Site icon Vistara News

Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

Actor Darshan Renuka swamy case chitral support by vinay gowda

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ವಿಚಾರಕ್ಕೆ (Actor Darshan) ಸಂಬಂಧಪಟ್ಟಂತೆ ದರ್ಶನ್‌ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು ಎಂಬುದು ಕೆಲವರ ವಾದ. ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದರು. ಈ ಬಗ್ಗೆ ಬಿಗ್‌ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ವಿಸ್ತಾರ ನ್ಯೂಸ್ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ʻʻಈಗ ಪ್ರೋಪೈಲ್‌ ಯಾವುದು ಎಂದು ಎಲ್ಲರಿಗೂ ಗೊತ್ತಾಗಿದೆ. ಸಾಕಷ್ಟು ಜನಕ್ಕೆ ಮೆಸೆಜ್‌ ಹೋಗಿರುವುದು ಗೊತ್ತಾಗಿದೆ. ಮೀಡಿಯಾದಿಂದಲೇ ಗೊತ್ತಾಯ್ತು. ಪ್ರತಿ ಒಬ್ಬರು ಚೆಕ್‌ ಮಾಡಿದಾಗ ಗೊತ್ತಾಗಿದೆ. ಈಗ ಎಲ್ಲಾ ಹೊರಗೆ ಬರುತ್ತಿದೆ. ಚಿತ್ರಾಲ್ ಬಹಳ ಸ್ಟ್ರಾಂಗ್ ವುಮೆನ್. ಆಕೆ ಧೈರ್ಯವಾಗಿ ಬಂದು ನನಗೆ ಈ ರೀತಿ ಕೆಟ್ಟ ಕಾಮೆಂಟ್ ಮಾಡಿದ್ದ ಈ ಫೇಕ್ ಅಕೌಂಟ್ ಇಂದ ಎಂದಾಗ ಯಾಕೆ ಅದನ್ನು ಜನ ಒಪ್ಪುತ್ತಿಲ್ಲ. ಅವರೇ ಸರಿ ಇಲ್ಲ ಎಂದು ಅಂತಾರೆ.” ಎಂದು ವಿನಯ್ ಪ್ರಶ್ನಿಸಿದ್ದಾರೆ.

ʻʻʻಅವರು ಬಿಕಿನಿ ಮಾಡೆಲ್‌. ಅವರ ಪ್ರೊಷನಲ್‌ ಅದು. ಆದರೆ ಈ ಬಗ್ಗೆ ಕೆಟ್ಟ ಕಮೆಂಟ್‌ ಮಾಡಿದ್ದಾರೆ. ಆದರೆ ಈ ರೀತಿ ಅವರಿಗೆ ಕಮೆಂಟ್‌ ಮಾಡೋದು ತಪ್ಪು. ಯಾರು ಕಾಮೆಂಟ್ ಮಾಡಿದ್ದಾರೋ ಅವರಿಗೆಲ್ಲಾ ಕೇಳ್ತಿದ್ದೀನಿ ನೀವು ಮಾಡೋದು ಸರೀನಾ? ಅವರ ಮನೆಯಲ್ಲೂ ಹೆಣ್ಣು ಮಕ್ಕಳು ಇರ್ತಾರೆ. ಯಾರಾದರೂ ಫೋಟೊ ಕಳ್ಸಿ ಅಂತಹ ಮಸೇಜ್ ಕಳ್ಸಿದರೆ ನೋವಾಗುತ್ತದೆ ಅಲ್ಲವೇ?ʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ!

ಚಿತ್ರಾಲ್ ರಂಗಸ್ವಾಮಿ ಹೇಳಿದ್ದೇನು?

ʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ವಿವರಿಸಿದ್ದರು.

ಬಿಗ್‌ಬಾಸ್ ಕನ್ನಡ ಸೀಸನ್ -10 ಮುಗಿದು ಬಹಳ ದಿನಗಳಾಯ್ತು.ವೇದಿಕೆಯಲ್ಲಿ ಲೈವ್ ಲೈವ್ ಆಡಿಯೆನ್ಸ್ ಬೆಂಬಲದ ಎಲ್ಲರನ್ನು ಮನೆಯೊಳಗೆ ಕಳುಹಿಸಲಾಗಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ನಟಿ ಹಾಗೂ ಬಾಡಿ ಬಿಲ್ಡರ್ ಚಿತ್ರಾಲ್ ರಂಗಸ್ವಾಮಿ ಸೋತು ಹೊರಬಂದಿದ್ದರು. ಚಿತ್ರಲ್‌ ರಂಗಸ್ವಾಮಿ ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲೂ ನಟಿಸಿದ್ದಾರೆ. ಜೊತೆಗೆ ಬಾಡಿ ಬಿಲ್ಡರ್‌ ಆಗಿಯೂ ಗುರುತಿಸಿಕೊಂಡಿದ್ದಾರೆ. 2017ರಿಂದ ಬಾಡಿ ಬಿಲ್ಡಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

Exit mobile version