Site icon Vistara News

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

Actor Upendra Ajaneesh Visited Hangary To Record Music

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ಅವರ ‘ಯುಐ’ ಸಿನಿಮಾ ಚಿತ್ರೀಕರಣ ಮುಗಿದು ಇದೀಗ ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷವಷ್ಟೇ ‘UI’ ಸಿನಿಮಾವನ್ನು ಅನೌನ್ಸ್ ಮಾಡುವುದಾಗಿ ಘೋಷಿಸಿದ್ದರು. ಇದೂವರೆಗೂ ಉಪ್ಪಿ ನಿರ್ದೇಶಿಸಿದ ಸಿನಿಮಾಗಳಲ್ಲೇ ಹೆಚ್ಚಿನ ಬಜೆಟ್‌ ಸಿನಿಮಾದಾಗಿದೆ. ಇದೀಗ ಈ ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂ. ಎಂದು ವರದಿಗಳಾಗಿವೆ. ಇದೀಗ ನಿರ್ದೇಶಕ ಉಪೇಂದ್ರ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಯೂರೋಪಿಯಾ ದೇಶವಾದ ಹಂಗೆರಿಗೆ ಹೋಗಿದ್ದಾರೆ.ಅಜನೀಶ್ ಲೋಕನಾಥ್ ಲೈವ್ ಮ್ಯೂಸಿಕ್ ರೆಕಾರ್ಡ್ ಮಾಡಲು ಹಂಗೆರಿಯನ್ನು ಆರಿಸಿಕೊಂಡಿದ್ದಾರೆ.

ತಮ್ಮ ಸಿನಿಮಾದ ಹಾಡುಗಳಿಗೆ ಉಪೇಂದ್ರ ಅವರೇ ಸಾಹಿತ್ಯವನ್ನು ಬರೆಯುತ್ತಾರೆ. ಹಾಗಾಗಿ ಸಂಗೀತ ನಿರ್ದೇಶಕರ ಜೊತೆಗೆ ಉಪ್ಪಿ ಸಹ ಹಂಗೆರಿಗೆ ತೆರಳಿದ್ದಾರೆ. ಅಲ್ಲದೆ ಅಲ್ಲಿ ಸಿನಿಮಾದ ಇನ್ನಿತರೆ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ಸಹ ಮಾಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ‘ಎ’ ಸಂಗೀತದೊಂದಿಗೆ ಆರಂಭವಾಗುವ ವಿಡಿಯೊನಲ್ಲಿ ಉಪ್ಪಿ ಹಾಗೂ ಅಜನೀಶ್ ಲೋಕನಾಥ್ ಹಂಗೆರಿಯ ನಗರವೊಂದರಲ್ಲಿ ನಿಂತು ಚರ್ಚೆ ಮಾಡುತ್ತಿರುವ ದೃಶ್ಯಗಳಿವೆ.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು‌ ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್‌ ಹಾಕಿ, ಮೈಕ್‌ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.

ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ.

ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.

ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ದುಬಾರಿ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಎಡಿಟಿಂಗ್ ಹಂತದಲ್ಲಿದ್ದು, ಮುಂದಿನ ತಿಂಗಳಿಂದ ಪ್ರಚಾರ ಶುರು ಮಾಡುವ ಸಾಧ್ಯತೆಯಿದೆ.ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.

Exit mobile version