Actor Darshan: ʻಡಿ ಗ್ಯಾಂಗ್’ ಟೈಟಲ್‌ಗೆ ಬೇಡಿಕೆ ; ನೋಂದಣಿಗೆ ಚೇಂಬರ್ ನಿರಾಕರಣೆ, ನಿರ್ಮಾಪಕರ ಬೇಸರ! - Vistara News

ಸ್ಯಾಂಡಲ್ ವುಡ್

Actor Darshan: ʻಡಿ ಗ್ಯಾಂಗ್’ ಟೈಟಲ್‌ಗೆ ಬೇಡಿಕೆ ; ನೋಂದಣಿಗೆ ಚೇಂಬರ್ ನಿರಾಕರಣೆ, ನಿರ್ಮಾಪಕರ ಬೇಸರ!

Actor Darshan: ಪಿಎಂ ಫಿಲಮ್ಸ್​ ನಿರ್ಮಾಣ ಸಂಸ್ಥೆಯ ಮಂಜು ಎನ್ ನಾಯಕ್ ಎಂಬುವರು ‘ಡಿ ಗ್ಯಾಂಗ್’ ಹೆಸರಿನ ನೊಂದಣಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ವಾಣಿಜ್ಯ ಮಂಡಳಿ ಹೇಳಿದೆ ಎಂದು ಅವರು ಫೇಸ್​ಬುಕ್​ ಪೋಸ್ಟ್ ಮೂಲಕ ತಿಳಿಸಿದ್ದಾರೆ. 

VISTARANEWS.COM


on

Actor Darshan Karnataka Film Chamber Refuse To Register D Gang Movie Title
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದರ್ಶನ್ ಕೊಲೆ (Actor Darshan) ಆರೋಪ ಬೆನ್ನಲ್ಲೇ ʻಡಿ ಗ್ಯಾಂಗ್ʼ ಟೈಟಲ್ ಡಿಮ್ಯಾಂಡ್‌ ಕೂಡ ಹೆಚ್ಚಾಗಿದೆ. ಇದೀಗ ಇದೇ ಹೆಸರನ್ನು ಸಿನಿಮಾಕ್ಕಾಗಿ ರಿಜಿಸ್ಟರ್ ಮಾಡಿಸಲು ಮುಂದಾದ ಚಿತ್ರತಂಡಕ್ಕೆ ನಿರಾಸೆಯಾಗಿದೆ. ಚಿತ್ರತಂಡವೊಂದು ‘ಡಿ ಗ್ಯಾಂಗ್’ ಹೆಸರು ನೋಂದಣಿಗೆ ಫಿಲಂ ಚೇಂಬರ್​ಗೆ ಅರ್ಜಿ ಸಲ್ಲಿಸಿದೆ. ಆದರೆ ಆ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ಚೇಂಬರ್ ಹೇಳಿದೆ.

ದಾವಣಗೆರೆಯ FM ಫಿಲ್ಮ್ಸ್ ಬ್ಯಾನರ್ ಅಡಿ ನಿರ್ದೇಶಕರು ʻಡಿ ಗ್ಯಾಂಗ್ʼ ಟೈಟಲ್ ನೋಂದಣಿ ಮಾಡಲು ಮುಂದಾಗಿದ್ದರು. ಆದರೆ ಚಲನಚಿತ್ರ ವಾಣಿಜ್ಯ ಮಂಡಳಿ ನೋಂದಣಿಗೆ ಅವಕಾಶ ನೀಡಿಲ್ಲ. ಇದರಿಂದ ನಿರ್ದೇಶಕ ರಾಕಿ ಫೇಸ್ ಬುಕ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಎಂ ಫಿಲಮ್ಸ್​ ನಿರ್ಮಾಣ ಸಂಸ್ಥೆಯ ಮಂಜು ಎನ್ ನಾಯಕ್ ಎಂಬುವರು ‘ಡಿ ಗ್ಯಾಂಗ್’ ಹೆಸರಿನ ನೊಂದಣಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ವಾಣಿಜ್ಯ ಮಂಡಳಿ ಹೇಳಿದೆ ಎಂದು ಅವರು ಫೇಸ್​ಬುಕ್​ ಪೋಸ್ಟ್ ಮೂಲಕ ತಿಳಿಸಿದ್ದಾರೆ. 

ʻʻಎರಡು ವರ್ಷಗಳಿಂದಲೂ ʻಡಿ ಗ್ಯಾಂಗ್ʼ ಶೀರ್ಷಿಕೆ ಮೇಲೆ ಕೆಲಸ ಮಾಡಿದ್ದೇವೆ. ಅದಕ್ಕೆ ಸಾಕ್ಷಿಯಾಗಿ ಯೂಟ್ಯೂಬ್‌ನಲ್ಲಿ ಹಾಡು ಕೂಡ ಇದೆ. ಈಗ ನಡೆಯುತ್ತಿರುವ ದರ್ಶನ್ ಪ್ರಕರಣಕ್ಕೂ ನಮ್ಮ ಟೈಟಲ್‌ಗೂ ಸಂಬಂಧ ಇಲ್ಲ. ಆದರೂ ವಾಣಿಜ್ಯ ಮಂಡಳಿ ಅವರು ನೋಂದಣಿ ಮಾಡಿಕೊಡಲಿಲ್ಲ.ಮುಂದೆ ದೊಡ್ಡ ನಿರ್ಮಾಪಕರು ಅಥವಾ ದೊಡ್ಡ ನಿರ್ದೇಶಕರಿಗೆ ಟೈಟಲ್ ಕೊಟ್ಟರೆ ಏನ್ ಕತೆ? ಆಗ ಮಾತನಾಡಲು ಸಾಕ್ಷಿ ಬೇಕು ಎಂದು ಫೇಸ್ ಬುಕ್‌ನಲ್ಲು ಹಾಕಿದ್ದೇನೆʼʼ ಎಂದು  ಎಂದು ‘ಡಿ ಗ್ಯಾಂಗ್’ ಸಿನಿಮಾವನ್ನು ನಿರ್ದೇಶಿಸಲು ಬಯಸಿರುವ ರಾಖಿ ಸೊಮ್ಲಿ ಎಂಬುವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ʻಡೆವಿಲ್ ಗ್ಯಾಂಗ್‌ʼಗೆ ಜೀವಾವಧಿ ಶಿಕ್ಷೆ ಆಗತ್ತಾ? ಕಾನೂನು ತಜ್ಞರು ಹೇಳೋದೇನು?

ಚಿತ್ರತಂಡ ಹೇಳಿಕೊಂಡಿರುವಂತೆ ‘ಡಿ ಗ್ಯಾಂಗ್’ ಹೆಸರನ್ನಿಟ್ಟುಕೊಂಡೇ ಅವರು ಕತೆ, ಚಿತ್ರಕತೆ ರಚಿಸಿಕೊಂಡಿದ್ದಾರೆ. ಅಲ್ಲದೆ ಅವರು ಹೇಳಿಕೊಂಡಿರುವಂತೆ, ದರ್ಶನ್ ಕುರಿತು ಈಗ ನಡೆಯುತ್ತಿರುವ ಘಟನೆಗಳಿಗೂ ಅವರ ಸಿನಿಮಾಕ್ಕೂ ಸಂಬಂಧವಿಲ್ಲ. ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ಟೈಟಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದಾರಂತೆ ಅಧ್ಯಕ್ಷರು ಎಂದು ವರದಿಯಾಗಿದೆ .

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

Actor Darshan: ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

VISTARANEWS.COM


on

Actor Darshan case Police Serve Notice To Siddarudha Who Claimed To Met Darshan
Koo

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ (Renuka Swamy Murder case) ಕೂಡಾ ನಟ ದರ್ಶನ್ (Actor Darshan) ಅಭಿಮಾನಿಯಾಗಿದ್ದವನು. ಆದರೆ ಅದೇ ಅಭಿಮಾನಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ನನ್ನು ಸಿದ್ಧಾರೂಢ ಎಂಬ ಮಾಜಿ ಕೈದಿ ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ ನೋಟಿಸ್‌ ನೀಡಿದೆ.

ಸನ್ನಡತೆ ಆಧಾರದಲ್ಲಿ ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿದ್ದ ಸಿದ್ಧಾರೂಢ ಅವರು ದರ್ಶನ್‌ನ ಭೇಟಿ ಮಾಡಲೇಬೇಕು ಎನ್ನುವ ಆಸೆ ಹೊಂದಿದ್ದರು. ಅದಕ್ಕಾಗಿ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಜೈಲು ಅಧಿಕಾರಿ ಕೂಡ ಒಪ್ಪಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಸಿದ್ಧರೂಢರನ್ನು ಭೇಟಿಯಾಗೋದಿಕ್ಕೆ ದರ್ಶನ್‌ ಒಪ್ಪುತ್ತಾರಾ? ಅವರಿಗೆ ಮನಸಿದ್ಯಾ ಅಂತ ಅಧಿಕಾರಿಗಳು ದರ್ಶನ್‌ನ ಕೇಳಿದ್ದರು. ಆದರೆ ದರ್ಶನ್‌ ಹಿಂದೂ ಮುಂದೂ ನೋಡಲೇ ಇಲ್ಲ. ಒಂಚೂರು ಯೋಚನೆ ಮಾಡದೇ ತನ್ನನ್ನು ಭೇಟಿಯಾಗಲು ಬಯಸುತ್ತಿರುವ ಅಭಿಮಾನಿಯ ಭೇಟಿಗೆ ಒಪ್ಪಿಕೊಂಡಿದ್ದರು. ಸಿದ್ಧಾರೂಢ ಅವರನ್ನು ಒಳ ಕಳುಹಿಸುವಂತೆ ಮನವಿ ಮಾಡಿದ್ದರು. ಎನ್ನಲಾಗಿತ್ತು. ಸಿದ್ಧಾರೂಢ, ತಾವು ದರ್ಶನ್ ಅನ್ನು ಜೈಲಿನಲ್ಲಿ ಭೇಟಿಯಾಗಿದ್ದು, ದರ್ಶನ್​ಗೆ ಯೋಗ ಹೇಳಿಕೊಟ್ಟೆ, ಧ್ಯಾನ ಹೇಳಿಕೊಟ್ಟೆ, ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.

ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲು ಅಧಿಕಾರಿಗಳು

ಜೈಲಲ್ಲಿ ನಟ ದರ್ಶನ್ ಭೇಟಿಯಾಗದೆ‌ ಸಿದ್ದರೂಢ ಸುಳ್ಳು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ. ದರ್ಶನ್ ಭೇಟಿ ಮಾಡಿಸಲೇ ಇಲ್ಲವೆಂದು ಕಾರಾಗೃಹ ಇಲಾಖೆಗೆ ಜೈಲಾಧಿಕಾರಿಗಳು ರಿಪೋರ್ಟ್ ಕೊಟ್ಟಿದ್ದಾರೆ. ಸನ್ನಡತೆ ಮೇಲೆ ರಿಲೀಸ್ ಆಗಿರುವ ಸಿದ್ದರೂಢ ಮಾಧ್ಯಮ ಹೇಳಿಕೆ ಬಗ್ಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದಾರೆ.  ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

ಇದನ್ನೂ ಓದಿ: Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

ಇದೇ ತಿಂಗಳ ಎಂಟನೇ ತಾರೀಖು ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಿದ್ಧಾರೂಢ ಬಂದಿದ್ದ. ಆತನನ್ನು ಒಂಬತ್ತನೇ ತಾರೀಖು ಬಿಡುಗಡೆ ಮಾಡಿದ್ದೆವು. ಆತ ಇಲ್ಲಿ ದರ್ಶನ್ ಅನ್ನು ಭೇಟಿ ಆಗಿಲ್ಲ. ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲಧಿಕಾರಿಗಳು ಹೇಳಿದ್ದಾರೆ.

ಸಿದ್ಧಾರೂಢ ಮಾಧ್ಯಮದ ಮುಂದೆ ಹೇಳಿದ್ದೇನು?

ʻʻನಿನ್ನನ್ನ ಕಾನೂನು ಕ್ಷಮಿಸಿ ಒಂದು ಅವಕಾಶವನ್ನು ಕೊಟ್ಟಿದೆ. ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ಹೆಂಡತಿ ಮಕ್ಕಳ ಜತೆ ಪ್ರೀತಿಯಿಂದ ಬದುಕು ಅಂತ ಸಲಹೆಯನ್ನು ಕೊಟ್ಟಿದ್ದರಂತೆ. ದರ್ಶನ್ ಆಡಿರುವ ಈ ಮಾತುಗಳನ್ನು ಕೇಳಿದರೆ ನಿಜಕ್ಕೂ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಮಾಡಿರುವ ತಪ್ಪಿನ ಅರಿವು ಆದಂತಿದೆʼʼ ಎಂದು ಸಿದ್ಧಾರೂಢ ತಿಳಿಸಿದ್ದರು.

ಜುಲೈ 8ರಂದು ಜೈಲಾಧಿಕಾರಿಗಳ ಅನುಮತಿ ಪಡೆದು ನಟ ದರ್ಶನ್‌ರನ್ನು ಭೇಟಿಯಾದ ಸಿದ್ಧರೂಢ, ಪಿರಮಿಡ್‌ ಧ್ಯಾನವನ್ನು ಹೇಳಿಕೊಟ್ಟಿದ್ದರಂತೆ. ನಾನು ನಿಮ್ಮ ಅಭಿಮಾನಿ ಎಂದಾಗ ಸಿದ್ಧರೂಢರನ್ನು ದರ್ಶನ್‌ ತಬ್ಬಿಕೊಂಡರಂತೆ. ಹತ್ತು ನಿಮಿಷ ಧ್ಯಾನ ಮಾಡಿದ ದರ್ಶನ್‌ ಇದು ಚೆನ್ನಾಗಿದೆ, ನಾನು ಇನ್ಮೆಲೆ ಇದನ್ನೂ ಮಾಡ್ತಿಲಿ ಎಂದು ಜೈಲಿನಿಂದ ಬಿಡುಗಡೆಗೊಂಡ ಕೈದಿ ಸಿದ್ಧಾರೂಢ ಹೇಳಿದ್ದಾರೆ. ದರ್ಶನ್‌ ಅವರನ್ನು ನೋಡಿದಾಗ ಬೇಸರ ಆಯಿತು. ಆದರೆ ಅವರು ನೀನು ನಾನ್‌ ಸೆಲೆಬ್ರಿಟಿ, ನಾನು ನಿನ್ನ ಸೆಲೆಬ್ರಿಟಿ ಎಂದು ಆಟೋಗ್ರಾಫ್‌ ಕೊಟ್ಟರು ಅಂತ ದರ್ಶನ್‌ ಕುರಿತು ಸಿದ್ಧರೂಢ ವಿವರಿಸಿದ್ದರು.

Continue Reading

ಸ್ಯಾಂಡಲ್ ವುಡ್

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Golden Star Ganesh: ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

VISTARANEWS.COM


on

Golden Star Ganesh krishnam pranaya sakhi in famous social media
Koo

ಬೆಂಗಳೂರು: ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Vinay Rajkumar: ಸೆನ್ಸಾರ್ ಪಾಸಾದ ‘ಪೆಪೆ’; ವಿನಯ್ ರಾಜ್ ಕುಮಾರ್ ಚಿತ್ರಕ್ಕೆ A’ ಸರ್ಟಿಫಿಕೇಟ್!

Vinay Rajkumar: ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ʻಪೆಪೆʼಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್‌ ಲುಕ್‌ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ.

VISTARANEWS.COM


on

Vinay Rajkumar pepe the film A certificate
Koo

ಬೆಂಗಳೂರು: ʻಒಂದು ಸರಳ ಪ್ರೇಮಕಥೆʼ ಅಭೂತಪೂರ್ವ ಯಶಸ್ಸಿನ ಬಳಿಕ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸಿರುವ ಬಹುನಿರೀಕ್ಷಿತ ಚಿತ್ರ ʻಪೆಪೆʼ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಪೆಪೆಗೆ ʻಎʼ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ.

ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ʻಪೆಪೆʼಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್‌ ಲುಕ್‌ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ.

ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ.

Continue Reading

ಸಿನಿಮಾ

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Kannada New Movie: ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

VISTARANEWS.COM


on

Kannada New Movie Nava Digantha latest news
Koo

ಬೆಂಗಳೂರು: ’ನವ ದಿಗಂತ’ ಚಿತ್ರದ ಮುಹೂರ್ತ ಸಮಾರಂಭವು ಶಕ್ತಿ ದೇವತೆ ಸರ್ಕಲ್ ಮಾರಮ್ಮನ ಸನ್ನಿದಿಯಲ್ಲಿ ಸರಳವಾಗಿ ಮುಹೂರ್ತ ನಡೆಯಿತು. ’ಉಸಿರೆ’ ಸಿನಿಮಾದ ನಿರ್ಮಾಪಕಿ ಲಕ್ಷೀಹರೀಶ್ ಕ್ಯಾಮೆರ ಆನ್ ಮಾಡಿದರೆ, ಉದಯೋನ್ಮುಖ ಯುವ ನಟ ಭಾರ್ಗವ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಐಟಿ ಕಂಪೆನಿಯಲ್ಲಿ ವ್ಯವಸ್ಥಾಪಕರಾಗಿರುವ ದುರ್ಗಾಮೋಹನ್ ಅವರು ಚಿನ್ಮಯ ಸಿನಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆ ಶುರು ಮಾಡಿ ಮೂರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ. ವೃತ್ತಿ-ಪ್ರವೃತ್ತಿಯನ್ನು ಬದುಕಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ವಿದ್ಯಾರ್ಥಿ ದೆಸೆಯಿಂದ ಬಂದಾಗ ಮಾತ್ರ, ಕೊನೆತನಕ ಸಾರ್ಥಕ ಜೀವನ ನಡೆಸಬಹುದು. ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ. ಕಲೆಗೆ ಸಾವಿಲ್ಲ. ಕಲೆಯಲ್ಲಿ ತೊಡಗಿಸಿಕೊಂಡವರು ಸದಾ ಉತ್ಸಾಹಿಗಳಾಗಿ ಆನಂದದಿಂದಿರುತ್ತಾರೆ. ಇಂತಹ ಅಂಶಗಳನ್ನು ಬಳಸಿಕೊಂಡು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಒಂದು ಒಳ್ಳೆಯ ಸಂದೇಶ ಕೊಡಲಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಪ್ರೊಫೆಸರ್ ಆಗಿ ಮೇಘನಾ, ವಿದ್ಯಾರ್ಥಿಗಳಾಗಿ ಚೇತನ್, ರೋಷನ್, ಅಭಿಜಿತ್, ಪುಷ್ಪ, ಯಮುನಾ, ಆಶುತೋಷ್, ಭೋಜರಾಜ, ಸಹದ್ಯೋಗಿಗಳಾಗಿ ಅಜಯ್, ಸಂಕೀರ್ತ್ ಉಳಿದಂತೆ ಅನಿಲ್ ಮಾರ್ಟಿಬನ್, ಪ್ರೀತಿಪಾಟೀಲ್, ನವೀನ್, ಸಂಧ್ಯಾ, ಮೂರ್ತಿ, ಲಕ್ಷೀ, ಪ್ರೀತಂ, ವಾಸುದೇವಚಾರ್. ಇವರೆಲ್ಲರಿಗೂ ಪ್ರಥಮ ಅವಕಾಶ. ನಟ ಭಾರ್ಗವ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ರೀಲ್‌ದಲ್ಲಿ ಅದೇ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಲ್ಕು ಹಾಡುಗಳಿಗೆ ಶರತ್-ಪ್ರಫುಲ್ಲಾ ಸಂಗೀತ, ಪ್ರಜ್ವಲ್ ವಿನೋದ್ ಛಾಯಾಗ್ರಹಣ, ಸಂಕಲನ ನೊಮಾಡಿಕ್ ಸ್ಟುಡಿಯೋ, ನೃತ್ಯ ರೋಶನ್, ಮೇಕಪ್ ಪವಿತ್ರಾ, ಹಾಗೂ ಎರಡು ಸಾಹಸ ದೃಶ್ಯಗಳನ್ನು ಕ್ಯಾಮೆರಾ ಟ್ರಿಕ್ಸ್‌ದಲ್ಲಿ ಚಿತ್ರೀಕರಿಸಲಾಗುವುದು. ಡಾಬಸಪೇಟೆ, ಬೆಂಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Continue Reading
Advertisement
Geyser Blast
ತಂತ್ರಜ್ಞಾನ1 min ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ22 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್26 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ29 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ30 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ31 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು46 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ53 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ60 mins ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Golden Star Ganesh krishnam pranaya sakhi in famous social media
ಸ್ಯಾಂಡಲ್ ವುಡ್1 hour ago

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌