Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌! - Vistara News

ಸ್ಯಾಂಡಲ್ ವುಡ್

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Actor Darshan: ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan V Manohar About Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೊಲೆ ಕೇಸ್ ದರ್ಶನ್ ಅರೆಸ್ಟ್ (Actor Darshan) ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಕೇಸ್ ಬಗ್ಗೆ ಕೆಲವರು ಅಭಿಪ್ರಾಯ ಹಂಚಿಕೊಂಡರೆ ಇನ್ನೂ ಕೆಲವರು ಮೌನವಹಿಸಿದ್ದಾರೆ. ಸಂಗೀತ ಸಂಯೋಜಕ ವಿ. ಮನೋಹರ್ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ.  

ಸಂಗೀತ ನಿರ್ದೇಶಕ ವಿ ಮನೋಹರ್ ಮಾತನಾಡಿ ʻʻಇದೊಂದು ಆಕಸ್ಮಿಕ.ಇದು ಬೇಕು ಅಂತ ಯಾರು ಮಾಡಿರಲ್ಲ. ಎಷ್ಟೋ ಸಾವಿರಾರು ಹೆಣ್ಣುಮಕ್ಕಳ ಶಾಪ ತಟ್ಟಿದಾಗ ಏನಾಗತ್ತೆ ಅನ್ನೋದನ್ನ ಈ ಘಟನೆಯಿಂದ ತಿಳ್ಕೊಬೇಕು. ಹೆಣ್ಣು ಮಕ್ಕಳು ಅಂದರೆ ಅಷ್ಟು ಕೇವಲವೇ? ಒಂದೊಂದು ಮೆಸೇಜಸ್ ನೋಡಿದ್ರೆ ತುಂಬಾ ಕೆಟ್ಟ ಮೆಸೇಜಸ್. ರೇಣುಕಾಸ್ವಾಮಿ ತರ ಇನ್ನೂ ಒಂದಷ್ಟು ಜನ ಇದ್ದಾರೆ. ನಾನು ಸೈಬರ್ ಕ್ರೈಂ ಪೊಲೀಸರಲ್ಲಿ ಮನವಿ ಮಾಡ್ತೇನೆ. ಇಂತವರನ್ನು ಹುಡುಕಿ ಶಿಕ್ಷೆ ಕೊಡಿ ತರಹದ ಘಟನೆಗಳು ತಪ್ಪತ್ತೆ. ಈ ಘಟನೆಯಲ್ಲಿ ಕೊಲೆಯಾಗಿರುವ ರೇಣುಕಾಸ್ವಾಮಿ ವಿರುದ್ಧ ಮೂರು ತಿಂಗಳ ಹಿಂದೆಯೇ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ರು ಕೂಡ. ಪೊಲೀಸರು ಯಾಕೆ ಆಕ್ಷನ್ ತೆಗೆದುಕೊಂಡಿಲ್ಲ ಅನ್ನೋದು ವಿಚಿತ್ರ. ಮೊದ್ಲೇ ಆಕ್ಷನ್ ತಗೊಂಡಿದ್ರೆ ಒಳ್ಳೆಯದಿರುತ್ತಿತ್ತು. ಅವನ ಪಾಪದ ಕೊಡ ತುಂಬಿತು ಅವ್ನು ಸರಿಯಾಗಿ ಅನುಭವಿಸಿದ. ದರ್ಶನ್ ಅವರ ಜೀವನದಲ್ಲಿ ಇದು ಆಗಬಾರದಿತ್ತು. ಸ್ನೇಹಿತರಾಗಿ ನಾನು ದರ್ಶನ್ ಅವ್ರಿಗೆ ಈ ಕಳಂಕದಿಂದ ಹೊರಗೆ ಬರ್ಲಿ ಅಂತ ಹಾರೈಸುತ್ತೇನೆ. ಮತ್ತೆ ಮೊದಲಿನಂತೆ ಇನ್ನೊಂದು ಅಷ್ಟು ಸಿನಿಮಾಗಳು ಮಾಡಲಿ. ದರ್ಶನ್ ಸಿನಿಮಾ ಅಂದರೆ ನೂರಾರು ಜನ ಕೆಲ್ಸ ಮಾಡ್ತಾರೆ. ನೂರಾರು ಜನಕ್ಕೆ ಅನ್ನ ಸಿಗತ್ತೆʼʼಎಂದರು.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Vinay Rajkumar: ಇದಕ್ಕೆ ಪೂರಕವಾಗಿ ಸ್ವಾತಿಷ್ಠಾ ಕೃಷ್ಣನ್ ಮತ್ತು ವಿನಯ್ ರಾಜ್ ಕುಮಾರ್ ಮಧುಮಗ ಮತ್ತು ಮಧುಮಗಳ ಗೆಟಪ್ಪಿನಲ್ಲಿರುವ ಫೋಟೊಗಳು ವೈರಲ್ ಆಗಿವೆ. ಹಾಗಾದರೆ ಈ ಸುದ್ದಿ ನಿಜನಾ? ಇವರಿಬ್ಬರ ಮದುವೆ ಗಾಸಿಪ್‌ ಆಗಿದ್ದೇಕೆ ಎಂದು ತಿಳಿಯಲು ಮುಂದೆ ಓದಿ!

VISTARANEWS.COM


on

Vinay Rajkumar wedding pictures swathishta krishnan have gone viral
Koo

ಬೆಂಗಳೂರು: ಈಗಾಗಲೇ ದೊಡ್ಮನೆಯ ಕುಡಿ ಯುವರಾಜ್‌ (Vinay Rajkumar) ದಾಂಪತ್ಯದಲ್ಲಿ ಬಿರುಕು ಮೂಡಿರುವುದು ಗೊತ್ತೇ ಇದೆ. ವಿಚ್ಚೇದನದ ಹಂತಕ್ಕೂ ತಲುಪಿದೆ. ಈ ಪ್ರಕರಣ ಬೆನ್ನಲ್ಲೇ ವಿನಯ್ ರಾಜ್ ಕುಮಾರ್ ಅವರ ಮದುವೆ ಸುದ್ದಿ ಕೂಡ ಜೋರಾಗಿದೆ. ಇದಕ್ಕೆ ಪೂರಕವಾಗಿ ಸ್ವಾತಿಷ್ಠಾ ಕೃಷ್ಣನ್ ಮತ್ತು ವಿನಯ್ ರಾಜ್ ಕುಮಾರ್ ಮಧುಮಗ ಮತ್ತು ಮಧುಮಗಳ ಗೆಟಪ್ಪಿನಲ್ಲಿರುವ ಫೋಟೊಗಳು ವೈರಲ್ ಆಗಿವೆ. ಹಾಗಾದರೆ ಈ ಸುದ್ದಿ ನಿಜನಾ? ಇವರಿಬ್ಬರ ಮದುವೆ ಗಾಸಿಪ್‌ ಆಗಿದ್ದೇಕೆ ಎಂದು ತಿಳಿಯಲು ಮುಂದೆ ಓದಿ!

ಪ್ರೇಮಕಥೆಯ ತೆರೆಯ ಹಿಂದಿನ ಕಥೆ ಎಂಬ ಸಾಲನ್ನೂ ಬರೆದಿದ್ದರು. ಆದರೆ ಈ ಚಿತ್ರ ವೈರಲ್‌ ಆಗುತ್ತಿದ್ದಂತೆ ಇದ್ಯಾವುದು ಗಮನಿಸಿದ ಕೆಲವರು ಜೋಡಿ ಚೆನ್ನಾಗಿದೆ ಎಂದು ಕಮೆಂಟ್‌ ಮೂಲಕ ವಿಶ್‌ ಮಾಡಿದ್ದಾರೆ. ಮಾತ್ರವಲ್ಲ ನಿಮ್ಮಿಬ್ಬರ ಜೋಡಿ ತುಂಬ ಚೆಂದವಾಗಿದೆ ಎಂದು ಶುಭಾಶಯ ತಿಳಿಸುತ್ತಿದ್ದಾರೆ.

ಇನ್ನೂ ಕೆಲವರು ವಿನಯ್ ರಾಜ್ ಕುಮಾರ್ ಅವರ ಮದುವೆ ಆಯ್ತು, ಆದರೆ.. ನಮಗೆ ಗೊತ್ತೇ ಆಗಲಿಲ್ಲವಲ್ಲಾ ಎಂದು ಬೇಸರವನ್ನೂ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಹಲವರಿಗೆ ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಬೇಸರವನ್ನುಂಟು ಮಾಡಿವೆ. ಇನ್ನೂ ಮದುವೆಯ ಶುಭಾಶಯಗಳ ಮಹಾಪೂರ ಹರಿದು ಬಂದ ಬೆನ್ನಲ್ಲಿಯೇ, ‘ಅಯ್ಯೋ.. ನಾನು ನನ್ನ ಪೋಸ್ಟ್‌ನಲ್ಲಿಯೇ ಬಹಳ ಕ್ಲಿಯರ್‌ ಆಗಿ ಬರೆದಿದ್ದೇನೆ. ಇದು ಚಿತ್ರೀಕರಣದ ಸಮಯದಲ್ಲಿ ತೆಗೆದ ಫೋಟೊ ಎಂದು . ಮನವಿಯನ್ನೂ ಸ್ವಾತಿಷ್ಠಾ ಕೃಷ್ಣನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Vinay Rajkumar: ವಿನಯ್‌ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!

 ವಿನಯ್‌ ರಾಜ್ ಕುಮಾರ್ (Vinay Rajkumar) ಅವರು ʻಒಂದು ಸರಳ ಪ್ರೇಮ ಕಥೆʼ ಸಿನಿಮಾ ಬಳಿಕ ʻಗ್ರಾಮಾಯಣʼ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಸೆಟ್‌ಗೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜತೆಗೆ ಸೇರಿ ಆರಂಭಿಸುತ್ತಿದ್ದಾರೆ.

‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಖ್ಯಾತ ಕಲಾವಿದ ಗೋಪಾಲಕೃಷ್ಣ ದೇಶಪಾಂಡೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಅಪರ್ಣಾ ಕೂಡ ಇದರಲ್ಲಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಹಣವಿದೆ. ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು.

ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. ಆದರೆ ನಾಯಕಿ ಯಾರೆಂಬುದರ ಬಗ್ಗೆ ಸಿನಿರಸಿಕರು ಕುತೂಹಲದಿಂದ ಕಾದಿದ್ದರು. ಇದೀಗ ಮೇಘಾ ಶೆಟ್ಟಿ ನಾಯಕಿ ಎಂಬುದು ಕನ್‌ಫರ್ಮ್‌ ಆಗಿದೆಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Actor Darshan: ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ.

VISTARANEWS.COM


on

Actor Darshan SIM Secret Revealed investigation start
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ. ನಟ ದರ್ಶನ್ ಮಾತ್ರವಲ್ಲ, ಪವಿತ್ರಗೌಡ, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಕೂಡ ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ತನಿಖೆ ವೇಳೆ ಬಯಲಿಗೆ ಬಂದಿದೆ. ಹೀಗಾಗಿ ಸಿಮ್ ಖರೀದಿದಾರರಿಗೆ ಪೊಲೀಸರು ನೋಟಿಸ್‌ ನೀಡಲು ಮುಂದಾಗಿದ್ದಾರೆ. ಮಾತ್ರವಲ್ಲ ದರ್ಶನ್ ಪರಿಚಯಸ್ಥರ ವಿಚಾರಣೆಗೆ ಕೂಡ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪೊಲೀಸ್‌ ತನಿಖೆ ವೇಳೆ ಆರೋಪಿಗಳು ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಮಾಹಿತಿ ಸಂಗ್ರಹಿಸಿ ಪರಿಶೀಲನೆ ವೇಳೆ ಸಿಮ್ ಕಾರ್ಡ್ ರಹಸ್ಯ ಬಯಲಾಗಿದೆ. ಹೇಮಂತ್ ಹೆಸರಿನಲ್ಲಿರುವ ಸಿಮ್‌ವನ್ನು ದರ್ಶನ್‌ ಬಳಸುತ್ತಿದ್ದರೆ, ಪವಿತ್ರಗೌಡ ಅವರು ಮನೋಜ್ ಹೆಸರಿನಲ್ಲಿದ್ದ ಸಿಮ್ ಬಳಸುತ್ತಿದ್ದರು. ಆರೋಪಿ ನಂದೀಶ್ ಅವರು ಹೇಮಂತ್ ಹೆಸರಿನಲ್ಲಿ, ಆರೋಪಿ ಪ್ರದ್ಯೂಷ್ ಖಾಸಗಿ ಕಂಪನಿ ಸೀನಿಯರ್ ಮ್ಯಾನೇಜರ್ ಹೆಸರಿನಲ್ಲಿ, ಆರೋಪಿ ಕಾರ್ತಿಕ್ ಅವರು ವೇಲು ಎಂಬಾತನ ಹೆಸರಲ್ಲಿ, ಕೇಶವಮೂರ್ತಿ ಅರು ಪ್ರಜ್ಞಾ ಎಂ ಹೆಸರಲ್ಲಿ, ನಿಖಿಲ್ ನಾಯಕ್ ಅವರು ಗೀತಾ ಹೆಸರಲ್ಲಿ ಸಿಮ್‌ ಬಳಕೆ ಮಾಡುತ್ತಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

ಸದರಿ ಸಿಮ್ ಮಾಲೀಕರ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ನೋಟಿಸ್ ನೀಡಿ ವಿಚಾರಣೆ ಮಾಡಲು ಪೊಲೀಸರು ಸಿದ್ಧತೆ ಮಾಡುತ್ತಿದ್ದಾರೆ. ಮಾತ್ರವಲ್ಲ ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿಲಾಗಿದೆ. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪುತ್ತಿದ್ದಂತೆ ಪುರೋಹಿತ್ ಎಸ್ಕೇಪ್ ಆಗಿದ್ದಾನೆ. ಈತ ಆರೋಪಿ ಪ್ರದೋಷ್‌ಗೆ ಆಪ್ತನಾಗಿದ್ದ.

ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ

ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸಾಕ್ಷಿದಾರರು ಎಂದು ಪರಿಗಣಿಸಿ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೋಹನ್ ರಾಜು ಹಾಗೂ ಪ್ರಕಾಶ್ ಹೇಳಿಕೆ ಪಡೆಯಲಿದ್ದಾರೆ. ಹಣಕ್ಕೆ ಸಂಬಂಧಿಸಿದಂತೆ ಹಾಗೇ ಇಬ್ಬರು ಪರಿಚಯಸ್ಥರ ಜೊತೆಗೆ ಇನ್ನೂ ಕೆಲವರ ವಿಚಾರಣೆ ಆಗಲಿದೆ.

ದರ್ಶನ್ ಮನೆ ಕೆಲಸಗಾರರಾದ ಬಾಬುಲ್ ಖಾನ್, ಸುಶೀಲಮ್ಮ ಮತ್ತು ಅಮೀರ್ ಖಾನ್ ,ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಕೆಲಸಗಾರ ಚೇತನ್ ಗೌಡ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಆರೋಪಿ ಪವಿತ್ರಗೌಡ ಸ್ನೇಹಿತೆ ಸಮಂತ ಎಂಬಾಕೆಗೂ ವಿಚಾರಣೆ ಬಿಸಿ ತಟ್ಟಿದೆ. ಇದರ ಜೊತೆಗೆ ಇನ್ನಷ್ಟು ಪರೋಕ್ಷ ಸಾಕ್ಷಿಗಳ ಸಂಗ್ರಹ ಕೂಡ ಆಗುತ್ತಿದೆ. ಪೊಲೀಸರು ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

Chaithra J Achar: ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Chaithra J Achar Kittale Roopanthara Raj B Shetty out
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” (Roopanthara)ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದರು. ಈಗಾಗಲೇ ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಂತಹ ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರ ಮೆಚ್ಚುಗೆ ಗಳಿಸಿಕೊಂಡಿರುವ ಚೈತ್ರಾ ಆಚಾರ್ (Chaithra J Achar) ‘ರೂಪಾಂತರ’ದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.ಮಿಧುನ್ ಸಂಗೀತಕ್ಕೆ ರಾಜ್ ಸಾಹಿತ್ಯ ರಚಿಸಿದ್ದು “ಕಿತ್ತಾಳೆ” ಹಾಡು ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ನಟಿ ಚೈತ್ರಾ ಆಚಾರ್ ಅವರೇ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಅವರೇ ಹಾಡಿರುವುದು ವಿಶೇಷ.

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Actor Darshan: ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Actor Darshan very simple person Yamuna Srinidhi
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.  ದರ್ಶನ್ ಪ್ರಕರಣದ ಬಗ್ಗೆ ಅವರ ಜತೆ ನಟಿಸಿರೋ ಯಮುನಾ ಶ್ರೀನಿಧಿ ವಿಸ್ತಾರ ಜತೆ ಮಾತನಾಡಿದ್ದಾರೆ. ದರ್ಶನ್‌ ಅಭಿಮಾನಿಗಳಿಗೆ ತೀರ್ಪು ಬರುವವರೆಗೆ ತಾಳ್ಮೆಯಿಂದರಲು ಮನವಿ ಮಾಡಿದ್ದಾರೆ.

ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ಇದೀಗ ವಿಸ್ತಾರ ಜತೆ ದರ್ಶನ್‌ ಕುರಿತಾಗಿ ಮಾತನಾಡಿದ್ದು ಹೀಗೆ.

ʻʻಆರೋಪಿ ಸ್ಥಾನದಲ್ಲಿ ಯಾರ ಬೇಕಾದರೂ ಇರಬಹುದು. ನ್ಯಾಯಾಂಗ ಇದೆ..ಪೊಲೀಸ್‌ ಇದ್ದಾರೆ. ಅವರ ಕೆಲಸಗಳ ಬಗ್ಗೆ ಮಾತನಾಡುವಷ್ಟು ಜ್ಞಾನ ನನಗೆ ಖಂಡಿತವಾಗಲೂ ಇಲ್ಲ. ನಾವು ಏನಿದ್ರೂ ಅವರ ತೀರ್ಪು ಬಂದಾಗ ಏನು ಎಂದು ಕಾಯುತ್ತ ಇರುವ ಸಾಮಾನ್ಯ ಪ್ರಜೆಗಳು. ನಾನು ನಂಬಿರುವುದು ಉಹಾ ಪೋಹಗಳು. ತಾರಕ್‌ ಸಿನಿಮಾ ವೇಳೆ ನಾನು ದರ್ಶನ್‌ ಅವರ ಜತೆ ಕೆಲಸ ಮಾಡಿದ್ದೆ. ದೇವತಾ ಮನುಷ್ಯ ಅನಿಸಿತ್ತು. ಅವರ ಸರಳತೆ , ಟ್ರೀಟ್‌ ಮಾಡೋದು ಖುಷಿ ಕೊಡತ್ತೆ. ದರ್ಶನ್‌ ಅವರು ಮಗ ಎನ್ನುವ ಪ್ರೀತಿ ಕೊಟ್ಟಿದ್ದಾರೆ. ದರ್ಶನ್‌ ಪ್ರಕರಣಕ್ಕೂ 10 ದಿನ ಮುಂಚೆ ಮೈಸೂರಿನಲ್ಲಿ ಅವರನ್ನು ಮೀಟ್‌ ಮಾಡಿದ್ವಿ. ನಂತರ ನನ್ನ ಗುರುತು ಹಿಡಿದು ಮಾತನಾಡಿಸಿದ್ರು. ಖುಷಿಯಾಯ್ತುʼʼಎಂದರು.

ಇದನ್ನೂ ಓದಿ: Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

ʻʻಅಭಿಮಾನಿಗಳ ಬಗ್ಗೆ ನನ್ನ ಅನಸಿಕೆ ಏನೆಂದರೆ ಯಾರೂ ಪ್ರಚೋದಿಸಿಲ್ಲ ಎಂದರೆ ಯಾರೂ ಏನೂ ಮಾಡುವದಕ್ಕೆ ಹೋಗುವುದಿಲ್ಲ. ತೀರ್ಪು ಬರುವ ಮುಂಚೆಯೇ ಏನೇನೋ ಪೋಸ್ಟ್‌ ಹಾಕಿದ್ದಾರೆ. ಪ್ರಚೋದಿನೆಯಿಂದಾಗಿ ಅಭಿಮಾನಿಗಳು ಈ ರೀತಿ ವರ್ತಿಸಿದ್ದಾರೆ ಎಂಬುದು ನನ್ನ ನಂಬಿಕೆ. ಹಾಗೇ ವಿಜಯಲಕ್ಷ್ಮಿ ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಕ್ಷಮೆಯಾಧರಿತ್ರಿಯಾಗಿ ಬದುಕಬೇಕು ಎಂದು ನನ್ನ ತಂದೆ ಹೇಳಿದ್ದರು. ಇದೀಗ ಅವರು ಗಂಡನ ಪಕ್ಕ ನಿಂತು ಹೋರಾಡುತ್ತಿದ್ದಾರೆ. ಹಾಗೇ ಮಗನ ವಿಚಾರಕ್ಕೆ ಬಂದರೆ ಮಕ್ಕಳ ಮನಸ್ಸು ಕೂಡ ತುಂಬ ಸೂಕ್ಷ್ಮ. ಬೇರೆಯವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ತುಂಬ ಸುಲಭ. ಆದರೆ ವಿನೀಶ್‌ ನೋಡದಾಗ ತುಂಬ ಬೇಜರಾಗತ್ತೆ. ಅಭಿಮಾನಿಗಳಲ್ಲಿ ಕೇಳೊದು ಇಷ್ಟೇ. ತೀರ್ಪು ಬರುವವರೆಗೆ ದಯವಿಟ್ಟು ತಾಳ್ಮೆ ಇರಬೇಕು ಎಂದು ಕೇಳಿಕೊಳ್ಳುತ್ತೇನೆʼʼಎಂದರು.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Continue Reading
Advertisement
BJP Karnataka
ಕರ್ನಾಟಕ9 mins ago

BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sudha Murty
ಬೆಂಗಳೂರು28 mins ago

Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

Neet UG
ದೇಶ40 mins ago

NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನು ರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ

Assault case
ತುಮಕೂರು48 mins ago

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Samantha Ruth Prabhu Doctor Calls Health Illiterate
ಟಾಲಿವುಡ್49 mins ago

Samantha Ruth Prabhu: ಸಮಂತಾಗೆ ಜೈಲಿಗೆ ಕಳಿಸಿ ಎಂದ ವೈದ್ಯ ; ನಟಿ ಹೇಳಿದ್ದೇನು?

DK Shivakumar
ಕರ್ನಾಟಕ55 mins ago

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿಕೆಶಿ

Team India
ಕ್ರೀಡೆ1 hour ago

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Guarantee Schemes
ಕರ್ನಾಟಕ1 hour ago

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

T20 World Cup
ಪ್ರಮುಖ ಸುದ್ದಿ1 hour ago

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

Sexual Harassment
Latest1 hour ago

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ1 hour ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ4 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ5 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು7 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು7 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ11 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌