Site icon Vistara News

Actor Darshan: ದರ್ಶನ್ ಕೈ ಸರ್ಜರಿ ಸಕ್ಸೆಸ್:‌ ಫ್ಯಾನ್ಸ್‌ ಖುಷ್‌!

Actor Darshan successful left hand surgery

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಅವರು ‘ಡೆವಿಲ್’ ಸಿನಿಮಾ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟಾಗಿತ್ತು. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ ಎಂದು ವರದಿಯಾಗಿದೆ. ಸದ್ಯ (Actor Darshan successful left hand surgery) ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ನಟ ಆಪರೇಷನ್‌ ಮಾಡಿಸಿಕೊಳ್ಳಲಿದ್ದೇನೆ ಎಂದು ಹೇಳಿಕೊಂಡಿದ್ದರು. ಬಹಿರಂಗ ಸಭೆ ಅಲ್ಲದೇ ‘ಮ್ಯಾಟ್ನಿ’ ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಹಾಜರಾಗಿದ್ದರು. ಮಂಡ್ಯ ಸಭೆ ಬಳಿಕ ಬೆಂಗಳೂರಿನಲ್ಲಿ ನಡೆದ ‘ಜಾಜಿ’ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗಿದ್ದರು.

ಮಂಡ್ಯದ ಬಹಿರಂಗ ಸಭೆಯಲ್ಲಿ ದರ್ಶನ್‌ ಅವರು ಈ ಬಗ್ಗೆ ಮಾತನಾಡಿದ್ದರು. ʻʻನಾನು ಕಳೆದ ಬಾರಿ ಬಂದಾಗ ಬಲಗೈ ಮುರಿದಿತ್ತು, ಈಗ ಎಡಗೈ. 2ರಂದು ಆಪರೇಷನ್ ಇತ್ತು. ಇಂದೇ ರಾತ್ರಿ ಆಸ್ಪತ್ರೆಗೆ ದಾಖಲಾಗಿ, ನಾಳೆ ಬೆಳಗ್ಗೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ. ಅದಕ್ಕೆ ದಯವಿಟ್ಟು ನಾನು ಹೋಗಬೇಕಾದರೆ, ಸ್ವಲ್ಪ ಜಾಗ ಮಾಡಿಕೊಡಿʼʼಎಂದು ಹೇಳಿದ್ದರು.

ಇದನ್ನೂ ಓದಿ: Actor Darshan: ಅಪ್ಪು ಪತ್ನಿ ಬಗ್ಗೆ ಕೀಳುಮಟ್ಟದ ಟ್ವೀಟ್‌: ದರ್ಶನ್ ಹೇಳಿದ್ದೇನು?

9 ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ

ಬರೋಬ್ಬರಿ 9 ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇದೆ ಎನ್ನಲಾಗಿದೆ. ಆ ಪೈಕಿ ದರ್ಶನ್ ಅವರ ಆಪ್ತ ನಿರ್ಮಾಪಕರಾದ ಶೈಲಜಾ ನಾಗ್ ಮತ್ತು ಬಿ.ಸುರೇಶ್ ಕೂಡ ಇದ್ದಾರೆ. ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಮತ್ತು ದರ್ಶನ್​ ಅವರ ಕಾಂಬಿನೇಶನ್‌​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣದ D 59 ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ದರ್ಶನ್‌ ಅವರಿಗೆ ಐತಿಹಾಸಿಕ ಸಿನಿಮಾ ಮಾಡುವುದೆಂದರೆ ಅಚ್ಚು ಮೆಚ್ಚು. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ. ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ.

ಇದನ್ನೂ ಓದಿ: Actor Darshan: ಇಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಆಪರೇಷನ್‌!

‘ಈ ಮೊದಲು ದರ್ಶನ್​ ನಟಿಸಿದ್ದ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳಿಗೆ ‘ಮೀಡಿಯಾ ಹೌಸ್​ ಸ್ಟುಡಿಯೋ’ ಸಂಸ್ಥೆಯ ಮೂಲಕ ಶೈಲಜಾ ನಾಗ್​ ಮತ್ತು ಬಿ. ಸುರೇಶ್​ ಅವರು ಬಂಡವಾಳ ಹೂಡಿದ್ದರು. ಈಗ ಮೂರನೇ ಬಾರಿಗೆ ಅವರು ದರ್ಶನ್​ ಅಭಿನಯದ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡಲಿದ್ದಾರೆ.

ಜಗ್ಗು ದಾದಾʼ ಚಿತ್ರವನ್ನು ಮಾಡಿದ್ದ ರಾಘವೇಂದ್ರ ಹೆಗ್ಡೆ ಅವರು ದರ್ಶನ್‌ ಜತೆ ಸಿನಿಮಾ ಮಾಡಲಿದ್ದಾರೆ. ದರ್ಶನ್ ಕೈಯಲ್ಲಿ ʻಡೆವಿಲ್ʼ ಹಾಗೂ ಪ್ರೇಮ್ ನಿರ್ದೇಶನದಲ್ಲಿ ಕೆ.ವಿ.ಎನ್ ಸಂಸ್ಥೆ ನಿರ್ಮಾಣದಲ್ಲಿ ಸಿನಿಮಾ ಮೂಡಿಬರಲಿದೆ

Exit mobile version