Site icon Vistara News

Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

Dhruva Sarja Gym Trainer Prashanth poojari twist

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದಂತಾಗಿದೆ. ಧ್ರುವ ಸರ್ಜಾ ಜತೆ ಹತ್ತಿರವಾಗಬೇಕು ಎಂದು ಅಟ್ಯಾಕ್‌ ನಡೆದಿತ್ತು ಎಂದು ತಿಳಿದು ಬಂದಿದೆ. ಈ ವಿಚಾರ ಗೊತ್ತಿಲ್ಲದೇ ದಕ್ಷಿಣ ವಿಭಾಗ ಡಿಸಿಪಿಗೆ ಧ್ರುವ ಸರ್ಜಾ ಕರೆ ಮಾಡಿದ್ದರು.

ಈ ಬಗ್ಗೆ ತನಿಖೆಗೆ ಇಳಿದ ಬನಶಂಕರಿ ಪೊಲೀಸರಿಂದ ಅಸಲಿ ಸತ್ಯ ಬಯಲಾಗಿದೆ. ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದು ಹರ್ಷ ಮತ್ತು ಸುಭಾಷ್. ಆದರೆ ಹಲ್ಲೆ ಮಾಡಿಸಿದ್ದು ಮಾತ್ರ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಮಾತ್ರವಲ್ಲ ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯು ಕೆಲಸ ಮಾಡುತ್ತಿದ್ದ. ಪ್ರಶಾಂತ್ ಪೂಜಾರಿ ಇತ್ತೀಚೆಗೆ ಧ್ರುವ ಸರ್ಜಾಗೆ ಆಪ್ತನಾಗ್ತಿದ್ದ. ಇದು ನಾಗೇಂದ್ರನಿಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ತಾನು ಹಲ್ಲೆ ಮಾಡಿದರೆ ಎಲ್ಲಿ ಹೊರಗೆ ಬರತ್ತೋ ಎಂದು ಹರ್ಷ ಮತ್ತು ಸುಭಾಷ್‌ಗೆ ಹಲ್ಲೆ ಮಾಡಲು ಹೇಳಿದ್ದ.

ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಆ ಬಳಿಕ ಪ್ರಶಾಂತ್ ಪೂಜಾರಿಗೆ ಹಲ್ಲೆ ಮಾಡಿದ್ದರು. ಸದ್ಯ ಬಂಧನ ಭೀತಿಯಿಂದ ಆರೋಪಿಗಳು ಜಾಮೀನು ಪಡೆದಿದ್ದಾರೆ. ಈಗ ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿಯಿಂದಲೂ ಪೊಲೀಸರಿಗೆ ಸಹಕಾರ ಸಿಗುತ್ತಿಲ್ಲ . ಹಲ್ಲೆಯಾದಾಗಲು ಪ್ರಶಾಂತ್ ಪೂಜಾರಿ ದೂರು ನೀಡಲು ಹಿಂದೇಟಾಕಿದ್ದರು. ಈಗ ಧ್ರುವ ಸರ್ಜಾರಿಂದಲೂ ಪೊಲೀಸರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಇನ್ನು ತಮ್ಮವರೇ ಎಂದು ನಟ ಧ್ರುವ ಸರ್ಜಾ ಸುಮ್ಮನಾಗಿದ್ದಾರೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

ಕಳೆದ ಮೇ 26 ರಂದು ರಾತ್ರಿ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆಯಾಗಿತ್ತು. ಧ್ರುವಾ ಸರ್ಜಾ ಮನೆಯಿಂದ ತೆರಳುತ್ತಿದ್ದ ವೇಳೆ ಪ್ರಶಾಂತ್ ಪೂಜಾರಿಗೆ ಹಲ್ಲೆಯಾಗಿತ್ತು. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

Exit mobile version