Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್! - Vistara News

ಸ್ಯಾಂಡಲ್ ವುಡ್

Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

Dhruva Sarja: ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಆ ಬಳಿಕ ಪ್ರಶಾಂತ್ ಪೂಜಾರಿಗೆ ಹಲ್ಲೆ ಮಾಡಿದ್ದರು. ಸದ್ಯ ಬಂಧನ ಭೀತಿಯಿಂದ ಆರೋಪಿಗಳು ಜಾಮೀನು ಪಡೆದಿದ್ದಾರೆ. ಈಗ ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿಯಿಂದಲೂ ಪೊಲೀಸರಿಗೆ ಸಹಕಾರ ಸಿಗುತ್ತಿಲ್ಲ . ಹಲ್ಲೆಯಾದಾಗಲು ಪ್ರಶಾಂತ್ ಪೂಜಾರಿ ದೂರು ನೀಡಲು ಹಿಂದೇಟಾಕಿದ್ದರು. ಈಗ ಧ್ರುವ ಸರ್ಜಾರಿಂದಲೂ ಪೊಲೀಸರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಇನ್ನು ತಮ್ಮವರೇ ಎಂದು ನಟ ಧ್ರುವ ಸರ್ಜಾ ಸುಮ್ಮನಾಗಿದ್ದಾರೆ.

VISTARANEWS.COM


on

Dhruva Sarja Gym Trainer Prashanth poojari twist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದಂತಾಗಿದೆ. ಧ್ರುವ ಸರ್ಜಾ ಜತೆ ಹತ್ತಿರವಾಗಬೇಕು ಎಂದು ಅಟ್ಯಾಕ್‌ ನಡೆದಿತ್ತು ಎಂದು ತಿಳಿದು ಬಂದಿದೆ. ಈ ವಿಚಾರ ಗೊತ್ತಿಲ್ಲದೇ ದಕ್ಷಿಣ ವಿಭಾಗ ಡಿಸಿಪಿಗೆ ಧ್ರುವ ಸರ್ಜಾ ಕರೆ ಮಾಡಿದ್ದರು.

ಈ ಬಗ್ಗೆ ತನಿಖೆಗೆ ಇಳಿದ ಬನಶಂಕರಿ ಪೊಲೀಸರಿಂದ ಅಸಲಿ ಸತ್ಯ ಬಯಲಾಗಿದೆ. ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದು ಹರ್ಷ ಮತ್ತು ಸುಭಾಷ್. ಆದರೆ ಹಲ್ಲೆ ಮಾಡಿಸಿದ್ದು ಮಾತ್ರ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಮಾತ್ರವಲ್ಲ ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯು ಕೆಲಸ ಮಾಡುತ್ತಿದ್ದ. ಪ್ರಶಾಂತ್ ಪೂಜಾರಿ ಇತ್ತೀಚೆಗೆ ಧ್ರುವ ಸರ್ಜಾಗೆ ಆಪ್ತನಾಗ್ತಿದ್ದ. ಇದು ನಾಗೇಂದ್ರನಿಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ತಾನು ಹಲ್ಲೆ ಮಾಡಿದರೆ ಎಲ್ಲಿ ಹೊರಗೆ ಬರತ್ತೋ ಎಂದು ಹರ್ಷ ಮತ್ತು ಸುಭಾಷ್‌ಗೆ ಹಲ್ಲೆ ಮಾಡಲು ಹೇಳಿದ್ದ.

ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಆ ಬಳಿಕ ಪ್ರಶಾಂತ್ ಪೂಜಾರಿಗೆ ಹಲ್ಲೆ ಮಾಡಿದ್ದರು. ಸದ್ಯ ಬಂಧನ ಭೀತಿಯಿಂದ ಆರೋಪಿಗಳು ಜಾಮೀನು ಪಡೆದಿದ್ದಾರೆ. ಈಗ ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿಯಿಂದಲೂ ಪೊಲೀಸರಿಗೆ ಸಹಕಾರ ಸಿಗುತ್ತಿಲ್ಲ . ಹಲ್ಲೆಯಾದಾಗಲು ಪ್ರಶಾಂತ್ ಪೂಜಾರಿ ದೂರು ನೀಡಲು ಹಿಂದೇಟಾಕಿದ್ದರು. ಈಗ ಧ್ರುವ ಸರ್ಜಾರಿಂದಲೂ ಪೊಲೀಸರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಇನ್ನು ತಮ್ಮವರೇ ಎಂದು ನಟ ಧ್ರುವ ಸರ್ಜಾ ಸುಮ್ಮನಾಗಿದ್ದಾರೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

ಕಳೆದ ಮೇ 26 ರಂದು ರಾತ್ರಿ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆಯಾಗಿತ್ತು. ಧ್ರುವಾ ಸರ್ಜಾ ಮನೆಯಿಂದ ತೆರಳುತ್ತಿದ್ದ ವೇಳೆ ಪ್ರಶಾಂತ್ ಪೂಜಾರಿಗೆ ಹಲ್ಲೆಯಾಗಿತ್ತು. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Kannada New Movie: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲಬಾರಿಗೆ ಒಂದು ಹೊಸ ಯೋಜನೆಗೆ “ನಾಟ್ ಔಟ್” ಚಿತ್ರತಂಡ ಕೈ ಹಾಕಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ದೃಢೀ ಪಡಿಸುವ ಉದ್ದೇಶದಿಂದ. ಫಸ್ಟ್ ಆಫ್ ಸಿನಿಮಾ ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ. ಸೆಕೆಂಡ್ ಹಾಫ್ ಸಿನಿಮಾ ನೋಡುವ ಕುತೂಹಲ ಇದರೆ ಮಧ್ಯಂತರದಲ್ಲಿ ಟಿಕೆಟ್ ಖರೀದಿ ಮಾಡಬೇಕಾಗುತ್ತದೆ.

VISTARANEWS.COM


on

Kannada New Movie Not Out Trailer out
Koo

ಬೆಂಗಳೂರು: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ, ರಚನಾ ಇಂದರ್ ನಾಯಕ, ನಾಯಕಿಯಾಗಿ ನಟಿಸಿರುವ “ನಾಟ್ ಔಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್‌ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲಬಾರಿಗೆ ಒಂದು ಹೊಸ ಯೋಜನೆಗೆ “ನಾಟ್ ಔಟ್” ಚಿತ್ರತಂಡ ಕೈ ಹಾಕಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ದೃಢೀ ಪಡಿಸುವ ಉದ್ದೇಶದಿಂದ. ಫಸ್ಟ್ ಆಫ್ ಸಿನಿಮಾ ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ. ಸೆಕೆಂಡ್ ಹಾಫ್ ಸಿನಿಮಾ ನೋಡುವ ಕುತೂಹಲ ಇದರೆ ಮಧ್ಯಂತರದಲ್ಲಿ ಟಿಕೆಟ್ ಖರೀದಿ ಮಾಡಬೇಕಾಗುತ್ತದೆ.

ಟ್ರೇಲರ್ ಬಿಡುಗಡೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ನಾಟ್ ಔಟ್” ಲಾಕ್ ಡೌನ್ ನಲ್ಲಿ ನಾನು ಬರೆದ ಕಥೆ‌ ಎಂದು ಮಾತನಾಡಿದ ನಿರ್ದೇಶಕ ಅಂಬರೀಶ್, ನನ್ನ ಕಥೆಯನ್ನು ಮೆಚ್ಚಿ ರಾಷ್ಟ್ರಕೂಟ ಪಿಕ್ಚರ್ಸ್ ಅವರು ನಿರ್ಮಾಣಕ್ಕೆ ಮುಂದಾದರು. ಟೊರೊಂಟೊದಲ್ಲಿ ಅಭಿನಯ ಕಲಿತು ಬಂದಿರುವ ಅಜಯ್ ಪೃಥ್ವಿ, ರಚನಾ ಇಂದರ್, ರವಿಶಂಕರ್, ಕಾಕ್ರೋಜ್ ಸುಧೀ ಮುಖ್ಯಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಚಿತ್ರವಾಗಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು.

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ನನ್ನದು ಈ ಚಿತ್ರದಲ್ಲಿ ಆಂಬುಲೆನ್ಸ್ ಚಾಲಕನ ಪಾತ್ರ. ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಈ ಚಿತ್ರದ ನನ್ನ ಪಾತ್ರವನ್ನು ಎಲ್ಲಾ ಆಂಬುಲೆನ್ಸ್ ಚಾಲಕರಿಗೆ ಅರ್ಪಿಸುತ್ತಿದ್ದೇನೆ ಎಂದು ನಾಯಕ ಅಜಯ್ ಪೃಥ್ವಿ ತಿಳಿಸಿದರು.

ನನ್ನದು ಈ “ನಾಟ್ ಔಟ್” ನಲ್ಲಿ ನರ್ಸ್ ಪಾತ್ರ ಎಂದರು ರಚನಾ ಇಂದರ್. ಕಾಕ್ರೋಜ್ ಸುಧೀ, ಅಶ್ವಿನ್ ಹಾಸನ್, ಪ್ರಶಾಂತ್ ಸಿದ್ದಿ, ಸಲ್ಮಾನ್ ಮುಂತಾದ ಕಲಾವಿದರು ಹಾಗೂ ಕಾರ್ಯಕಾರಿ ನಿರ್ಮಾಪಕ ಕುಮಾರ್ ಚಿತ್ರದ ಕುರಿತು ಮಾಹಿತಿ ನೀಡಿದರು.

Continue Reading

ಕರ್ನಾಟಕ

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Kannada New Movie: ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್.ಚಿತ್ರಾ ಅದ್ಭುತವಾಗಿ ಹಾಡಿದ್ದಾರೆ.‌ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Vasishtha Simha starrer VIP Kannada movie
Koo

ಬೆಂಗಳೂರು: ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ (Kannada New Movie) ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್. ಚಿತ್ರಾ ಅವರು ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ದೇಶಕಂಡ ಜನಪ್ರಿಯ ಗಾಯಕಿ ಚಿತ್ರ ಅವರು ನಮ್ಮ ಚಿತ್ರದ ಹಾಡನ್ನು ಹಾಡಿದ್ದು ತುಂಬಾ ಸಂತೋಷವಾಗಿದೆ. “ಬಾರೋ ಕಂದ” ಹಾಡನ್ನು ಚಿತ್ರಾ ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡು ಹಾಡಿದ ನಂತರ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಅವರ ಬಳಿ ನಾನು ಹಾಡಿರುವುದು ನಿಮಗೆ ಇಷ್ಟವಾಯಿತಾ? ಇಲ್ಲವಾದ್ದಲ್ಲಿ ಇನ್ನೊಮ್ಮೆ ಹಾಡುತ್ತೇನೆ ಎಂದರು. ಅಂತಹ ದೊಡ್ಡ ಗಾಯಕಿಯಾದರೂ ಅವರಲ್ಲಿರುವ ಸರಳತೆ ಎಲ್ಲರಿಗೂ ಮಾದರಿ ಎಂದು ತಿಳಿಸಿರುವ ಕಾರ್ಯಕಾರಿ ನಿರ್ಮಾಪಕ ಅಫ್ಜಲ್, ಬೆಂಗಳೂರು ಸುತ್ತಮುತ್ತ “ವಿಐಪಿ” ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್‌ನಿಂದ “ವಿಐಪಿ” ಚಿತ್ರ ಎಲ್ಲೆಡೆ ಜನಪ್ರಿಯವಾಗಿದೆ. ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಅದ್ಭುತ ಸಾಹಸ ಸನ್ನಿವೇಶಗಳಿದೆ. ವಸಿಷ್ಠ ಸಿಂಹ ಅವರ ಈವರೆಗಿನ ಪಾತ್ರಗಳಿಗಿಂತ ನಮ್ಮ ಚಿತ್ರದ ಪಾತ್ರ ವಿಭಿನ್ನವಾಗಿರುತ್ತದೆ ಎಂದು ನಿರ್ದೇಶಕ ಬ್ರಹ್ಮ ತಿಳಿಸಿದ್ದಾರೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ಮೇಕಿಂಗ್‌ನಿಂದ ಸದ್ದು ಮಾಡುತ್ತಿರುವ “ವಿಐಪಿ” ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್, ಸನತ್, ಶ್ರೀದತ್ತ ಮುಂತಾದವರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಹಾಗೂ ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

Dolly Dhananjay: ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ.

VISTARANEWS.COM


on

Dolly dhananjay Halagali on set
Koo

ಬೆಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ʻಹಲಗಲಿʼ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ.

ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಇವರು ಈಗಾಗಲೇ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.

ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತಿದೆ. ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ನಂದಿ ಪ್ರಶಸ್ತಿ ಪುರಸ್ಕೃತ ಸಾಯಿ ಶ್ರೀರಾಮ್ ಕ್ಯಾಮೆರಾ, ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ ಹಲಗಲಿ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ಈ ಮೊದಲು ಡಾರ್ಲಿಂಗ್ ಕೃಷ್ಣ ಅವರು ಹೀರೋ ಎಂದು ಸುದ್ದಿ ಆಗಿತ್ತು. ಆದರೆ, ಡಾರ್ಲಿಂಗ್ ಕೃಷ್ಣ ಅವರ ಡೇಟ್ಸ್ ಸಮಸ್ಯೆಯಿಂದ ಅವರು ಈ ಚಿತ್ರದಲ್ಲಿ ನಟಿಸಲು ಆಗುತ್ತಿಲ್ಲ. ಅಲ್ಲದೆ ಐತಿಹಾಸಿಕ, ಬಹುಭಾಷೆಯ ಚಿತ್ರಕ್ಕೆ ಡಾಲಿ ಧನಂಜಯ್ ಅವರೇ ಸೂಕ್ತ ಎನಿಸಿ ಈಗ ಡಾರ್ಲಿಂಗ್ ಜಾಗಕ್ಕೆ ಡಾಲಿ ಆಗಮನ ಆಗಿದೆ. ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

ಸಿನಿಮಾ ಬಗ್ಗೆ ಡಾಲಿ ಮಾತನಾಡಿ ʻʻಐತಿಹಾಸಿಕ ಕತೆಗಳು ಅಂದರೆ ನನಗೆ ಇಷ್ಟ. ಹಲಗಲಿ ಕತೆ ಕೇಳಿದಾಗ ತುಂಬಾ ಇಷ್ಟವಾಯಿತು. ನಮ್ಮ ನಾಡಿಗಾಗಿ ಹೋರಾಡಿದವರ ಕತೆಯನ್ನು ಸಿನಿಮಾ ಮಾಡುತ್ತಿದ್ದು, ಆ ಚಿತ್ರದಲ್ಲಿ ನಾನು ಹೀರೋ ಆಗುತ್ತಿರುವುದು ಖುಷಿ ಕೊಟ್ಟಿದೆ. ನಿರ್ದೇಶಕ ಸುಕೇಶ್ ಡಿ ಕೆ ಹಾಗೂ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಅವರು ತುಂಬಾ ದೊಡ್ಡ ಕನಸು ಕಟ್ಟಿಕೊಂಡು ಈ ಚಿತ್ರವನ್ನು ಐದು ಭಾಷೆಯಲ್ಲಿ ಮಾಡುತ್ತಿದ್ದಾರೆ. ನಾನು ಈ ಚಿತ್ರಕ್ಕೆ ಹೀರೋ ಆಗುತ್ತಿರುವುದು ಹೆಮ್ಮೆ ಅನಿಸುತ್ತಿದೆʼʼಎಂದರು.

ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಹಗಲಗಲಿ. ಈಗಾಗಲೇ ಮುಹೂರ್ತ ಕೂಡ ಮಾಡಿದ್ದೇವೆ. ಐದು ಭಾಷೆಗಳಲ್ಲಿ ಬರುತ್ತಿದೆ. ಪೂರ್ವ ತಯಾರಿಗಳು ಮುಗಿದಿವೆ. ಡಾರ್ಲಿಂಗ್ ಕೃಷ್ಣ ಅವರ ಮೂರು-ನಾಲ್ಕು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಕಾಯಲು ಆಗುತ್ತಿಲ್ಲ. ಅಲ್ಲದೆ ನಮ್ಮ ಕತೆಗೆ ಡಾಲಿ ಧನಂಜಯ್ ಅವರು ಸೂಕ್ತ ಎನಿಸಿದ್ದು, ಅವರೇ ಹೀರೋ ಆಗಿ ಮಾಡುತ್ತಿದ್ದಾರೆ. ಸದ್ಯದಲ್ಲೇ ರೆಗ್ಯೂಲರ್ ಶೂಟಿಂಗ್ ಶುರುವಾಗಲಿದೆ ಎಂದರು
ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ.

Continue Reading

ಸ್ಯಾಂಡಲ್ ವುಡ್

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Kiccha Sudeep: ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ.

VISTARANEWS.COM


on

Kiccha Sudeep workout For next Movie
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ವರ್ಕೌಟ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading
Advertisement
Building Collapse
ದೇಶ8 mins ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್15 mins ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ21 mins ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

MS Dhoni Birthday
ಕ್ರೀಡೆ22 mins ago

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

Pearl Fashion
ಫ್ಯಾಷನ್41 mins ago

Pearl Fashion: ಮುತ್ತಿನ ಹಾರಕ್ಕೆ ಸಿಕ್ತು ನ್ಯೂ ಲುಕ್‌!

Crime News
ಕ್ರೈಂ55 mins ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Health Food Tips
ಆರೋಗ್ಯ60 mins ago

Health Food Tips: ಈ ಕೆಲವು ಆಹಾರಗಳ ಸೇವನೆಯಿಂದ ಬಾಯಾರಿ, ಗಂಟಲೊಣಗಿ ನೀರು ಬೇಕೆನಿಸುತ್ತದೆ!

Toothbrush Using Tips
ಲೈಫ್‌ಸ್ಟೈಲ್1 hour ago

Toothbrush Using Tips: ನಿಮ್ಮ ಬ್ರಷ್‌ ಬದಲಿಸಿದ್ದು ಯಾವಾಗ ನೆನಪಿದೆಯಾ?

karnataka weather Forecast
ಮಳೆ2 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Puri Jagannath Temple
Latest3 hours ago

Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ14 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ17 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ18 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು20 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ22 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌