Site icon Vistara News

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Actor Darshan wife Vijayalakshmi will get divorce

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ದರ್ಶನ್‌ ಜತೆಗಿದ್ದ ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಇದೀಗ ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

ಇದನ್ನೂ ಓದಿ: Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

ಇದಾದ ಬಳಿಕ ದರ್ಶನ್‌ ಕುಡಿದು ಬಂದು ವಿಜಯಲಕ್ಷ್ಮಿ ವಿರುದ್ಧ ಕೂಗಾಡಿರುವ ಆಡಿಯೊ ವೈರಲ್‌ ಆಗಿತ್ತು. ಸ್ವತಃ ವಿಜಯಲಕ್ಷ್ಮಿ ಅವರೇ ಆಡಿಯೊ ಸುಳ್ಳು ಎಂದು ಹೇಳಿಕೆ ನೀಡಿದ್ದರು. ಹೀಗೆ ಸಿಹಿ-ಕಹಿ ಜೀವನ ನಡೆಸುತ್ತಿದ್ದ ದಂಪತಿ ಮಧ್ಯೆ ಮತ್ತೆ ಬಿರುಗಾಳಿಯಂತೆ ಬಂದಿದ್ದು ಪವಿತ್ರಾ ಗೌಡ.

ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ್ದ ದರ್ಶನ್‌

ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ನಟ ದರ್ಶನ್‌ ಸ್ನೇಹಿತರು ಹುಟ್ಟುಹಬ್ಬವನ್ನು ಜೋರಾಗಿಯೇ ಸೆಲೆಬ್ರೇಟ್ ಮಾಡಿದ್ದರು. ಪಾರ್ಟಿಯೊಂದರಲ್ಲಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಸ್ತ್‌ ಡಾನ್ಸ್ ‌ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಿರ್ಮಾಪಕ ಉಮಾಪತಿ ಗೌಡ ಹಾಗೂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಪದಗಳ ಬಳಕೆ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಗಳು ಸೇರಿ ವಿವಿಧ ಸಂಘಗಳು, ನಟನ ವಿರುದ್ಧ ಅಸಮಾಧಾನ ಹೊರಹಾಕಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದವು. ಆದರೆ, ವಿವಾದಗಳಿಗೆ ಸೊಪ್ಪು ಹಾಕದ ದರ್ಶನ್‌, ಪಾರ್ಟಿಯೊಂದರಲ್ಲಿ ಭಾಗಿಯಾಗಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ್ದರು.

ಪವಿತ್ರಾ ಗೌಡ ಜತೆ ವಾರ್‌

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇದೀಗ ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಇದೀಗ ಪವಿತ್ರಾ ಗೌಡ ವಿಚಾರವಾಗಿಯೇ ದರ್ಶನ್‌ ಜೈಲು ಸೇರಿದ್ದಾರೆ. ಇನ್ನು ದರ್ಶನ್‌ ಜೈಲು ಸೇರುವುದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ವಿಜಯಲಕ್ಷ್ಮಿ ಅವರು ದರ್ಶನ್‌ ಅವರನ್ನು ಅನ್‌ಫಾಲೋ ಮಾಡಿ, ಡಿಪಿ ಕೂಡ ಡಿಲಿಟ್‌ ಮಾಡಿದ್ದಾರೆ.ವೈವಾಹಿಕ ಜೀವನದಲ್ಲಿ ಪದೇ ಪದೇ ಬೇಸತ್ತು ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಗಂಭೀರ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಗಾಸಿಪ್‌ಗಳು ಹರಿದಾಡುತ್ತಿವೆ.

Exit mobile version