Site icon Vistara News

Actor Darshan: ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ, ನಾನ್ಯಾಕೆ ತಲೆ ಕೆಡಿಸಿಕೊಳ್ಳಲಿ ಎಂದ ದರ್ಶನ್!

Actor Darshan

Renukaswamy Murder: Murder, Kidnap Cases Will Punish Actor Darshan

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರು ಕನ್ನಡ ಚಿತ್ರರಂಗಕ್ಕೆ (Actor Darshan) ಪದಾರ್ಪಣೆ ಮಾಡಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸಲು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. 

25 ವರ್ಷದ ಸುದೀರ್ಘ ಪ್ರಯಾಣವನ್ನೊಮ್ಮೆ ಹಿಂದೆ ತಿರುಗಿ ನೋಡಿದ ದರ್ಶನ್, ತಮ್ಮನ್ನ ತಾವು ಟಾಂಗಾ ಕುದುರೆಗೆ ಹೋಲಿಸಿಕೊಂಡರು.

ಇದನ್ನೂ ಓದಿ: Actor Darshan: ಹೌದು ನಾನು ಬ್ಯಾಡ್‌ ಬಾಯ್‌, ವಿವಾದಕ್ಕೆ ಕೇರ್‌ ಮಾಡಲ್ಲ ಎಂದ ದರ್ಶನ್‌!

ಶ್ರದ್ಧೆ ಬೇಕೇ ಬೇಕು ಎಂದ ದರ್ಶನ್ ಆರಂಭದಲ್ಲಿ ಅವಮಾನಗಳನ್ನು ಎದುರಿಸಲೇ ಬೇಕು ಎಂದರು. ಅವಮಾನಗಳು ಆದರೆ ಮುಂದೊಂದು ದಿನ ಸನ್ಮಾನ ಅಂದರು.

ಇಷ್ಟೆಲ್ಲ ಮಾತಾಡಿ ಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದರು ದರ್ಶನ್.

ತಮ್ಮ ಈ ಮಾತುಗಳ ಮೂಲಕ ಅನೇಕರಲ್ಲಿ ಇರುವ ಪ್ರಶ್ನೆಗಳಿಗೆ ಉತ್ತರವನ್ನ ಕೊಟ್ಟರು. ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನ ಯಾವುದೇ ಮುಚ್ಚು ಮರೆಯಿಲ್ಲದೇ ಹಂಚಿಕೊಂಡರು.

ಕೊನೆಯಲ್ಲಿ ತಂತ್ರಜ್ಞರು, ನಟಿಯರು ಆಗಿರಬಹುದು, ಗೊತ್ತೋ-ಗೊತ್ತಿಲ್ಲದೆಯೋ ನೋವು ಮಾಡಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.

Exit mobile version