ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್: ನಾಮ ನಿರ್ದೇಶನದಲ್ಲಿ ದರ್ಶನ್, ರಕ್ಷಿತ್ ಚಿತ್ರಗಳಿಗೆ ಸಿಂಹಪಾಲು - Vistara News

ಸಿನಿಮಾ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್: ನಾಮ ನಿರ್ದೇಶನದಲ್ಲಿ ದರ್ಶನ್, ರಕ್ಷಿತ್ ಚಿತ್ರಗಳಿಗೆ ಸಿಂಹಪಾಲು

Chandanavana Film Critics Academy Awards: ಈ ಬಾರಿಯ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್‌ನ ನಾಮಿನೇಷನ್‌ ಪಟ್ಟಿ ಪ್ರಕಟವಾಗಿದೆ. ಯಾರು ಯಾವ ವಿಭಾಗದಲ್ಲಿ ನಾಮಿನೇಟ್‌ ಆಗಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ (Chandanavana Film Critics Academy Awards) ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajith Lankesh) ಮತ್ತು ನಟಿ ಅಮೂಲ್ಯ (Amulya) ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನಗಳನ್ನು ಘೋಷಿಸಲಾಗಿದೆ. ಈ ಪೈಕಿ ದರ್ಶನ್ ನಟನೆಯ ʼಕಾಟೇರʼ (Kaatera) ಚಿತ್ರವು ಅತೀ ಹೆಚ್ಚು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದು, ರಕ್ಷಿತ್ ಶೆಟ್ಟಿ ಅಭಿನಯದ ʼಸಪ್ತ ಸಾಗರದಾಚೆ ಎಲ್ಲೋʼ (Sapta Saagaradaache Ello) ಸಿನಿಮಾ ಎರಡನೇ ಸ್ಥಾನ ಪಡೆದಿದೆ.

ಅತ್ಯುತ್ತಮ ನಟ (ದರ್ಶನ್), ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ (ತರುಣ್ ಸುಧೀರ್) ಸೇರಿದಂತೆ ‘ಕಾಟೇರ’ ಸಿನಿಮಾ ಬರೋಬ್ಬರಿ 15 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ಅತ್ಯುತ್ತಮ ನಟ (ರಕ್ಷಿತ್ ಶೆಟ್ಟಿ) ಸೇರಿದಂತೆ ʼಸಪ್ತ ಸಾಗರದಾಚೆ ಎಲ್ಲೋʼ 13 ವಿಭಾಗಗಳಲ್ಲಿ ಕಾಣಿಸಿಕೊಂಡಿದೆ. ಐದು ಚೊಚ್ಚಲ ಪ್ರಶಸ್ತಿಗಳು ಸೇರಿದಂತೆ ಒಟ್ಟು 25 ವಿಭಾಗಗಳಲ್ಲಿ ಈ ನಾಮ ನಿರ್ದೇಶನಗೊಂಡಿದ್ದು, ಚೊಚ್ಚಲ ವಿಭಾಗದಲ್ಲಿ ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ, ʼಡೇರ್ ಡೆವಿಲ್ ಮುಸ್ತಫಾʼ, ʼಆಚಾರ್ ಆ್ಯಂಡ್‌ ಕೋʼ ಚಿತ್ರಗಳು ಕೂಡ ನಾನಾ ವಿಭಾಗಗಳಲ್ಲಿ ಕಾಣಿಸಿಕೊಂಡಿವೆ.

ಇಂದ್ರಜಿತ್ ಲಂಕೇಶ್ ಮಾತನಾಡಿ, ʼʼಕನ್ನಡದ ಅತ್ಯುತ್ತಮ ಮನರಂಜನೆಯ ಚಿತ್ರಗಳನ್ನು ಗುರುತಿಸುವಲ್ಲಿ ಮತ್ತು ಚಿತ್ರೋದ್ಯಮವನ್ನು ಉತ್ತೇಜಿಸಲು ಚಲನಚಿತ್ರ ಪತ್ರಕರ್ತರು ಪ್ರಶಸ್ತಿಯನ್ನು ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದಾರೆʼʼ ಎಂದು ಶ್ಲಾಘಿಸಿದರು. ನಟಿ ಅಮೂಲ್ಯ ಮಾತನಾಡಿ ʼʼಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿ ಪ್ರಶಸ್ತಿ ಅಂದರೆ ಅದೊಂದು ದೊಡ್ಡ ಗೌರವ. ಟೀಕಿಸುವ ಪತ್ರಕರ್ತರೇ ಮೆಚ್ಚಿ ಪ್ರಶಸ್ತಿ ಕೊಡುವಾಗ ಆಗುವ ಖುಷಿಯೇ ಬೇರೆ. ನಾಮ ನಿರ್ದೇಶನಗೊಂಡ ಎಲ್ಲರಿಗೂ ಮತ್ತು ಪ್ರಶಸ್ತಿ ಪಡೆಯುವ ಪ್ರತಿಯೊಬ್ಬರಿಗೂ ಶುಭಾಶಯಗಳುʼʼ ಎಂದರು.

ಅಕಾಡೆಮಿಯು ಪ್ರಶಸ್ತಿಗಳನ್ನು ನೀಡುವುದರ ಜತೆಗೆ ಪ್ರತಿ ವರ್ಷವೂ ಸಮಾಜಮುಖಿ ಕೆಲಸಗಳನ್ನು ಉತ್ತೇಜಿಸುವಂತಹ ಕೆಲಸಕ್ಕೆ ಮುಂದಾಗಿದೆ. ಈ ಬಾರಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಜತೆ ಅಂಗಾಂಗ ದಾನ ಅಭಿಯಾನಕ್ಕೆ ಕೈ ಜೋಡಿಸಿದೆ. ಈ ಕುರಿತು ಮಾತನಾಡಿದ ಬೆಂಗಳೂರಿನ ಕಾವೇರಿ ಆಸ್ಪತ್ರೆಯ ಉಪಾಧ್ಯಕ್ಷ ವೆಲ್ ಫ್ರೆಡ್ ಸ್ಯಾಮ್ಸನ್ ʼʼಅಂಗಾಂಗ ದಾನ ಪ್ರಚಾರಕ್ಕೆ ಚಿತ್ರೋದ್ಯಮದ ಕೊಡುಗೆ ಅಪಾರ. ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರು ಕಣ್ಣುದಾನ ಮಾಡುವ ಮೂಲಕ ಸಾಕಷ್ಟು ಜನರಿಗೆ ಪ್ರೇರಣೆ ನೀಡಿದ್ದಾರೆ. ಸಂಚಾರಿ ವಿಜಯ್ ಅವರು ಅಂಗಾಂಗ ದಾನ ಮಾಡಿದ್ದರೆ, ಲೋಕೇಶ್ ಹಾಗೂ ಲೋಹಿತಾಶ್ವ ಅವರು ದೇಹದಾನ ಮಾಡಿದ್ದಾರೆ. ಇಂತಹ ಉದ್ಯಮಕ್ಕೆ ಬೆಂಬಲವಾಗಿ ನಿಂತಿರುವ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿಯ ಕಾರ್ಯಕ್ರಮಕ್ಕೆ ನಾವು ಭಾಗವಾಗಿದ್ದು ಹೆಮ್ಮೆ ಅನಿಸುತ್ತದೆʼʼ ಎಂದು ಹೇಳಿದರು.

ನಟ ಶರಣ್ ನಾಮ ನಿರ್ದೇಶನದ ಪಟ್ಟಿಯನ್ನು ಬಿಡುಗಡೆ ಮಾಡಿ, ʼʼವಿಮರ್ಶಕರು ನೀಡುವ ಪ್ರಶಸ್ತಿ ಅತ್ಯಂತ ಜವಾಬ್ದಾರಿಯಿಂದ ಕೂಡಿರುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು ಹೆಮ್ಮೆ ತಂದಿದೆʼʼ ಎಂದು ತಿಳಿಸಿದರು.
ಜನವರಿ 28ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ನಾಮಿನೇಷನ್‌ ವಿವರ

ಅತ್ಯುತ್ತಮ ಚೊಚ್ಚಲ ನಿರ್ಮಾಣ-ಡಾ. ಪುನೀತ್ ರಾಜಕುಮಾರ್ ಪ್ರಶಸ್ತಿ

  • ಸ್ವಾತಿ ಮುತ್ತಿನ ಮಳೆ ಹನಿಯೇ (ರಮ್ಯಾ – ಆ್ಯಪಲ್ ಬಾಕ್ಸ್ ಸ್ಟುಡಿಯೋಸ್)
  • ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ (ವರುಣ್ ಸ್ಟುಡಿಯೋಸ್)
  • ಡೇರ್‌ಡೆವಿಲ್ ಮುಸ್ತಫಾ (ಸಿನೆಮಾ ಮರ)
  • ಸೌತ್ ಇಂಡಿಯನ್ ಹೀರೋ (ಶಿಲ್ಪಾ ಎಲ್.ಎಸ್.)
  • ಮಂಡಲ (ಅಜಯ್ ಸರ್ಪೆಷ್ಕರ್)

ಅತ್ಯುತ್ತಮ ಚೊಚ್ಚಲ ನಟಿ-ತ್ರಿಪುರಾಂಬ ಅವಾರ್ಡ್

  • ಆರಾಧನಾ ರಾಮ್ (ಕಾಟೇರ)
  • ನಿರೀಕ್ಷಾ ರಾವ್ (ರಾಜಯೋಗ)
  • ಅಮೃತಾ ಪ್ರೇಮ್ (ಟಗರು ಪಲ್ಯ)
  • ಚೈತ್ರಾ ಎಚ್.ಜಿ (ಮಾವು ಬೇವು)
  • ಪ್ರೀತಿಕಾ ದೇಶಪಾಂಡೆ (ಪೆಂಟಗನ್)

ಅತ್ಯುತ್ತಮ ಚೊಚ್ಚಲ ನಟ-ಸಂಚಾರಿ ವಿಜಯ್ ಪ್ರಶಸ್ತಿ

  • ಶಿಶಿರ ಬೈಕಾಡಿ (ಡೇರ್‌ಡೆವಿಲ್ ಮುಸ್ತಫಾ)
  • ರಾಜೇಶ್ ಧ್ರುವ ( ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ)
  • ಶಿವಣ್ಣ ಬೀರುಹುಂಡಿ (ದೊಡ್ಡಹಟ್ಟಿ ಬೋರೇಗೌಡ)
  • ಕಿರಣ್ ನಾರಾಯಣ್ (ಸ್ನೇಹಶ್ರೀ)
  • ಸಾರ್ಥಕ್ (ಸೌತ್ ಇಂಡಿಯನ್ ಹೀರೋ)

ಅತ್ಯುತ್ತಮ ಚೊಚ್ಚಲ ಬರಹಗಾರ-ಚಿ.ಉದಯಶಂಕರ್ ಪ್ರಶಸ್ತಿ

  • ರಾಮೇನಹಳ್ಳೀ ಜಗನ್ನಾಥ್ (ಹೊಂದಿಸಿ ಬರೆಯಿರಿ)
  • ನಿತಿನ್ ಕೃಷ್ಣಮೂರ್ತಿ (ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ)
  • ಸಿಂಧು ಶ್ರೀನಿವಾಸಮೂರ್ತಿ (ಆಚಾರ್ ಆ್ಯಂಡ್‌ ಕೋ)
  • ಉಮೇಶ್ ಕೃಪಾ (ಟಗರು ಪಲ್ಯ)
  • ಅಜಯ್ ಸರ್ಪೆಶ್ಕರ್ (ಮಂಡಲ)

ಚೊಚ್ಚಲ ನಿರ್ದೇಶನ-ಶಂಕರ್‌ ನಾಗ್‌ ಪ್ರಶಸ್ತಿ

  • ಸಿಂಧು ಶ್ರೀನಿವಾಸಮೂರ್ತಿ (ಆಚಾರ್ ಆ್ಯಂಡ್‌ ಕೋ)
  • ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ)
  • ಶಶಾಂಕ್ ಸೋಗಲ್ (ಡೇರ್ ಡೆವಿಲ್ ಮುಸ್ತಾಫಾ)
  • ದೇವೇಂದ್ರ ಬಡಿಗೇರ್ (ರುದ್ರಿ)
  • ಉಮೇಶ್ ಕೃಪಾ (ಟಗರು ಪಲ್ಯ)

ಅತ್ಯುತ್ತಮ ವಿಎಫ್‍ಎಕ್ಸ್‌

  • ಸಪ್ತಸಾಗರದಾಚೆ ಎಲ್ಲೋ (ಎ ಮತ್ತು ಬಿ)- ಪಿಂಕ್ ಸ್ಟುಡಿಯೋಸ್– ರಾಹುಲ್ ವಿ. ಗೋಪಾಲಕೃಷ್ಣ
  • ಕಬ್ಜ– ಯೂನಿಫೈ ಮೀಡಿಯಾ
  • ಗುರುದೇವ್ ಹೊಯ್ಸಳ– ಡಿಜಿಟಲ್ ಟರ್ಬೋ ಮೀಡಿಯಾ, ಖುಷ್
  • ಕಾಟೇರ– ಗಗನ್ ಅಜೈ
  • ಘೋಸ್ಟ್– ಆಸೋ ಸ್ಟುಡಿಯೋಸ್ (ಟೆಹರನ್), ಮೊಹಮ್ಮದ್ ಅಬ್ಡಿ

ಅತ್ಯುತ್ತಮ ಕಲಾ ನಿರ್ದೇಶನ

  • ಕಬ್ಜ-ಶಿವಕುಮಾರ್ ಜೆ
  • ಸಪ್ತ ಸಾಗರದಾಚೆ ಎಲ್ಲೋ (ಎ ಮತ್ತು ಬಿ)- ಉಲ್ಲಾಸ್ ಹೈದರ್
  • ಕಾಟೇರ– ಗುಣ
  • ಘೋಸ್ಟ – ಮೋಹನ್ ಬಿ ಕೆರೆ
  • ಕೈವ– ಧರಣಿ ಗಂಗೆಪುತ್ರ

ಅತ್ಯುತ್ತಮ ಸಾಹಸ ನಿರ್ದೇಶನ

  • ಸಪ್ತ ಸಾಗರದಾಚೆ ಎಲ್ಲೋ (ಬಿ ಸೈಡ್)- ಚೇತನ್ ಡಿʼಸೋಜಾ, ವಿಕ್ರಮ್ ಮೋರ್
  • ಗುರುದೇವ್ ಹೊಯ್ಸಳ– ದಿಲೀಪ್ ಸುಬ್ರಹ್ಮಣ್ಯ, ಅರ್ಜುನ್ ರಾಜ್
  • ಕಬ್ಜ– ರವಿ ವರ್ಮಾ, ವಿಕ್ರಮ್ ಮೋರ್
  • ಕೈವ– ಅರ್ಜುನ್ ರಾಜ್, ಡಿಫರೆಂಟ್ ಡ್ಯಾನಿ
  • ಕಾಟೇರ– ರಾಮ್ ಲಕ್ಷ್ಮಣ

ಅತ್ಯುತ್ತಮ ಛಾಯಾಗ್ರಹಣ

  • ಸಪ್ತ ಸಾಗರದಾಚೆ ಎಲ್ಲೋ (ಬಿ ಸೈಡ್)- ಅದ್ವೈತ ಗುರುಮೂರ್ತಿ
  • ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ– ಅರವಿಂದ್ ಕಶ್ಯಪ್
  • ಸ್ವಾತಿ ಮುತ್ತಿನ ಮಳೆ ಹನಿಯೇ– ಪ್ರವೀಣ್ ಶ್ರೀಯಾನ್
  • ಘೋಸ್ಟ್- ಮಹೇಂದ್ರ ಸಿಂಹ
  • ಕಾಟೇರ– ಸುಧಾಕರ್ ಎಸ್. ರಾಜ್

ಅತ್ಯುತ್ತಮ ಸಂಕಲನ

  • ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ– ಸುರೇಶ್ ಎಂ.
  • ಘೋಸ್ಟ್– ದೀಪು ಎಸ್ ಕುಮಾರ್
  • ಶಿವಾಜಿ ಸುರತ್ಕಲ್ 2– ಆಕಾಶ್ ಶ್ರೀವತ್ಸ್
  • ಕಾಟೇರ– ಕೆ.ಎಂ. ಪ್ರಕಾಶ್
  • ಕೈವ– ಕೆ.ಎಂ. ಪ್ರಕಾಶ್

ಅತ್ಯುತ್ತಮ ನೃತ್ಯ ನಿರ್ದೇಶನ

  • ಪುಷ್ಪವತಿ (ಕ್ರಾಂತಿ)- ಗಣೇಶ್
  • ಪಸಂದಾಗವ್ಳೆ (ಕಾಟೇರ)- ಭೂಷಣ್
  • ಬ್ಯಾಡ್ ಮ್ಯಾನರ್ಸ್ (ಬ್ಯಾಡ್ ಮ್ಯಾನರ್ಸ್) – ಬಿ. ಧನಂಜಯ್
  • ನೈಂಟಿ ಹಾಕು ಕಿಟ್ಟಪ್ಪ (ಕೌಸಲ್ಯ ಸುಪ್ರಜಾ ರಾಮ) – ಕಲೈ
  • ಚುಮು ಚುಮು (ಕಬ್ಜ) – ಜಾನಿ ಮಾಸ್ಟರ್

ಅತ್ಯುತ್ತಮ ಚಿತ್ರ ಸಾಹಿತ್ಯ

  • ಟಗರು ಪಲ್ಯ– ಸಂಬಂಜ ಅಂದ್ರೆ– ಡಾಲಿ ಧನಂಜಯ್
  • ಸಪ್ತ ಸಾಗರದಾಚೆ ಎಲ್ಲೋ–ನದಿಯೇ– ಧನಂಜಯ್ ರಂಜನ್
  • ಕೌಸಲ್ಯ ಸುಪ್ರಜಾ ರಾಮ–ಪ್ರೀತಿಸುವೆ– ಜಯಂತ್ ಕಾಯ್ಕಿಣಿ
  • ರಾಘವೇಂದ್ರ ಸ್ಟೋರ್ಸ್–ಗಾಳಿಗೆ ಗಂಧ– ಗೌಸ್ ಪೀರ್
  • ಸ್ವಾತಿ ಮುತ್ತಿನ ಮಳೆ ಹನಿಯೇ– ಮೆಲ್ಲಗೆ- ಪೃಥ್ವಿ

ಅತ್ಯುತ್ತಮ ಹಿನ್ನೆಲೆ ಸಂಗೀತ

  • ಘೋಸ್ಟ್ – ಅರ್ಜುನ್ ಜನ್ಯ
  • ಸಪ್ತ ಸಾಗರದಾಚೆ ಎಲ್ಲೋ – ಚರಣ್ ರಾಜ್
  • ಕಾಟೇರ – ವಿ. ಹರಿಕೃಷ್ಣ
  • ವಿರಾಟಪುರದ ವಿರಾಟ – ಕದ್ರಿ ಮಣಿಕಾಂತ್
  • ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ – ಬಿ.ಅಜನೀಶ್ ಲೋಕನಾಥ್

ಅತ್ಯುತ್ತಮ ಹಿನ್ನೆಲೆ ಗಾಯಕಿ

  • ಕಾಯೋಶಿವ ಕಾಪಾಡೋ ಶಿವ – ಪೆಂಟಾಗನ್ – ಸಂಗೀತಾ ಕಟ್ಟಿ
  • 90 ಹಾಕು ಕಿಟ್ಟಪ್ಪ –ಕೌಸಲ್ಯ ಸುಪ್ರಜಾ ರಾಮ- ಐಶ್ವರ್ಯ ರಂಗರಾಜನ್
  • ಪಸಂದಾಗವ್ನೆ – ಕಾಟೇರ – ಮಂಗ್ಲಿ
  • ಚುಮು ಚುಮು ಚಳಿ – ಕಬ್ಜ- ಐರಾ ಉಡುಪಿ
  • ಮೆಲ್ಲಗೆ – ಸ್ವಾತಿ ಮುತ್ತಿನ ಮಳೆ ಹನಿಯೇ – ಮಾಧುರಿ ಶೇಷಾದ್ರಿ

ಅತ್ಯುತ್ತಮ ಹಿನ್ನೆಲೆ ಗಾಯಕ

  • ನೋಡಲಾಗದೆ – ವೀರಾಟಪುರ ವಿರಾಗಿ – ರವೀಂದ್ರ ಸೊರಗಾಂವಿ
  • ಬೊಂಬೆ ಬೊಂಬೆ – ಕ್ರಾಂತಿ – ಸೋನು ನಿಗಂ
  • ಸಿಂಗಲ್ ಸುಂದರಿ – ರಾಘವೇಂದ್ರ ಸ್ಟೋರ್ಸ್ – ವಿಜಯ ಪ್ರಕಾಶ್ ಮತ್ತು ನವೀನ್ ಸಜ್ಜು
  • ನೊಂದುಕೋಬೇಡ – ಟಗರು ಪಲ್ಯ- ವಾಸುಕಿ ವೈಭವ್
  • ಸಪ್ತ ಸಾಗರದಾಚೆ ಎಲ್ಲೋ – ಸಪ್ತ ಸಾಗರದಾಚೆ ಎಲ್ಲೋ- ಕಪೀಲ್‍ ಕಪೀಲನ್

ಅತ್ಯುತ್ತಮ ಸಂಗೀತ ನಿರ್ದೇಶನ

  • ಸಪ್ತ ಸಾಗರದಾಚೆ ಎಲ್ಲೋ – ಚರಣ್ ರಾಜ್
  • ಕೌಸಲ್ಯ ಸುಪ್ರಜಾ ರಾಮ – ಅರ್ಜುನ್ ಜನ್ಯ
  • ಟಗರು ಪಲ್ಯ – ವಾಸುಕಿ ವೈಭವ್
  • ಕ್ರಾಂತಿ – ವಿ. ಹರಿಕೃಷ್ಣ
  • ಕೈವ – ಅಜನೀಶ್ ಲೋಕನಾಥ್

ಅತ್ಯುತ್ತಮ ಬಾಲ ಕಲಾವಿದ / ಕಲಾವಿದೆ

  • ಅಂಬುಜಾ – ಆಕಾಂಕ್ಷ
  • ಶಿವಾಜಿ ಸುರತ್ಕಲ್ 2 – ಆರಾಧ್ಯ
  • ಗೌಳಿ – ನಮನ
  • ಟೋಬಿ – ಸ್ನಿಗ್ಧ ಆರ್. ಶೆಟ್ಟಿ
  • ಓ ನನ್ನ ಚೇತನ – ಪ್ರತೀಕ ಮಂಜುನಾಥ್

ಅತ್ಯುತ್ತಮ ಪೋಷಕ ನಟಿ

  • ಹೇಮಾ ದತ್ತ – ತೋತಾಪುರಿ
  • ಶ್ರುತಿ – ಕಾಟೇರ
  • ತಾರಾ ಅನುರಾಧ – ಟಗರು ಪಲ್ಯ
  • ಸುಧಾ ಬೆಳವಾಡಿ – ಕೌಸಲ್ಯ ಸುಪ್ರಜಾ ರಾಮ
  • ಎಂ.ಡಿ. ಪಲ್ಲವಿ – 19.20.21

ಅತ್ಯುತ್ತಮ ಪೋಷಕ ನಟ

  • ಪೂರ್ಣಚಂದ್ರ ಮೈಸೂರು – ಡೇರ್ ಡೆವಿಲ್ ಮುಸ್ತಾಫಾ
  • ರಂಗಾಯಣ ರಘು – ಟಗರು ಪಲ್ಯ
  • ರಾಘು ಶಿವಮೊಗ್ಗ – ಕೈವ
  • ಮಹದೇವ ಹಡಪದ – 19.20.21
  • ರಮೇಶ್ ಇಂದಿರಾ – ಸಪ್ತ ಸಾಗರದಾಚೆ ಎಲ್ಲೋ

ಅತ್ಯುತ್ತಮ ನಟಿ

  • ರುಕ್ಮಿಣಿ ವಸಂತ್‌ – ಸಪ್ತ ಸಾಗರದಾಚೆ ಎಲ್ಲೋ
  • ಅಕ್ಷತಾ ಪಾಂಡವಪುರ – ಪಿಂಕಿ ಎಲ್ಲಿ?
  • ಮಿಲನಾ ನಾಗರಾಜ್ – ಕೌಸಲ್ಯ ಸುಪ್ರಜಾ ರಾಮ
  • ಸಿರಿ ರವಿಕುಮಾರ್ – ಸ್ವಾತಿ ಮುತ್ತಿನ ಮಳೆ ಹನಿಯೇ
  • ಮೇಘಾ ಶೆಟ್ಟಿ – ಕೈವ

ಅತ್ಯುತ್ತಮ ನಟ

  • ರಕ್ಷಿತ್ ಶೆಟ್ಟಿ – ಸಪ್ತ ಸಾಗರದಾಚೆ ಎಲ್ಲೋ
  • ರಾಜ್ ಬಿ ಶೆಟ್ಟಿ – ಸ್ವಾತಿ ಮುತ್ತಿನ ಮಳೆ ಹನಿಯೇ
  • ರಮೇಶ್ ಅರವಿಂದ್ – ಶಿವಾಜಿ ಸುರತ್ಕಲ್ 2
  • ಶೃಂಗ ಬಿ.ವಿ – 19.20.21
  • ದರ್ಶನ್ – ಕಾಟೇರ

ಅತ್ಯುತ್ತಮ ಸಂಭಾಷಣೆ

  • ಕೈವ – ರಘು ನಿಡುವಳ್ಳಿ
  • ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ – ನಿತಿನ್ ಕೃಷ್ಣಮೂ‍ರ್ತಿ
  • ಕೌಸಲ್ಯ ಸುಪ್ರಜಾ ರಾಮ – ಯದುನಂದನ್
  • ಕಾಟೇರ – ಮಾಸ್ತಿ
  • ಟಗರು ಪಲ್ಯ – ಉಮೇಶ್ ಕೆ ಕೃಪಾ

ಅತ್ಯುತ್ತಮ ಚಿತ್ರಕಥೆ

  • ಶಿವಾಜಿ ಸುರತ್ಕಲ್ 2 – ಆಕಾಶ್ ಶ್ರೀವತ್ಸ, ಅಭಿಜಿತ್‍ ವೈ.ಆರ್.
  • ಕೈವ – ಜಯತೀರ್ಥ
  • ಸ್ವಾತಿ ಮುತ್ತಿನ ಮಳೆಹನಿಯೇ – ರಾಜ್ ಬಿ. ಶೆಟ್ಟಿ
  • ದೂರದರ್ಶನ – ಸುಕೇಶ್ ಶೆಟ್ಟಿ
  • ಕಾಟೇರ – ತರುಣ್ ಕಿಶೋರ್ ಸುಧೀರ್, ಜಡೇಶ್ ಕೆ. ಹಂಪಿ

ಅತ್ಯುತ್ತಮ ನಿರ್ದೇಶಕ

  • ಜಯತೀರ್ಥ – ಕೈವ
  • ತರುಣ್ ಕಿಶೋರ್ ಸುಧೀರ್ – ಕಾಟೇರ
  • ನಿತೀನ್ ಕೃಷ್ಣಮೂರ್ತಿ – ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
  • ಮಂಸೋರೆ – 19.20.21
  • ರಾಜ್ ಬಿ. ಶೆಟ್ಟಿ – ಸ್ವಾತಿ ಮುತ್ತಿನ ಮಳೆ‌ ಹನಿಯೇ

ಅತ್ಯುತ್ತಮ ಚಿತ್ರ

  • ಸಪ್ತ ಸಾಗರದಾಚೆ ಎಲ್ಲೋ
  • ಡೇರ್ ಡೆವಿ‍ಲ್ ಮುಸ್ತಾಫಾ
  • 19.20.21
  • ಕಾಟೇರ
  • ಕೌಸಲ್ಯ ಸುಪ್ರಜಾ ರಾಮ

ಇದನ್ನೂ ಓದಿ: Vijay Raghavendra: ವಿಜಯ್‌ ರಾಘವೇಂದ್ರ ಈಗ ಖಡಕ್‌ ಪೊಲೀಸ್‌; ʼಕೇಸ್ ಆಫ್ ಕೊಂಡಾಣʼ ಚಿತ್ರದ ಟ್ರೈಲರ್‌ ಔಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

Asha Bhosle: ಮೊದಲಿಗೆ ಸೋನು ನಗುತ್ತ ಆಶಾ ಅವರ ಪಾದಗಳಿಗೆ ಮುತ್ತಿಟ್ಟರು. ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ವೇದಿಕೆಯಿಂದ ಹೊರಡುವ ಮೊದಲು, ಸೋನು ನಿಗಮ್‌ ಅವರು ಮತ್ತೆ ಗಾಯಕಿಗೆ ಮೈ ಮುಗಿದು ನಮಸ್ಕರಿಸಿದ್ದಾರೆ. ಸೋನು ನಿಗಮ್‌ ಕಾರ್ಯಕ್ರಮದಲ್ಲಿ ಆಶಾ ಭೋಂಸ್ಲೆ ಮತ್ತು ಅವರ ದಿವಂಗತ ಸಹೋದರಿ, ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ನೆನೆದು, ಭಾರತೀಯ ಸಂಗೀತಕ್ಕೆ ಅವರ ಅಪಾರ ಕೊಡುಗೆ ಇದೆ ಎಂದು ಶ್ಲಾಘಿಸಿದರು.

VISTARANEWS.COM


on

Koo

ಬೆಂಗಳೂರು: ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಗೌರವ ಸೂಚಕವಾಗಿ ಗಾಯಕ ಸೋನು ನಿಗಮ್ (Sonu Nigam) ಅವರು ಹಿರಿಯ ಗಾಯಕಿ ಆಶಾ ಭೋಂಸ್ಲೆ (Asha Bhosle) ಅವರ ಪಾದ ತೊಳೆದು ನಮಸ್ಕರಿಸಿದ್ದಾರೆ. ʻಸ್ವರ್ಸ್ವಾಮಿನಿ ಆಶಾʼ (Swarswamini Asha)ಎಂಬ ಶೀರ್ಷಿಕೆಯ ಆಶಾ ಅವರ ಜೀವನಚರಿತ್ರೆ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಸೋನು ನಿಗಮ್‌ ಅವರು ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ಈ ಕಾರ್ಯಕ್ರಮದಲ್ಲಿ ನಟ ಜಾಕಿ ಶ್ರಾಫ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೊದಲಿಗೆ ಸೋನು ನಗುತ್ತ ಆಶಾ ಅವರ ಪಾದಗಳಿಗೆ ಮುತ್ತಿಟ್ಟರು. ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ವೇದಿಕೆಯಿಂದ ಹೊರಡುವ ಮೊದಲು, ಸೋನು ನಿಗಮ್‌ ಅವರು ಮತ್ತೆ ಗಾಯಕಿಗೆ ಮೈ ಮುಗಿದು ನಮಸ್ಕರಿಸಿದ್ದಾರೆ.

ಕಾರ್ಯಕ್ರಮಕ್ಕೆ ಆಶಾ ಭೋಂಸ್ಲೆ ಅವರು ಪ್ರಿಂಟೆಡ್‌ ಬಿಳಿ ಸೀರೆಯನ್ನು ಧರಿಸಿದ್ದರು. ಸೋನು ನಿಗಮ್‌ ಅವರು ಹಳದಿ ಕುರ್ತಾ ಮತ್ತು ಬಿಳಿ ಪೈಜಾಮಾದಲ್ಲಿ ಕಾಣಿಸಿಕೊಂಡರು. ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ಇಂತಹ ವಿಷಯಗಳನ್ನು ನಾವು ಭಾರತೀಯರು ಎಂದು ಹೆಮ್ಮೆಪಡುತ್ತೇವೆ.”ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಸೋನು ನಿಗಮ್ ಬಗ್ಗೆ ತುಂಬಾ ಹೆಮ್ಮೆ ಇದೆ. ನಿಜವಾಗಿಯೂ ಗ್ರೇಟ್” ಎಂದು ಬರೆದಿದ್ದಾರೆ. “ಸೋನು ನಿಗಮ್‌ಗೆ ಹ್ಯಾಟ್ಸ್ ಆಫ್! ಎಂತಹ ಆರೋಗ್ಯಕರ ಕ್ಷಣ. ಲತಾ ಜೀ ಅವರು ಇರಬೇಕಿತ್ತುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಸೋನು ನಿಗಮ್‌ ಕಾರ್ಯಕ್ರಮದಲ್ಲಿ ಆಶಾ ಭೋಂಸ್ಲೆ ಮತ್ತು ಅವರ ದಿವಂಗತ ಸಹೋದರಿ, ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ನೆನೆದು, ಭಾರತೀಯ ಸಂಗೀತಕ್ಕೆ ಅವರ ಅಪಾರ ಕೊಡುಗೆ ಇದೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Asha Bhosle: 90ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಗಾಯಕಿ ಆಶಾ ಭೋಂಸ್ಲೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸೋನು ನಿಗಮ್, ‘ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಡುಗಾರಿಕೆ ಕಲಿಯಲು ಹಲವು ದಾರಿಗಳಿವೆ. ಆದರೆ ಹಿಂದಿನ ಕಾಲದಲ್ಲಿ ಲತಾಜಿ ಮತ್ತು ಆಶಾಜಿ ಮಾತ್ರ ಇದ್ದರು. ಆಶಾ ಅವರಿಂದ ನಾವು ಸಾಕಷ್ಟು ಕಲಿತಿದ್ದೇವೆ. ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರಿಂದ ನಾವು ಇನ್ನೂ ಕಲಿಯುವುದು ಬಹಳಷ್ಟಿದೆʼʼಎಂದರು.

ಸಂಗೀತ ಮತ್ತು ದೇಶಭಕ್ತಿ ಎರಡಕ್ಕೂ ಮಂಗೇಶ್ಕರ್ ಕುಟುಂಬದ ಸಮರ್ಪಣೆಯ ಬಗ್ಗೆ ಮೋಹನ್ ಭಾಗವತ್ ಮಾತನಾಡಿದರು. ಕಾರ್ಯಮದಲ್ಲಿ ಆಶಾ ಭೋಂಸ್ಲೆ ಸಹೋದರ, ಸಂಗೀತ ನಿರ್ದೇಶಕ ಹೃದಯನಾಥ್ ಮಂಗೇಶ್ಕರ್ ಕೂಡ ಉಪಸ್ಥಿತರಿದ್ದರು.

ಪಂಡಿತ್ ಹೃದಯನಾಥ್ ಮಂಗೇಶ್ಕರ್, ಉಷಾ ಮಂಗೇಶ್ಕರ್, ಅಶೋಕ್ ಸರಾಫ್, ಸುರೇಶ್ ವಾಡ್ಕರ್, ಶ್ರೀಧರ್ ಫಡ್ಕೆ, ರವೀಂದ್ರ ಸಾಠೆ, ಪದ್ಮಜಾ ಫೆನಾನಿ, ಉತ್ತರ ಕೇಳ್ಕರ್, ಸುದೇಶ್ ಭೋಸ್ಲೆ, ವೈಶಾಲಿ ಸಾಮಂತ್ ಮತ್ತು ಜಾಕಿ ಶ್ರಾಫ್, ನಾನಾ ಪಾಟೇಕರ್, ಪೂನಂ ಧಿಲ್ಲೋ, ಪದ್ಮಿನಿ ಕೊಲ್ಹಾಪುರೆ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್ ಶೇಲಾರ್ ಕೂಡ ಹಾಜರಿದ್ದರು.

Continue Reading

ಟಾಲಿವುಡ್

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

Kalki 2898 AD: ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

VISTARANEWS.COM


on

Kalki 2898 AD Yash calls visually stunning spectacle
Koo

ಬೆಂಗಳೂರು: ವಿಶ್ವದಾದ್ಯಂತ (world) ಅದ್ಧೂರಿಯಾಗಿ ಬಿಡುಗಡೆಯಾದ 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ (Kalki 2898 AD 2) ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

ಶುಕ್ರವಾರ ಸಿನಿಮಾ ಬಗ್ಗೆ ಯಶ್ ಟ್ವೀಟ್‌ ಮಾಡಿ, “ಕಣ್ಣಿಗೆ ಹಬ್ಬವಾಗುವ ರೀತಿಯಲ್ಲಿ ಸೃಷ್ಟಿಸಿದ ಕಲ್ಕಿ 2898AD ತಂಡಕ್ಕೆ ಅಭಿನಂದನೆಗಳು! ಈ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ. ನಾಗ್‌ ಅಶ್ವಿನ್‌ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸ್ಫೂರ್ತಿ ನೀಡಿದೆ. ಡಾರ್ಲಿಂಗ್ ಪ್ರಭಾಸ್‌, ಅಮಿತಾಭ್‌, ದೀಪಿಕಾ, ಕಮಲ್‌ ಹಾಸನ್‌ ಹಾಗೇ ಕೆಲವು ಅತಿಥಿ ಪಾತ್ರಗಳನ್ನು ಒಟ್ಟಿಗೆ ನೋಡುವುದು ಒಂದು ಅದ್ಭುತ ಅನುಭವವಾಗಿದೆ. . ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಮಾತ್ರವಲ್ಲದೆ ಇದೀಗ ಚಿತ್ರ ತಂಡ ಪ್ರೇಕ್ಷಕರಿಗೆ ಇನ್ನೊಂದು ಸಿಹಿ ಸುದ್ದಿಯನ್ನೂ ನೀಡಿದೆ.

ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮಹಾಕಾವ್ಯವನ್ನು ಆಧರಿಸಿದ ಚಿತ್ರವೂ ಸಂಪೂರ್ಣವಾಗಿ ತೆರೆದುಕೊಳ್ಳಲು ಒಂದಕ್ಕಿಂತ ಹೆಚ್ಚು ಕಂತುಗಳ ಅಗತ್ಯವಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಕೂಡ ದೃಢಪಡಿಸಿದ್ದಾರೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಿನಿಮಾ ಮಾಡುತ್ತಾರಾ? ಎನ್ನುವ ಚರ್ಚೆ ನಡೀತಿತ್ತು. ಕಾರಣ ಆರ್‌ಜಿವಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ನೆನೆಪಿಸುವ ಕಾರ್ಯಕ್ರಮ ಕಿರುತೆರೆಯಲ್ಲಿ ಪ್ರಸಾರವಾಗಿದೆ.

VISTARANEWS.COM


on

Actor Darshan Renuka Swamy case In colorskannada shantam Paapam
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ದರ್ಶನ್‌ (Actor Darshan) ಅವರ ಕೈದಿ ನಂಬರ್‌ ಸಖತ್‌ ಚರ್ಚೆ ಆಗಿತ್ತು. ಇದೀಗ ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ. ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ಇದೀಗ ಕಲರ್ಸ್‌ ಕನ್ನಡ ಪ್ರೋಮೊ ಹಂಚಿಕೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಿನಿಮಾ ಮಾಡುತ್ತಾರಾ? ಎನ್ನುವ ಚರ್ಚೆ ನಡೀತಿತ್ತು. ಕಾರಣ ಆರ್‌ಜಿವಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ನೆನೆಪಿಸುವ ಕಾರ್ಯಕ್ರಮ ಕಿರುತೆರೆಯಲ್ಲಿ ಪ್ರಸಾರವಾಗಿದೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಹೋಲುವ ಡೇರ್ ಡೆವಿಲ್ ದೇವದಾಸ್ ಎಪಿಸೋಡ್‌ನಲ್ಲಿ ದಾಸ್ ಒಬ್ಬ ಶ್ರೀಮಂತ. ಆದರೆ ಕೊಲೆ ಆರೋಪದಲ್ಲಿ ಆತನನ್ನು ಪೊಲೀಸರು ಬಂಧಿಸುತ್ತಾರೆ. ಮದುವೆ ಆಗಿದ್ದರೂ ಖ್ಯಾತ ಉದ್ಯಮಿ ದಾಸ್ ಒಬ್ಬ ನಟಿಯ ಮೋಹಕ್ಕೆ ಸಿಲುಕಿರುತ್ತಾನೆ. ಆ ನಟಿಗೆ ಒಬ್ಬನಿಂದ ಕೆಟ್ಟ ಕೆಟ್ಟ ಮೆಸೇಜ್‌ಗಳು ಬರಲು ಆರಂಭಿಸುತ್ತದೆ. ಫೇಕ್‌ ಅಕೌಂಟ್‌ಗಳಿಂದ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿರುತ್ತಾನೆ. ಅದನ್ನು ಆಕೆ ದಾಸ್ ಮುಂದಿಡುತ್ತಾಳೆ. ಅದನ್ನು ಕೇಳಿದ ಆತ ಕೊಲೆ ಮಾಡುತ್ತಾನೆ. ಆತನನ್ನು ಕರೆತಂದು ಒಂದು ಶೆಡ್‌ ಮುಂದೆ ಥಳಿಸುವುದನ್ನು ಪ್ರೋಮೊದಲ್ಲಿ ನೋಡಬಹುದು. ಇದೀಗ ಈ ಪ್ರೋಮೊ ಸಖತ್‌ ವೈರಲ್‌ ಆಗುತ್ತಿದೆ. ಇದು ಪಕ್ಕಾ ರೇಣುಕಾ ಸ್ವಾಮಿ ಕಥೆನೇ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

ಈ ಧಾರಾವಾಹಿ ಎಪಿಸೋಡ್ ನೋಡಿದ ಅನೇಕರು ದರ್ಶನ್ ಕಥೆಗೆ ಹೋಲಿಕೆ ಮಾಡಿಕೊಂಡಿದ್ದಾರೆ. ಆಪ್ತೆ ಪವಿತ್ರಾಗೆ ಕಿರುಕುಳ ನೀಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಅವರು ಕೊಲೆ ಮಾಡಿದರು ಎನ್ನಲಾಗಿದೆ. ಈ ಆರೋಪದಲ್ಲಿ ಅರೆಸ್ಟ್ ಆಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Kannada New Movie: ಈ ಹಿಂದೆ ʻಗಂಟುಮೂಟೆʼ ಎಂಬ ಚಿತ್ರ ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ರೂಪಾ ರಾವ್ ಕೆಂಡವನ್ನು ನಿರ್ಮಾಣ ಮಾಡಿದ್ದಾರೆ. ಬದುಕಿಗೆ ಹತ್ತಿರಾದ, ಬರಿಗಣ್ಣಿಗೆ ನಿಲುಕದ ಸೂಕ್ಷ್ಮ ಕಥಾನಕದೊಂದಿಗೆ ಸಹದೇವ್ ಕೆಲವಡಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಯ ಹೊಸ್ತಿಲಿನಲ್ಲಿರುವಾಗಲೇ ಕನ್ನಡದ ಕೆಂಡದ ಹವಾ ವಿಶ್ವಾದ್ಯಂತ ಹಬ್ಬಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ಕೆಂಡ ವಿಶಿಷ್ಟ ಚಿತ್ರವಾಗಿ ಪ್ರೇಕ್ಷಕರನ್ನು ಬಹುವಾಗಿ ಸೆಳೆಯುತ್ತಿದೆ.
ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. \

VISTARANEWS.COM


on

Kannada New Movie Kenda in premier In world wide
Koo

ಬೆಂಗಳೂರು: ಕಂಟೆಂಟು ಗಟ್ಟಿಯಾಗಿದ್ದರೆ ಯಾವುದೇ ಹೈಪು, ಪ್ರಚಾರದ ಪಟ್ಟುಗಳಿಲ್ಲದೆಯೇ ಚಿತ್ರವೊಂದು ಸದ್ದು ಮಾಡಬಲ್ಲದು (Kannada New Movie). ಈ ಮಾತಿಗೆ ಉದಾಹರಣೆಯಂತೆ ಅನೇಕ ಚಿತ್ರಗಳು ಪ್ರೇಕ್ಷಕರನ್ನು ಸೆಳೆದಿವೆ. ದೊಡ್ಡ ಮಟ್ಟದಲ್ಲಿ ಗೆದ್ದಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಎಲ್ಲ ಲಕ್ಷಣಗಳಿರುವ ಚಿತ್ರ ʻಕೆಂಡ’. ಸಹದೇವ್ ಕೆಲವಡಿ ನಿರ್ದೇಶನದ ಈ ಚಿತ್ರ ಹೆಜ್ಜೆ ಹೆಜ್ಜೆಗೂ ಸುದ್ದಿ ಕೇಂದ್ರದಲ್ಲಿದೆ. ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ. ಇದೀಗ ಮಾರ್ಟಿನ್ ಸ್ಕಾರ್ಸೆಸೆ, ಆಂಗ್ ಲೀ, ಜಿಮ್ ಜರ್ಮುಷ್, ಸ್ಟೈಕ್ ಲೀ, ಕೋಯೆನ್ ಬ್ರದರ್ಸ್ ಮುಂತಾದ ಘಟಾನುಘಟಿ ನಿರ್ದೇಶಕರಿಗೆ ತರಬೇತಿ ಕೊಟ್ಟಿರುವ ನ್ಯೂಯಾರ್ಕ್‍ನ ಟಿಶ್ ಸ್ಕೂಲ್ ಆಫ್ ಆರ್ಟ್‍ನಲ್ಲಿ ಜೂನ್ 28ರಂದು ಪ್ರದರ್ಶನಗೊಳ್ಳಲಿದೆ.

ಕನ್ನಡದಲ್ಲಿ ತಯಾರುಗೊಂಡಿದ್ದ ಈ ಚಿತ್ರವೀಗ ತಾನೇತಾನಾಗಿ ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದೆ. ಕನ್ನಡದ `ತಿಥಿ’ ಸಿನಿಮಾದ ಹಾದಿಯಲ್ಲಿ ಮುಂದುವರೆದು, ಜೂನ್ 29ರಂದು ಸ್ವಿಟ್ಜರ್‍ಲ್ಯಾಂಡಿನಲ್ಲಿಯೂ ಕೆಂಡ ಪ್ರದರ್ಶನಗೊಳ್ಳಲಿದೆ. ಇದೇನು ಸಲೀಸಾದ ಹಾದಿಯಲ್ಲ. ತನ್ನ ಕಂಟೆಂಟಿನ ಅಸಲೀ ಕಸುವಿನ ಕಾರಣದಿಂದಲೇ ಅದೆಲ್ಲ ಸಾಧ್ಯವಾಗಿದೆ. ನ್ಯೂಯಾರ್ಕ್‍ನ ಟಿಶ್ ಸ್ಕೂಲ್ ಆಫ್ ಆರ್ಟ್‍ನಲ್ಲಿ ಪ್ರದರ್ಶನ ಕಂಡ ಮೊಟ್ಟ ಮೊದಲ ಕನ್ನಡ ಚಿತ್ರವಾಗಿಯೂ ಕೆಂಡ ದಾಖಲೆ ಬರೆದಿದೆ. ಈ ಹಿಂದೆ ದಾದಾ ಸಾಹೇಬ್ ಫಾಲ್ಕೆ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಚಿತ್ರ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಅನ್ನು ಪಡೆದುಕೊಂಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ಕಾಣುವ ಮೂಲಕ ಮತ್ತೊಂದು ದಾಖಲೆ ಕೆಂಡದ ಖಾತೆಗೆ ಜಮೆಯಾಗಿದೆ.

ಈ ಹಿಂದೆ ʻಗಂಟುಮೂಟೆʼ ಎಂಬ ಚಿತ್ರ ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ರೂಪಾ ರಾವ್ ಕೆಂಡವನ್ನು ನಿರ್ಮಾಣ ಮಾಡಿದ್ದಾರೆ. ಬದುಕಿಗೆ ಹತ್ತಿರಾದ, ಬರಿಗಣ್ಣಿಗೆ ನಿಲುಕದ ಸೂಕ್ಷ್ಮ ಕಥಾನಕದೊಂದಿಗೆ ಸಹದೇವ್ ಕೆಲವಡಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಯ ಹೊಸ್ತಿಲಿನಲ್ಲಿರುವಾಗಲೇ ಕನ್ನಡದ ಕೆಂಡದ ಹವಾ ವಿಶ್ವಾದ್ಯಂತ ಹಬ್ಬಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ಕೆಂಡ ವಿಶಿಷ್ಟ ಚಿತ್ರವಾಗಿ ಪ್ರೇಕ್ಷಕರನ್ನು ಬಹುವಾಗಿ ಸೆಳೆಯುತ್ತಿದೆ.
ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ.

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!ಇದನ್ನೂ ಓದಿ:

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೆಂಡ ಶೀಘ್ರದಲ್ಲೇ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

Continue Reading
Advertisement
Ram Path
ದೇಶ14 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ15 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು24 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ35 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್43 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ52 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ60 mins ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್1 hour ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ1 hour ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Law And Order
ಕರ್ನಾಟಕ1 hour ago

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ52 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌