Actor Darshan: ʻಸೌಂದರ್ಯ ಜಗದೀಶ್ʼ ಆತ್ಮಹತ್ಯೆಗೆ ಬಿಗ್​ ಟ್ವಿಸ್ಟ್; ದರ್ಶನ್‌, ಪವಿತ್ರಾ ವ್ಯವಹಾರವೇ ಸಾವಿಗೆ ಕಾರಣ? - Vistara News

ಸ್ಯಾಂಡಲ್ ವುಡ್

Actor Darshan: ʻಸೌಂದರ್ಯ ಜಗದೀಶ್ʼ ಆತ್ಮಹತ್ಯೆಗೆ ಬಿಗ್​ ಟ್ವಿಸ್ಟ್; ದರ್ಶನ್‌, ಪವಿತ್ರಾ ವ್ಯವಹಾರವೇ ಸಾವಿಗೆ ಕಾರಣ?

Actor Darshan: ಸೌಂದರ್ಯ ಜಗದೀಶ್ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿ ಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವಿಚಾರವಾಗಿಯೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ.

VISTARANEWS.COM


on

Actor Darshan pavithra Gowda in Soundarya Jagadish case Big twist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಸಿನಿಮಾ (Actor Darshan) ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ತಮ್ಮ ನಿವಾಸದಲ್ಲಿ ಕಳೆದ ಏ.14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ವೈರಲ್‌ ಆದ ಬಳಿಕ ಅವರ ಬಗ್ಗೆ ಹಲವಾರು ಅನುಮಾನಗಳು ವ್ಯಕ್ತವಾದವು. ಕೆಲವರು ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತವಾಗಿ ನಿಧನರಾದರು ಎಂದು ಹೇಳಿಕೊಂಡರು. ಇದೀಗ ಈ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವರ್ಗಾವಣೆಗೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ದರು? ಸಾಲ ಅಂತ ಕೊಟ್ಟಿದ್ರಾ ಎಂಬುದರ ಸತ್ಯ, ತನಿಖೆಯ ನಂತರ ಬಯಲಾಗಬೇಕಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಈ ಹಿಂದೆ ಜಗದೀಶ್‌ ಬ್ಯುಸಿನೆಸ್ ಪಾರ್ಟನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಸೌಂದರ್ಯ ಜಗದೀಶ್‌ ಮೃತಪಟ್ಟ ಒಂದು ತಿಂಗಳ ನಂತರ ಅವರ ರೂಮಿನಲ್ಲಿ ಡೆತ್‌ನೋಟ್‌ ಪತ್ತೆಯಾಗಿತ್ತು. ಸೌಂದರ್ಯ ಜಗದೀಶ್‌ ಬರೆದ ಡೆತ್‌ನೋಟ್‌ನಲ್ಲಿ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ನ ಸಹ ಪಾಲುದಾರರಿಂದ ಸುಮಾರು 60 ಕೋಟಿ ರೂ. ನಷ್ಟವಾಗಿದ್ದು, ಮೋಸ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿತ್ತು. ಇದೀಗ ಸೌಂದರ್ಯ ಜಗದೀಶ್​, ದರ್ಶನ್​, ಪವಿತ್ರಾ ಗೌಡ ನಡುವೆ ಇದೇ ಹಣದ ವ್ಯವಹಾರ ನಡೆದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ಮೇಲೆ ಜಗದೀಶ್ ಪತ್ನಿ ರೇಖಾ ಆರೋಪ ಮಾಡಿದ್ದರು. ಪಾಲುದಾರರಿಂದ 60 ಕೋಟಿ ರೂ. ನಷ್ಟವಾಗಿತ್ತು ಎಂದು ಹೇಳಿಕೆ ನೀಡಿದ್ದರು. ರೇಖಾ ಜಗದೀಶ್​ ದೂರಿನ ಬೆನ್ನಲ್ಲೇ ಪಾಲುದಾರರು ಅಲರ್ಟ್ ಕೂಡ ಆಗಿದ್ದರು. ವ್ಯವಹಾರದ ದಾಖಲೆಯನ್ನು ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ.

ಪವಿತ್ರಾ ಗೌಡ ಖರೀದಿಸಿದ ಮನೆಗೆ ದುಡ್ಡು ಕೊಟ್ಟಿದ್ರಾ ಸೌಂದರ್ಯ ಜಗದೀಶ್?

ಪವಿತ್ರಾ ಗೌಡ ಮನೆ ಖರೀದಿಗಾಗಿ ಸೌಂದರ್ಯ ಜಗದೀಶ್ 2 ಕೋಟಿ ರೂ. ಕೊಟ್ಟಿದ್ದರು ಎನ್ನಲಾಗಿದೆ. ಸೌಂದರ್ಯ ಜಗದೀಶ್ ಹಣ ಕೊಟ್ಟ ಮಾರನೇ ದಿನವೇ ಪವಿತ್ರಾ ಗೌಡ ಮನೆ ಖರೀದಿಸಿದ್ದರು. ಈ ದಾಖಲೆ ಇದೀಗ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಈ ಎಲ್ಲ ಹಣದ ವ್ಯವಹಾರದ ದಾಖಲೆ ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ. 2017 ನವೆಂಬರ್​ 13ರಂದು ಪವಿತ್ರಾಗೌಡಗೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು ಜಗದೀಶ್‌. ಹಾಗೇ 2018, ಜನವರಿ 23ರಂದು ಪವಿತ್ರಾಗೌಡಗೆ ಮತ್ತೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು. 2018, ಜನವರಿ 24 ರಂದು ಪವಿತ್ರಾಗೌಡ ಮನೆ ಖರೀದಿಸಿದ್ದರು.

ಕೆಂಚನಹಳ್ಳಿಯಲ್ಲಿ 1. 75 ಲಕ್ಷ ರೂ. ಮೌಲ್ಯದ ಮನೆ ಖರೀದಿಸಿದ್ದ ಪವಿತ್ರಾ ಗೌಡ

RR ನಗರ ಬಳಿಯ ಕೆಂಚನಹಳ್ಳಿಯಲ್ಲಿ 1. 75 ಲಕ್ಷ ಮೌಲ್ಯದ ಮನೆಯನ್ನು ಪವಿತ್ರಾ ಗೌಡ ಖರೀದಿಸಿದ್ದರು. ಪವಿತ್ರಾಗೌಡ ಮನೆ ಖರೀದಿ ಪತ್ರದಲ್ಲಿ ಸಾಕ್ಷಿಯಾಗಿ ಸೌಂದರ್ಯ ಜಗದೀಶ್​ ಸಹಿ ಕೂಡ ಇತ್ತು. ಈ ಹಣದ ವ್ಯವಹಾರವನ್ನು ಸೌಂದರ್ಯ ಜಗದೀಶ್​ ಪಾಲುದಾರರಿಂದ ಮುಚ್ಚಿಟ್ಟಿದ್ದರು. ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ವಿರುದ್ಧವೇ ಪತ್ನಿ ದೂರು ನೀಡಿದ ಹಿನ್ನೆಲೆಯಲ್ಲಿ ವಹಾರದ ದಾಖಲೆಯನ್ನು ಪಾಲುದಾರರು ಕಲೆ ಹಾಕಿದರು. ಪಾಲುದಾರರಿಗೆ ಸಿಕ್ಕ ದಾಖಲೆಯಲ್ಲಿ ದರ್ಶನ್​- ಪವಿತ್ರಾ, ಜಗದೀಶ್ ವ್ಯವಹಾರ ಪತ್ತೆಯಾಗಿದೆ. ದರ್ಶನ್​ ಕಾರಣಕ್ಕೆ ಪವಿತ್ರಾಗೆ 2 ಕೋಟಿ ರೂ.ಯನ್ನು ಸೌಂದರ್ಯ ಜಗದೀಶ್ ಕೊಟ್ಟರಾ ಎಂಬ ಪ್ರಶ್ನೆ ಈಗ ಎದುರಾಗಿದೆ. ಪವಿತ್ರಾಗೌಡಗೆ ಸೌಂದರ್ಯ ಜಗದೀಶ್​ ಹಣ ಕೊಟ್ಟ ದಾಖಲೆ ಮಾತ್ರ ಲಭ್ಯವಾಗಿದೆ. ಈವರೆಗೂ ಸೌಂದರ್ಯ ಜಗದೀಶ್​ಗೆ ಪವಿತ್ರಾಗೌಡ ಹಣ ವಾಪಸ್​ ನೀಡಿಲ್ಲ. ಹೀಗಾಗಿ ದರ್ಶನ್ ಒತ್ತಡಕ್ಕೆ ಮಣಿದು, ಜಗದೀಶ್‌ ಅವರು ಪವಿತ್ರಾ ಗೌಡಗೆ ಹಣ ನೀಡಿ ಸಂಕಷ್ಟಕ್ಕೆ ಸಿಲುಕಿದರು ಎನ್ನಲಾಗುತ್ತಿದೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಇದೀಗ ಪೊಲೀಸರು ದರ್ಶನ್ ಅವರು ಸೌಂದರ್ಯ ಜಗದೀಶ್‌ಗೆ​ ಒತ್ತಡ ಹಾಕಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಜಗದೀಶ್ ಸೂಸೈಡ್‌ಗೂ ಇದ್ದಕ್ಕೂ ಲಿಂಕ್‌ ಇರಬಹುದಾ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ರು?ಸಾಲ ಅಂತ ಕೊಟ್ಟಿದ್ರಾ? ಎಂಬುದರ ಸತ್ಯ ತನಿಖೆಯ ನಂತರ ಬಯಲಾಗಬೇಕಿದೆ .

ಈ ಹಿಂದೆ ಜಗದೀಶ್‌ ಪತ್ನಿ ಆರೋಪಿಸಿದ್ದೇನು?

ಪತಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಇವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ಶಶಿರೇಖಾ ಆರೋಪಿಸಿದ್ದರು.

ಬ್ಯುಸಿನೆಸ್‌ ಪಾರ್ಟ್ನಸ್‌ಗಳಿಂದ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಪತಿ ಸೌಂದರ್ಯ ಜಗದೀಶ್‌ ಸಾವಿಗೆ ಸುರೇಶ್‌, ಹೊಂಬಣ್ಣ ಹಾಗೂ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯ ಮ್ಯಾನೇಜರ್‌ ಸುದೀಂದ್ರ ಕಾರಣ ಎಂದು ಪತ್ನಿ ಶಶಿರೇಖಾ ದೂರು ನೀಡಿದ್ದಾರೆ. ಸದ್ಯ ಈ ಡೆತ್‌ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

Actor Darshan: ಪೊಲೀಸ್ ಕಸ್ಟಡಿಯಲ್ಲಿದ್ದಾಗ , ತಾಯಿ ಮೀನಾ ಆಗಲಿ, ತಮ್ಮ ದಿನಕರ್ ಆಗಲಿ ದರ್ಶನ್ ನೋಡಲು ಬಂದಿರಲಿಲ್ಲ. ಆ ಸಮಯದಲ್ಲಿ ಬೇಡ ಅಂತ ತಾಯಿ, ತಮ್ಮ ಸುಮ್ಮನಾಗಿದ್ರೋ ಏನೋ ಗೊತ್ತಿಲ್ಲ. ಆದರೆ ಈಗ ದರ್ಶನ್‌ ಅವರು ನ್ ತಾಯಿ ಕನವರಿಕೆ ಮಾಡ್ತಿದ್ದಾರಂತೆ. ಹೀಗಾಗಿ ತಾಯಿ ಮತ್ತು ತಮ್ಮನಿಗೆ ಮಾತ್ರ ಎಂಟ್ರಿ ಕೊಡಿ ಎಂದು ದರ್ಶನ್‌ ಮನವಿ ಮಾಡಿದ್ದಾರೆ.

VISTARANEWS.COM


on

Actor Darshan In Central Jail remembering mother and son
Koo

ಬೆಂಗಳೂರು:  ಪಟ್ಟಣಗೆರೆ ಶೆಡ್‌ನಲ್ಲಿ (Pattanagere Shed) ನಡೆದ ರೇಣುಕಾ ಸ್ವಾಮಿ ಹತ್ಯೆಯ (Renuka Swamy Murder) ವಿವರಗಳು ಇನ್ನೂ ಒಂದೊಂದಾಗಿ ಹೊರಬೀಳುತ್ತಿವೆ. ಜತೆಗೆ ನಟ ದರ್ಶನ್ ಅವರು ಜೈಲಿಗೆ ಹೋಗುತ್ತಿದ್ದಂತೆ ತಾಯಿ, ತಮ್ಮನ ನೆನಪು ಮಾಡಿಕೊಂಡಿದ್ದರಂತೆ. ದರ್ಶನ್ ಜೈಲು ಸೇರಿ ವಾರ ಕಳೆಯುತ್ತ ಬಂದಿದೆ. ಜೈಲಲ್ಲಿ ಒಂಟಿಯಾಗಿರುವ ದರ್ಶನ್‌ಗೆ ತಾಯಿ ಮತ್ತು ತಮ್ಮನ ನೆನಪಾಗಿದ್ಯಂತೆ.

ವಾರದಲ್ಲಿ ಎರಡು ಬಾರಿ ದರ್ಶನ್‌ ಅವರನ್ನು ಮಾತನಾಡಿಸಬಹುದು. ಈಗಾಗಲೇ ದರ್ಶನ್ ಪತ್ನಿ ಮತ್ತು ಪುತ್ರ ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಇದಾದ ನಂತರ ದರ್ಶನ್ ಬೇರೆ ಯಾರನ್ನೂ ನೋಡಲು ಮನಸ್ಸು ಮಾಡ್ತಿಲ್ಲ. ಆದರೆ ತಾಯಿ,ತಮ್ಮ ಬಂದರೆ ಮಾತ್ರ ಅವಕಾಶ ನೀಡಿ ಎಂದು ಜೈಲು ಅಧಿಕಾರಿಗಳ ಬಳಿ ಕೇಳಿಕೊಂಡಿದ್ದಾರಂತೆ. ದರ್ಶನ್ ಈ ಪ್ರಕರಣಕ್ಕೂ ಮುನ್ನ ತಾಯಿ ಮತ್ತು ತಮ್ಮನಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದಾಗ , ತಾಯಿ ಮೀನಾ ಆಗಲಿ, ತಮ್ಮ ದಿನಕರ್ ಆಗಲಿ ದರ್ಶನ್ ನೋಡಲು ಬಂದಿರಲಿಲ್ಲ. ಆ ಸಮಯದಲ್ಲಿ ಬೇಡ ಅಂತ ತಾಯಿ, ತಮ್ಮ ಸುಮ್ಮನಾಗಿದ್ರೋ ಏನೋ ಗೊತ್ತಿಲ್ಲ. ಆದರೆ ಈಗ ದರ್ಶನ್‌ ಅವರು ನ್ ತಾಯಿ ಕನವರಿಕೆ ಮಾಡ್ತಿದ್ದಾರಂತೆ. ಹೀಗಾಗಿ ತಾಯಿ ಮತ್ತು ತಮ್ಮನಿಗೆ ಮಾತ್ರ ಎಂಟ್ರಿ ಕೊಡಿ ಎಂದು ದರ್ಶನ್‌ ಮನವಿ ಮಾಡಿದ್ದಾರೆ.

Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!ಇದನ್ನೂ ಓದಿ:

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದಿದ್ದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದರು.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದ್ದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದರು.

Continue Reading

ಬೆಂಗಳೂರು

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಒಟ್ಟು 17 ಮಂದಿ ಜೈಲು ಸೇರಿದ್ದಾರೆ. ಈ ಪೈಕಿ ಪ್ರಕರಣದ 17ನೇ ಆರೋಪಿ ನಿಖಿಲ್‌ ನಾಯಕ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

By

Renukaswamy murder case 17th accused files bail plea
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Renukaswamy murder case 17th accused files bail plea
ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಾಲಿವುಡ್

Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

Kanguva Release Date: ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

VISTARANEWS.COM


on

Kanguva Release Date announce and clshes with dhruva sarja Martin
Koo

ಬೆಂಗಳೂರು: ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Actor Darshan: ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಜತೆಗೆ ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ನಮ್ಮ ಬಾಸ್‌ ಜೈಲಿಗೆ ಹೋದರು ಅಭಿಮಾನ ಕಡಿಮೆ ಆಗಿಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

VISTARANEWS.COM


on

Actor Darshan fans starts sticker trend mobile cover 6106
Koo

ಬೆಂಗಳೂರು: ದರ್ಶನ್ ಸಿನಿಮಾ (Actor Darshan) ಸ್ಟೈಲ್ ಫಾಲೋ ಮಾಡ್ತಿದ ಫ್ಯಾನ್ಸ್ ಈಗ ದರ್ಶನ್‌ ಅವರ ಕೈದಿ ನಂಬರ್‌ವನ್ನು ಟ್ರೆಂಡ್ ಮಾಡಿದ್ದಾರೆ. ದರ್ಶನ್ ಕೈದಿ ನಂಬರ್‌ಗೆ ಡಿಮ್ಯಾಂಡ್‌ ಸಿಕ್ಕಾಪಟ್ಟೆ ಆಗಿದೆ. ದರ್ಶನ್‌ ಕೈದಿ ನಂಬರ್‌ವನ್ನು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಜತೆಗೆ ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ನಮ್ಮ ಬಾಸ್‌ ಜೈಲಿಗೆ ಹೋದರು ಅಭಿಮಾನ ಕಡಿಮೆ ಆಗಿಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಖೈದಿ ನಂಬರ್​ 6106 ಎಂಬ ಶೀರ್ಷಿಕೆ ನಮಗೆ ಬೇಕು ಎಂದು ಭದ್ರಾವತಿ ಮೂವೀ ಮೇಕರ್ಸ್​ ಸಂಸ್ಥೆಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ‌ ಅರ್ಜಿ ಸಲ್ಲಿಸಿದೆ. ಈ ನಡುವೆ ಈ ಅರ್ಜಿಯನ್ನು ಪರಿಶೀಲಿಸಿದ ಮಂಡಳಿ, ಸದ್ಯಕ್ಕೆ ಈ ಟೈಟಲ್‌ಅನ್ನು ಕೊಡಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದು, ಸದ್ಯಕ್ಕೆ ಹೋಲ್ಡ್‌ನಲ್ಲಿಟ್ಟಿದೆ. ಸದ್ಯಕ್ಕೆ ಪೆಂಡಿಂಗ್‌ ಇಡಲಾಗಿದೆ ಎಂದು ಮಂಡಳಿ ಅರ್ಜಿ ಮೇಲೆ ಬರೆದಿದೆ. ಈಗಾಗಲೇ ಭದ್ರಾವತಿ ಮೂವೀ ಮೇಕರ್ಸ್ ಸಂಸ್ಥೆ ಕನ್ನಡಲ್ಲಿ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು, ಇದು ನಾಲ್ಕನೇ ಚಿತ್ರ.

ಈ ಮುಂಚೆ ಮೈಸೂರಿನಲ್ಲಿ ದರ್ಶನ್‌ ಅಭಿಮಾನಿ ಧನುಷ್‌ ದರ್ಶನ್‌ ಕುರಿತಾಗಿ ಕಣ್ಣೀರಿಟ್ಟು 6106 ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದಿದ್ದರು. ಮಾತ್ರವಲ್ಲ ಇನ್ಮುಂದೆ ಆ ನಂಬರ್ ನಮ್ಮ ಗಾಡಿ ಮೇಲೆ ಇರುತ್ತೆ ಎಂದೂ ಹೇಳಿಕೊಂಡಿದ್ದರು. ದರ್ಶನ್‌ಗೆ ನೀಡಿರುವ ಈ ನಂಬರ್‌ವನ್ನು ಆರ್ ಟಿಒನಲ್ಲಿ ರಿಜಿಸ್ಟರ್ ಮಾಡಿಸಲು ಅಭಿಮಾನಿ ಮುಂದಾಗಿದ್ದರು. ದರ್ಶನ್ ಜೈಲುವಾಸ ನೆನೆದು ಗಳಗಳನೆ ಕಟ್ಟೀರಿಟ್ಟಿದ್ದರು. ಶೀಘ್ರವಾಗಿ ದರ್ಶನ್‌ ಬಿಡುಗಡೆಗೆ ಆಗಬೇಕು ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಕೂಡ ಹೊತ್ತಿದ್ದರು ಧನುಷ್‌. ʻʻನಮ್ಮ ಬಾಸ್ ಏನೂ ತಪ್ಪೇ ಮಾಡಿಲ್ಲ. ನಮ್ಮ‌ ಬಾಸ್ ಅವರನ್ನು ನಾವು ಎಂದೂ ಬಿಟ್ಟುಕೊಡೋದಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿಲ್ಲ ಅಂದ್ರೆ ರಾಜಾರೋಷವಾಗಿ ಬರ್ತಾರೆʼʼಎಂದು ಹೇಳಿಕೊಂಡಿದ್ದರು.

Continue Reading
Advertisement
Actor Darshan In Central Jail remembering mother and son
ಸ್ಯಾಂಡಲ್ ವುಡ್6 mins ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ6 mins ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ17 mins ago

Haveri Accident: ಭಾರತ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಆಗಿದ್ದ ಮೃತ ಮಾನಸ

cm siddaramaiah karnataka cm
ಕರ್ನಾಟಕ25 mins ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ48 mins ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest1 hour ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Renukaswamy murder case 17th accused files bail plea
ಬೆಂಗಳೂರು1 hour ago

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Hina Khan diagnosed with breast cancer
ಸಿನಿಮಾ1 hour ago

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Haveri Accident
ಪ್ರಮುಖ ಸುದ್ದಿ1 hour ago

Haveri Accident: ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Convergence Foundation
ಬೆಂಗಳೂರು1 hour ago

Convergence Foundation : ಕನ್ವರ್ಜನ್ಸ್ ಫೌಂಡೇಷನ್ ಸಹಯೋಗದೊಂದಿಗೆ ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಸಂವಾದ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು22 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌