Site icon Vistara News

Actor Darshan: ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರು; ಚಿಕಿತ್ಸೆ ನೀಡಿದ ವೈದ್ಯರು

Actor Darshan Pavithra Gowda health also fluctuates

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ (Actor Darshan) ಜೈಲಿನಲ್ಲಿ ಇದ್ದಾರೆ. ಸದ್ಯ ಜೈಲಲ್ಲಿ ದರ್ಶನ್ ಚಡಪಡಿಕೆ ಮುಂದುವರಿದಿದೆ. ಊಟ ಸೇರದೆ ನಿದ್ದರೆ ಬಾರದೇ ದರ್ಶನ್‌ ಕಂಗಾಲಾಗಿದ್ದಾರೆ. ಇತ್ತ ಪವಿತ್ರಾ ಗೌಡ ಕೂಡ ಜೈಲಿನಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದಾರೆ. ದರ್ಶನ್ ರೀತಿಯಲ್ಲಿಯೇ ಪವಿತ್ರಾ ಗೌಡಗೂ ಸಹ ಜೈಲಿನ ಆಹಾರ ದೇಹಕ್ಕೆ ಸರಿಹೊಂದುತ್ತಿಲ್ಲವಂತೆ. ಅಲ್ಲದೆ ಮಾನಸಿಕವಾಗಿ ಪವಿತ್ರಾ ಗೌಡ ಕುಗ್ಗಿದ್ದಾರೆ ಎಂದು ವರದಿಯಾಗಿದೆ.

ಜೈಲಿನಲ್ಲಿರುವ ದರ್ಶನ್‌ ಅವರನ್ನು ಈವರೆಗೆ ಮೂರು ಬಾರಿ ಕುಟುಂಬ ಭೇಟಿ ಮಾಡಿದೆ. ನಟ ಮಾನಸಿಕ ಖಿನ್ನತೆಯಿಂದ ಹೊರಬರಲು ಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಸಹ ಜೈಲಿನ ಆಹಾರ ದೇಹಕ್ಕೆ ಸರಿಹೊಂದುತ್ತಿಲ್ಲವಂತೆ. ಅಲ್ಲದೆ ಮಾನಸಿಕವಾಗಿ ಪವಿತ್ರಾ ಗೌಡ ಕುಗ್ಗಿದ್ದಾರೆ. ಹೀಗಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆ ವಾರ್ಡ್ ನಲ್ಲಿ ಜನರಲ್ ಚೆಕಪ್ ಮಾಡಿಸಿದ್ದಾರೆ. ಸದ್ಯ ಪವಿತ್ರಾ ಗೌಡ ಅವರ ಆರೋಗ್ಯ ಸುಧಾರಣೆ ಕಂಡಿದ್ದು, ಉಪಹಾರದ ಬದಲಿಗೆ ಹೆಚ್ಚಾಗಿ ಹಣ್ಣುಗಳನ್ನು ಸೇವಿಸುವಂತೆ ಸಲಹೆ ನೀಡಿದ್ದಾರಂತೆ ವೈದ್ಯರು.

ಇದನ್ನೂ ಓದಿ: Actor Darshan: ಮಾನಸಿಕ ಖಿನ್ನತೆಯಿಂದ ಹೊರಬರಲು ಯೋಗದ ಮೊರೆ ಹೋದ ದರ್ಶನ್‌!

ಯೋಗದ ಮೊರೆ ಹೋದ ದರ್ಶನ್‌!

ನಿನ್ನೆಯಿಂದ ಜೈಲಿನಲ್ಲಿ ನಟ ದರ್ಶನ್ ಯೋಗಾಭ್ಯಾಸ ಶುರು ಮಾಡಿದ್ದಾರೆ. ಈ ಹಿಂದೆ ರವಿಶಂಕರ್ ಗೂರೂಜಿ ಆಶ್ರಮದಿಂದ ಜೈಲಿನ ಸಜಾಬಂಧಿಗಳಿಗೆ ಯೋಗ ತರಬೇತಿ ನೀಡಲಾಗಿತ್ತು. ಈ ಮುಂಚೆ ದರ್ಶನ್ ಭೇಟಿಯಾಗಿ ವಿಜಯಲಕ್ಷ್ಮಿ ಧೈರ್ಯ ತುಂಬಿ ಬಂದಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು ಹಾಕಿದ್ದ.

ಬಟ್ಟೆ, ಹಣ್ಣುಗಳನ್ನು ನೀಡಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ಕಣ್ಣೀರು ಹಾಕಿದ್ದ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದರು., ಪತ್ನಿಯ ಬಳಿ ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್‌ ಹೇಳಿದ್ದರು. ವಕೀಲರ ಮೂಲಕ ಕೋರ್ಟ್​​ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ದರ್ಶನ್​ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದರು. ಸದ್ಯ ಮನೆ ಊಟ ಕೊಡುವ ಬಗ್ಗೆ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಜುಲೈ 18ರಂದು ಈ ಬಗ್ಗೆ ನಿರ್ಧಾರ ಆಗಲಿದೆ.

ಹೊರಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪತ್ನಿಯ ಬಳಿ ಕೇಳಿ ತಿಳಿದುಕೊಳ್ಳುತ್ತಿದ್ದಾರೆ ದಚ್ಚು. ಜಾಮೀನು ಪ್ರಕ್ರಿಯೆ ಬಗ್ಗೆಯೂ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿದ್ದಾರೆ. ಮಗನನ್ನ ತೊಡೆಯ ಮೇಲೆ ಕೂರಿಸಿಕೊಂಡು ಕೆಲಹೊತ್ತು ದರ್ಶನ್‌ ಮಾತನಾಡಿಸಿದ್ದರು. ಮಗನನ್ನು ಕಂಡು ಕೊಂಚ ನಿರಾಳವಾಗಿದ್ದಾರೆ. ಮತ್ತೆ ರಾತ್ರಿಯಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ. ಒಂದು ಕಡೆ ಜಿಮ್‌ನಲ್ಲಿ ವರ್ಕೌಟ್ ಇಲ್ಲ, ಸರಿಯಾದ ಆಹಾರ ಕೂಡ ಇಲ್ಲ. ಇದರಿಂದ ತೂಕ ಕಳೆದುಕೊಂಡು ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗುತ್ತಿದ್ದಾರೆ. ಇತರ ಜೈಲು ಸಿಬ್ಬಂದಿ ಜೊತೆ ಅವರು ಬರೆಯುತ್ತಿಲ್ಲ.

Exit mobile version