Site icon Vistara News

Actor Darshan: ಪತಿಗೋಸ್ಕರ ಠಾಣೆ ಮೆಟ್ಟಿಲೇರಿದ ವಿಜಯಲಕ್ಷ್ಮಿ; ನೋಟಿಸ್‌‌‌‌ ನೀಡಿ ವಿಚಾರಣೆಗೆ ಕರೆಸಿಕೊಂಡ್ರಾ ಪೊಲೀಸರು?

Actor Darshan wife Vijayalakshmi in station See Her Husband

ಬೆಂಗಳೂರು: ಜೂನ್ 11ರ ಮಂಗಳವಾರ (Actor Darshan) ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ಸಿನಿಮಾ, ಶೂಟಿಂಗ್ ಎಂದು ಓಡಾಡ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸ. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ದರ್ಶನ್ ಬಂಧನವಾಗಿ ಇಂದಿಗೆ ಎಂಟು ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದಾರೆ ಎಂದು ವರದಿಯಾಗಿದೆ. ವಿಜಯಲಕ್ಷ್ಮಿ ಮಾತ್ರವೇ ಠಾಣೆಗೆ ಆಗಮಿಸಿದ್ದಾರೆ, ಪುತ್ರ ವಿನೀಶ್ ಬಂದಿಲ್ಲ ಎನ್ನಲಾಗುತ್ತಿದೆ. ನೋಟಿಸ್‌‌‌‌ ನೀಡಿ ವಿಚಾರಣೆಗೆ ಕರೆಸಿಕೊಂಡ್ರಾ ಪೊಲೀಸರು ಎಂಬ ಮಾತುಗಳು ಕೇಳಿ ಬಂದಿವೆ.

ವಿಜಯಲಕ್ಷ್ಮಿ ಅವರು ವಿಚಾರಣೆಗೆ ಹಾಜಾರಾಗುವಂತೆ ಪ್ರಕರಣದ ತನಿಖಾಧಿಕಾರಿಂದ ನೋಟಿಸ್‌ ಜಾರಿ ಆಗಿತ್ತು ಎನ್ನಲಾಗಿದೆ. ಕಳೆದ 45 ನಿಮಿಷಗಳಿಂದ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಪತಿಯಿಂದ ಡಿವೋರ್ಸ್‌ ಪಡೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ವಿಜಯಲಕ್ಷ್ಮಿ ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ರೇಣುಕಾ ಸ್ವಾಮಿ ಕೊಲೆ ಆದ ಬಳಿಕ ವಿಜಯಲಕ್ಷ್ಮಿ ಅಪಾರ್ಟ್‌ಮೆಂಟ್‌ಗೆ ದರ್ಶನ್‌ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು. ದರ್ಶನ್​ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂದೂ ವರದಿಯಾಗಿದೆ.

ಇದನ್ನೂ ಓದಿ: Actor Darshan: ದರ್ಶನ್ ಕುಡಿಯದೇ ಇದ್ದಾಗ ಒಳ್ಳೆಯವ, ಪವಿತ್ರಾ ಬಗ್ಗೆ ಮಾತಾಡೋಕೆ ಅಸಹ್ಯ ಎಂದ ಚಿಂಗಾರಿ ಮಹದೇವ್!

ವಿಜಯಲಕ್ಷ್ಮಿ ಅವರು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದಲ್ಲಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಒಂದರಲ್ಲಿ ಪುತ್ರನೊಂದಿಗೆ ವಾಸವಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲಿ ದರ್ಶನ್ ಒಬ್ಬರೇ ಇದ್ದಾರೆ.

ಇನ್‌ಸ್ಟಾ ಸಕ್ರಿಯ

 ವಿಜಯಲಕ್ಷ್ಮಿ ಹಳೆಯ ಖಾತೆಯನ್ನೇ ಮುಂದುವರಿಸಿದ್ದಾರೆ. ಎಲ್ಲ ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್​ಫಾಲೋ ಮಾಡಿದ್ದಾರೆ.ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್​ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.

ವಕೀಲ ಅನಿಲ್ ಬಾಬು ಮಾಧ್ಯಮದವರ ಮುಂದೆ ಮಾತನಾಡಿ ʻʻವಿಜಯಲಕ್ಷ್ಮಿ ಅವರ ಪತ್ನಿಗೆ ಬೇಜಾರು ಆಗಿದ್ದು, ಪವಿತ್ರಾ ಗೌಡ ಅವರು ದರ್ಶನ್‌ ಹೆಂಡತಿ ಎಂದು ಎಲ್ಲ ಮೀಡಿಯಾಗಳು ತೋರಿಸಿದ್ದರು. ದರ್ಶನ್‌ ಅವರಿಗೆ ಇರವ ಏಕೈಕ ಪತ್ನಿ ಎಂದರೆ ಅದು ವಿಜಯಲಕ್ಷ್ಮಿ. ದಂಪತಿಗೆ ವಿನೀಶ್‌ ಎಂಬ ಪುತ್ರನಿದ್ದಾನೆ. ಮಾಧ್ಯಮಗಳು ಪವಿತ್ರಾ ಅವರನ್ನು ದರ್ಶನ್​ರ ಪತ್ನಿ ಎಂದು ಸಂಭೋದಿಸಬಾರದು’ ಎಂದಿದ್ದರು. ವಿಜಯಲಕ್ಷ್ಮಿ ಅವರು ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಸದ್ಯಕ್ಕೆ ಅವರಿಗೆ ಸಮಯದ ಅಗತ್ಯವಿದೆ. ಆದಷ್ಟು ಬೇಗ ಅವರು ಎಲ್ಲರ ಮುಂದೆ ಬರಲಿದ್ದಾರೆ ಎಂದಿದ್ದರು.

Exit mobile version