Site icon Vistara News

Actor Darshan:ದರ್ಶನ್‌ ಹೊರಗೆ ಯಾವಾಗ ಬರ್ತಾರೆ? ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ ಏನು?

Actor Darshan Will Darshan Thoogudeepa Will Get Bail

ಬೆಂಗಳೂರು: ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಹತ್ಯೆ (Renukaswamy) ಪ್ರಕರಣದ ಆರೋಪ ಹೊತ್ತು ಬಂಧನದಲ್ಲಿದ್ದಾರೆ. ಇಂತಹ ವಿವಾದದ ಮಧ್ಯೆ ಸಿಲುಕಿಕೊಂಡು ಸೆಣಸಾಡುತ್ತಿರುವ ನಟ ದರ್ಶನ್ ಅವರಿಗೆ ಜ್ಯೋತಿಷಿ ಆರ್ಯವರ್ಧನ್ ರಾಜಯೋಗ ಕೂಡಿ ಬರಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಬಿಗ್ ಬಾಸ್​ಗೆ ಅತಿಥಿಯಾಗಿ ಬಂದು ಖ್ಯಾತಿ ಪಡೆದಿರೋ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಅವರು ದರ್ಶನ್ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

ಮಾಧ್ಯಮವೊಂದರಲ್ಲಿ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಅವರು ದರ್ಶನ್‌ ಬಗ್ಗೆ ಭವಿಷ್ಯ ನುಡಿದಿದ್ದು ಹೀಗೆ. ʻ ದರ್ಶನ್ ಅವರು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. 14-15 ವರ್ಷಗಳಲ್ಲಿ ಅವರು ಒಂದಲ್ಲಾ ಒಂದು ವಿವಾದ ಮಾಡಿಕೊಳ್ಳುತ್ತಿದ್ದಾರೆ. ಯಾರ ತಪ್ಪು ಯಾರು ಸರಿ ಎಂಬುದನ್ನು ನಾವು ಹೇಳಬಾರದು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುತ್ತದೆ.

`ʻʻ2011ರಿಂದ ಗುರುದಶ ಶುರುವಾಗಿದೆ. ಅವರು ಆಗ ದೊಡ್ಡ ಅಪವಾದ ಅನುಭವಿಸಿದ್ದರು. ಹಲವು ದಿನ ಜೈಲಿನಲ್ಲಿದ್ದರು. ಹೊರಗೆ ಇರೋ ದರ್ಶನ್​ಗೂ ಆಂತರ್ಯದಲ್ಲಿರೋ ದರ್ಶನ್​ಗೂ ಸಾಕಷ್ಟು ವ್ಯತ್ಯಾಸ ಇದೆ 2023 ನವೆಂಬರ್​ನಿಂದ 2024ರ ಅಕ್ಟೋಬರ್​ವರೆಗೆ ಕುಜ ಭುಕ್ತಿ ಇದೆ. ಅಕ್ಟೋಬರ್ ನಂತರ ಅವರು ಜೀವನ ಬದಲಾಗುತ್ತದೆ. ದರ್ಶನ್​​ಗೆ ಅಕ್ಟೋಬರ್​ 28ವರೆಗೂ ಜಾಮೀನು ಅಸಾಧ್ಯ’ ಎಂದಿದ್ದಾರೆ ಅವರು.

ಇದನ್ನೂ ಓದಿ: Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

ಈ ಮುಂಚೆ ಆರ್ಯವರ್ಧನ್‌ ಗುರೂಜಿ ಹೇಳಿದ್ದೇನು?

ಇಂತಹ ವಿವಾದದ ಮಧ್ಯೆ ಸಿಲುಕಿಕೊಂಡು ಸೆಣಸಾಡುತ್ತಿರುವ ನಟ ದರ್ಶನ್ ಅವರಿಗೆ ಜ್ಯೋತಿಷಿ ಆರ್ಯವರ್ಧನ್ ಅವರು ಸಿಹಿ ಸುದ್ದಿ ನೀಡಿದ್ದರು. ಜ್ಯೋತಿಷ್ಯದಲ್ಲಿ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾದ ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಜ್ಯೋತಿಷಿ ಆರ್ಯವರ್ಧನ್ ನಟ ದರ್ಶನ್ ಬಗ್ಗೆ ಆಶ್ಚರ್ಯದಾಯಕ ಭವಿಷ್ಯವಾಣಿಯನ್ನು ನುಡಿದಿದ್ದರು. ನಟ ದರ್ಶನ್ ಅವರ ಹೆಸರು ಮತ್ತು ಜನ್ಮ ದಿನಾಂಕವನ್ನು ಗಣನೆಗೆ ತೆಗೆದುಕೊಂಡ ಗುರೂಜಿ ಸಂಖ್ಯಾಶಾಸ್ತ್ರದ ಪ್ರಕಾರ ಅವರ ಜನ್ಮ ದಿನಾಂಕವನ್ನು ವಿರೋಧಿಸುವ ಸಂಖ್ಯೆ 21ರೊಂದಿಗೆ ಹೋಲಿಕೆ ಮಾಡಿದರೆ ಅವರಿಗೆ ದರ್ಶನ್ ಹೆಸರು ಮಂಗಳಕರವಲ್ಲ. ಇದರಿಂದ ಅವರು ಜೀವನದಲ್ಲಿ ಅನೇಕ ಸವಾಲುಗಳನ್ನು ಮತ್ತು ಅಶಾಂತಿಯನ್ನು ಎದುರಿಸುತ್ತಾರೆ ಎಂದು ತಿಳಿಸಿದ್ದರು.

ಹಾಗೇ ದರ್ಶನ್ ಅವರ ಆರೋಗ್ಯ , ಸಂಬಂಧಗಳು ಮತ್ತು ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ ಆರ್ಯವರ್ಧನ್ ಅವರು ಅವರ ಜಾತಕದಲ್ಲಿ ‘ರಾಹು ಭುಕ್ತಿ’ ಅವಧಿಯಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೇ ಅವರು ಪಾರ್ಶ್ವವಾಯು ಸಮಸ್ಯೆಗೆ ಒಳಗಾಗಬಹುದು ಎಂದು ತಿಳಿಸಿದ್ದಾರೆ. ಅಲ್ಲದೇ ದರ್ಶನ್ ಅವರು ಶುಕ್ರನ ದೆಸೆಯಿಂದ ಜೀವನದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಒಳಗಾಗಬಹುದಾಗಿ ತಿಳಿಸಿದ್ದರು.

Exit mobile version