Shakhahaari Movie: ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಎಂದ ʻಶಾಖಾಹಾರಿʼ ನಟ ರಂಗಾಯಣ ರಘು! - Vistara News

ಸ್ಯಾಂಡಲ್ ವುಡ್

Shakhahaari Movie: ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಎಂದ ʻಶಾಖಾಹಾರಿʼ ನಟ ರಂಗಾಯಣ ರಘು!

Shakhahaari Movie: ಚಿತ್ರತಂಡ ನಿರೀಕ್ಷೆ ಮಟ್ಟದಲ್ಲಿ ಪ್ರೇಕ್ಷಕಪ್ರಭು ಥಿಯೇಟರ್‌ನತ್ತ ಹೆಜ್ಜೆ ಇಡುತ್ತಿಲ್ಲ ,ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನೆಮಾ ನೋಡಲು ಬರಲಿ ಎನ್ನುವ ಆಶಯವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆಗೊಂಡ ಶಾಖಾಹಾರಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತನ್ನು ಇಡೀ ಚಿತ್ರತಂಡ ತೊಡಿಕೊಂಡಿದೆ.

VISTARANEWS.COM


on

Don't wait for OTT, come to the theatre , said actor Shakhahaari Movie Rangayana Raghu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ (Shakhahaari Movie) ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ ರೋಚಕ ತಿರುವು, ಭಾವನಾತ್ಮಕ ಸಂಬಂಧ, ಪ್ರೀತಿ, ಸ್ನೇಹ, ನಂಬಿಕೆ ಇವೆಲ್ಲವುದರ ಬಗ್ಗೆ ಬಹಳ ಸೂಕ್ಷ್ಮವಾಗಿ ಪ್ರೇಕ್ಷಕರಿಗೆ ಮುಟ್ಟಿಸಿ ಎಲ್ಲಾ ರೀತಿಯ ರಸಾನುಭವ ನೀಡಿದೆ. ಇಷ್ಟು ಸಾಕಲ್ವಾ? ಪ್ರೇಕ್ಷಕರು ಬಯಸೋದು ಇದನ್ನೇ. ಕೊಟ್ಟ ಕಾಸಿಗೆ ಒಳ್ಳೆ ಎಂಟರ್ ಟೈನ್ಮೆಂಟ್ ಸಿಗಬೇಕು. ಚಿತ್ರ ಚೆನ್ನಾಗಿರಬೇಕು. ಅದೆಲ್ಲಾ ಕ್ವಾಲಿಟಿ ಶಾಖಾಹಾರಿ ಚಿತ್ರಕ್ಕಿದೆ. ಆದರೆ ಚಿತ್ರತಂಡ ನಿರೀಕ್ಷೆ ಮಟ್ಟದಲ್ಲಿ ಪ್ರೇಕ್ಷಕಪ್ರಭು ಥಿಯೇಟರ್‌ನತ್ತ ಹೆಜ್ಜೆ ಇಡುತ್ತಿಲ್ಲ ,ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನೆಮಾ ನೋಡಲು ಬರಲಿ ಎನ್ನುವ ಆಶಯವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆಗೊಂಡ ಶಾಖಾಹಾರಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತನ್ನು ಇಡೀ ಚಿತ್ರತಂಡ ತೊಡಿಕೊಂಡಿದೆ.

ರಂಗಾಯಣ ರಘು ಮಾತನಾಡಿ, ʻʻಹೊರಗಿನವರು ಜನ ಬಂದು ಎಲ್ಲರೂ ಚೆನ್ನಾಗಿ ಆಗಿದೆ ಅಂದರು. ಇದು ಕ್ಲಾಸ್ ಸಿನಿಮಾ ಎಂದು ನಾನು ಒಪ್ಪುವುದಿಲ್ಲ. ಒಳ್ಳೆ ಸಿನಿಮಾ ಎಂದು ಹೇಳುತ್ತೇನೆ. ಕ್ಲಾಸ್ ಮಾಸ್ ಹೋಗಿ ತುಂಬಾ ದಿನ ಆಗಿದೆ. ಒಳ್ಳೆ ಸಿನಿಮಾ. ದೊಡ್ಡ ದೊಡ್ಡವರ ಸಿನಿಮಾ ಎಂದಾಗ ಕೋಟಿ ಕೋಟಿ ಹಾಕುವ ನಿರ್ಮಾಪಕರು ಸಾಕಾಗುವುದಿಲ್ಲ. ಅದಕ್ಕೆ ಇದ್ದಾರೆ ಅವ್ರು ಮಾಡ್ತಾರೆ. ಸಣ್ಣ ಸಣ್ಣವರು ಮಾಡಿದಾಗ ಅದು ಸಮುದ್ರವಾಗುತ್ತದೆ. ನದಿ ಹರಿವೇ ಇಲ್ಲ ಅಂದರೆ ಸಮುದ್ರಕ್ಕೆ ಕಷ್ಟವಾಗುತ್ತದೆ. ಇದು ಒಳ್ಳೆ ಸಿನಿಮಾ ಎಂದು ಎಲ್ಲರೂ ಹೇಳುತ್ತಿದ್ದಾರೆ. ಒಟಿಟಿಗೆ ಬಂದ್ಮೇಲೆ ಮೆಚ್ಚಿಕೊಳ್ತಾರೆ ಗೊತ್ತಿಲ್ಲʼʼ ಎಂದರು.

ಇದನ್ನೂ ಓದಿ: Kannada New Movie: ’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್ : ಮಾ.15ಕ್ಕೆ ತೆರೆಗೆ!

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, ʻʻಇಷ್ಟು ಪಬ್ಲಿಸಿಟಿ ಮಾಡಿದರು ಯಾಕೆ ಜನಕ್ಕೆ ರೀಚ್ ಮಾಡಲು ಆಗುತ್ತಿಲ್ಲ. ನಾವು ಕ್ಲಾಸ್ ಸಿನಿಮಾ ಎಂದುಕೊಂಡು ಒಂದಷ್ಟು ಸೀಮಿತ ಜನಕ್ಕೆ ನಮ್ಮದೇ ಆದ ಒಂದು ಟಾರ್ಗೆಟ್ ಆಡಿಯನ್ಸ್ ಮಾಡಿಕೊಂಡೆವು. ಅದು ರಿಲೀಸ್ ಆದ್ಮೇಲೆ ಅದು ತೆಗೆದುಕೊಂಡ ವಿಸ್ತಾರ, ಜನರಿಗೆ ರೀಚ್ ಆಗಿದ್ದು ಇರಬಹುದು. ನಮ್ಮ ಸುತ್ತ ವಲಯದಲ್ಲಿ ಹೆಚ್ಚು ರೀಚ್ ಆಗಿದೆ. ಅದು ಬಿಟ್ಟು ಹೋಗಿಲ್ಲ ಎಂಬ ಕೊರಗು ಇತ್ತು. ಇದಾದ ಮೇಲೆ ಇತ್ತೀಚೆಗೆ ಬಂದ ವಿಮರ್ಷೆ ಆಗಿರಬಹುದು. ಥಿಯೇಟರ್ ಫಿಲ್ಲಿಂಗ್ ಇರಬಹುದು. ಈಗಲೂ 50 ರಿಂದ 60% ಆಕ್ಯೂಪೆನ್ಸಿ ಇದೆ. ನಿಮ್ಮ ಮೂಲಕ ಇನ್ನೂ ಹೆಚ್ಚು ಜನರಿಗೆ ರೀಚ್ ಆಗಬಹುದು. ನಿಮ್ಮ ಬೆಂಬಲ ಇರಬೇಕು. ನಮಗೆ ಎಲ್ಲಾ ಒಟಿಟಿ ಕಡೆಯಿಂದ ಆಫರ್ ಬಂದಿದೆʼʼ ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಒಂದು ಪುಟ್ಟ ಗ್ರಾಮದಲ್ಲಿ ನಡೆಯುವ ಬಲು ರೋಚಕವಾದ ಕಥೆ ‘ಶಾಖಾಹಾರಿ’ ಕಹಾನಿ. ಈ ಸಿನಿಮಾದ ಕಥಾನಾಯಕ ಸುಬ್ಬಣ್ಣ ಭಟ್ಟ್ ರಂಗಾಯಣ ರಘು ಒಂದು ವೆಜಿಟೇರಿಯನ್ ಹೋಟೆಲ್ ನಡೆಸುತ್ತಾನೆ. ಆದರೆ ಅಲ್ಲಿ ನಡೆಯುವ ಕೆಲವು ಘಟನೆಗಳಿಂದಾಗಿ ಶಾಕಾಹಾರಿ ಹೋಟೆಲ್ನ ಇಮೇಜ್ ‘ಶಾಖಾಹಾರಿ’ಯಾಗಿ ಬದಲಾಗುತ್ತದೆ. ಇಂಥ ಒಗಟಿನಂತಹ ಟೈಟಲ್ನ ಹಿಂದಿರುವ ಕಥೆ ಏನು ಎಂಬುದು ಸಿನಿಮಾದ ತಿರುಳು..

ಶಾಖಾಹಾರಿ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ. ಶಶಾಂಕ್ ನಾರಾಯಣ್ ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

Rishab shetty: ರಾಜ್ಯದ ಪ್ರಸಿದ್ಧ ಪ್ರವಾಸಿ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ಪೌರಾಣಿಕ (Rishab shetty) ಮಹತ್ವವಿದೆ.ಇದೀಗ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜತೆ ರಿಷಬ್‌ ಫೋಟೊ ಕ್ಲಿಕ್ಕಿಸಿಕೊಂಡರು.

VISTARANEWS.COM


on

Rishab shetty family visit Hariharpur Narasimhaswamy
Koo

ರಾಜ್ಯದ ಪ್ರಸಿದ್ಧ ಪ್ರವಾಸಿ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ಪೌರಾಣಿಕ (Rishab shetty) ಮಹತ್ವವಿದೆ.

ಇದೀಗ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.

ರಿಷಬ್ ದಂಪತಿ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದರು. ಜತೆಗೆ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜತೆ ರಿಷಬ್‌ ಫೋಟೊ ಕ್ಲಿಕ್ಕಿಸಿಕೊಂಡರು.

ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಇಲ್ಲಿ ದಕ್ಷಯಜ್ಞ ನಡೆದಿತ್ತಂತೆ. ಆಗ ಪರಶಿವನು ಯಜ್ಞಕುಂಡದಲ್ಲಿ ಆವಿರ್ಭವಿಸಿ ಸಮಸ್ತ ಭಕ್ತರನ್ನು ಅನುಗ್ರಹಿಸಿದನಂತೆ. ಇಂದಿಗೂ ದಕ್ಷಹರ ಸೋಮೇಶ್ವರನ ದೇವಸ್ಥಾನವು ಹರಿಹರಪುರದಲ್ಲಿದೆ. 

Continue Reading

ಸ್ಯಾಂಡಲ್ ವುಡ್

Kannada New Movie: ‘ಚಿಲ್ಲಿ ಚಿಕನ್’ ಟೀಸರ್‌ ಔಟ್‌: ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ ಇದು!

Kannada New Movie: ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ ಸಿನಿಮಾಗಳು ಸೌಂಡ್ ಮಾಡುತ್ತಿವೆ. ಅದರಂತೆ ಈ ಚಿತ್ರಕ್ಕಾಗಿ ಬೇರೆ ಬೇರೆ ರಾಜ್ಯಗಳ ಸಿನಿಮಾ ಪ್ರಿಯರು ಒಂದಾಗಿರುವುದು ವಿಶೇಷ. ಚಿತ್ರದ ನಿರ್ದೇಕರು ಕೇರಳ ಮೂಲದವರು. ನಿರ್ಮಾಪಕರು ಗುಜರಾತ್ ಹಾಗೂ ಕಲಾವಿದರು ಮಣಿಪುರ, ಮೇಘಾಲಯ, ಚೆನ್ನೈ ಹೀಗೆ ವಿವಿಧ ರಾಜ್ಯಗಳಿಂದ ಬಂದವರಾಗಿದ್ದಾರೆ.

VISTARANEWS.COM


on

Kannada New Movie Chilli Chicken Teaser Out
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾ (Kannada New Movie) ‘ಚಿಲ್ಲಿ ಚಿಕನ್’. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ದುಡಿಯಲು ಬೆಂಗಳೂರಿಗೆ ಬಂದ ಹುಡುಗರ ಕಥೆ ಇದು. ಹೌದು ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡು ತಾವೇ ಹೊಸದಾಗಿ ಚೈನೀಸ್ ರೆಸ್ಟೋರೆಂಟ್ ಪ್ರಾರಂಭಿಸಲು ಮುಂದಾದಾಗ ಏನೆಲ್ಲಾ ಕಷ್ಟಗಳನ್ನು ಎದುರಿಸುತ್ತಾರೆ? ಆ ಎಲ್ಲ ತೊಂದರೆಗಳಿಂದ ಪಾರಾಗಿ ಗೆಲ್ಲುತ್ತಾರಾ! ಎಂಬುದು ಸಿನಿಮಾದ ಕಥಾ ಹಂದರ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ ಸಿನಿಮಾಗಳು ಸೌಂಡ್ ಮಾಡುತ್ತಿವೆ. ಅದರಂತೆ ಈ ಚಿತ್ರಕ್ಕಾಗಿ ಬೇರೆ ಬೇರೆ ರಾಜ್ಯಗಳ ಸಿನಿಮಾ ಪ್ರಿಯರು ಒಂದಾಗಿರುವುದು ವಿಶೇಷ. ಚಿತ್ರದ ನಿರ್ದೇಕರು ಕೇರಳ ಮೂಲದವರು. ನಿರ್ಮಾಪಕರು ಗುಜರಾತ್ ಹಾಗೂ ಕಲಾವಿದರು ಮಣಿಪುರ, ಮೇಘಾಲಯ, ಚೆನ್ನೈ ಹೀಗೆ ವಿವಿಧ ರಾಜ್ಯಗಳಿಂದ ಬಂದವರಾಗಿದ್ದಾರೆ.

ಟೀಸರ್ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ದೀಪ್ ಭೀಮಾಜಿಹಾನಿ ಮಾತಾಡಿ ʻʻನಾವು ಈ ಚಿತ್ರವನ್ನು ಕನ್ನಡದಲ್ಲಿ ಮಾತ್ರ ಶುರು ಮಾಡಿದ್ದು ಜೂನ್ ನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ.‌ ನಾನು ಹವ್ಯಾಸಿ ನಿರ್ಮಾಪಕನಾಗಿ ಹಿಂದಿಯಲ್ಲಿ ಒಂದಿಷ್ಟು ಶಾರ್ಟ್ ಫಿಲ್ಮ್ ಗಳನ್ನು ನಿರ್ಮಾಣ ಮಾಡಿದ್ದೇನೆ’ʼ ಎನ್ನುವರು.

ಇದನ್ನೂ ಓದಿ: Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

ಅಂದಂಗೆ ಚಿತ್ರವನ್ನು ಪ್ರತೀಕ್ ಪ್ರಜೋಶ್ ನಿರ್ದೇಶನ ಮಾಡಿದ್ದು ಇವರು ‘ಪದ್ಮಾವತ್’ ಸೇರಿದಂತೆ ಹಿಂದಿ, ಮಲಯಾಳಂ, ಗುಜರಾತಿ ಸೇರಿದಂತೆ ಹಲವು ಭಾಷೆ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಜತೆಗೆ ಕೆಲವು ಶಾರ್ಟ್ ಫಿಲ್ಮ್ ಮಾಡಿದ್ದು, ಇದೀಗ ಮೊದಲಬಾರಿ ‘ಚಿಲ್ಲಿ ಚಿಕನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಬಗ್ಗೆ ಮಾಹಿತಿ ನಿಡುವ ನಿರ್ದೇಶಕರು ‘ನಾನು ಮೂಲತಃ ಕೇರಳದವನು. ನನ್ನ ತಂದೆ ಕನ್ನಡದವರು. ಇಲ್ಲಿಯ ಜನ ಹಾಗೂ ಪರಿಸರ ನಂಗೆ ತುಂಬಾ ಇಷ್ಟ. ಬೆಂಗಳೂರನಲ್ಲಿ ಶಿಕ್ಷಣ ಪಡೆದಿದ್ದು, ಈಗ ಬೆಂಗಳೂರಿನಲ್ಲಿ ಫ್ಯಾಮಿಲಿ ಸಮೇತ ಸೆಟಲ್ ಆಗಿದ್ದೇನೆ. ಸಿನಿಮಾ ಬಗ್ಗೆ ಹೇಳುವುದಾದರೆ, ನಾಲ್ಕು ಜನ ಉತ್ತರ ಭಾರತೀಯರು ಸೇರಿ ಬೆಂಗಳೂರಿನಲ್ಲಿ ಚೈನಿಸ್ ರೆಸ್ಟೋರೆಂಟ್ ವೊಂದನ್ನು ಪ್ರಾರಂಭ ಮಾಡಲು ಪ್ಲ್ಯಾನ್ ಮಾಡಿಕೊಂಡಿರುತ್ತಾರೆ. ಅದು ಆಗುತ್ತಾ, ಇಲ್ವಾ ಅನ್ನೋದೆ ಸಿನಿಮಾ. ಇದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು,‌ ಬಹಳ ಇಂಟರೆಸ್ಟ್ ಆಗಿ ಕಥೆ ಸಾಗುತ್ತದೆ. ತಂಡದ ಶ್ರಮ ತುಂಬಾ ಇದ್ದು, ಬೆಂಗಳೂರು ಹಾಗೂ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಕೊರಿಯನ್ ಡ್ರಾಮಾ ಮಾದರಿಯಲ್ಲಿ ಸಿನಿಮಾ ಇದ್ದು, ನಾವು ಕನ್ನಡ ಡ್ರಾಮಾ ಸಿನೆಮಾ ಎನ್ನಬಹುದು’ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ನಂತರ ನಟ ಶೃಂಗಾ ಮಾತನಾಡಿ ‘ನಾನು ಇದರಲ್ಲಿ ಆದರ್ಶ ಎಂಬ ಪಾತ್ರದಲ್ಲಿ ಹೊಟೇಲ್ ಮಾಲಿಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ತುಂಬಾ ಸೂಕ್ಷ್ಮವಾದ ಅಂಶಗಳನ್ನು ಅಚ್ಚುಕಟ್ಟಾಗಿ ವ್ಯೂಮರಸ್ ಕಾಮಿಡಿ ಮೂಲಕ ಹೇಳಲಾಗಿದೆ. ಬೇರೆ ರಾಜ್ಯದಿಂದ ಬಂದ ಹುಡುಗರು ಕೆಲಸ ಮಾಡಿಕೊಂಡು ರೆಸ್ಟೋರೆಂಟ್ ಪ್ರಾರಂಭ ಮಾಡುವಾಗ ಏನೆಲ್ಲಾ ಕಷ್ಟಗಳನ್ನು ಎದುರಿಸುತ್ತಾರೆ, ನಾವು ಬೇರೆಯವರನ್ನು ಹೇಗೆ ನೋಡುತ್ತೇವೆ ಮತ್ತು ಅವರು ನಮ್ಮೊಂದಿಗೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದನ್ನು ತೋರಿಸಲಾಗಿದೆ’ ಎನ್ನುವರು.

ನಟಿ ರಿನಿ ಮಾತನಾಡಿ ‘ಉತ್ತರ ಭಾರತೀಯ ಹುಡುಗಿ ಅನು ಪಾತ್ರ ಮಾಡಿದ್ದೇನೆ. ನಾನು ಚೆನ್ನೈ ಮೂಲದವಳು. ತಮಿಳು, ತೆಲಗು, ಮಲಯಾಳಂ ಸಿನಿಮಾ ಮಾಡಿದ್ದೇನೆ’ ಎಂದರು. ಮತ್ತೋರ್ವ ನಟಿ ನಿತ್ಯಶ್ರೀ ‘ನಾನು ವರ್ಷ ಹೆಸರಿನಲ್ಲಿ ನಾಯಕನ ಗರ್ಲ್‌ ಫ್ರೆಂಡ್ ಆಗಿ ಕಾಣಿಸಿಕೊಂಡಿದ್ದೇ’ ಎಂದು ಹೇಳಿದರು.

ಮೆಟನೋಯ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ದೀಪ್ ಭೀಮಾಜಿಹಾನಿ ಹಾಗೂ ಸುಧಾ ನಂಭಿಯಾರ್ ನಿರ್ಮಾಣದ ಚಿತ್ರಕ್ಕೆ ಸಿದ್ದಾಂತ್ ಸುಂದರ್ ಸಂಗೀತ, ಶ್ರೀಶ್ ತೋಮರ್ ಛಾಯಾಗ್ರಹಣ, ಆಶಿಕ್ ಕೆ.ಎಸ್ ಸಂಕಲನವಿದೆ. ತಾರಾಗಣದಲ್ಲಿ ಬಿಜು ತಾಂಜಿಂ, ವಿಕ್ಟರ್ ತೋಡಂ, ಜಿಂಪಾ ಭುಟಿಯಾ, ಟಾಮ್ ಥಿನ್ ಥೋಕ್ ಚೋಮ್, ಹಿರಾಕ್ ಸೋನಾವಾಲ್, ಪದ್ಮಜಾ ರಾವ್ ಮುಂತಾದವರು ಅಭಿನಯ ಮಾಡಿದ್ದಾರೆ.

Continue Reading

ಸಿನಿಮಾ

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Drone Prathap: ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Drone Prathap Helping People To Get Eye Surgery on Birthday
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದಾರೆ ಡ್ರೋನ್ ಪ್ರತಾಪ್.

ಇದೀಗ ಪ್ರತಾಪ್‌ ಫ್ಯಾನ್ಸ್‌ ʻಬಿಗ್ ಬಾಸ್ ಅಲ್ಲಿ ನಿಂಗೆ ವೋಟ್ ಮಾಡಿದ್ದಕ್ಕೂ ಸಾರ್ಥಕ ಆಯ್ತುʼಎಂದು ಕಮೆಂಟ್‌ ಮಾಡಿದ್ದಾರೆ. ʻʻಪ್ರತಾಪ್‌ ಬಡವರ ಪಾಲಿನ ದೇವರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

ಇನ್ನು ಕೆಲವರು ತಾವೂ ಸಹ ನಿಮ್ಮೊಂದಿಗೆ ಈ ಸೇವಾ ಕಾರ್ಯದಲ್ಲಿ ಜೊತೆಯಾಗುವುದಾಗಿ ಹೇಳಿದ್ದಾರೆ. ಕೆಲವರು, ಅಗತ್ಯ ಇರುವವರ ಮೊಬೈಲ್ ಸಂಖ್ಯೆ, ವಿಳಾಸಗಳನ್ನು ಕಮೆಂಟ್ ಸೆಕ್ಷನ್​ನಲ್ಲಿ ಹಾಕಿದ್ದಾರೆ. ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಸ್ಯಾಂಡಲ್ ವುಡ್

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Meghana Raj: ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

VISTARANEWS.COM


on

Meghana Raj Mother Day Gift Shopping to mother
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ (Actress Meghana Raj) ಹೊಸ ಯುಟ್ಯೂಬ್‌ ಚಾನೆಲ್ ಶುರು ಮಾಡಿರುವುದು ಗೊತ್ತೇ ಇದೆ. ಪುತ್ರ ರಾಯನ್ ರಾಜ್ ಸರ್ಜಾ, ಪ್ರಮೀಳಾ ಜೋಶಾಯ್ ಹಾಗೂ ಸುಂದರ್ ರಾಜ್ ಜತೆ ಹಲವಾರು ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದಾರೆ. ಇದೀಗ ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

ಯುಟ್ಯೂಬ್‌ನಲ್ಲಿ ಮೇಘನಾ ರಾಜ್‌ ಅವರು ಈ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ನನ್ನ ತಾಯಿ ಹೆಚ್ಚಾಗಿ ಬಂಗಾರದ ಉಂಗರವನ್ನು ಹಾಕಿಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಚಿನ್ನದ ಓಲೆ ಅವರಿಗೆ ಗಿಫ್ಟ್‌ ನೀಡಬೇಕು ಅಂದುಕೊಂಡಿದ್ದೆ. ಮದರ್ಸ್‌ ಡೇಗೆ ಗಿಫ್ಟ್‌ ಕೊಡುವಾಗ ಹೆಣ್ಣು ಮಕ್ಕಳು ಹೇಗೆ ಲೆಕ್ಕಾ ಮಾಡುತ್ತಾರೆ ಅಂದ್ರೆ ಅಮ್ಮನಿಗೆ ಅದು ಕೊಟ್ಟರೆ ನಾವೂ ಬಳಸಬಹುದು ಅನ್ನೋ ಮಲ್ಟಿಪರ್ಪಸ್‌ ಆಲೋಚನೆಯಲ್ಲಿ ಕೊಡಿಸುತ್ತಿರುವೆʼʼಎಂದು ಗಿಫ್ಟ್‌ ಬಾಕ್ಸ್‌ ಅಮ್ಮನ ಕೈಗೆ ಕೊಟ್ಟರು ಮೇಘನಾ. ಬಾಕ್ಸ್‌ ನೋಡಿ ಗೆಸ್‌ ಮಾಡಲು ಶುರು ಮಾಡುವ ಪ್ರಮೀಳಾ ಜೋಷಾಯಿ ಇದು ಲಿಪ್‌ಸ್ಟಿಕ್‌ ಇದು ರಿಂಗ್ ಇದು ಕಾಲಿ ಡಬ್ಬ ಎಂದು ಗೆಸ್‌ ಮಾಡುತ್ತಾರೆ. ಆಮೇಲೆ ಚಿನ್ನದ ಅಂಗಡಿ ಹೆಸರು ಓದಿ ಮೌನಿಯಾಗಿ ಬಿಡುತ್ತಾರೆ.

ಇದನ್ನೂ ಓದಿ: Meghana Raj: ಚಿರು ಕೊನೆ ಚಿತ್ರ ಅಲ್ಲ ಎಂದ ಮೇಘನಾ ರಾಜ್‌; ಧ್ರುವ ಸರ್ಜಾ ಭಾವುಕ ಮಾತು!

ಕಿವಿ ಓಲೆ ನೋಡಿದ ಕೂಡಲೇ ಭಾವುಕರಾದರು ಪ್ರಮೀಳಾ. ಜತೆಗೆ ಮಗಳಿಗೆ ನಾನೇ ಈ ವರ್ಷ ಏನು ಗಿಫ್ಟ್‌ ಕೊಟ್ಟಿಲ್ಲ ಎಂದು ಭಾವುಕರಾದರು. ಕೆಲವು ದಿನಗಳ ಹಿಂದೆ ಮೇಘನಾ ರಾಜ್‌ ವಕೇಶನ್‌ ಮೂಡ್‌ನಲ್ಲಿರುವ ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದರು ಮೇಘನಾ ರಾಜ್‌ ಯುಟ್ಯೂಬ್‌ನಲ್ಲಿ ಈಗೀಗ ಸಖತ್‌ ಬ್ಯುಸಿಯಾಗಿದ್ದಾರೆ.

ಮೇಘನಾ ರಾಜ್​ ಬದುಕಲ್ಲಿ 2020 ಕೆಟ್ಟವರ್ಷ. ಅವರು ಐದು ತಿಂಗಳ ಗರ್ಭಿಣಿಯಾಗಿದ್ದಾಗಲೇ, ಪತಿ ಚಿರಂಜೀವಿ ಸರ್ಜಾರನ್ನು ಕಳೆದು ಕೊಂಡರು. 2020ರ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದಾದ ಬಳಿಕ ಮಗ ರಾಯನ್​ ಹುಟ್ಟಿದ. ಬಳಿಕ ʻತತ್ಸಮ ತದ್ಭವʼ ಸಿನಿಮಾ ಮೂಲಕ ತೆರೆಗೆ ಮತ್ತೆ ಬಂದರು ನಟಿ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

Continue Reading
Advertisement
Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್15 mins ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್20 mins ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ26 mins ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್37 mins ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

AR Rahman says his mother thought his Oscar statuettes were made of gold
ಬಾಲಿವುಡ್40 mins ago

AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Phone tapping case Let Ashok file a complaint to Home Minister DK Shivakumar hits back at phone tapping allegations
ರಾಜಕೀಯ50 mins ago

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Cannes 2024 Chidananda S Naik bows in Cannes with Kannada folk tale
ಸಿನಿಮಾ60 mins ago

Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

Turbulence
ವಿದೇಶ1 hour ago

Singapore Airlines: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ: ಇಲ್ಲಿದೆ ನೋಡಿ ಭೀಕರತೆಯನ್ನು ಸಾರುವ ಫೋಟೊಗಳು

MDH, Everest Spices
ದೇಶ2 hours ago

MDH, Everest Spices: ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳಲ್ಲಿ ಮಾರಕ ರಾಸಾಯನಿಕ ಇಲ್ಲ; FSSAI ವರದಿಯಲ್ಲಿ ಬಯಲು

drink and drive RTO check
ಬೆಂಗಳೂರು2 hours ago

Drink and Drive: ಕುಡಿದು ವಾಹನ ಓಡಿಸಿದರೆ ಎರಡೆರಡು ಕಡೆ ಸಿಕ್ಕಿಹಾಕಿಕೊಳ್ತೀರಿ ಹುಷಾರ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌