Site icon Vistara News

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅರೆಸ್ಟ್‌ ಆಗಿದ್ದಾರೆ. ಈ ಪ್ರಕರಣಕ್ಕೂ ಮುಂಚೆ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. ಆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನದಲ್ಲಿದ್ದರು ದರ್ಶನ್‌. ಆ ಸಮಯದಲ್ಲಿ ದರ್ಶನ್‌ ಅವರು ಜೈಲಿನ ಅನುಭವವನ್ನು ಹೇಳಿಕೊಂಡಿದ್ದರು. ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ದರ್ಶನ್‌ ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ಈ ಹಿಂದೆ 14 ದಿನ ಜೈಲಿನಲ್ಲಿ ಇದ್ದು ಬಂದ ದರ್ಶನ್‌ ವಿಡಿಯೊದಲ್ಲಿ ಈ ರೀತಿ ಹೇಳಿಕೊಂಡಿದ್ದಾರೆ. ʻನಾನು 14 ದಿನ ಜೈಲಿನಲ್ಲಿ ಇದ್ದವನು. ಸುಮಾರು ಜನರನ್ನ ನಾನು ಮೀಟ್‌ ಮಾಡ್ದೆ ಅಲ್ಲಿ. ಕೆಲವರು ಮಾಡದೇ ಇರುವ ತಪ್ಪಿಗೆ ಅಲ್ಲಿ ಇದ್ದಾರೆ. ಇನ್ನು ಕೆಲವರಿಗೆ ಕೋಪ ಆ ಟೈಮಿಗೆ ಕೈ ಕೊಟ್ಟು ಜೈಲು ಪಾಲಾಗಿದ್ದರು. ಆ ಬಗ್ಗೆ ಅವತ್ತು ನಾನು ಯೋಚನೆ ಮಾಡಿದಾಗ, ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಬಳಿಕ ಕೊರಗುತ್ತಿರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು. ಏನೋ ಪರಿಹಾರ ಕಂಡು ಹಿಡಿಯಬಹುದಾಗಿತ್ತು ಎಂದು ಅವನಿಗೆ ಆಮೇಲೆ ಅನ್ನಿಸಿರುತ್ತದೆ. ಇದೆಲ್ಲ ನಾನು ಜೈಲಿನಲ್ಲಿ ಇದ್ದಾಗ ಕಲಿತ ಪಾಠʼʼಎಂದಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈ ಪಾಠ ಮರೆತು ಬಿಟ್ರಾ ಎಂದು ಕಮೆಂಟ್‌ ಮಾಡುತ್ತಿದ್ದಾರೆ ನೆಟ್ಟಿಗರು. ಇದೀಗ ಟ್ರೋಲಿಗರಿಗೂ ಈ ವಿಡಿಯೊ ಆಹಾರವಾಗಿದೆ.

ಇದನ್ನೂ ಓದಿ: Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

ಹೊಸ ಆರೋಪಗಳು ಬೆಳಕಿಗೆ

10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿತ್ತು. ಆ ಬಳಿಕ ದರ್ಶನ್‌ ಕಡೆಯವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದರು. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ. ಬಳಿಕ ಕಾರ್ಮಿಕ ತನ್ನ ಸಂಬಂಧಿಕರ ಜತೆ ಪರಿಹಾರ ಕೇಳಲು ಫಾರ್ಮ್ ಹೌಸ್​ಗೆ ಹೋದರೆ ದರ್ಶನ್‌ ಗ್ಯಾಂಗ್‌ ಅವರ ಮೇಲೆ ಸಾಕುನಾಯಿ ಛೂ ಬಿಟ್ಟಿದ್ದರಂತೆ. ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಹೊಂ ಸ್ಟೇ ಯಲ್ಲಿ ಕೆಲವು ವರ್ಷಗಳ ಹಿಂದೆ ಘಟನೆ ನಡೆದಿತ್ತು. ನಟ ದರ್ಶನ್ ಸ್ನೇಹಿತರ ಜತೆ ಹೋಂ ಸ್ಟೇ ಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.

Exit mobile version