Site icon Vistara News

Actor Darshan: ಜೈಲಿಗೆ ಆಗಮಿಸಿದ ಸಾಧುಕೋಕಿಲ ಭೇಟಿ ನಿರಾಕರಿಸಿದ ದರ್ಶನ್!

Actor Darshan refused to meet the Sadhu Kokila who arrived in jail

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ವಿನೋದ್‌ ರಾಜ್‌ ಆಗಮಿಸಿದ್ದರು. ದರ್ಶನ್‌ ಅವರನ್ನ ಕಂಡು ವಿನೋದ್ ರಾಜ್‌ ಭಾವುಕರಾಗಿದ್ದರು. ದರ್ಶನ್‌ ಅವರನ್ನ ಮೀಟ್ ಮಾಡಿದ್ಮೇಲೆ ಕಣ್ಣೀರು ಹಾಕುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಇದೀಗ ದರ್ಶನ್ ಭೇಟಿಗೆ ಅವಕಾಶ ಸಿಗದೇ ಸಾಧುಕೋಕಿಲ ವಾಪಸ್‌ ಆಗಿದ್ದಾರೆ.

ವಾರಕ್ಕೆ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇತ್ತು. ಒಂದು ಬಾರಿ ಭೇಟಿಗೆ ಐದು ಮಂದಿಗೆ ಅವಕಾಶ ಇರುವ ನಿಯಮವಿದೆ. ಈಗಾಗಲೇ ಒಂದು ಬಾರಿ ದರ್ಶನ್ ಭೇಟಿಗೆ ಕುಟುಂಬ ಹೋಗಿತ್ತು. ಗುರುವಾರ ಮತ್ತೊಮ್ಮೆ ದರ್ಶನ್ ಫ್ಯಾಮಿಲಿ ಆಗಮಿಸುವ ಹಿನ್ನೆಲೆಯಲ್ಲಿ ಸಾಧುಕೋಕಿಲ ಅವರಿಗೆ ಅವಕಾಶ ಕಲ್ಪಿಸಿಕೊಟ್ರೆ ಮುಂದಿನ ದಿನಗಳಲ್ಲಿ ಫ್ಯಾಮಿಲಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ಗುರುವಾರ ಫ್ಯಾಮಿಲಿ ಜೊತೆಗೆ ಸಾಧುಕೋಕಿಲ ಅವರಿಗೆ ಬನ್ನಿ ಎಂದು ದರ್ಶನ್ ಜೈಲಾಧಿಕಾರಿಗಳ ಮೂಲಕ ಸಾಧುಕೋಕಿಲಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಾಧುಕೋಕಿಲ ಮಾತನಾಡಿ ʻʻನಾನು ಇಂದು ಭೇಟಿ ಮಾಡಿದರೆ ಕುಟುಂಬದವರಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ನಾನು ಗುರುವಾರ ಕುಟುಂಬದವರ ಜೊತೆ ಭೇಟಿ ಮಾಡುತ್ತೇನೆ. ಮೀಡಿಯಾದವರು ವಿಡಿಯೋ ‌ಮಾಡಿದ್ದರಿಂದ ನನ್ನನ್ನು ಹೊರಗೆ ಕಳುಹಿಸಿಬಿಟ್ರುʼʼಎಂದು ಮಾಧ್ಯಮಗಳ ಮುಂದೆ ನಗೆ ಚಟಾಕಿ ಹಾರಿಸಿದರು.

ಇದನ್ನೂ ಓದಿ: Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಇನ್ನು ದರ್ಶನ್‌ ಅವರನ್ನು ನೋಡಲು ಮೊದಲಿಗೆ ಫ್ಯಾನ್ಸ್‌ ಬರುತ್ತಿದ್ದರು. ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್ ನೋಡಲು ಆಗಮಿಸಿ ಸುದ್ದಿಯಾಗಿದ್ದರು. ತಿಂಗಳಿಗೆ ಒಮ್ಮೆ ದರ್ಶನ್ ಅಣ್ಣನ ಭೇಟಿ ಮಾಡುತ್ತಿದ್ದೆ ಆದರೆ ಈಗ ಜೈಲಿನಲ್ಲಿ ಇದ್ದಾರೆ. ಹಾಗಾಗಿ ನೋಡಲು ಬಂದೆ. ನಮ್ ಬಾಸ್ ಒಳ್ಳೆಯ ಕೆಲಸಗಳನ್ನು ಜನರಿಗೆ ಮಾಡುತ್ತಿದ್ದರು. ಈಗ ಅವರು ಜೈಲಿನಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ತಂದೆ ತಾಯಿ‌ ಬಿಟ್ರೆ ದರ್ಶನ್ ನನಗೆ ದೇವರುʼʼಎಂದಿದ್ದರು

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿತ್ತು. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಗಿದ್ದರು.

Exit mobile version