಗ ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಟ್ಟಿರಬಹುದು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಿವೇದಿತಾ ಶೇರ್‌ ಮಾಡಿಕೊಂಡಿರುವ ವಿಡಿಯೊದಲ್ಲಿ ಇಂಗ್ಲೀಷ್‌ ಹಾಡಿಗೆ ನಿವೇದಿತಾ ಹಾಡಲು ಪ್ರಯತ್ನಿಸುತ್ತಿರುತ್ತಾರೆ. ಸಹೋದರ ಅಕ್ಕನಿಗೆ ಹಾಡಲು ಬಿಡುವುದಿಲ್ಲ ಎಂದಾಗ,ನಾನು ಬಾತುರೂಮ್ ಸಿಂಗರ್‌ ಅಲ್ಲ ಆಯ್ತಾ ಎಂದು ನಿವೇದಿತಾ ಹೇಳಿದ್ದಕ್ಕೆ, ತಮ್ಮ ನೀನು ಸಿಂಗರೇ ಅಲ್ಲ ಎಂದು ಕಾಲೆಳೆದಿದ್ದಾರೆ.ಇನ್ನೂ ನನಗೆ ಹಸಿವು ಆಗುತ್ತಿದೆ ಏನಾದರೂ ಅಡುಗೆ ಮಾಡು ಎಂದು ತಮ್ಮ ಹೇಳಿದ್ದಕ್ಕೆ ನೀನು ಊಟಕ್ಕೆ ಇನ್ನೊಬ್ಬರನ್ನು ಡಿಪೆಂಡ್ ಆಗಿರುವುದ್ಯಾಕೆ ಎಂದು ಕೇಳಿದ್ದಾರೆ ನಿವೇದಿತಾ. ತರಲೆ ತಮಾಷೆ ಒಳಗೊಂಡ ವಿಡಿಯೊವನ್ನು ಹಂಚಿಕೊಂಡಿರುವ ನಿವೇದಿತಾ, ಸಹೋದರರೆಲ್ಲರೂ ಇದೇ ರೀತಿ ಕಿರಿಕಿರಿನಾ? ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದೀಗ ರೀಲ್ಸ್‌ ಕಂಡು ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಡುತ್ತಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

ಈಗಾಗಲೇ ನಿವೇದಿತಾ ಹಾಗೂ ಚಂದನ್‌ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಕ್ಯಾಂಡಿ ಕ್ರಶ್ ಸಿನಿಮಾ ಹೊರತು ಪಡಿಸಿದರೆ ನಿವೇದಿತಾ ಗೌಡ ಸೃಜನ್ ಲೋಕೇಶ್ ನಿರ್ದೇಶನದ ಜಿಎಸ್‌ಟಿ ಚಿತ್ರದಲ್ಲಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವಿಶೇಷ ಅಂದರೆ ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಇದೆ.

ಇನ್ನು ಚಂದನ್‌ ಶೆಟ್ಟಿ ಅಭಿನಯದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’   ಟೀಸರ್‌, ಹಾಡುಗಳು ಮತ್ತು ಎರಡು ಟ್ರೈಲರ್‌ಗಳಿಂದ ಗಮನಸೆಳೆದಿದೆ. ಅರುಣ್‍ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Chandan Shetty) ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

Chandan Shetty: ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್‍ ಶೆಟ್ಟಿ, ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Moviesನ ಮಮತಾ ಸೆಂಧಿಲ್‍, ಅಮರ್‍, ಮನೋಜ್‍, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

VISTARANEWS.COM


on

Chandan Shetty vidyarthi vidyarthiniyare kannada movie dubai premere
Koo

ಬೆಂಗಳೂರು: ಈಗಾಗಲೇ ಟೀಸರ್‌, ಹಾಡುಗಳು ಮತ್ತು ಎರಡು ಟ್ರೈಲರ್‌ಗಳಿಂದ ಗಮನಸೆಳೆದಿರುವ ಅರುಣ್‍ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ(Chandan Shetty) ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್‍ ಶೆಟ್ಟಿ, ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Moviesನ ಮಮತಾ ಸೆಂಧಿಲ್‍, ಅಮರ್‍, ಮನೋಜ್‍, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂದನ್‍ ಶೆಟ್ಟಿ, ‘ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ? ನನ್ನ ಅಭಿನಯ ಇಷ್ಟವಾಗುತ್ತದಾ? ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾನು ಹೀರೋ ಎನ್ನುವುದಕ್ಕಿಂತ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್‍ ಪ್ರಮುಖ ಪಾತ್ರಧಾರಿಗಳು. ಅವರೆಲ್ಲಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈ ಚಿತ್ರದ ನಿಜವಾದ ಹೀರೋ ನಿರ್ದೇಶಕರು. ಒಂದೊಳ್ಳೆಯ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಮಕ್ಕಳು ಮತ್ತು ಅವರ ಪೋಷಕರು ಇಬ್ಬರೂ ಕೂತು ಒಟ್ಟಿಗೆ ನೋಡುವಂಥ ಚಿತ್ರ ಇದು. ಎಲ್ಲರೂ ಬಂದು ಚಿತ್ರ ನೋಡಿ’ ಎಂದರು.

ಇದನ್ನೂ ಓದಿ: Chandan Shetty: ನಿವೇದಿತಾ ಇನ್ನೊಂದು ಮದುವೆ ಆದ್ರೆ ಓಕೆ ನಾ? ಚಂದನ್‌ ಶೆಟ್ಟಿ ಹೇಳಿದ್ದೇನು?

ಅರುಣ್‍ ಅಮುಕ್ತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ನಮಗೆ ಯಾವ ಅಭಿಮಾನಿಗಳಿಲ್ಲ. ನಮ್ಮ ಚಿತ್ರ ನೋಡುವುದಕ್ಕೆ ಬರುವವರೇನಿದ್ದರೂ ಟ್ರೇಲರ್‌ ಮತ್ತು ಹಾಡುಗಳನ್ನು ನೋಡಿ ಬರಬೇಕು. ನಮ್ಮ ಪ್ರೇಕ್ಷಕರೇನಿದ್ದರೂ ಇವತ್ತಿನ ಯುವಜನತೆ. ಅವರಿಗೆ ಚಿತ್ರ ತಲುಪಿಸಬೇಕು. ಹೇಗೆ ತಲುಪಿಸಬೇಕು ಎಂಬುದರ ಕುರಿತು ನನಗೆ ಕೆಲವು ಯೋಚನೆಗಳಿದ್ದವು. ಹಾಗಾಗಿ, ನಾನೇ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾದೆ. ಸುಮಾರು 140 ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರದ ಟ್ರೇಲರ್‍ ಮತ್ತು ಹಾಡು ನೋಡಿ, ಕೆಲವು ಚಿತ್ರಮಂದಿರದವರು ಕರೆದು ಚಿತ್ರ ಪ್ರದರ್ಶಿಸುವ ಅವಕಾಶ ಕೊಟ್ಟಿದ್ದಾರೆ. ಆಮೇಲೆ ನೋಡೋಣ ಎಂದು ಕಾಯದೇ ಮೊದಲ ದಿನವೇ ಬಂದು ಚಿತ್ರ ನೋಡಿ’ ಎಂದು ಕರೆನೀಡಿದರು.

ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಮಮತಾ ಸೆಂಧಿಲ್‍ ಮಾತನಾಡಿ, ‘ಇದಕ್ಕೂ ಮುನ್ನ ‘ಕಾಟೇರ’ ಚಿತ್ರವನ್ನು ಬಿಡಗುಡೆ ಮಾಡಿದ್ದೆವು. ಇದು ನಮ್ಮ ಎರಡನೆಯ ಚಿತ್ರ. ನೋಡಿದವರೆಲ್ಲರೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬೇರೆ ದೇಶಗಳಲ್ಲೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಅಲ್ಲಿನ ಕನ್ನಡಿಗರು ಕೇಳುತ್ತಿದ್ದು, ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಮುಂತಾದ ಕಡೆ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ’ ಹೇಳಿದರು.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವನ್ನು ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸಿದ್ದಾರೆ. ತಮ್ಮ ಮೊದಲ ಪ್ರಯತ್ನಕ್ಕೆ ಕನ್ನಡಿಗರ ಪ್ರೋತ್ಸಾಹ, ಬೆಂಬಲವಿರಲಿ ಎಂದು ನಿರ್ಮಾಪಕರು ಇದೇ ಸಂದರ್ಭದಲ್ಲಿ ಕೇಳಿಕೊಂಡರು.

ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ಅಮರ್‌, ಮನೋಜ್‍, ಮನಸ್ವಿ ಮುಂತಾದವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಚಿತ್ರವನ್ನು ನೋಡಿ ಹರಸಿ-ಹಾರೈಸುವುದಕ್ಕೆ ಮನವಿ ಮಾಡಿದರು.

Continue Reading
Advertisement
Urvashi Rautela bathroom video leak on social media
ಸಿನಿಮಾ14 seconds ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ8 mins ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Karnataka Jobs Reservation
ಪ್ರಮುಖ ಸುದ್ದಿ16 mins ago

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Maoists Attack
ದೇಶ28 mins ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ33 mins ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Hardik Pandya
ಕ್ರೀಡೆ49 mins ago

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

vidhana sabha karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Joe Biden
ವಿದೇಶ1 hour ago

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಸೋಂಕು; ಪ್ರಚಾರಕ್ಕೆ ಬ್ರೇಕ್‌

Actor Darshan Judicial Custody Ends Today May Extend Again
ಸ್ಯಾಂಡಲ್ ವುಡ್1 hour ago

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

ಕ್ರಿಕೆಟ್1 hour ago

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌