Site icon Vistara News

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Actor Darshan support by Anusha Rai

ಬೆಂಗಳೂರು: ನಟಿ ಅನುಷಾ ರೈ ಅವರು ‘ನಾಗಕನ್ನಿಕೆ’ ಹಾಗೂ ‘ರಾಜಕುಮಾರಿ’ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ಇನ್ನು ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ನಟಿ ದರ್ಶನ್‌ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ʻʻಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣʼʼಎಂದು ಬರೆದುಕೊಂಡಿದ್ದಾರೆ.

ನಟಿ ಅನುಷಾ ರೈ ಇನ್‌ಸ್ಟಾದಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻಅಭಿಮಾನಿಗಳು ನನಗೆ ವರ್ಷದ 365 ದಿನವೂ ಊಟ ಹಾಕ್ತಾರೆ. ಆದ್ರೆ ನಾನು ಹುಟ್ಟುಹಬ್ಬದ ಒಂದು ದಿನ‌ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ದರ್ಶನ್.. ಮೈಮೇಲೆ ಆತರ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ ಅಮ್ಮನ‌ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ನನ್ನ‌ ಸೆಲೆಬ್ರಿಟೀಸ್ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ. .ನಾನು ಕಾರಲ್ಲಿ ಸ್ಪೀಡಾಗಿ ಹೋಗೊವಾಗ ಹಿಂದೆ ಬರಬೇಡಿ, ಅಕಸ್ಮಾತ್ ಆಕ್ಸಿಡೆಂಟ್ ಆಗಿ ಹೆಚ್ಚು ಕಮ್ಮಿ ಆದ್ರೆ ನಿಮ್ಮ ಕುಟುಂಬದ ಗತಿ ಏನು?? ಎಂದು ಅಭಿಮಾನಿಗಳಿಗೆ ಪ್ರೀತಿಯಿಂದ ಕಾಳಜಿಯಿಂದ ಬುದ್ಧಿವಾದ ಹೇಳಿದ್ದ ಈ ಮೈಸೂರಿನ ಆರಡಿಯ ತೂಗುದೀಪʼʼಎಂದು ಹೇಳಿದ್ದಾರೆ.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!


ʻʻಇಂತಹ ವ್ಯಕ್ತಿಯಿಂದ ಇಂತಹ ತಪ್ಪಾಯಿತೆಂದರೆ ನಂಬಲಸಾಧ್ಯ. ಅದೇನೆ ಆದರೂ ಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣ. ಇನ್ನು ಈ ಅನಾಹುತಕ್ಕೆ ಬಲಿಯಾದ ರೇಣುಕಾಸ್ವಾಮಿ ಗೂ ಅವರ ಕುಟುಂಬಕ್ಕೂ ಆ ದೇವರು ದುಃಖವನ್ನು ಭರಿಸೊ ಶಕ್ತಿ ನೀಡಲಿ. ಅವರು ಮಾಡಿದ್ದು ಸಹ ತಪ್ಪೇ ಆದರೂ ಈರೀತಿಯ ಶಿಕ್ಷೆ ಸರಿಯಲ್ಲ. ಕಾನೂನಿನ ಪ್ರಕಾರವೇ ರೇಣುಕಾಸ್ವಾಮಿಗೆ ಶಿಕ್ಷೆ ಕೊಡಿಸೊ ಬದಲು ಯಾರೋ ಜೀವ ತೆಗೆದಿದ್ದು ಅಕ್ಷಮ್ಯ ಅಪರಾಧ. ತಂದೆಯಾಗುವ ಮೊದಲೇ ಕಣ್ ಮುಚ್ಚಿದ ರೇಣುಕಾಸ್ವಾಮಿ ಮತ್ತೆ ಮಗುವಾಗಿ ಹೆಂಡತಿಯ ಹೊಟ್ಟೆಯಲ್ಲಿ ಹುಟ್ಟಲಿ ಅನ್ನೋದೆ ನಮ್ಮ ಹಾರೈಕೆ….ಕ್ಷಮಿಸಿ

ಈ ಪ್ರಕರಣದಲ್ಲಿ ದರ್ಶನ್ ಕುಟುಂಬಕ್ಕೆ ಶಾಪ ಹಾಕಿದರೆ ಪ್ರಯೋಜನವೇನು ?? ನನ್ನ ತಂದೆ ಒಬ್ಬ ದೊಡ್ಡ ಸ್ಟಾರ್ ಅನ್ನೋದು ಸಹ ಗೊತ್ತಿಲ್ಲದ ಆ ಹಾಲುಗಲ್ಲದ ಮುದ್ದು ಹುಡುಗ ವಿನೀಶ್ ನೋಡಿದರೆ ಸಂಕಟವಾಗದಿರುವುದೆ? ಫಾದರ್ಸ್ ಡೇ ದಿನ ತಂದೆಯನ್ನು ನೆನೆದು ವಿನೀಶ್ ಹಾಕಿದ ಪೋಸ್ಟ್ ಗೆ ಮನಕಲಕದೆ ಇರುವುದೇ ? ಜೊತೆಗೆ ದರ್ಶನ್ ಜೀವನಕ್ಕೆ 22 ವರ್ಷದಿಂದ ವಿಜಯವೂ ಆಗಿ ಲಕ್ಷ್ಮಿಯೂ ಆಗಿರುವ ವಿಜಯಲಕ್ಷ್ಮಿ ಯವರನ್ನು ತಪ್ಪಿತಸ್ಥರಂತೆ ಕಾಣೋದು ಸರಿಯೇ?? ಇಂತಹ ಸಂದರ್ಭದಲ್ಲಿ ಅವರಿಬ್ಬರಿಗೂ ಧೈರ್ಯ ಹೇಳಬೇಕೇ ಹೊರತು ಹೀಯಾಳಿಸುವುದು ಬೇಡʼʼಎಂದು ಬರೆದುಕೊಂಡಿದ್ದಾರೆ.

ಇದೀಗ ನಟಿಯ ಈ ಪೋಸ್ಟ್‌ಗೆ ಚರ್ಚೆಗಳು ಆಗುತ್ತಿವೆ. ಇನ್ನು ‘ಬೆಂಗಳೂರಿನ ಇನ್’ ಸಿನಿಮಾದಲ್ಲಿಯೂ ನಟಿಸಿದ್ದರು ಅನುಷಾ ರೈ .

Exit mobile version