Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ 'ರಾಕಿಂಗ್ ಸ್ಟಾರ್' ಯಶ್! - Vistara News

ಸ್ಯಾಂಡಲ್ ವುಡ್

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

Actor Yash: ಡ್ಯಾನ್ಸ್ ಚೆನ್ನಾಗಿ ಮಾಡಿದ್ದೀರಿ, ಸಖತ್ ಆಗಿತ್ತು. ಬೆಳೆಯುವವರಿಗೆ ಬೆನ್ನು ತಟ್ಟೋದು ಮುಖ್ಯ. ಶಿವಣ್ಣ ಅವರೇ ನಮಗೆ ಸ್ಪೂರ್ತಿ. ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ” ಎಂದು ಯಶ್ ಅವರು ಫೋನ್ ಕರೆಯಲ್ಲಿ ಹೇಳಿದ್ದಾರೆ.

VISTARANEWS.COM


on

Actor Yash called the actor that if you grow beyond all of us dance karnataka dance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

 ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋ ವೇದಿಕೆಯಲ್ಲಿ ನಟ ಧನುಷ್ ಅವರು ಕಳೆದ ಬಾರಿ ‘ರಾಕಿಂಗ್ ಸ್ಟಾರ್’ ಯಶ್ (Actor Yash) ಅವರ ‘ಕೆಜಿಎಫ್’ ಸಿನಿಮಾದ ‘ಧೀರ ಧೀರ ಸುಲ್ತಾನ’ ಹಾಡಿಗೆ ಡ್ಯಾನ್ಸ್ ಮಾಡಿದ್ದರು.

ಇದೀಗ ʻಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಕಂಠಿ ಪಾತ್ರಧಾರಿ ನಟ ಧನುಷ್ ಅವರಿಗೆ ‘ರಾಕಿಂಗ್ ಸ್ಟಾರ್’ ಯಶ್ ಅವರು ಫೋನ್ ಕರೆ ಮಾಡಿ ಮಾತನಾಡಿದ್ದಾರೆ.

ಡ್ಯಾನ್ಸ್‌ ನೋಡಿ ಶಿವಣ್ಣ ಅವರು ಧನುಷ್‌ಗೆ ನಿಮ್ಮ ಡ್ಯಾನ್ಸ್‌ ಬಗ್ಗೆ ಯಶ್‌ ಅವರಿಗೆ ಕರೆ ಮಾಡಿ ಹೇಳುತ್ತೇನೆ ಎಂದಿದ್ದರು. ಇದೀಗ ಯಶ್‌ ಅವರೇ ಧನುಷ್‌ ಅವರಿಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Actor Yash: ಸರಳವಾಗಿ ಜರುಗಿತು ಯಶ್‌ ʻಟಾಕ್ಸಿಕ್‌ʼ ಸಿನಿಮಾ ಮುಹೂರ್ತ: ಫೋಟೊಗಳು ವೈರಲ್‌!

“ಡ್ಯಾನ್ಸ್ ಚೆನ್ನಾಗಿ ಮಾಡಿದ್ದೀರಿ, ಸಖತ್ ಆಗಿತ್ತು. ಬೆಳೆಯುವವರಿಗೆ ಬೆನ್ನು ತಟ್ಟೋದು ಮುಖ್ಯ. ಶಿವಣ್ಣ ಅವರೇ ನಮಗೆ ಸ್ಪೂರ್ತಿ. ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ” ಎಂದು ಯಶ್ ಅವರು ಫೋನ್ ಕರೆಯಲ್ಲಿ ಹೇಳಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಡ್ಯಾನ್ಸ್ ಬರದ ಸೆಲೆಬ್ರಿಟಿಗಳು, ಪ್ರೊಫೆಶನಲ್ ಡ್ಯಾನ್ಸರ್‌ಗಳ ಜೊತೆ ಸೇರಿಕೊಂಡು ಡ್ಯಾನ್ಸ್ ಮಾಡುತ್ತಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

ಇದೀಗ ಸಿನಿಮಾ ಕುರಿತು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿ ರಸಿಕರೊಬ್ಬರು ʻʻಫಸ್ಟ್ ಹಾಫ್ ಸಾಂಗ್ಸ್, ಕಾಮಿಡಿ ಸೂಪರ್. ಸೆಕೆಂಡ್ ಹಾಫ್ ಸೆಂಟಿಮೆಂಟಲ್ ಹಾಗೂ ರಿವೇಂಜ್ ಸ್ಟೋರಿ. ಮತ್ತೊಂದು ಯಶಸ್ವಿ ಸಿನಿಮಾ ಕೊಟ್ಟ ದುನಿಯಾ ವಿಜಯ್ ಅವರಿಗೆ ಹ್ಯಾಟ್ಸಾಫ್ʼʼಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Duniya Vijay bheema movie review
Koo

ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ.ಗಿ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಒಂದರ್ಥದಲ್ಲಿ ಈ ವರ್ಷ ಬಂದಿರುವ ಮೊದಲ ಸ್ಟಾರ್ ನಟನ ಸಿನಿಮಾ. ಹಾಗಾಗಿ ಶುಕ್ರವಾರ ಬೆಳಗಿನ ಶೋಗೂ ತಕ್ಕ ಮಟ್ಟಿಗೆ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬಂದಿದ್ದಾರೆ.

ಇದೀಗ ಸಿನಿಮಾ ಕುರಿತು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿ ರಸಿಕರೊಬ್ಬರು ʻʻಫಸ್ಟ್ ಹಾಫ್ ಸಾಂಗ್ಸ್, ಕಾಮಿಡಿ ಸೂಪರ್. ಸೆಕೆಂಡ್ ಹಾಫ್ ಸೆಂಟಿಮೆಂಟಲ್ ಹಾಗೂ ರಿವೇಂಜ್ ಸ್ಟೋರಿ. ಮತ್ತೊಂದು ಯಶಸ್ವಿ ಸಿನಿಮಾ ಕೊಟ್ಟ ದುನಿಯಾ ವಿಜಯ್ ಅವರಿಗೆ ಹ್ಯಾಟ್ಸಾಫ್ʼʼಎಂದು ಬರೆದುಕೊಂಡಿದ್ದಾರೆ.

ʻಭೀಮ ಪ್ಯೂರ್ ರಾ ಮೂವಿ. ಪ್ಯೂರ್ ಮಾಸ್ ಎಂಟರ್‌ಟ್ರೈನರ್. ಫಸ್ಟ್ ಹಾಫ್ ಹಾಗೂ ಕ್ಲೈಮ್ಯಾಕ್ಸ್ ಬೆಂಕಿ. ಆಲ್ ದಿ ಬೆಸ್ಟ್ ಭೀಮʼʼ ಎಂದು ಇನ್ನೊಬ್ಬರು ಟ್ವೀಟ್ ಮಾಡಿದ್ದಾರೆ.

ʻʻಈಗಷ್ಟೇ ನೋಡಿದೆ ಭೀಮ ಸಿನಿಮಾ ನೋಡಿದೆ. ಬಲವಾದ ನಿರೂಪಣೆ ಮತ್ತು ಕಲಾವಿದರ ನಟನೆ ಗಮನ ಸೆಳೆಯುತ್ತದೆ. ಆದರೆ ಲೋಕಲ್ ದೃಶ್ಯಗಳು ಮತ್ತು ಪುನರಾವರ್ತನೆ ಆಗುವ ಆಕ್ಷನ್ ಚಿತ್ರಕ್ಕೆ ಹಿನ್ನಡೆ ಆಗುತ್ತದೆ. ಸೆಕೆಂಡ್ ಹಾಫ್ ಕೊಂಚ ನಿರಾಸೆ ಮೂಡಿಸುತ್ತದೆ. ಆದರೂ ಸಿನಿಮಾ ನೋಡಿಸಿಕೊಳ್ಳುತ್ತದೆ. ಆ ಕೊನೆ ಟ್ವಿಸ್ಟ್? ಸೂಪರ್. 3.5/5 ನನ್ನ ರೇಟಿಂಗ್ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

Continue Reading

ಬೆಂಗಳೂರು

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Kannada New Movie: “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ, ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರದ (Kannada New Movie) ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಣ್ಣೂರ್ ಜಗದೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ಶೀನು ಸಾಗರ್, ನಾನು “ದುನಿಯಾ” ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೆ. ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಬಳಿ ಛಾಯಾಗ್ರಹಣ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನ ರಾಜೇಶ್ ಸಾಲುಂಡಿ ಅವರದು. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ‌.

ಕಾಮಿಡಿ ಥ್ರಿಲ್ಲರ್ ಜಾನರ್‌ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಮಡೆನೂರ್ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಿರ್ಮಾಪಕ ಕೆ.ಎಂ. ನಟರಾಜ್ ಈ ಚಿತ್ರವನ್ನು ಆಗಸ್ಟ್ 30 ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ನಿರ್ದೇಶಕ ಶೀನು ಸಾಗರ್ ತಿಳಿಸಿದರು.

“ಕಾಲೇಜ್ ಕುಮಾರ”, “ಜಾನ್ ಜಾನಿ ಜನಾರ್ದನ್” ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನಟರಾಜ್.

“ಕಾಮಿಡಿ ಕಿಲಾಡಿಗಳು” ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನೋರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್ ಮನು ತಿಳಿಸಿದರು.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ಈ ಸಂದರ್ಭದಲ್ಲಿ ನಾಯಕಿ ಶಿವಾನಿ ಹಾಗೂ ನಟ ಮುತ್ತು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನೃತ್ಯ ನಿರ್ದೇಶಕ ನಾಗಭೂಷಣ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Kannada New Movie: ಸಾಮಾಜಿಕ ಕಳಕಳಿಯ ‘ವಿಕಾಸ ಪರ್ವ’ಕ್ಕೆ ಸಾಥ್ ನೀಡಿದ ಪ್ರಣಯರಾಜ

Kannada New Movie: ಸಾಮಾಜಿಕ ಕಳಕಳಿಯ ಜತೆಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ಹೊತ್ತು ತರುತ್ತಿದೆ “ವಿಕಾಸ ಪರ್ವ”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡದ ಹಿರಿಯ ನಟ ಪ್ರಣಯರಾಜ ಶ್ರೀನಾಥ್ “ವಿಕಾಸ ಪರ್ವ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

VISTARANEWS.COM


on

Kannada New Movie
Koo

ಬೆಂಗಳೂರು: ಸಾಮಾಜಿಕ ಕಳಕಳಿಯ ಜತೆಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ಹೊತ್ತು ತರುತ್ತಿದೆ “ವಿಕಾಸ ಪರ್ವ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. ಕನ್ನಡದ ಹಿರಿಯ ನಟ ಪ್ರಣಯರಾಜ ಶ್ರೀನಾಥ್ “ವಿಕಾಸ ಪರ್ವ” ಚಿತ್ರದ (Kannada New Movie) ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ಈ ಸಂದರ್ಭದಲ್ಲಿ ಚಿತ್ರದ ಹಾಡುಗಳನ್ನು ಪ್ರದರ್ಶಿಸಲಾಯಿತು. ಹಾಡು ಬರೆದಿರುವ ಡಾ. ವಿ.ನಾಗೇಂದ್ರಪ್ರಸಾದ್ ಹಾಗೂ ಆಡಿಯೋ ಹಕ್ಕು ಪಡೆದಿರುವ ಲಹರಿ ಸಂಸ್ಥೆಯ ವೇಲು ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು “ವಿಕಾಸ ಪರ್ವ” ದ ಕುರಿತು ಮಾತನಾಡಿದರು.

“ವಿಕಾಸ ಪರ್ವ” ಉತ್ತಮ ಸಂದೇಶವಿರುವ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಿಲ್ವ, ಬಲ ರಾಜವಾಡಿ, ಕುರಿಬಾಂಡ್ ರಂಗ, ಅಭಯ್ ಸುವರ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮೈಂಡ್ ಥಾಟ್ಸ್ ಮೀಡಿಯಾ ಲಾಂಛನದಲ್ಲಿ ಸಮೀರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅನ್ಬು ಅರಸ್ ನಿರ್ದೇಶಿಸಿದ್ದಾರೆ. ಎಲ್ಲರ ಮನಸ್ಸಿಗೂ ಹತ್ತಿರವಾಗುವ ಚಿತ್ರ ಇದಾಗಲಿದೆ. ಈಗಾಗಲೇ ಸೆನ್ಸಾರ್ ಕೂಡ ಮುಗಿದು ಚಿತ್ರ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕರೂ ಆಗಿರುವ ರಾಜ್ಯ ಪ್ರಶಸ್ತಿ ವಿಜೇತ ವಿಶೃತ್ ನಾಯಕ್ ತಿಳಿಸಿದರು.

ಚಿತ್ರತಂಡದ ಸಹಕಾರದಿಂದ “ವಿಕಾಸ ಪರ್ವ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಅನ್ಬು ಅರಸ್.

ವಿಶೃತ್ ನಾಯಕ್ ಅವರು ಒಳ್ಳೆಯ ಕಥೆ ಮಾಡಿದ್ದಾರೆ ಎಂದು ಮಾತನಾಡಿದ ನಟ ರೋಹಿತ್ ನಾಗೇಶ್, ಈ ಚಿತ್ರದ ಕುರಿತು ಒಂದು ಮಾತು ಹೇಳಬಹುದು. ಚಿತ್ರ ನೋಡುವವರಿಗೆ ಬೇಸರವಾಗಲ್ಲ. ನೋಡಿದ ಮೇಲೆ ಯಾರು ನಮಗೆ ಬಯ್ಯುವುದಿಲ್ಲ. ಅಂತಹ ಉತ್ತಮ ಸಿನಿಮಾವಿದು. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶ್ರೀನಾಥ್ ಅವರಿಗೆ ಹಾಗೂ ಆಗಮಿಸಿರುವ ಎಲ್ಲಾ ಅತಿಥಿಗಳಿಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ಛಾಯಾಗ್ರಹಣದ ಬಗ್ಗೆ ಛಾಯಾಗ್ರಾಹಕ ನವೀನ್ ಸುವರ್ಣ ಹಾಗೂ ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಎ ಪಿ ಓ ಮಾಹಿತಿ ನೀಡಿದರು. ನಟಿ ಸ್ವಾತಿ, ನಟರಾದ ಅಶ್ವಿನ್ ಹಾಸನ್, ಕುರಿಬಾಂಡ್ ತಮ್ಮ ಪಾತ್ರದ ಕುರಿತು ಮಾತನಾಡಿದರು. ಕನ್ನಡವೇ ಸತ್ಯ ರಂಗಣ್ಣ, ವೀರಕಪುತ್ರ ಶ್ರೀನಿವಾಸ್ ಹಾಗೂ ಇತರರು ಈ ವೇಳೆ ಉಪಸ್ಥಿತರಿದ್ದರು.

Continue Reading

ಸ್ಯಾಂಡಲ್ ವುಡ್

Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

Duniya Vijay: ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

Duniya Vijay Bheema Movie Release today
Koo

ಬೆಂಗಳೂರು: ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಡೊಳ್ಳಿನ ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ ಬ್ಲಾಕ್ ಕೋಬ್ರಾ ಫ್ಯಾನ್ಸ್. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ.

‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ.  ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.‘ಭೀಮ’ ಸಿನಿಮಾ ಆಗಸ್ಟ್ 9ರಂದು ತೆರೆಗೆ ಬರಲಿದೆ. ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಹೆಚ್ಚಿದೆ.

Continue Reading
Advertisement
Oats or Quinoa
ಆರೋಗ್ಯ33 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ54 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ54 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ59 mins ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌