Darshan Arrested: ಬಡ್ಡಿ ಕಟ್ಟದವರಿಗೆ 'ನರಕ' ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು? - Vistara News

ಸ್ಯಾಂಡಲ್ ವುಡ್

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Darshan Arrested: ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

VISTARANEWS.COM


on

Darshan Arrested renuka shed like hell more murders here
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್ ಹಾಗೂ ನನ್ನ ಮಧ್ಯೆ ಮನಸ್ತಾಪ ತಂದಿದ್ದೇ ನಟಿ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

VISTARANEWS.COM


on

Actor Darshan case om prakash reaction
Koo

ಬೆಂಗಳೂರು: ನಟ ದರ್ಶನ್‌ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಓಂ ಪ್ರಕಾಶ್ ರಾವ್ ಅವರು 10 ವರ್ಷಗಳಿಂದ ದರ್ಶನ್ ಜತೆ ಏಕೆ ಅಂತರ ಇಟ್ಟರು? ಹಾಗೇ ದರ್ಶನ್‌ ಕೊಲೆ ಕೇಸ್‌ ಬಗ್ಗೆ ಹಲವಾರು ವಿಚಾರಗಳನ್ನು ಮಾಧ್ಯಮವೊಂದಕ್ಕೆ ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್‌ ಮಾತನಾಡಿ ʻʻದರ್ಶನ್‌ ಅವರಿಗೆ ಇದು ಬೇಕಾಗಿರಲಿಲ್ಲ. ಅವರಿಗಿರುವ ಫಾಲೋವರ್ಸ್‌ಗಳು, ಫೇಮ್‌, ಪಬ್ಲಿಸಿಟಿ ಎಲ್ಲ ಅಪಾರವಾಗಿತ್ತು. ಇದೀಗ ಸಣ್ಣ ವಿಷಯಕ್ಕೆ ಆರೋಪ ಸ್ಥಾನದಲ್ಲಿ ಇದ್ದಾರೆ ಎಂದಾಗ ಬೇಜಾರಾಯ್ತು. ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂದರೆ ತುಂಬ ದುಃಖವಾಗಿದೆ. ಸಿನಿಮಾದಲ್ಲಿ ಜಗಳ ಎಂದು ಬಂದಾಗ, ಸಿನಿಮಾಗೋಸ್ಕರ ಅಷ್ಟೇ. ಆದರೆ ವೈಯಕ್ತಿಕವಾಗಿ ತೆಗೋಬಾರದು. ನನಗೆ ತುಂಬ ಗೌರವ ಕೊಟ್ಟ ನಟ ಎಂದರೆ ದರ್ಶನ್‌ʼʼಎಂದರು.

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ʻʻದರ್ಶನ್‌ ಅವರಿಗೆ ತುಂಬ ಫ್ಯಾನ್ಸ್‌ ಇದ್ದಾರೆ. ಕೆಲವರು ದರ್ಶನ್‌ ಬಗ್ಗೆ ಮಾತಾಡುತ್ತಿಲ್ಲ. ನೀವು ಮೈಕ್‌ ಹಿಡಿತ್ತಿದ್ದೀರಾ ಅಷ್ಟೇ ಗನ್‌ ಏನೂ ತೋರಿಸಿಲ್ಲ. ಆದರೆ ಮಾತನಾಡಬೇಕು. ಆದರೆ ಯಾವುದೇ ಕಲಾವಿದರು ಮಾತನಾಡುತ್ತಿಲ್ಲ. ಕೆಲವರು ದರ್ಶನ್‌ ಜತೆ ಪ್ರೀತಿಯಲ್ಲಿ ಇದ್ದಾಗ ಹೇಗಿತ್ತು ಒಡನಾಟ ಎಂಬುದು ಮಾತನಾಡಿ. ಇದರಲ್ಲಿ ತಪ್ಪೇನಿಲ್ಲ. ಒಂದು ವಿಷಯ ಏನೆಂದರೆ, ಬ್ಯಾನ್‌ ಎನ್ನುವ ವರ್ಡ್‌ ಬಂತು. ಬ್ಯಾನ್‌ ಏಕೆ ಮಾಡಬೇಕು? ಆಗಿನ ಕಾಲಕ್ಕೆ ನಿಖಿತಾ ಅವರನ್ನೂ ಬ್ಯಾನ್‌ ಮಾಡಬೇಕು ಎಂಬ ಮಾತುಗಳು ಬಂದಿದ್ದವು. ಯಾರು ರೂಲ್ಸ್‌ ಮಾಡಿಲ್ಲ. ಮಾತುಕತೆ ಬಂದಿತ್ತು ಅಷ್ಟೇʼʼಎಂದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ!

Actor Darshan: ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Chitral Rangaswamy bad message by Renuka Swamy
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ವಿಚಾರಕ್ಕೆ (Actor Darshan) ಸಂಬಂಧಪಟ್ಟಂತೆ ದರ್ಶನ್‌ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು ಎಂಬುದು ಕೆಲವರ ವಾದ. ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ವಿವರಿಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಇರುವ ಕೊಠಡಿ ಹೇಗಿದೆ? ಸಾಮಾನ್ಯರಿಗಿಲ್ಲಿ ಪ್ರವೇಶವಿಲ್ಲ!

ಬಿಗ್‌ಬಾಸ್ ಕನ್ನಡ ಸೀಸನ್ -10 ಮುಗಿದು ಬಹಳ ದಿನಗಳಾಯ್ತು.ವೇದಿಕೆಯಲ್ಲಿ ಲೈವ್ ಲೈವ್ ಆಡಿಯೆನ್ಸ್ ಬೆಂಬಲದ ಎಲ್ಲರನ್ನು ಮನೆಯೊಳಗೆ ಕಳುಹಿಸಲಾಗಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ನಟಿ ಹಾಗೂ ಬಾಡಿ ಬಿಲ್ಡರ್ ಚಿತ್ರಾಲ್ ರಂಗಸ್ವಾಮಿ ಸೋತು ಹೊರಬಂದಿದ್ದರು. ಚಿತ್ರಲ್‌ ರಂಗಸ್ವಾಮಿ ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲೂ ನಟಿಸಿದ್ದಾರೆ. ಜೊತೆಗೆ ಬಾಡಿ ಬಿಲ್ಡರ್‌ ಆಗಿಯೂ ಗುರುತಿಸಿಕೊಂಡಿದ್ದಾರೆ. 2017ರಿಂದ ಬಾಡಿ ಬಿಲ್ಡಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿರುವ “ಜಿಗರ್”; ಜುಲೈ 5 ರಂದು ತೆರೆಗೆ!

Kannada New Movie: ಸುಮಾರು ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ‌. ಸ್ವತಂತ್ರ ನಿರ್ದೇಶಕನಾಗಿ ಮೊದಲ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಜಿಗರ್” ಎಂದರೆ ಎರಡು ಗುಂಡಿಗೆವುಳ್ಳವನು ಹಾಗೂ ಯಾವುದಕ್ಕೂ ಅಂಜದವನು ಎಂದು ಅರ್ಥ. ಮಲ್ಪೆ , ಉಡುಪಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 5 ರಂದು “ಜಿಗರ್” ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಸೂರಿ ಕುಂದರ್.

VISTARANEWS.COM


on

Kannada New Movie Jigar Kannada Official 4K Trailer
Koo

ಬೆಂಗಳೂರು: ಪೂಜಾ ವಸಂತಕುಮಾರ್ (Kannada New Movie) ನಿರ್ಮಾಣ , ʻಸೂರಿ ಕುಂದರ್ʼ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ “ಜಿಗರ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 5ರಂದು ತೆರೆಗೆ ಬರುತ್ತಿದೆ. ಟ್ರೈಲರ್‌ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಪ್ರೇಮಕಥೆಗಳಿಗೆ ಸೀಮಿತನಾಗಿದ್ದ ನನ್ನನ್ನು ನಿರ್ದೇಶಕರು ಈ ಚಿತ್ರದ ಮೂಲಕ ಆಕ್ಷನ್ ಹೀರೋ ಮಾಡಿದ್ದಾರೆ ಎಂದು‌ ಮಾತನಾಡಿದ ನಾಯಕ ಪ್ರವೀಣ್ ತೇಜ್, ʻʻಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಜೀವ. ಉತ್ಸಾಹಿ ಯುವಕನೊಬ್ಬ ಫಿಶ್ ಟೆಂಡರ್ ಶಿಪ್ ನಲ್ಲಿ ಭಾಗಿಯಾಗುತ್ತಾನೆ. ಆಮೂಲಕ ಭೂಗತಲೋಕಕ್ಕೂ ಕಾಲಿಡುತ್ತಾನೆ. ಅಲ್ಲಿ ಮೂರು ನಾಲ್ಕು ಸಂಘಗಳಿರುತ್ತದೆ. ಸಂಘಗಳ ನಡುವೆ ಸಂಘರ್ಷವೂ ಇರುತ್ತದೆ. ಇದು ಚಿತ್ರದ ಪ್ರಮುಖ ಕಥಾಹಂದರ. ಇದರೊಟ್ಟಿಗೆ ಲವ್, ಆಕ್ಷನ್, ಕಾಮಿಡಿ ಕೂಡ ನಮ್ಮ ಚಿತ್ರದಲ್ಲಿದೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Kannada New Movie: ಡಾಲಿ-ಪರಮ್ ‘ಕೋಟಿ’ಗೆ ಪ್ರೇಕ್ಷಕರ ಜೈಕಾರ; ಕೊಂಡಾಡಿದ ಪ್ರತಾಪ್ ಸಿಂಹ!

ಸುಮಾರು ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ‌. ಸ್ವತಂತ್ರ ನಿರ್ದೇಶಕನಾಗಿ ಮೊದಲ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಜಿಗರ್” ಎಂದರೆ ಎರಡು ಗುಂಡಿಗೆವುಳ್ಳವನು ಹಾಗೂ ಯಾವುದಕ್ಕೂ ಅಂಜದವನು ಎಂದು ಅರ್ಥ. ಮಲ್ಪೆ , ಉಡುಪಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 5 ರಂದು “ಜಿಗರ್” ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಸೂರಿ ಕುಂದರ್.

ನಾಯಕಿ ವಿಜಯಶ್ರೀ, ನಟ ಯಶ್ ಶೆಟ್ಟಿ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಗೀತರಚನೆಕಾರ ಗಣೇಶ್, ಛಾಯಾಗ್ರಾಹಕ ಶಿವಸೇನ ಮುಂತಾದವರು “ಜಿಗರ್” ಚಿತ್ರದ ಕುರಿತು ಮಾತನಾಡಿದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಇರುವ ಕೊಠಡಿ ಹೇಗಿದೆ? ಸಾಮಾನ್ಯರಿಗಿಲ್ಲಿ ಪ್ರವೇಶವಿಲ್ಲ!

Actor Darshan: ಪವಿತ್ರಾ ಗೌಡ ಜೈಲಿನಲ್ಲಿ ಸರಿಯಾಗಿ ಊಟ ನಿದ್ರೆ ಮಾಡದೇ ಫುಲ್ ಸೈಲೆಂಟ್ ಆಗಿದ್ದಾರೆ. ಹೈಫೈ ಜೀವನ ನಡೆಸಿದ್ದ ಪವಿತ್ರಾ ಗೌಡ ಸಹ ಬಂಧಿಗಳ ಜತೆ ಜೈಲುವಾಸ ಅನುಭವಿಸುತ್ತಿದ್ದಾರೆ. ಇತ್ತ ದರ್ಶನ್‌ ಕೂಡ ಸಾಮಾನ್ಯ ಕೈದಿಯಂತೆ ಜೈಲುವಾಸ ಅನುಭವಿಸುತ್ತಿದ್ದಾರೆ. ದರ್ಶನ್‌ ಇರುವ ವಿಶೇಷ ಬ್ಯಾರಕ್‌ನಲ್ಲಿ ಅಟ್ಯಾಚ್ಡ್ ಬಾತ್ ರೂಮ್ ಇದೆ. ಬೆಳಗ್ಗೆ ದರ್ಶನ್‌ ಪಲಾವ್ ಸೇವಿಸಿದ್ದಾರೆ. ಕುಡಿಯಲು ಬಿಸಿ ನೀರು ಕೇಳಿ ಪಡೆದಿದ್ದಾರೆ.

VISTARANEWS.COM


on

Actor Darshan sent parapppana agrahara jail in renuka swamy murder
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದಕ್ಕೂ ಮುಂಚೆ ಪವಿತ್ರಾ ಗೌಡ ಪರಪ್ಪನ ಅಗ್ರಹಾರಕ್ಕೆ ಅಂದರ್‌ ಆದರು. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ , ಕಣ್ಣೀರು ಹಾಕುತ್ತ ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ. ನನ್ನಿಂದಲೇ ನಟ ದರ್ಶನ್‌ಗೆ ಈ ರೀತಿ ಸ್ಥಿತಿ ಬಂತು ಎಂದು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಪವಿತ್ರಾ ಕಣ್ಣೀರಿಟ್ಟು ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ. ಇತ್ತ ದರ್ಶನ್‌ ಕೂಡ ಜೈಲಿನ ಮೇನು ಪ್ರಕಾರ ಪಲಾವ್ ಸೇವನೆ ಮಾಡಿ, ಬೀಸಿ ನೀರು ಕುಡಿದಿದ್ದಾರೆ ಎನ್ನಲಾಗಿದೆ.

ಪವಿತ್ರಾ ಗೌಡ ಜೈಲಿನಲ್ಲಿ ಸರಿಯಾಗಿ ಊಟ ನಿದ್ರೆ ಮಾಡದೇ ಫುಲ್ ಸೈಲೆಂಟ್ ಆಗಿದ್ದಾರೆ. ಹೈಫೈ ಜೀವನ ನಡೆಸಿದ್ದ ಪವಿತ್ರಾ ಗೌಡ ಸಹ ಬಂಧಿಗಳ ಜತೆ ಜೈಲುವಾಸ ಅನುಭವಿಸುತ್ತಿದ್ದಾರೆ. ಇತ್ತ ದರ್ಶನ್‌ ಕೂಡ ಸಾಮಾನ್ಯ ಕೈದಿಯಂತೆ ಜೈಲುವಾಸ ಅನುಭವಿಸುತ್ತಿದ್ದಾರೆ. ದರ್ಶನ್‌ ಇರುವ ವಿಶೇಷ ಬ್ಯಾರಕ್‌ನಲ್ಲಿ ಅಟ್ಯಾಚ್ಡ್ ಬಾತ್ ರೂಮ್ ಇದೆ. ಬೆಳಗ್ಗೆ ದರ್ಶನ್‌ ಪಲಾವ್ ಸೇವಿಸಿದ್ದಾರೆ. ಕುಡಿಯಲು ಬಿಸಿ ನೀರು ಕೇಳಿ ಪಡೆದಿದ್ದಾರೆ.

ಇದನ್ನೂ ಓದಿ: CNG Price: ಸಿಎನ್‌ಜಿ ದರ ಹೆಚ್ಚಳ; ಬೆಂಗಳೂರಿನಲ್ಲಿ ಏರಿಕೆ ಇಲ್ಲ

ಹೇಗಿದೆ ಕೊಠಡಿ?

ಜೈಲಿನ ಮೂರನೇ ಸೆಕ್ಟರ್ ಭಾಗದಲ್ಲಿ ಇರುವ ಭದ್ರತಾ ವಿಭಾಗದಲ್ಲಿ ಒಂದು ಕೊಠಡಿ ದರ್ಶನ್‌ಗೆ ನೀಡಲಾಗಿದೆ. ಇಲ್ಲಿ ಹೊರಗಿನ ಕೈದಿಗಳಿಗೆ ಬರಲು ಅವಕಾಶ ಇಲ್ಲ. ಭದ್ರತಾ ವಿಭಾಗದ ಸಿಬ್ಬಂದಿ ಹಾಗೂ ಕೈದಿಗಳಿಗೆ ಅಷ್ಟೇ ಅವಕಾಶ ನೀಡಲಾಗಿದೆ. ದರ್ಶನ್ ಹಾಗೂ ವಿನಯ್ ಒಂದೇ ಕೊಠಡಿಯಲ್ಲಿ ಇದ್ದಾರೆ. ಪ್ರದೂಷ್ ಹಾಗೂ ಧನರಾಜ್ ಮತ್ತೊಂದು ಕೊಠಡಿಯಲ್ಲಿ ಸೆರೆವಾಸದಲ್ಲಿದ್ದಾರೆ. ಕೊಠಡಿಯ ಒಳಗೆ ಅಟ್ಯಾಚ್ ಬಾತ್ ರೂಮ್ ಕೂಡ ಇದೆ. ಮಲಗಲು ಚಾಪೆ ಹಾಗೂ ಬೆಡ್ ಶೀಟ್ ನೀಡಲಾಗಿದೆ. ದರ್ಶನ್ ಇರುವ ಕೊಠಡಿಯಲ್ಲಿ ಯಾವುದೇ ಟಿವಿ ವ್ಯವಸ್ಥೆ .ಇಲ್ಲ. ಕೊಠಡಿಯ ಒಳಗೆ ಬೇರೆ ಯಾವುದೇ ವ್ಯವಸ್ಥೆ ಇಲ್ಲ ಯಾರಾದರೂ ಭೇಟಿಗೆ ಬಂದರೆ ಅವರನ್ನು ಸಿಬ್ಬಂದಿ ಕರೆದೊಯ್ದು ಭೇಟಿ ಮಾಡಿಸುತ್ತಾರೆ. ಭದ್ರತಾ ವಿಭಾಗದ ಸುತ್ತಮುತ್ತ ಯಾವಾಗಲೂ ಪೊಲೀಸ್ ಕಣ್ಗಾವಲು ಇರುತ್ತದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

Continue Reading
Advertisement
T20 world Cup 2024
ಕ್ರೀಡೆ30 mins ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ41 mins ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ49 mins ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ1 hour ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ2 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ2 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ3 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ3 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ3 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sonakshi Sinha
ಬಾಲಿವುಡ್3 hours ago

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌