Site icon Vistara News

Actor Yash: ಅಭಿಮಾನಿಯ ಕಾಲಿನ ಮೇಲೆ ಯಶ್ ಬೆಂಗಾವಲು ಪಡೆ ವಾಹನದ ಚಕ್ರ!

Actor Yash Fan Got Injured After His Escort Vehicle

ಬೆಂಗಳೂರು: ಯಶ್ ಬರ್ತ್​​ಡೇ (Actor Yash) ದಿನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಕಟೌಟ್ ನಿಲ್ಲಿಸುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯ ಕಹಿ ನೆನಪು ಹಸಿಯಾಗಿ ಇರುವಾಗಲೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್‌ ಆಗಮಿಸಿದ್ದರು. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಯಶ್ ಅವರನ್ನು ಬೆನ್ನುಹತ್ತಿ ಬಂದಿದ್ದರು ಫ್ಯಾನ್ಸ್. ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಗದಗ ಘಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್‌ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರಬಂದಿದ್ದು, ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ (Toxic Movie Update).

Exit mobile version