Anoop Seelin: 'ಪ್ರೀತಿ ಅನ್ನೊ ದ್ಯಾವ್ರು' ಹಾಡಿದ ಅನೂಪ್ ಸೀಳಿನ್; ಮ್ಯೂಸಿಕ್‌ ಪ್ರಿಯರಿಂದ ಸಖತ್‌ ರೆಸ್ಪಾನ್ಸ್‌! - Vistara News

ಸ್ಯಾಂಡಲ್ ವುಡ್

Anoop Seelin: ‘ಪ್ರೀತಿ ಅನ್ನೊ ದ್ಯಾವ್ರು’ ಹಾಡಿದ ಅನೂಪ್ ಸೀಳಿನ್; ಮ್ಯೂಸಿಕ್‌ ಪ್ರಿಯರಿಂದ ಸಖತ್‌ ರೆಸ್ಪಾನ್ಸ್‌!

Anoop Seelin: ಪ್ರೀತಿ ಅನ್ನೊ ದ್ಯಾವ್ರು’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಅನೂಪ್ ಸೀಳಿನ್ ಪತ್ನಿ ಕೃತಿ ಬಿ ಶೆಟ್ಟಿ ಈ ವಿಡಿಯೋ ಆಲ್ಬಂ ಅನ್ನು ನಿರ್ಮಾಣ ಮಾಡಿದ್ದಾರೆ. ಈ ಹಾಡಿಗೆ ಕನ್ನಡ ಖ್ಯಾತ ಛಾಯಾಗ್ರಾಹಕ ಸುಜ್ಞಾನ್ ಮೂರ್ತಿ‌ ಕ್ಯಾಮರಾ ವರ್ಕ್ ಮಾಡಿದ್ದಾರೆ. ಕಾರ್ತಿಕ್ ಬಿ ಶೆಟ್ಟಿ ನೃತ್ಯ ಸಂಯೋಜನೆ ಮಾಡಿದ್ದರೆ, ಮನು ಎಸ್ ಗೌಡ ಎಡಿಟಿಂಗ್ ಮಾಡಿದ್ದಾರೆ.

VISTARANEWS.COM


on

Anoop Seelin Preethi Anno Dyavru Video Song Pramod Maravanthe
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ (Anoop Seelin) ಇದೇ ಮೊದಲ ಬಾರಿಗೆ ಚೊಚ್ಚಲ‌ ಮ್ಯೂಸಿಕ್ ವಿಡಿಯೋ‌ ಹೊರತಂದಿದ್ದಾರೆ. ‘ಪ್ರೀತಿ ಅನ್ನೊ ದ್ಯಾವ್ರು’ (Preethi Anno Dyavru) ಅನ್ನೋ ಅಲ್ಬಂ ಸಾಂಗ್‌ಗೆ ರಾಗ ಸಂಯೋಜನೆ ಮಾಡಿದ್ದಷ್ಟೇ ಅಲ್ಲದೆ ಆ ಹಾಡಿನಲ್ಲಿ ಖುದ್ದು ಅನೂಪ್ ಸೀಳಿನ್ ನಟಿಸಿದ್ದಾರೆ. ಇದೀಗ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ʻಪ್ರೀತಿ ಅನ್ನೊ ದ್ಯಾವ್ರು’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಅನೂಪ್ ಸೀಳಿನ್ ಪತ್ನಿ ಕೃತಿ ಬಿ ಶೆಟ್ಟಿ ಈ ವಿಡಿಯೋ ಆಲ್ಬಂ ಅನ್ನು ನಿರ್ಮಾಣ ಮಾಡಿದ್ದಾರೆ. ಈ ಹಾಡಿಗೆ ಕನ್ನಡ ಖ್ಯಾತ ಛಾಯಾಗ್ರಾಹಕ ಸುಜ್ಞಾನ್ ಮೂರ್ತಿ‌ ಕ್ಯಾಮರಾ ವರ್ಕ್ ಮಾಡಿದ್ದಾರೆ. ಕಾರ್ತಿಕ್ ಬಿ ಶೆಟ್ಟಿ ನೃತ್ಯ ಸಂಯೋಜನೆ ಮಾಡಿದ್ದರೆ, ಮನು ಎಸ್ ಗೌಡ ಎಡಿಟಿಂಗ್ ಮಾಡಿದ್ದಾರೆ.

ಅನೂಪ್ ಸೀಳಿನ್ ಅವರದ್ದೇ ಆದ ಜೆಪಿ ಮ್ಯೂಸಿಕ್‌ನಲ್ಲಿ ‘ಪ್ರೀತಿ ಅನ್ನೊ ದ್ಯಾವ್ರು’ ಮ್ಯೂಸಿಕ್ ವಿಡಿಯೋ ರಿಲೀಸ್ ಆಗಿದೆ. ಜೆಪಿ ಮ್ಯೂಸಿಕ್‌ಗೆ ಸದ್ಯ ದಶಕದ ಸಂಭ್ರಮದಲ್ಲಿದೆ. ಈ ಖುಷಿ ಘಳಿಗೆಯಲ್ಲಿ ಈ ಅಲ್ಬಂ ವಿಡಿಯೋ ಸಾಂಗ್ ಅನ್ನು ರಿಲೀಸ್ ಮಾಡಿದ್ದಾರೆ. ಅನೂಪ್ ಸೀಳಿನ್ ಈ ವಿಶೇಷ ಪ್ರಯೋಗವನ್ನು ಜೆಪಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಿದ್ದಾರೆ. ‘ಎದ್ದೇಳು ಮಂಜುನಾಥ’, ‘ಸಿದ್ಲಿಂಗು’, ‘ನೀರ್ ದೋಸೆ’, ‘ಮಾನ್ಸೂನ್ ರಾಗ’, ‘ಪೆಟ್ರೋಮ್ಯಾಕ್ಸ್’ ಅಂತಹ ಸಿನಿಮಾಗಳಿಗೆ ಸಂಗೀತ ನೀಡಿರುವ ಅನೂಪ್ ಸೀಳಿನ್ ಈಗ ಅಲ್ಬಂ ಸಾಂಗ್‌ಗೆ ಟ್ಯೂನ್ ಹಾಕಿದ್ದಾರೆ.

ಇದನ್ನೂ ಓದಿ: Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

ಮಾಧ್ಯಮದವರ ಮುಂದೆ ಮಾಹಿತಿಯನ್ನು ಹಂಚಿಕೊಳ್ಳಲು ಪತ್ರಿಕಾಗೋಷ್ಠಿ ಆಯೋಜಿಸಿದ ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌ ಮಾತನಾಡಿ ʻಸಂಗೀತ ನಿರ್ದೇಶಕನಾಗಿ 16 ವರ್ಷ ಹಾಗೂ ಗುರುಗಳಾದ ಹಂಸಲೇಖ ಅವರ ಬಳಿ 10 ವರ್ಷಗಳೂ ಸೇರಿ ಸುಮಾರು 25 ವರ್ಷಕ್ಕೂ ಹೆಚ್ಚು ವರ್ಷಗಳ ಚಿತ್ರರಂಗದ ಅನುಭವದಲ್ಲಿ ಮೊದಲ ಬಾರಿಗೆ ನಮ್ಮದೇ ಆದ ಜಿಪಿ ಮ್ಯೂಸಿಕ್‌ ಕಂಪನಿಯ ಮೂಲಕ ಹಾಡು ಬಿಡುಗಡೆ ಮಾಡಿದ್ದೇವೆ ಎಲ್ಲರ ಪ್ರೋತ್ಸಾಹ ಸಹಕಾರ ಇರಲಿʼʼಎಂದರು.

ಬೆಂಗಳೂರಿನ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ. ಸುಮಾರು 8 ರಿಂದ 10 ಲಕ್ಷ ಖರ್ಚಾಗಿದೆ. ಸಿನಿಮಾ ಹಾಡಿನ ರೀತಿಯೇ ಚಿತ್ರೀಕರಣ ಮಾಡಿದ್ದೇವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Duniya Vijay: ಗಣೇಶ್‌ ಸಿನಿಮಾ ಹಿಂದಿಕ್ಕಿತೇ ‘ಭೀಮ’? ದುನಿಯಾ ವಿಜಯ್ ಸಿನಿಮಾ ಭರ್ಜರಿ ಕಲೆಕ್ಷನ್!

Duniya Vijay: ಇನ್ನು ಮೂರು ದಿನಗಳಲ್ಲಿ ಕಮ್ಮಿ ಅಂದರೂ ಮೂರು ಕೋಟಿ ಆಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಭೀಮ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಲಿದೆ.ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಗೌರಿ’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಸಿನಿಮಾಗಳ ಬಾಕ್ಸಾಫೀಸ್ ಕಲೆಕ್ಷನ್ ಅನ್ನೂ ಮೀರಿ ‘ಭೀಮ’ ಗಳಿಕೆ ಕಂಡಿದೆ ಎನ್ನಲಾಗಿದೆ.

VISTARANEWS.COM


on

Duniya Vijay Ganesh movie overtook 'Bheem Big Collection
Koo

ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಆಗಸ್ಟ್‌ 9ರಂದು ರಿಲೀಸ್‌ ಆಗಿದೆ. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ. ಹೀಗಾಗಿ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಒಂದರ್ಥದಲ್ಲಿ ಈ ವರ್ಷ ಬಂದಿರುವ ಮೊದಲ ಸ್ಟಾರ್ ನಟನ ಸಿನಿಮಾ. ದುನಿಯಾ ವಿಜಯ್ ಅವರ ನಟನೆಯ ‘ಭೀಮ’  ಬಾಕ್ಸಾಫೀಸ್‌ನಲ್ಲಿ ಅಬ್ಬರಿಸುತ್ತಲೇ ಇದೆ. ಅದರಂತೆಯೇ ನಿನ್ನೆ (ಆಗಸ್ಟ್ 15) ಬಾಕ್ಸಾಫೀಸ್‌ನಲ್ಲಿ ಏರಿಕೆ ಕಂಡಿದೆ. ನಿನ್ನೆ (ಆಗಸ್ಟ್ 15) 1.38 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇದು ಆರಂಭದ ಲೆಕ್ಕಾಚಾರ ಆಗಿದ್ದರಿಂದ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

‘ಭೀಮ’ ಈ ವಾರಾಂತ್ಯದ ಒಳಗೆ 20 ರಿಂದ 25 ಕೋಟಿ ರೂಪಾಯಿ ಒಳಗೆ ಕಲೆಕ್ಷನ್ ಮಾಡಬಹುದೆಂದು ಎಂದು ವರದಿಯಾಗಿದೆ. ಮೊದಲ ಮೂರು ದಿನದಲ್ಲಿ 12.3 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಆನಂತರ 3.8 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಈಗ 7ನೇ ದಿನದ ಕಲೆಕ್ಷನ್ ಸೇರಿ 17.38 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು ವರದಿಯಾಗಿದೆ.

ಇನ್ನು ಮೂರು ದಿನಗಳಲ್ಲಿ ಕಮ್ಮಿ ಅಂದರೂ ಮೂರು ಕೋಟಿ ಆಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಭೀಮ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಲಿದೆ.ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಗೌರಿ’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಸಿನಿಮಾಗಳ ಬಾಕ್ಸಾಫೀಸ್ ಕಲೆಕ್ಷನ್ ಅನ್ನೂ ಮೀರಿ ‘ಭೀಮ’ ಗಳಿಕೆ ಕಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ತೆಲುಗು ಬಳಿಕ ಕಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ಬ್ಲಾಕ್ ಕೋಬ್ರಾ; ನಿರ್ದೇಶಕ ಯಾರು?

ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ. ಮತ್ತೆ ಚಿತ್ರಮಂದಿರಗಳಲ್ಲಿ ಶಿಳ್ಳೆ ಚಪ್ಪಾಳೆ ಸದ್ದು ಕೇಳುವಂತಾಗಿದೆ.

ಚಿತ್ರಮಂದಿರಗಳಲ್ಲಿ ‘ಭೀಮ’ನ ಕಾರುಬಾರು ಜೋರಾಗಿತ್ತು. ರಜಾ ದಿನ ಅಲ್ಲದೇ ವಾರದ ದಿನದಲ್ಲಿ(ಶುಕ್ರವಾರ) ಕೆಲವೆಡೆ ಶೋಗಳು ಹೌಸ್‌ಫುಲ್ ಆಗಿತ್ತು. ಸಂಜೆ ಮೇಲೆ ಶೋಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಬುಕ್‌ಮೈ ಶೋನಲ್ಲಿ ಟಿಕೆಟ್ ಬುಕ್ಕಿಂಗ್‌ಗೂ ರೆಸ್ಪಾನ್ಸ್ ಚೆನ್ನಾಗಿತ್ತು.

ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.
ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

Continue Reading

ಸ್ಯಾಂಡಲ್ ವುಡ್

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?

Golden Star Ganesh: ಇನ್ನು, ಐಎಂಡಿಬಿಯಲ್ಲಿ 8.7 ರೇಟಿಂಗ್ ಸಿಕ್ಕಿದೆ. ಶ್ರೀನಿವಾಸ್ ರಾಜು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಲ ಸಿಕ್ಕಿದೆ.

VISTARANEWS.COM


on

Golden Star Ganesh krishnam pranaya sakhi first day collection
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ  ಮೊದಲ ದಿನ ಉತ್ತಮ ಗಳಿಕೆ ಮಾಡಿದೆ.ಇನ್ನು, ಐಎಂಡಿಬಿಯಲ್ಲಿ 8.7 ರೇಟಿಂಗ್ ಸಿಕ್ಕಿದೆ. ಶ್ರೀನಿವಾಸ್ ರಾಜು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಲ ಸಿಕ್ಕಿದೆ.

`ಕೃಷ್ಣಂ ಪ್ರಣಯ ಸಖಿ’ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರ ಮೊದಲದಿನ 1.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು Sacnilk ವೆಬ್​ಸೈಟ್ ವರದಿ ಮಾಡಿದೆ. ಇಂದು (ಆಗಸ್ಟ್ 16), ಶನಿವಾರ (ಆಗಸ್ಟ್ 17), ಭಾನುವಾರ (ಆಗಸ್ಟ್ 18) ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸಿನಿಮಾ ತಂಡದ ಕಡೆಯಿಂದ ಇನ್ನಷ್ಟೇ ಪಕ್ಕಾ ಲೆಕ್ಕ ಬರಬೇಕಿದೆ. ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ ಸದ್ಯ (ಆಗಸ್ಟ್​ 16ರ ಮುಂಜಾನೆ 9 ಗಂಟೆ ವೇಳೆಗೆ) 9.2 ರೇಟಿಂಗ್ ಸಿಕ್ಕಿದೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಇದನ್ನೂ ಓದಿ: Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Duniya Vijay: ತೆಲುಗು ಬಳಿಕ ಕಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ಬ್ಲಾಕ್ ಕೋಬ್ರಾ; ನಿರ್ದೇಶಕ ಯಾರು?

Duniya Vijay: . ಇದೆಲ್ಲದರ ನಡುವೆ ದುನಿಯಾ ವಿಜಯ್​ಗೆ ತಮಿಳು ಚಿತ್ರರಂಗದಿಂದ ಆಫರ್‌ ಬಂದಿದೆ ಎನ್ನಲಾಗುತ್ತಿದೆ. ಇದರ ಜತೆಗೆ ರಾಜ್‌ ಬಿ ಶೆಟ್ಟಿ ಹಾಗೂ ದುನಿಯಾ ವಿಜಯ್ (Duniya Vijay) ಸೇರಿ ಒಂದು ಚಿತ್ರವನ್ನು ಮಾಡಲು ಮುಂದಾಗಿದ್ದಾರೆ.

VISTARANEWS.COM


on

Duniya Vijay entry to kollywood lokesh Kankaraj director
Koo

ಬೆಂಗಳೂರು: ಸಲಗ ಬಳಿಕ ದುನಿಯಾ ವಿಜಯ್‌ ಅವರ ಭೀಮ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕೆಲವೇ ದಿನಗಳಿಗೆ ಚಿತ್ರಮಂದಿರದಲ್ಲಿ 15 ಕೋಟಿ ಗಳಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ನಡುವೆ ದುನಿಯಾ ವಿಜಯ್​ಗೆ ತಮಿಳು ಚಿತ್ರರಂಗದಿಂದ ಆಫರ್‌ ಬಂದಿದೆ ಎನ್ನಲಾಗುತ್ತಿದೆ. ಇದರ ಜತೆಗೆ ರಾಜ್‌ ಬಿ ಶೆಟ್ಟಿ ಹಾಗೂ ದುನಿಯಾ ವಿಜಯ್ (Duniya Vijay) ಸೇರಿ ಒಂದು ಚಿತ್ರವನ್ನು ಮಾಡಲು ಮುಂದಾಗಿದ್ದಾರೆ.

ಈಗಾಗಲೇ ದುನಿಯಾ ವಿಜಯ್‌ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರ ʻವೀರಸಿಂಹ ರೆಡ್ಡಿʼ ಸಿನಿಮಾದಲ್ಲಿ ವಿಲನ್‌ ಆಗಿ ನಟಿಸಿ ಅಬ್ಬರಿಸಿದ್ದಾಗಿದೆ. ಇದೀಗ ಕಾಲಿವುಡ್‌ಗೆ ಎಂಟ್ರಿ ಕೊಡಲು ಸಜ್ಜಾಗುತ್ತಿದ್ದಾರೆ. ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಸಂದರ್ಶನವೊಂದರಲ್ಲಿ ಮಾತನಾಡಿರುವ ದುನಿಯಾ ವಿಜಯ್​, ‘ತಮಿಳಿನಿಂದ ಒಂದು ಆಫರ್ ಬರುವ ಮುನ್ಸೂಚನೆ ಇದೆ. ಲೋಕೇಶ್ ಕನಗರಾಜ್ ಸಿನಿಮಾ ಒಂದರ ಪಾತ್ರಕ್ಕಾಗಿ ನನ್ನ ಬಗ್ಗೆ ಆಲೋಚಿಸಿದ್ದಾರೆ ಎಂಬ ಸುದ್ದಿ ನನ್ನ ವರೆಗೂ ಬಂದಿದೆ. ಚೆನ್ನೈನವರೇ ಹೀಗೆ ಮಾತೊಂದನ್ನು ನನಗೆ ಹೇಳಿದ್ದಾರೆ. ಆದರೆ ನನಗೆ ಲೋಕೇಶ್ ಕನಗರಾಜ್ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಮುಂದೆ ನೋಡೋಣ ಏನಾಗುತ್ತದೆಯೋ’ ಎಂದಿದ್ದಾರೆ ಎಂದು ವರದಿಯಾಗಿದೆ.

ಲೊಕೇಶ್ ಕನಗರಾಜ್ ಇದೀಗ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದರ ಬಳಿಕ ‘ವಿಕ್ರಂ 2’, ‘ಖೈದಿ 2’ ಸಿನಿಮಾಗಳನ್ನು ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: Duniya Vijay: ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

‘ವಿಕೆ 29’ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ವಿಜಯ್‌ ಕುಮಾರ್‌ ನಟನೆಯ ‘ವಿಕೆ 29’ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ನಟಿಸುವುದು ಬಹುತೇಕ ಖಚಿತವಾಗಿದೆ. ಜಡೇಶ್ ಹಂಪಿ ನಿರ್ದೇಶನದ ಈ ಸಿನಿಮಾ ಶಿವರಾಮ ಕಾರಂತರ ‘ಚೋಮನ ದುಡಿ’ಯಿಂದ ಪ್ರೇರಣೆ ಪಡೆದಿದೆ.  ದುನಿಯಾ ವಿಜಯ್ 29ನೇ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಆ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ. ಇದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರು ಬರೆದಿರುವ ‘ಚೋಮನ ದುಡಿ’ ಕಾದಂಬರಿ ಪ್ರೇರಿತ ಸಿನಿಮಾ ಎನ್ನಲಾಗಿದೆ. ಜಡೇಶ ಹಂಪಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

Continue Reading

ಬೆಂಗಳೂರು

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Hyena Movie: “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ. ವೆಂಕಟ್ ಭರದ್ವಾಜ್ ನಿರ್ದೇಶನದ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Hyena Movie
Koo

ಬೆಂಗಳೂರು: ಚಲನಚಿತ್ರದ ಫಸ್ಟ್ ಲುಕ್ ಸಾಮಾನ್ಯವಾಗಿ ತಾರೆಗಳು ಬಿಡುಗಡೆ ಮಾಡುತ್ತಾರೆ, ಆದರೆ “ಹೈನಾ” ಚಿತ್ರದ (Hyena Movie) ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ, 1990 ರಿಂದ 2000 ರವರೆಗೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತಕ್ಕೆ ಜಯವನ್ನು ತಂದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ವೆಂಕಟ್ ಭರದ್ವಾಜ್ ನಿರ್ದೇಶಿಸಿರುವ ಆ್ಯಕ್ಷನ್ ಪ್ಯಾಕ್ಡ್‌ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ.

ಚಿತ್ರದ ಕಥೆಯನ್ನು ಲಕ್ಷ್ಮಣ್ ಶಿವಶಂಕರ್ ಬರೆದಿದ್ದಾರೆ, ಛಾಯಾಗ್ರಹಣವನ್ನು ನಿಶಾಂತ್ ನಾನಿ ಮಾಡಿದ್ದಾರೆ ಮತ್ತು ಲವ್ವ್ ಪ್ರಣ್ ಮೆಹ್ತಾ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಅಮೃತಾ ಫಿಲ್ಮ್ ಸೆಂಟರ್ ಮತ್ತು ಕೆಕೆ ಕಾಂಬೈನ್ಸ್ ನಿರ್ಮಿಸಿರುವ ಈ ಚಲನಚಿತ್ರವು 2024ರ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗುತ್ತಿದೆ.

Continue Reading
Advertisement
Donald Trump
ಪ್ರಮುಖ ಸುದ್ದಿ13 mins ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ20 mins ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

techie missing
ಕ್ರೈಂ27 mins ago

Techie Missing: ಕಾಣೆಯಾದ ಟೆಕ್ಕಿ ಪತ್ತೆ, ಪ್ರಕರಣಕ್ಕೆ ಟ್ವಿಸ್ಟ್‌; ಜೈಲಿಗಾದ್ರೂ ಹಾಕಿ, ಆದ್ರೆ ಹೆಂಡತಿ ಹತ್ರ ಹೋಗಲ್ಲ ಎಂದು ರೋದನ!

Vinesh Phogat
ಕ್ರೀಡೆ37 mins ago

Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

Thalapathy Vijay Looks Intense In New GOAT Poster Trailer To Release
ಕಾಲಿವುಡ್40 mins ago

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Viral Video
Latest1 hour ago

Viral Video: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

child trafficking gadag
ಕ್ರೈಂ1 hour ago

Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ISRO Mission
ಪ್ರಮುಖ ಸುದ್ದಿ1 hour ago

ISRO Mission : ಭೂ ಪರಿವೀಕ್ಷಣಾ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

Duniya Vijay Ganesh movie overtook 'Bheem Big Collection
ಸ್ಯಾಂಡಲ್ ವುಡ್2 hours ago

Duniya Vijay: ಗಣೇಶ್‌ ಸಿನಿಮಾ ಹಿಂದಿಕ್ಕಿತೇ ‘ಭೀಮ’? ದುನಿಯಾ ವಿಜಯ್ ಸಿನಿಮಾ ಭರ್ಜರಿ ಕಲೆಕ್ಷನ್!

Physical Assault
ಪ್ರಮುಖ ಸುದ್ದಿ2 hours ago

Physical Assault : 11 ವರ್ಷದ ಶಾಲಾ ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌