Duniya Vijay: ರಾಜ್ಯಾದ್ಯಂತ `ಭೀಮ' ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌! - Vistara News

ಸ್ಯಾಂಡಲ್ ವುಡ್

Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

Duniya Vijay: ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

Duniya Vijay Bheema Movie Release today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಡೊಳ್ಳಿನ ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ ಬ್ಲಾಕ್ ಕೋಬ್ರಾ ಫ್ಯಾನ್ಸ್. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ.

‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ.  ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.‘ಭೀಮ’ ಸಿನಿಮಾ ಆಗಸ್ಟ್ 9ರಂದು ತೆರೆಗೆ ಬರಲಿದೆ. ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಹೆಚ್ಚಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

Actor Yash: ಡ್ಯಾನ್ಸ್ ಚೆನ್ನಾಗಿ ಮಾಡಿದ್ದೀರಿ, ಸಖತ್ ಆಗಿತ್ತು. ಬೆಳೆಯುವವರಿಗೆ ಬೆನ್ನು ತಟ್ಟೋದು ಮುಖ್ಯ. ಶಿವಣ್ಣ ಅವರೇ ನಮಗೆ ಸ್ಪೂರ್ತಿ. ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ” ಎಂದು ಯಶ್ ಅವರು ಫೋನ್ ಕರೆಯಲ್ಲಿ ಹೇಳಿದ್ದಾರೆ.

VISTARANEWS.COM


on

Actor Yash called the actor that if you grow beyond all of us dance karnataka dance
Koo

 ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋ ವೇದಿಕೆಯಲ್ಲಿ ನಟ ಧನುಷ್ ಅವರು ಕಳೆದ ಬಾರಿ ‘ರಾಕಿಂಗ್ ಸ್ಟಾರ್’ ಯಶ್ (Actor Yash) ಅವರ ‘ಕೆಜಿಎಫ್’ ಸಿನಿಮಾದ ‘ಧೀರ ಧೀರ ಸುಲ್ತಾನ’ ಹಾಡಿಗೆ ಡ್ಯಾನ್ಸ್ ಮಾಡಿದ್ದರು.

ಇದೀಗ ʻಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಕಂಠಿ ಪಾತ್ರಧಾರಿ ನಟ ಧನುಷ್ ಅವರಿಗೆ ‘ರಾಕಿಂಗ್ ಸ್ಟಾರ್’ ಯಶ್ ಅವರು ಫೋನ್ ಕರೆ ಮಾಡಿ ಮಾತನಾಡಿದ್ದಾರೆ.

ಡ್ಯಾನ್ಸ್‌ ನೋಡಿ ಶಿವಣ್ಣ ಅವರು ಧನುಷ್‌ಗೆ ನಿಮ್ಮ ಡ್ಯಾನ್ಸ್‌ ಬಗ್ಗೆ ಯಶ್‌ ಅವರಿಗೆ ಕರೆ ಮಾಡಿ ಹೇಳುತ್ತೇನೆ ಎಂದಿದ್ದರು. ಇದೀಗ ಯಶ್‌ ಅವರೇ ಧನುಷ್‌ ಅವರಿಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Actor Yash: ಸರಳವಾಗಿ ಜರುಗಿತು ಯಶ್‌ ʻಟಾಕ್ಸಿಕ್‌ʼ ಸಿನಿಮಾ ಮುಹೂರ್ತ: ಫೋಟೊಗಳು ವೈರಲ್‌!

“ಡ್ಯಾನ್ಸ್ ಚೆನ್ನಾಗಿ ಮಾಡಿದ್ದೀರಿ, ಸಖತ್ ಆಗಿತ್ತು. ಬೆಳೆಯುವವರಿಗೆ ಬೆನ್ನು ತಟ್ಟೋದು ಮುಖ್ಯ. ಶಿವಣ್ಣ ಅವರೇ ನಮಗೆ ಸ್ಪೂರ್ತಿ. ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ” ಎಂದು ಯಶ್ ಅವರು ಫೋನ್ ಕರೆಯಲ್ಲಿ ಹೇಳಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಡ್ಯಾನ್ಸ್ ಬರದ ಸೆಲೆಬ್ರಿಟಿಗಳು, ಪ್ರೊಫೆಶನಲ್ ಡ್ಯಾನ್ಸರ್‌ಗಳ ಜೊತೆ ಸೇರಿಕೊಂಡು ಡ್ಯಾನ್ಸ್ ಮಾಡುತ್ತಿದ್ದಾರೆ. 

Continue Reading

ಪ್ರಮುಖ ಸುದ್ದಿ

Vinesh Phogat: ಪ್ರಕಾಶ್‌ ರೈ ವಿರುದ್ಧ ಅಹಿಂಸಾ ಚೇತನ್‌ ಕಿಡಿ; ಮೋದಿ ಪರ ಬ್ಯಾಟಿಂಗ್ ಮಾಡಿ ʼರೈ ಅಜ್ಞಾನಿʼ ಎಂದ ನಟ

Vinesh Phogat: ʼಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ. ಅವರ ಈ ಟ್ವೀಟ್‌ಗೆ ಕಾರಣವಾಗಿರುವುದು, ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಪ್ರಕಾಶ್‌ ರೈ ಮಾಡಿರುವ ಒಂದು ಪೋಸ್ಟ್.

VISTARANEWS.COM


on

vinesh phogat praksah raj ahimsa chetan
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್‌ ಅಹಿಂಸಾ (Chetan Ahimsa), ಇದೀಗ ಮೋದಿಯವರ ಪರ ಸೋಶಿಯಲ್‌ ಮೀಡಿಯಾ (Social Media) ಪೋಸ್ಟ್‌ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್‌ ಫೋಗಟ್‌ (Vinesh Phogat) ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ (Prakash raj) ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ.

50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ. ಅದರಲ್ಲೂ ಮೋದಿ ಪರ ನಿಂತ ಅಹಿಂಸಾ ಚೇತನ್​ ನಿಲುವು ನೋಡಿ ತುಂಬಾ ಮಂದಿ ಅಚ್ಚರಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪ್ರಕಾಶ್​ ರಾಜ್​ ಕಾರ್ಟೂನ್​ ಶೇರ್ ಮಾಡಿಕೊಂಡಿದ್ದರು. ಇದರಲ್ಲಿ ಕುಸ್ತಿಪಟು ವಿನೇಶ್​ ಫೋಗಟ್ ಅವರು ನಿಂತಿರುವ ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಮ್ ತೂಕ ಹೆಚ್ಚಾಗುವಂತೆ ಮಾಡಿದ್ದಾರೆ. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿದೆ. ಮೋದಿಯೇ ವಿನೇಶ್ ಫೋಗಟ್ ಕುಸ್ತಿ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂದು ಅರ್ಥ ಬರುವಂತೆ ಈ ಟ್ವೀಟ್ ಶೇರ್ ಮಾಡಿದ್ದರು.

ಇದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್​ ಕಿಡಿಕಾರಿದ್ದಾರೆ. ʼವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತದೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ.

ಇಬ್ಬರು ನಟರ ಈ ಟ್ವೀಟ್ಟ್‌ಗಳು ಇದೀಗ ವೈರಲ್ ಆಗುತ್ತಿವೆ. ನೆಟ್ಟಿಗರು ಚೇತನ್ ಕಮೆಂಟ್​ಗೂ ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್​ ಕೆಟ್ಟ ಹೋರಾಟಗಾರ ಎನ್ನುವುದು ಸರಿಯಲ್ಲ ಎಂದಿದ್ದಾರೆ. ವಿನೇಶ್ ಫೋಗಟ್ ಅನರ್ಹತೆಗೆ ಪ್ರಕಾಶ್ ರಾಜ್ ಎಲ್ಲಿಯೂ ಮೋದಿ ಹೆಸರನ್ನು ಮೆನ್ಷನ್ ಮಾಡಿಲ್ಲ. ಆದರೆ ನೀವೇ ಮೋದಿ ಎಳೆದು ತಂದಿದ್ದೀರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಕುಸ್ತಿ ಪಂದ್ಯಾಟದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ 100 ಗ್ರಾಮ್‌ಗಳ ಹೆಚ್ಚುವರಿ ತೂಕದಿಂದಾಗಿ ಪ್ಯಾರಿಸ್ ಒಲಿಂಪಿಕ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್‌ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ತಮ್ಮ ಅರ್ಧ ವರ್ಷದ ತರಬೇತಿಯನ್ನು ಕಳೆದುಕೊಂಡಿದ್ದ ವಿನೇಶ್, ತಮಗೆ ದೊರಕಿದ್ದ ಅತ್ಯಲ್ಪ ಸಮಯದಲ್ಲಿಯೇ ತರಬೇತಿ ಪಡೆದುಕೊಂಡು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಜೊತೆಗೆ ದೇಶಕ್ಕಾಗಿ ಪದಕ ಗೆಲ್ಲುವ ಮಹದಾಸೆ ಇರಿಸಿಕೊಂಡಿದ್ದರು.

ಇದನ್ನೂ ಓದಿ: Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Continue Reading

ಕರ್ನಾಟಕ

Kannada New Movie: ಜಯ್ ಶೆಟ್ಟಿ ಅಭಿನಯದ ʼಸತ್ವಿʼ ಸಿನೆಮಾ ಪೋಸ್ಟರ್ ರಿಲೀಸ್‌

Kannada New Movie: ʼಸಂಭವಾಮಿ ಯುಗೇಯುಗೇʼ ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ನಾಯಕನಾಗಿ‌ ನಟಿಸುತ್ತಿರುವ “ಸತ್ವಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ “ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ನಾಯಕನಾಗಿ‌ ನಟಿಸುತ್ತಿರುವ “ಸತ್ವಿ” ಚಿತ್ರದ (Kannada New Movie) ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಡೇವಿಡ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ಸಂಭವಾಮಿ ಯುಗೇಯುಗೇ” ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಹಾಗೂ ಹಲವು ಖಾಸಗಿ ವಾಹಿನಿಗಳಿಗೂ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ರವೀಶ್ ಆತ್ಮಾರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌. ಇದು ರವೀಶ್ ಅವರಿಗೆ ಮೊದಲ ನಿರ್ದೇಶನದ ಚಿತ್ರ.

ಇದನ್ನೂ ಓದಿ: Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

ಇದು 1935ರಿಂದ 2024ರವರೆಗಿನ ಕಾಲಘಟ್ಟದ ಕಥೆಯಾಗಿರುತ್ತದೆ‌. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಆದರೆ ಅಡ್ವೆಂಚರ್ಸ್‌ಗೆ ಹೆಚ್ಚು ಒತ್ತು ಕೊಡಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. “ಸಂಭಾವಮಿ ಯುಗೇಯುಗೇ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಇರುತ್ತಾರೆ.‌ ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಯನ ನಟಿಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ರವೀಶ್ ಆತ್ಮಾರಾಮ್ ತಿಳಿಸಿದ್ದಾರೆ‌.

Continue Reading

ಸ್ಯಾಂಡಲ್ ವುಡ್

Kannada New Movie: ‘ಮರ್ಫಿ’ ಸಿನಿಮಾದ ಹಾಡು ಬಿಡುಗಡೆ; ಸಮಯ ಸ್ಮರಿಸಿದ ಪ್ರಭು ಮುಂಡ್ಕೂರ್!

Kannada New Movie: BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

Kannada New Movie Samaya Lyrical Murphy Roshini Varma Rajat Hegde
Koo

ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಪ್ರಭು ಮುಂಡ್ಕೂರ್ ನಟನೆಯ ʻಮರ್ಫಿʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟಂಬರ್ 27ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯಗಳಿಗೆ ಚಾಲನೆ ಕೊಡಲಾಗಿದೆ. ಮರ್ಫಿ ಅಂಗಳದಿಂದ ಸಮಯ ಎಂಬ ಮನಮೋಹಕ ಹಾಡು ಬಿಡುಗಡೆ ಮಾಡಲಾಗಿದೆ. ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಗೀತೆಗೆ ಧನಂಜಯ್ ರಂಜನ್ ಪದ ಗೀಚಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದಾರೆ. ನಾಯಕ ಪ್ರಭು ಮುಂಡ್ಕೂರ್, ನಾಯಕಿಯರಾದ ರೋಶಿನಿ ಪ್ರಕಾಶ್ ಹಾಗೂ ಇಳಾ ವೀರಮಲ್ಲ ಹಾಡಿನಲ್ಲಿ ಮಿಂಚಿದ್ದಾರೆ.

BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್ ಕ್ಯಾಮೆರಾ ಹಿಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ನಡಿ ರಾಮ್ ಕೋ ಸೋಮಣ್ಣ ಹಾಗೂ ಬಿಎಸ್ ಪಿ ವರ್ಮಾ ಮರ್ಫಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯು ಸರ್ಟಿಫಿಕೇಟ್ ಪಡೆದು ಸೆನ್ಸಾರ್ ಪಾಸಾಗಿರುವ ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಎಮೋಷನಲ್ ಅಂಶಗಳನ್ನು ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಮನೆಮಂದಿಯಲ್ಲಾ ಕುಳಿತು ನೋಡುವಂತಹ ಒಂದು ನೀಟಾದ ಸಿನಿಮಾ ಎನ್ನುವುದು ಚಿತ್ರತಂಡ ಅಭಿಪ್ರಾಯ. ಇನ್ನು ಮರ್ಫಿಯಲ್ಲಿ ಏಳು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಪಕ್ಕ ಸೆಪ್ಟಂಬರ್ 27ರಂದು ರಾಜ್ಯಾದ್ಯಂತ ಮರ್ಫಿ ಸಿನಿಮಾ ಬೆಳ್ಳಿಪರದೆಗೆ ಎಂಟ್ರಿ ಕೊಡಲಿದೆ.

Continue Reading
Advertisement
Theft Case
ಬೆಂಗಳೂರು4 mins ago

Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

Actor Yash called the actor that if you grow beyond all of us dance karnataka dance
ಸ್ಯಾಂಡಲ್ ವುಡ್10 mins ago

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

bangalore traffic signal
ಪ್ರಮುಖ ಸುದ್ದಿ12 mins ago

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Vinesh Phogat
ಕ್ರೀಡೆ30 mins ago

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Manish Sisodia
ದೇಶ40 mins ago

Manish Sisodia: ದೆಹಲಿ ಅಬಕಾರಿ ನೀತಿ ಅಕ್ರಮ: ಮನೀಶ್‌ ಸಿಸೋಡಿಯಾಗೆ ಜಾಮೀನು

Antim Panghal
ಕ್ರೀಡೆ1 hour ago

Antim Panghal: 3 ವರ್ಷ ನಿಷೇಧ ಶಿಕ್ಷೆಯಿಂದ ಪಾರಾದ ಕುಸ್ತಿಪಟು ಅಂತಿಮ್‌ ಪಂಘಲ್‌

train service
ಹಾಸನ1 hour ago

Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ದೇಶ1 hour ago

Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

ಪ್ರಮುಖ ಸುದ್ದಿ2 hours ago

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

Laapataa Ladies to be screened in Supreme Court
ಬಾಲಿವುಡ್2 hours ago

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ19 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ21 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ22 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌