Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್! - Vistara News

ಸ್ಯಾಂಡಲ್ ವುಡ್

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

Actor Diganth: ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ.

VISTARANEWS.COM


on

Actor Diganth role in Crazystar Ravichandran The Judgement movie Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ (Actor Diganth) ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್‌, ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು (The Judgement movie Kannada) ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ. ಚಿತ್ರತಂಡ ನಡೆಸಿದ ಸಂದರ್ಶನದ ಝಲಕ್‌ ಇಲ್ಲಿದೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿದೆ. ಇಂದಿನ ಜನರೇಶನ್‌ನ ಬೆಂಗಳೂರಿನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು, ಏನೆಲ್ಲ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದರ ಸುತ್ತ ನನ್ನ ಪಾತ್ರವಿದೆ.

ಇದನ್ನೂ ಓದಿ: Actor Darshan: ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ: ಉಮಾಪತಿಗೆ ದರ್ಶನ್‌ ವಾರ್ನಿಂಗ್‌!

ನಿಮ್ಮ ಪ್ರಕಾರ ʼದ ಜಡ್ಜ್‌ಮೆಂಟ್‌ʼ ಅಂದ್ರೇನು?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಒಂದು ಕೋರ್ಟ್‌ ರೂಂ ಡ್ರಾಮಾ ಸಿನಿಮಾ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಏನೂ ಕುತೂಹಲ ಬಿಟ್ಟುಕೊಡಲಾರೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಮೊದಲೇ ಹೇಳಿದಂತೆ, ನಾನು ಇಲ್ಲಿಯವರೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಕಥೆ, ಪಾತ್ರ ಎರಡೂ ಈ ಸಿನಿಮಾದಲ್ಲಿದೆ. ರವಿಚಂದ್ರನ್‌ ಅವರಂಥ ದೊಡ್ಡ ನಟರ ಜೊತೆ ಅಭಿನಯಿಸುವ ಅವಕಾಶ, ತುಂಬ ದೊಡ್ಡ ಸ್ಟಾರ್‌ ಕಾಸ್ಟಿಂಗ್‌, ತುಂಬ ವೃತ್ತಿಪರವಾಗಿರುವ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಮತ್ತು ಸಿನಿಮಾದ ಬಗ್ಗೆ ತುಂಬ ಪ್ಯಾಶನೇಟ್‌ ಆಗಿರುವ ತಂಡ. ಇವೆಲ್ಲವೂ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವಾಯಿತು.

ರವಿಚಂದ್ರನ್‌ ಜೊತೆಗಿನ ಚಿತ್ರೀಕರಣದ ಅನುಭವ ಹೇಗಿತ್ತು?

ನಾನು ರವಿ ಸರ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಮೊದಲ ಬಾರಿಗೆ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಅವರೊಂದಿಗೆ ಅಭಿನಯಿಸುವ ಅವಕಾಶ ಸಿಕ್ಕಿದ್ದಕ್ಕೆ ತುಂಬ ಖುಷಿಯಾಗಿದೆ. ರವಿ ಸರ್‌ ಜೊತೆಗೆ ಶೂಟಿಂಗ್‌ ಮಾಡುವಾಗ, ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಅವರಿಂದ ಕಲಿತುಕೊಳ್ಳುವುದು, ಮಾತಿಗೆ ಕುಳಿತುಕೊಂಡರೆ ಅವರಿಂದ ತಿಳಿದುಕೊಳ್ಳುವುದು ಸಾಕಷ್ಟು ವಿಷಯಗಳು ಇರುತ್ತದೆ.

ಶೂಟಿಂಗ್‌ನಲ್ಲಿ ರವಿಚಂದ್ರನ್‌ ಅವರಿಂದ ಕಲಿತುಕೊಂಡಿದ್ದೇನಾದರೂ ಇದೆಯಾ?

ನಾವೆಲ್ಲ ಸಿನಿಮಾವನ್ನು ಆಡಿಯನ್ಸ್‌ ಆಗಿ ಅಥವಾ ಕಲಾವಿದರಾಗಿ ನೋಡಿದರೆ, ರವಿ ಸರ್‌ ಸಿನಿಮಾವನ್ನು ಬೇರೆಯದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ. ಅವರು ಆಡಿಯನ್‌, ಆರ್ಟಿಸ್ಟ್‌, ಟೆಕ್ನೀಶಿಯನ್‌, ಮೇಕರ್‌ ಎಲ್ಲವೂ ಆಗಿರುವುದರಿಂದ, ಸಿನಿಮಾವನ್ನು ಅವರು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ. ಸಿನಿಮಾ ವಿಷಯದಲ್ಲಿ ಅವರ ಜ್ಞಾನ ತುಂಬ ಅಪಾರ. ಸಿನಿಮಾ ಮೇಕಿಂಗ್‌ ಬಗ್ಗೆ ಅವರು ಹೇಳುವ ವಿಷಯಗಳು ಬೇರೆಲ್ಲೂ ಕಲಿತುಕೊಳ್ಳಲು ಸಿಗದಂತವು.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಸಾಮಾನ್ಯವಾಗಿ ಪ್ರತಿ ಸಿನಿಮಾದ ಪಾತ್ರಗಳಿಗೂ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಆದರೆ ನಿಜ ಹೇಳಬೇಕೆಂದರೆ, ಈ ಸಿನಿಮಾಕ್ಕೆ ಅಷ್ಟೊಂದು ತಯಾರಿ ಮಾಡಿಕೊಂಡಿರಲಿಲ್ಲ. ಅದಕ್ಕೆ ಕಾರಣ ನಿರ್ದೇಶಕ ಗುರುರಾಜ್‌. ಈ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯಿತ್ತು. ಪ್ರತಿಯೊಂದನ್ನೂ ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು. ಅದನ್ನು ಬಿಟ್ಟರೆ ಸಿನಿಮಾದಲ್ಲಿ ಬರುವ ಡ್ಯಾನ್ಸ್‌ ನಂಬರ್‌ಗೆ ಒಂದಷ್ಟು ತಯಾರಿ ಮಾಡಿಕೊಳ್ಳಬೇಕಾಯಿತು.

ಸಿನಿಮಾದಲ್ಲಿ ನಿಮ್ಮ ಮತ್ತು ಧನ್ಯಾ ಕೆಮಿಸ್ಟ್ರಿ ಹೇಗಿದೆ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಮೊದಲ ಬಾರಿಗೆ ನಾನು ಧನ್ಯಾ ರಾಮಕುಮಾರ್‌ ಜೋಡಿಯಾಗಿ ಅಭಿನಯಿಸಿದ್ದೇವೆ. ನಮ್ಮಿಬ್ಬರದ್ದೂ, ಇಂದಿನ ಜನರೇಶನ್‌ ಯುವ ಜೋಡಿಯನ್ನು ಪ್ರತಿನಿಧಿಸುವಂಥ ಪಾತ್ರ. ಇಬ್ಬರ ಕೆಮಿಸ್ಟ್ರಿ ತುಂ ಬ ಚೆನ್ನಾಗಿದೆ. ಕಲಾವಿದೆಯಾಗಿ ಬೆಳೆಯಬೇಕೆಂಬ ಧನ್ಯಾ ಅವರ ಉದ್ದೇಶ, ಅವರ ಉತ್ಸಾಹ ಎರಡೂ ಮೆಚ್ಚುವಂಥದ್ದು. ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಂತರ ʼಪೌಡರ್‌ʼ ಸಿನಿಮಾದಲ್ಲೂ ನಾವಿಬ್ಬರೂ ಒಟ್ಟಿಗೇ ಅಭಿನಯಿಸುತ್ತಿದ್ದೇವೆ.

ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಿರ್ದೇಶಕ ಗುರುರಾಜ್‌ ಮೂಲತಃ ಸಾಫ್ಟ್‌ವೇರ್‌ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್‌ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್‌ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.

ʼದ ಜಡ್ಜ್‌ಮೆಂಟ್‌ʼ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್‌ಗೆ ಖಂಡಿತವಾಗಿಯೂ ʼದ ಜಡ್ಜ್‌ಮೆಂಟ್‌ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

ಪ್ರಚಾರದ ವೇಳೆ ಪ್ರೇಕ್ಷಕರ ಕಡೆಯಿಂದ ಹೇಗೆ ರೆಸ್ಪಾನ್ಸ್‌ ಸಿಗುತ್ತಿದೆ?

ಈಗಾಗಲೇ ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಟೈಟಲ್‌ ಪೋಸ್ಟರ್‌, ಕ್ಯಾರೆಕ್ಟರ್‌ ಫಸ್ಟ್‌ಲುಕ್‌, ಟೀಸರ್‌ ಮಾತ್ತು ಹಾಡು ಬಿಡುಗಡೆಯಾಗಿದೆ. ಎಲ್ಲದಕ್ಕೂ ಸೋಶಿಯಲ್‌ ಮೀಡಿಯಾಗಳಲ್ಲಿ ಆಡಿಯನ್ಸ್‌ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಬಹುತೇಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ.

ವಿ ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ರೇಖಾ ಕೂಡ್ಲಿಗಿ, ಕೃಷ್ಣ ಹೆಬ್ಬಾಳೆ, ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಸಿನಿಮಾದಲ್ಲಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

Martin Movie: ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಸಿನಿಮಾ ಶೂಟಿಂಗ್‌ ಆರಂಭವಾಗಿ ಮೂರು ವರ್ಷವಾದರೂ ಮುಗಿಯುವುದು ನಾನಾ ಕಾರಣಕ್ಕೆ ತಡವಾಗುತ್ತಲೇ ಬಂದಿದೆ. ಇದೀಗ ಚಿತ್ರದ ವಿಎಫ್‌ಎಕ್ಸ್‌ಗಾಗಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

VISTARANEWS.COM


on

Martin Movie
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ನಡುವೆ ಚಿತ್ರ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ ಎದುರಾಗಿದೆ. ಚಿತ್ರದ ವಿಎಫ್‌ಎಕ್ಸ್‌ಗಾಗಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಕಂಪನಿಗೆ ನಿರ್ಮಾಪಕ ನೀಡಿದ್ದ 2.5 ಕೋಟಿ ರೂ.ಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ನಿರ್ದೇಶಕನ ಬಂಧನ ಸಾಧ್ಯತೆ ಇದೆ ಎಂಬ ಮಾತುಗಳು ಚಂದನವನದ ಅಂಗಳದಲ್ಲಿ ಕೇಳಿಬರುತ್ತಿವೆ.

ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಸರ್ಜಾ ಅವರ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದಿದ್ದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಇತ್ತೀಚೆಗೆ ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ್ದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದರು. ಆದರೆ, ಇದೀಗ ವಿಚಾರಣೆ ವೇಳೆ ನಿರ್ದೇಶಕ ಅರ್ಜುನ್‌ಗೆ ಕಮಿಷನ್ ನೀಡಿರುವುದಾಗಿ ಆರೋಪಿ ಸುನಿಲ್ ರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯ ರೆಡ್ಡಿಯನ್ನು ಬಂಧಿಸಿದ್ದರು. ಆದರೆ, ವಿಎಫ್‌ಎಕ್ಸ್ ಕೆಲಸವನ್ನು ತಮಗೆ ನೀಡಲು ನೀಡಲು ಅರ್ಜುನ್ ನಮ್ಮಿಬ್ಬರಿಂದ 50 ಲಕ್ಷ ರೂ. ಕಮಿಷನ್ ಪಡೆದಿದ್ದಾರೆ ಎಂದು ಸುನಿಲ್ ಆರೋಪಿಸಿದ್ದಾರೆ. ಇನ್ನು ಅಕ್ಟೋಬರ್ 11ಕ್ಕೆ ವಿಶ್ವದಾದ್ಯಂತ ‘ಮಾರ್ಟಿನ್’ ಬಿಡುಗಡೆಗೆ ತಯಾರಿ ನಡೆದಿದ್ದು, ನಟ ಧ್ರುವ ಸರ್ಜಾ ಡಬ್ಬಿಂಗ್ ಮಾಡುವಾಗಲೂ ನಿರ್ದೇಶಕ ಅರ್ಜುನ್ ಗೈರಾಗಿದ್ದರು. ಈ ಹಿಂದೆಯೂ ಮಾರ್ಟಿನ್ ಚಿತ್ರತಂಡದಲ್ಲಿ ಮನಸ್ತಾಪಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ. ಅರ್ಜುನ್ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಎನ್ನಲಾಗಿದೆ.

ದರ್ಶನ್ ನಾಯಕನಾಗಿ ನಟಿಸಿದ ಐರಾವತ ಚಿತ್ರದ ಮೇಕಿಂಗ್ ಸೇರಿ ಅರ್ಜುನ್ ವಿರುದ್ಧ ಈ ಹಿಂದೆ ಇದೇ ರೀತಿಯ ಆರೋಪಗಳು ಕೇಳಿಬಂದಿತ್ತು. ಅರ್ಜುನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯದ ವದಂತಿಗಳು ಕೇಳಿಬಂದಿದ್ದವು.

ಇದನ್ನೂ ಓದಿ | Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದರು. ಇಷ್ಟಾದರೂ ಇದೀಗ ಸಿನಿಮಾ ಅಕ್ಟೋಬರ್ 11ಕ್ಕೆ ಮಿಂಚಲು ರೆಡಿಯಾಗಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

Kannada New Movie: ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

VISTARANEWS.COM


on

Kannada New Movie Parapancha Gama Gama Powder song out
Koo

ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” (Kannada New Movie) ತನ್ನ ಎರಡನೇ ಗೀತೆಯಾದ “ಪರಪಂಚ ಘಮ ಘಮ” ಅನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದೆ. ಮೊದಲನೇ ಗೀತೆಯಾದ”ಮಿಷನ್ ಘಮ ಘಮ” ತನ್ನ ವಿಭಿನ್ನ ಟ್ಯೂನ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ “ಪರಪಂಚ ಘಮ ಘಮ” ಅದೇ ರೀತಿಯ ಛಾಪನ್ನು ಮೂಡಿಸಲು ಸಜ್ಜಾಗಿದೆ.

ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದೆ.ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”. ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್” ಹಿಂದಿನ “ಪವರ್” ಅವರಿಗೆ ತಿಳಿಯುವುದೇ? ಇದುವೇ ಕಥೆಯ ಸಾರಾಂಶ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. ಈ ಚಿತ್ರವು ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading

ಸ್ಯಾಂಡಲ್ ವುಡ್

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Hamsalekha: ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

VISTARANEWS.COM


on

Hamsalekha NadaBrahma' has no meaning, Shankar Shanubhag sparks against Hansalekha
Koo

ಬೆಂಗಳೂರು: ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನುಭಾಗ್ ದೇಶ-ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಕೊಟ್ಟು ಜನಪ್ರಿಯರಾಗಿದ್ದಾರೆ. ಆದರೆ, ಆರಂಭದ ದಿನಗಳಲ್ಲಿ ಸಿನಿಮಾದ ಸಂಗೀತ ನಿರ್ದೇಶಕರೊಂದಿಗೂ ಕೆಲಸ ಮಾಡಿದ್ದರು. ಆ ವೇಳೆ ತಮಗೆ ಮೋಸ ಆಗಿದೆ ಎಂದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ (Hamsalekha) ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

ಈ ಬಗ್ಗೆ ಗಾಯಕ ಶಂಕರ್ ಶಾನುಭಾಗ್ ಮಾತನಾಡಿ ʻʻಹಂಸಲೇಖ ಅವರಿಗೆ ಹೆಚ್ಚು ಕಡಿಮೆ ನಾನು 8-10 ಹಾಡುಗಳನ್ನು ಹಾಡಿದ್ದೆ. ಆದರೆ ಪೇಮೆಂಟ್‌ ಬಂದಿರಲಿಲ್ಲ. ತುಂಬ ಸಲ ಅವರ ಮುಂದೆ ಹೋಗಿ ನಿಂತೆ. ಅದು ಅಲ್ಲದೇ ಆಗ ತುಂಬ ತೊಂದರೆಯಲ್ಲಿದ್ದೆ. ಆಗ ತಂಗಿಯರ ಮದುವೆ ಬೇರೆ ಮಾಡಿಸಬೇಕಿತ್ತು.ಆಗ ಹಂಸಲೇಖರ ಬಳಿ ಪೇಮೆಂಟ್‌ ಕೇಳಿದಾಗ, ಕೊಟ್ರಾಯ್ತು ಕಣೋ! ಎನ್ನುತ್ತಿದ್ದರು. ಐದನೇ ಸಲ ಹೋದಾಗ, ಅವರ ಮೂಡ್‌ ಸರಿ ಇಲ್ಲ ಅನ್ಸತ್ತೆ.. ಎಷ್ಟು ಕೋಟಿ ಕೊಡಬೇಕೋ ನಿನಗೆ ಅಂದು ಬಿಡೋದಾ? ಆ ಮೇಲೆ ಕೈ ಮುಗಿದು ಅಲ್ಲಿಂದ ಬಂದು ಬಿಟ್ಟೆ ಎಂದರು.

ʻʻಮೊದಲನೇದಾಗಿ ನಾದಬ್ರಹ್ಮ ಎಂಬ ಪದಕ್ಕೆ ಅರ್ಥವೇ ಇಲ್ಲ. ನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲ. ಆದರೆ ಅದನ್ನ ಸ್ವೀಕರಿಸುತ್ತಾರಲ್ಲ…! ಇದು ನಮ್ಮ ಚಲನಚಿತ್ರದ ದುರಂತಗಳು. ಕನ್ನಡದಲ್ಲಿ ಅಸಂಖ್ಯಾತ ಪ್ರತಿಭೆಗಳಿವೆ. ಒಳ್ಳೆಯ ಹಾಡುಗಾರರಿದ್ದಾರೆ. ತುಂಬ ಜನ ಇದ್ದಾರೆ. ಇದೀಗ ಸಂಗೀತ ಕಲಿಯಬೇಕು ಎಂತಿಲ್ಲ. ಯಾರು ಬೇಕಾದರೂ ಹಾಡುತ್ತಾರೆ. ಈ ರಿಯಾಲಿಟಿ ಶೋ ದುರಂತ ಒಂದೆರಡಲ್ಲ. ಏಳೇಳು ಜನುಮದ ಲವ್‌ ಮ್ಯೂಸಿಕ್‌ ಡೈರಕ್ಟರ್‌ ವಿ ಮನೋಹರ್‌. ಈ ಹಾಡಿನ ಟ್ರ್ಯಾಕ್‌ ಹಾಡಿದ್ದು ನಾನು. ಅದನ್ನ ಒಂದು ರಿಯಾಲಿಟಿ ಶೋನಲ್ಲಿ ಒಬ್ಬರು ಹಾಡಿದ್ದರು. ʻಮಹಾಗುರುಗಳುʼ , ಹಾಡು ಮುಗಿದ ಮೇಲೆ ಕಮೆಂಟ್‌ ಮಾಡಿದ್ದು ಹೀಗೆ. ಫ್ರಿ ಬಿಟ್ಟು ಬಿಟ್ಟೆ ಹಾಡು ಅಂತ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಸಮಯದಲ್ಲಿ ಅವರು ಇರಲೇ ಇಲ್ಲ. ಬೇರೆಯವರು ಮಾಡಿದ್ದನ್ನು ನಾನು ಮಾಡಿದೆ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಹಾಡಿನ ಕ್ರೆಡಿಟ್‌ ವಿ ಮನೋಹರ್‌ಗೆ ಹೋಗಬೇಕುʼʼಎಂದರು.

ಇದನ್ನೂ ಓದಿ: Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಅವರ ಬಗ್ಗೆನೂ ಗಂಭೀರ ಆರೋಪ ಮಾಡಿದ್ದಾರೆ. ಅವಕಾಶಕ್ಕಾಗಿ ಅವರ ಕಾಲು ಹಿಡಿದು ಜಾಡಿಸಿ ಒದ್ದರು ನನಗೆ ಎಂದು ಇದೇ ಸಂದರ್ಶನದಲ್ಲಿ ಹೇಳಿದ್ದಾರೆ. ಹಾಗೇ ಮತ್ತೊಬ್ಬ ಸಂಗೀತ ನಿರ್ದೇಶಕ ಮೈಸೂರು ಮೋಹನ್ ಅವರ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ‘ನಂಜುಂಡ’ ಸಿನಿಮಾಗಾಗಿ ಇವರೊಂದಿಗೆ ಒಂದು ತಿಂಗಳು ಕೆಲಸ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಆರು ಸಾಂಗ್‌ಗಳಿಗೆ ಟ್ರ್ಯಾಕ್ ಮತ್ತು ಕೋರಸ್ ಹಾಡಿದ್ದರೂ ಇದೂವರೆಗೂ ಒಂದು ರೂಪಾಯಿ ಪೇಮೆಂಟ್ ಕೂಡ ಬಂದಿಲ್ಲ ಎಂದಿದ್ದಾರೆ. ವಿ ಮನೋಹರ್‌ ಮಾತ್ರ ಕಲಾವಿದರ ಮೇಲೆ ಹೊಟ್ಟೆ ಮೇಲೆ ಹೊಡಿಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ7 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ20 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ35 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌