Actor Darshan: 'ಶಾಂತಂ ಪಾಪಂ' ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ? - Vistara News

ಸ್ಯಾಂಡಲ್ ವುಡ್

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಿನಿಮಾ ಮಾಡುತ್ತಾರಾ? ಎನ್ನುವ ಚರ್ಚೆ ನಡೀತಿತ್ತು. ಕಾರಣ ಆರ್‌ಜಿವಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ನೆನೆಪಿಸುವ ಕಾರ್ಯಕ್ರಮ ಕಿರುತೆರೆಯಲ್ಲಿ ಪ್ರಸಾರವಾಗಿದೆ.

VISTARANEWS.COM


on

Actor Darshan Renuka Swamy case In colorskannada shantam Paapam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ದರ್ಶನ್‌ (Actor Darshan) ಅವರ ಕೈದಿ ನಂಬರ್‌ ಸಖತ್‌ ಚರ್ಚೆ ಆಗಿತ್ತು. ಇದೀಗ ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ. ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ಇದೀಗ ಕಲರ್ಸ್‌ ಕನ್ನಡ ಪ್ರೋಮೊ ಹಂಚಿಕೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಿನಿಮಾ ಮಾಡುತ್ತಾರಾ? ಎನ್ನುವ ಚರ್ಚೆ ನಡೀತಿತ್ತು. ಕಾರಣ ಆರ್‌ಜಿವಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ನೆನೆಪಿಸುವ ಕಾರ್ಯಕ್ರಮ ಕಿರುತೆರೆಯಲ್ಲಿ ಪ್ರಸಾರವಾಗಿದೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಹೋಲುವ ಡೇರ್ ಡೆವಿಲ್ ದೇವದಾಸ್ ಎಪಿಸೋಡ್‌ನಲ್ಲಿ ದಾಸ್ ಒಬ್ಬ ಶ್ರೀಮಂತ. ಆದರೆ ಕೊಲೆ ಆರೋಪದಲ್ಲಿ ಆತನನ್ನು ಪೊಲೀಸರು ಬಂಧಿಸುತ್ತಾರೆ. ಮದುವೆ ಆಗಿದ್ದರೂ ಖ್ಯಾತ ಉದ್ಯಮಿ ದಾಸ್ ಒಬ್ಬ ನಟಿಯ ಮೋಹಕ್ಕೆ ಸಿಲುಕಿರುತ್ತಾನೆ. ಆ ನಟಿಗೆ ಒಬ್ಬನಿಂದ ಕೆಟ್ಟ ಕೆಟ್ಟ ಮೆಸೇಜ್‌ಗಳು ಬರಲು ಆರಂಭಿಸುತ್ತದೆ. ಫೇಕ್‌ ಅಕೌಂಟ್‌ಗಳಿಂದ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿರುತ್ತಾನೆ. ಅದನ್ನು ಆಕೆ ದಾಸ್ ಮುಂದಿಡುತ್ತಾಳೆ. ಅದನ್ನು ಕೇಳಿದ ಆತ ಕೊಲೆ ಮಾಡುತ್ತಾನೆ. ಆತನನ್ನು ಕರೆತಂದು ಒಂದು ಶೆಡ್‌ ಮುಂದೆ ಥಳಿಸುವುದನ್ನು ಪ್ರೋಮೊದಲ್ಲಿ ನೋಡಬಹುದು. ಇದೀಗ ಈ ಪ್ರೋಮೊ ಸಖತ್‌ ವೈರಲ್‌ ಆಗುತ್ತಿದೆ. ಇದು ಪಕ್ಕಾ ರೇಣುಕಾ ಸ್ವಾಮಿ ಕಥೆನೇ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

ಈ ಧಾರಾವಾಹಿ ಎಪಿಸೋಡ್ ನೋಡಿದ ಅನೇಕರು ದರ್ಶನ್ ಕಥೆಗೆ ಹೋಲಿಕೆ ಮಾಡಿಕೊಂಡಿದ್ದಾರೆ. ಆಪ್ತೆ ಪವಿತ್ರಾಗೆ ಕಿರುಕುಳ ನೀಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಅವರು ಕೊಲೆ ಮಾಡಿದರು ಎನ್ನಲಾಗಿದೆ. ಈ ಆರೋಪದಲ್ಲಿ ಅರೆಸ್ಟ್ ಆಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

Actor Darshan: ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

VISTARANEWS.COM


on

Actor Darshan grandmother came running distant town to see and not punish him
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ಅವರು ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಎರಡು ಬಾರಿ ದರ್ಶನ್ ಅವರನ್ನು ನಾನು ಭೇಟಿ ಆಗಿದ್ದೇನೆ. ಅವನು ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ. ಎಲ್ಲರೂ ತಪ್ಪು ಮಾಡುತ್ತಾರೆ ಅವನು ಸಹ ಮಾಡಿದ್ದಾನೆ. ನಾನು ದೂರದಿಂದ ಬಸ್ಸಿನಲ್ಲಿ ಬಂದಿದ್ದೇನೆ ಎಂದು ಗೋಗೆರೆದಿದ್ದಾರೆ.

ನಿನ್ನೆ ಕೂಡ ಭಾನುವಾರ ಆದ ಕಾರಣ ದರ್ಶನ್‌ ಭೇಟಿಗೆ ಯಾರಿಗೂ ಅವಕಾಶ ಇರಲಿಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದರು ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದ್ದರು.

ಇದನ್ನೂ ಓದಿ; Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇದೀಗ ದರ್ಶನ್‌ ತಾಯಿ, ತಮ್ಮ, ಪತ್ನಿ , ಮಗ ಭೇಟಿ ಮಾಡಿದ್ದಾರೆ. ಆದರೀಗ ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿರುವುದು ತಿಳಿದು ಬಂದಿದೆ. ಹೀಗಾಗಿ ಸಾಮಾನ್ಯರಿಗೊಂದು ಕಾನೂನು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು ಎನ್ನುವಂತಾಗಿದೆ

Continue Reading

ಸ್ಯಾಂಡಲ್ ವುಡ್

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

Golden Star Ganesh Birthday:  ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೂಲ ಹೆಸರು ಗಣೇಶ್‌ ಕಿಶಾನ್‌. ಇವರು ನಟ, ನಿರ್ದೇಶಕ, ನಿಮಾಪಕ ಮತ್ತು ಟಿವಿ ನಿರೂಪಕರಾಗಿ ಜನಪ್ರಿಯತೆ ಪಡೆದಿದ್ದಾರೆ. ಫಿಲ್ಮ್‌ ಫೇರ್‌ ಅವಾರ್ಡ್‌ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Golden Star Ganesh Birthday Not Celebrating His Birthday This Year
Koo

ಬೆಂಗಳೂರು: ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.2019ರಲ್ಲಿ ನಟ ಗಣೇಶ್‌ ಅವರು ತನ್ನ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಕೆಲವು ವಾರಗಳ ಹಿಂದೆ ತಂದೆ ಅಗಲಿದ ಕಾರಣ ಹುಟ್ಟುಹಬ್ಬ ಕ್ಯಾನ್ಸಲ್‌ ಮಾಡಿಕೊಂಡಿದ್ದರು. 2021ರಲ್ಲೂ ಕೊರೊನಾದಿಂದ (Golden Star Ganesh Birthday) ಜಗತ್ತು ನೋವಿನಲ್ಲಿರುವ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇದೀಗ ಗಣೇಶ್‌ ಅವರು ʻʻನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಗಣೇಶ್‌ ಪೋಸ್ಟ್‌ನಲ್ಲಿ ʻʻಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ’ ಎಂದು ಬರೆದುಕೊಂಡಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೂಲ ಹೆಸರು ಗಣೇಶ್‌ ಕಿಶಾನ್‌. ಇವರು ನಟ, ನಿರ್ದೇಶಕ, ನಿಮಾಪಕ ಮತ್ತು ಟಿವಿ ನಿರೂಪಕರಾಗಿ ಜನಪ್ರಿಯತೆ ಪಡೆದಿದ್ದಾರೆ. ಫಿಲ್ಮ್‌ ಫೇರ್‌ ಅವಾರ್ಡ್‌ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾವು ಇದೇ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ.

2006ರ ಮುಂಗಾರು ಮಳೆ ಸಿನಿಮಾದ ಮೂಲಕ ಗಣೇಶ್‌ ಜನಪ್ರಿಯತೆ ಪಡೆದರು. ಸ್ಯಾಂಡಲ್‌ವುಡ್‌ನಲ್ಲಿ ದಾಖಲೆ ನಿರ್ಮಿಸಿದ ಸಿನಿಮಾವದು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

Actor Darshan: ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿದ್ದು, ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ‌ ಕೊಡಬೇಕಾದರೆ ಹತ್ತಾರು ರೂಲ್ಸ್‌ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ.

VISTARANEWS.COM


on

Actor Darshan Family Jail Entry Police personnel taken in a private car
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇದೀಗ ದರ್ಶನ್‌ ತಾಯಿ, ತಮ್ಮ, ಪತ್ನಿ , ಮಗ ಭೇಟಿ ಮಾಡಿದ್ದಾರೆ. ಆದರೀಗ ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿರುವುದು ತಿಳಿದು ಬಂದಿದೆ. ಹೀಗಾಗಿ ಸಾಮಾನ್ಯರಿಗೊಂದು ಕಾನೂನು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು ಎನ್ನುವಂತಾಗಿದೆ.

ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿದ್ದು, ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ‌ ಕೊಡಬೇಕಾದರೆ ಹತ್ತಾರು ರೂಲ್ಸ್‌ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ.

ರಾಜಾರೋಷವಾಗಿ ನಟ ದರ್ಶನ್ ಕುಟುಂಬದವರಿಗೆ ಜೈಲು ಎಂಟ್ರಿ ನೀಡಲಾಗಿದೆ. ಮಾಧ್ಯಮಗಳ ಕಣ್ತಪ್ಪಿಸಿ ನಟ ದರ್ಶನ್ ಅವರನ್ನು ಕುಟುಂಬ ಭೇಟಿ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ತಾಯಿ, ತಮ್ಮ ಪತ್ನಿ ಮಗ ಎಂಟ್ರಿ ಕೊಟ್ಟರು. ಹತ್ತು ಗಂಟೆ ಸುಮಾರಿಗೆ ಕುಟುಂಬ ಜೈಲಿಗೆ ಬಂದಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಉದಯ್ ದರ್ಶನ್ ಭೇಟಿಗೆ ಕರೆದೊಯ್ದರು. ಉದಯ್‌ ಅವರು ಕಳೆದ ಸೋಮವಾರ ಸಹ ಮಾಧ್ಯಮಗಳ ಕಣ್ತಪ್ಪಿಸಿ ಪತ್ನಿ ಮಗನನ್ನು ಕರೆದೊಯ್ದಿದ್ದರು. ಇಂದು ಕೂಡ ಖಾಸಗಿ ಕಾರಿನಲ್ಲಿ ಉದಯ್‌ ಕುಟುಂಬವನ್ನು ಕರೆದೊಯ್ದಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

ದರ್ಶನ್‌ ಭೇಟಿ ಮಾಡಿದ ರಕ್ಷಿತಾ- ಪ್ರೇಮ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Actor Darshan: ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ. ಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan is like my son says hamsalekha
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಂಸಲೇಖ ಮಾತನಾಡಿ ʻʻನಾವು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷ ಇದೆಯಲ್ಲ ಅದನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌ . ದ್ವೇಷ ಅಂದರೆ ಅದು ಕ್ಯಾರೆಕ್ಟರ್ ಅಯ್ಯ. ಆತರ ಸಿನಿಮಾದಲ್ಲಿ ತೋರಿಸಬೇಕಷ್ಟೆ ನಾವು. ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದು ಹಂಸಲೇಖ ಹೇಳಿದ್ದಾರೆ.

“ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ನನ್ನ ಮಗು ತಪ್ಪು ಮಾಡಿದ್ದರೆ, ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನಾನು ನೋವು ತಿನ್ನುತ್ತೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ.” ಎಂದು ದರ್ಶನ್ ಜೈಲು ಸೇರಿರುವ ಬಗ್ಗೆ ಹಂಸಲೇಖ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

ಕನ್ನಡ ಚಿತ್ರರಂಗದ ನಷ್ಟದ ಹಾದಿ ಹಿಡಿದಿರುವ ಬಗ್ಗೆನೂ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. “ಚಂದನವನ ಎಷ್ಟು ಕೀರ್ತಿಯನ್ನು ಗಳಿಸಿತು. ಎಷ್ಟು ಪ್ರಶಸ್ತಿಗಳು. ಎಷ್ಟು ರಾಷ್ಟ್ರ ಪ್ರಶಸ್ತಿಗಳು. ಎಷ್ಟು ಗೌರವ. ಎಂತಹ ಪ್ರತಿಭಾವಂತರು ಹುಟ್ಟಿ ಬೆಳೆದಿದ್ದಾರೆ. ಅಂದರೆ, ಆ ಎತ್ತರಕ್ಕೆ ಏರಿದ್ದಾರೆ. ಆ ಎತ್ತರಕ್ಕೆ ಹೋದ ಮೇಲೆ ಅಲ್ಲಿಂದ ಕೆಳಗೆ ಬೀಳಬೇಕಾಗುತ್ತೆ. ಹಾಗಾಗುವುದು ಬೇಡ. ಅಲ್ಲಿಂದ ಬಿದ್ದ ಕೂಡಲೇ ಅಲ್ಲಿಂದ ಮತ್ತೆ ಏಳುವ ಚಾನ್ಸ್ ಇದೆ.” ಎಂದು ಹಂಸಲೇಖ ಚಿತ್ರರಂಗದ ಬಗ್ಗೆ ಹೇಳಿದ್ದಾರೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

Continue Reading
Advertisement
Inspirational Story
ಬೆಂಗಳೂರು1 min ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ21 mins ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್33 mins ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ35 mins ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ49 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ1 hour ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ1 hour ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ1 hour ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ1 hour ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌