Ganesh-Duniya Vijay: ತಮಿಳುನಾಡಿನಲ್ಲಿ 'ಭೀಮ', 'ಕೃಷ್ಣಂ ಪ್ರಣಯಸಖಿ' ಹೌಸ್‌ಫುಲ್! - Vistara News

ಸ್ಯಾಂಡಲ್ ವುಡ್

Ganesh-Duniya Vijay: ತಮಿಳುನಾಡಿನಲ್ಲಿ ‘ಭೀಮ’, ‘ಕೃಷ್ಣಂ ಪ್ರಣಯಸಖಿ’ ಹೌಸ್‌ಫುಲ್!

Ganesh-Duniya Vijay: ಕರ್ನಾಟಕ ಮಾತ್ರವಲ್ಲದೇ ತಮಿಳುನಾಡಿನಲ್ಲೂ ‘ಭೀಮ’ ಹಾಗೂ ‘ಕೃಷ್ಣಂ ಪ್ರಣಯಸಖಿ’ ಸಿನಿಮಾಗಳು ಯಶಸ್ವಿ ಪ್ರದರ್ಶನ ಕಾಣುತ್ತಿವೆ ಎಂದು ವರದಿಯಾಗಿದೆ. ಕರ್ನಾಟಕದ ಗಡಿಯ ಹೊಸೂರಿನ ‘ಗ್ರ್ಯಾಂಡ್ ಸಿನಿಮಾಸ್’ ಚಿತ್ರಮಂದಿರದಲ್ಲಿ ಬೇಡಿಕೆಗೆ ತಕ್ಕಂತೆ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಾಗುತ್ತದೆ.

VISTARANEWS.COM


on

Ganesh Duniya Vijay bheema and krishnam pranaya sakhi films witnesses good response
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಭೀಮ’ (Duniya Vijay) ಹಾಗೂ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗಳು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುತ್ತಿವೆ. ಎರಡೂ ಸಿನಿಮಾಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.ಆಗಸ್ಟ್ 9ಕ್ಕೆ ತೆರೆಕಂಡ ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಭೀಮ’ ಸಿನಿಮಾ ಸಖತ್‌ ಕಲೆಕ್ಷನ್‌ ಮಾಡುತ್ತಿದೆ. ಮೊದಲ ವಾರವೇ ಸಿನಿಮಾ ಕಲೆಕ್ಷನ್ 15 ಕೋಟಿ ರೂ. ದಾಟಿತ್ತು. ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಬಂದ ‘ಕೃಷ್ಣಂ ಪ್ರಣಯ ಸಖಿ’ ಕೂಡ ಫ್ಯಾಮಿಲಿ ಆಡಿಯನ್ಸ್‌ನ ಸೆಳೆಯುತ್ತಿದೆ. ವೀಕೆಂಡ್‌ನಲ್ಲಿ ಸಿನಿಮಾ ಕೆಲವೆಡೆ ಹೌಸ್‌ಫುಲ್ ಪ್ರದರ್ಶನ ಕಂಡಿದೆ. 4 ದಿನಕ್ಕೆ 6 ಕೋಟಿ ರೂ.ಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿ ಸದ್ದು ಮಾಡುತ್ತಿದೆ.

ಕರ್ನಾಟಕ ಮಾತ್ರವಲ್ಲದೇ ತಮಿಳುನಾಡಿನಲ್ಲೂ ‘ಭೀಮ’ ಹಾಗೂ ‘ಕೃಷ್ಣಂ ಪ್ರಣಯಸಖಿ’ ಸಿನಿಮಾಗಳು ಯಶಸ್ವಿ ಪ್ರದರ್ಶನ ಕಾಣುತ್ತಿವೆ ಎಂದು ವರದಿಯಾಗಿದೆ. ಕರ್ನಾಟಕದ ಗಡಿಯ ಹೊಸೂರಿನ ‘ಗ್ರ್ಯಾಂಡ್ ಸಿನಿಮಾಸ್’ ಚಿತ್ರಮಂದಿರದಲ್ಲಿ ಬೇಡಿಕೆಗೆ ತಕ್ಕಂತೆ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಹಿಂದೆ ದರ್ಶನ್ ನಟೆಯ ‘ಕಾಟೇರ’ ಚಿತ್ರ ಕೂಡ ಅಲ್ಲಿ ಯಶಸ್ವಿ ಪ್ರದರ್ಶನ ಕಂಡಿತ್ತು. ಇದೀಗ ‘ಭೀಮ’, ‘ಕೃಷ್ಣಂ ಪ್ರಣಯಸಖಿ’ ಚಿತ್ರಗಳು ಅಲ್ಲಿ ಹೌಸ್‌ಫುಲ್ ಆಗುತ್ತಿದೆ.’ಘೋಸ್ಟ್’, ‘ಸಲಾರ್'(ಕನ್ನಡ), ‘ಬ್ಯಾಚುಲರ್ ಪಾರ್ಟಿ’, ‘ಕಲ್ಕಿ 2898AD'(ಕನ್ನಡ) ಕೂಡ ಅಲ್ಲಿ ಪ್ರದರ್ಶನ ಕಂಡಿತ್ತು.

ಇದನ್ನೂ ಓದಿ: Vinay Rajkumar: ಪೆಪೆ ಟ್ರೈಲರ್ ಔಟ್‌; ವಿನಯ್‌ ರಾಜ್‌ಕುಮಾರ್ ಸಿನಿಮಾ ಹಿಟ್‌ ಗ್ಯಾರಂಟಿ ಅಂದ್ರು ಫ್ಯಾನ್ಸ್‌!

ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ. ಹೀಗಾಗಿ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಒಂದರ್ಥದಲ್ಲಿ ಈ ವರ್ಷ ಬಂದಿರುವ ಮೊದಲ ಸ್ಟಾರ್ ನಟನ ಸಿನಿಮಾ. ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಬಾಕ್ಸಾಫೀಸ್‌ನಲ್ಲಿ ಅಬ್ಬರಿಸುತ್ತಲೇ ಇದೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಗೌರಿ’ ಸಿನಿಮಾ ರಿಲೀಸ್ ಆಗಿದೆ. ಆದರೆ, ಈ ಸಿನಿಮಾಗಳ ಬಾಕ್ಸಾಫೀಸ್ ಕಲೆಕ್ಷನ್ ಅನ್ನೂ ಮೀರಿ ‘ಭೀಮ’ ಗಳಿಕೆ ಕಂಡಿದೆ ಎನ್ನಲಾಗಿದೆ.

ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ. ಮತ್ತೆ ಚಿತ್ರಮಂದಿರಗಳಲ್ಲಿ ಶಿಳ್ಳೆ ಚಪ್ಪಾಳೆ ಸದ್ದು ಕೇಳುವಂತಾಗಿದೆ.

ಚಿತ್ರಮಂದಿರಗಳಲ್ಲಿ ‘ಭೀಮ’ನ ಕಾರುಬಾರು ಜೋರಾಗಿತ್ತು. ರಜಾ ದಿನ ಅಲ್ಲದೇ ವಾರದ ದಿನದಲ್ಲಿ(ಶುಕ್ರವಾರ) ಕೆಲವೆಡೆ ಶೋಗಳು ಹೌಸ್‌ಫುಲ್ ಆಗಿತ್ತು. ಸಂಜೆ ಮೇಲೆ ಶೋಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಬುಕ್‌ಮೈ ಶೋನಲ್ಲಿ ಟಿಕೆಟ್ ಬುಕ್ಕಿಂಗ್‌ಗೂ ರೆಸ್ಪಾನ್ಸ್ ಚೆನ್ನಾಗಿತ್ತು.

ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.
ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Vicky Kaushal: ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

VISTARANEWS.COM


on

Chhaava teaser Vicky Kaushal Rashmika M
Koo

ಬೆಂಗಳೂರು: ವಿಕ್ಕಿ ಕೌಶಲ್ (Chhaava’ teaser) ಅಭಿನಯದ ಮುಂಬರುವ ಚಿತ್ರ ‘ಛಾವಾ’ ಟೀಸರ್ ಇದೀಗ ಬಿಡುಗಡೆಯಾಗಿದೆ. ನಟ ಲಕ್ಷ್ಮಣ್ ಉಟೇಕರ್ ಚಿತ್ರದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ಪ್ರೇಕ್ಷಕರು ವಿಕ್ಕಿ ಕೌಶಲ್ (Vicky Kaushal) ಅವರನ್ನು ಹಿಂದೆಂದೂ ನೋಡಿರದ ಅವತಾರದಲ್ಲಿ ಕಂಡಿದ್ದಾರೆ.

ಕಿರು ವೀಡಿಯೊದಲ್ಲಿ, ವಿಕ್ಕಿ ಕೌಶಲ್ ತನ್ನ ಉಗ್ರ ರೂಪವನ್ನು ಹೊರ ಹಾಕಿದ್ದಾರೆ. ಟೀಸರ್‌ನ ಅಂತ್ಯದ ವೇಳೆಗೆ, ಅಕ್ಷಯ್ ಖನ್ನಾ ಅವರ ಲುಕ್‌ ಗುರುತು ಹಿಡಿಯಲು ಆಗದಂತೆ ಕಂಡಿದ್ದಾರೆ. ಈಗಾಗಲೇ ಹಲವಾರು ಮಂದಿ ವಿಕ್ಕಿ ಕೌಶಲ್ ಅವರ ಹೊಸ ಅವತಾರವನ್ನು ಹೊಗಳಿದ್ದಾರೆ.

ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ಇದನ್ನೂ ಓದಿ: Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು. ಚಿತ್ರವು ಡಿಸೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

Duniya Vijay: ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ. ಮತ್ತೆ ಚಿತ್ರಮಂದಿರಗಳಲ್ಲಿ ಶಿಳ್ಳೆ ಚಪ್ಪಾಳೆ ಸದ್ದು ಕೇಳುವಂತಾಗಿದೆ.

VISTARANEWS.COM


on

Duniya Vijay 20 crore collection till today
Koo

ಬೆಂಗಳೂರು: ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಆಗಸ್ಟ್‌ 9ರಂದು ರಿಲೀಸ್‌ ಆಗಿದೆ. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ. ಹೀಗಾಗಿ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಒಂದರ್ಥದಲ್ಲಿ ಈ ವರ್ಷ ಬಂದಿರುವ ಮೊದಲ ಸ್ಟಾರ್ ನಟನ ಸಿನಿಮಾ. ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಮೊದಲ ದಿನ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು.  ಕಳೆದ 9 ದಿನಗಳಲ್ಲಿ ‘ಭೀಮ’ 19.73 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಹಾಗೇ 10ನೇ ದಿನ ಕಲೆಕ್ಷನ್ ಸೇರಿದರೆ, 21 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ.ಈ ಬಗ್ಗೆ ‘ಭೀಮ’ ತಂಡ ಅಧಿಕೃತವಾಗಿ ಇನ್ನೂ ಮಾಹಿತಿಯನ್ನು ಹಂಚಿಕೊಳ್ಳಬೇಕಿದೆ.

ದುನಿಯಾ ವಿಜಯ್ ನಿರ್ದೇಶಿಸಿದ ಎರಡನೇ ಸಿನಿಮಾ ಕೂಡ ಹಿಟ್ ಲಿಸ್ಟ್ ಸೇರಿದೆ. ಬೆಂಗಳೂರು ಸೇರಿದಂತೆ ಬಿ ಹಾಗೂ ಸಿ ಸೆಂಟರ್‌ಗಳಲ್ಲಿ ‘ಭೀಮ’ ಕಲೆಕ್ಷನ್ ಭರ್ಜರಿಯಾಗಿದೆ. 10ನೇ ದಿನ ಅಂದರೆ, ನಿನ್ನೆ (ಆಗಸ್ಟ್ 18) ಕೂಡ ಕಲೆಕ್ಷನ್ ಸಖತ್ ಆಗಿದೆ.

ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ. ಮತ್ತೆ ಚಿತ್ರಮಂದಿರಗಳಲ್ಲಿ ಶಿಳ್ಳೆ ಚಪ್ಪಾಳೆ ಸದ್ದು ಕೇಳುವಂತಾಗಿದೆ.

Ganesh-Duniya Vijay: ತಮಿಳುನಾಡಿನಲ್ಲಿ ‘ಭೀಮ’, ‘ಕೃಷ್ಣಂ ಪ್ರಣಯಸಖಿ’ ಹೌಸ್‌ಫುಲ್!ಇದನ್ನೂ ಓದಿ:

ಚಿತ್ರಮಂದಿರಗಳಲ್ಲಿ ‘ಭೀಮ’ನ ಕಾರುಬಾರು ಜೋರಾಗಿತ್ತು. ರಜಾ ದಿನ ಅಲ್ಲದೇ ವಾರದ ದಿನದಲ್ಲಿ(ಶುಕ್ರವಾರ) ಕೆಲವೆಡೆ ಶೋಗಳು ಹೌಸ್‌ಫುಲ್ ಆಗಿತ್ತು. ಸಂಜೆ ಮೇಲೆ ಶೋಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಬುಕ್‌ಮೈ ಶೋನಲ್ಲಿ ಟಿಕೆಟ್ ಬುಕ್ಕಿಂಗ್‌ಗೂ ರೆಸ್ಪಾನ್ಸ್ ಚೆನ್ನಾಗಿತ್ತು. ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.

ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

Continue Reading

ಸ್ಯಾಂಡಲ್ ವುಡ್

Vinay Rajkumar: ಪೆಪೆ ಟ್ರೈಲರ್ ಔಟ್‌; ವಿನಯ್‌ ರಾಜ್‌ಕುಮಾರ್ ಸಿನಿಮಾ ಹಿಟ್‌ ಗ್ಯಾರಂಟಿ ಅಂದ್ರು ಫ್ಯಾನ್ಸ್‌!

Vinay Rajkumar:  ಮಲೆನಾಡಿನ ಭಾಗದ ಗ್ಯಾಂಗ್‌ಸ್ಟರ್ ಕಥೆಯೊಂದನ್ನು ಚಿತ್ರದಲ್ಲಿ ಹೇಳಿರುವುದು ಟ್ರೈಲರ್ ನೋಡಿದರೆ ಅರ್ಥವಾಗುತ್ತದೆ. ಮಯೂರ್ ಪಟೇಲ್, ಯಶ್ ಶೆಟ್ಟಿ, ಕಾಜಲ್ ಕುಂದರ್ ಹಾಗೂ ಬಾಲ ಬೆಳವಾಡಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

VISTARANEWS.COM


on

Vinay Rajkumar Pepe Trailer Shreelesh SNair out
Koo

ಬೆಂಗಳೂರು: ವಿನಯ್ ರಾಜ್‌ಕುಮಾರ್ (Vinay Rajkumar) ನಟನೆಯ ಬಹುನಿರೀಕ್ಷಿತ ‘ಪೆಪೆ’ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ವಿನಯ್ ರಾಜ್​ಕುಮಾರ್ ನಟನೆಯ ‘ಪೆಪೆ’ ಸಿನಿಮಾದ ಟ್ರೈಲರ್ (ಆಗಸ್ಟ್ 18) ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಸಖತ್ ಗಮನ ಸೆಳೆಯುತ್ತಿದೆ. ಟ್ರೈಲರ್ ನೋಡಿದ ಹಲವರು ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಬೇಕು ಎಂದು ಫಿಕ್ಸ್ ಆಗಿಬಿಟ್ಟಿದ್ದಾರೆ. ಆಗಸ್ಟ್ 30ಕ್ಕೆ ಸಿನಿಮಾ ತೆರೆಗೆ ಬರಲಿದ್ದು ದೊಡ್ಡ ಮಟ್ಟದ ಓಪನಿಂಗ್ ನಿರೀಕ್ಷಿಸಲಾಗುತ್ತಿದೆ.

ಮಲೆನಾಡಿನ ಭಾಗದ ಗ್ಯಾಂಗ್‌ಸ್ಟರ್ ಕಥೆಯೊಂದನ್ನು ಚಿತ್ರದಲ್ಲಿ ಹೇಳಿರುವುದು ಟ್ರೈಲರ್ ನೋಡಿದರೆ ಅರ್ಥವಾಗುತ್ತದೆ. ಮಯೂರ್ ಪಟೇಲ್, ಯಶ್ ಶೆಟ್ಟಿ, ಕಾಜಲ್ ಕುಂದರ್ ಹಾಗೂ ಬಾಲ ಬೆಳವಾಡಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

‘ಅವ್ರಿಗೆ ಹೇಳ್ಬಿಡು ಜನರಿಗೆ ತೊಂದ್ರೆ ಕೊಡ್ಬೇಕು ಅಂತ ಬಂದ್ರೆ ‘ಪೆಪೆ’ನ ದಾಟ್ಕೊಂಡ್ ಹೋಗ್ಬೇಕು’ ಎನ್ನುವ ಡೈಲಾಗ್ ಹೇಳಿ ಅಬ್ಬರಿಸಿದ್ದಾರೆ ವಿನಯ್‌ ರಾಜ್‌ಕುಮಾರ್‌. ವಿನಯ್‌ಗೆ ಸಿನಿಮಾ ದೊಡ್ಡ ಬ್ರೇಕ್ ಕೊಡುವ ಸುಳಿವು ಸಿಗುತ್ತಿದೆ. ಕೇರಳ ಮೂಲದ ನಿರ್ದೇಶಕ ಶ್ರೀಲೇಶ್ ನಾಯರ್ ಕಥೆ, ಚಿತ್ರಕಥೆ ಬರೆದು ‘ಪೆಪೆ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಭರ್ಜರಿಯಾಗಿ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. ಅರ್ಚಕನೋರ್ವನ ಸಾವಿನಿಂದ ಊರಿನಲ್ಲಿ ಹುಟ್ಟುವ ದ್ವೇಷ ಯಾವ ಮಟ್ಟಕ್ಕೆ ಹೋಗುತ್ತದೆ, ಎಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತದೆ ಎನ್ನುವುದು ಸಿನಿಮಾ ಕಥೆ ಎನ್ನಲಾಗಿದೆ. ಡಾ.ರವಿವರ್ಮಾ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಚಿತ್ರಕ್ಕೆ ಫೈಟ್ಸ್ ಕಂಪೋಸ್ ಮಾಡಿದ್ದಾರೆ.

ಇದನ್ನೂ ಓದಿ: Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ‘ಪೆಪೆ’ ಸಿನಿಮಾವನ್ನು ರಾಜ್ಯಾದ್ಯಂತ ವಿತರಣೆ ಮಾಡಲಿದೆ. ಸಿನಿಮಾಗಳ ವಿತರಣೆಯಲ್ಲಿ ಒಳ್ಳೆ ಹೆಸರು ಗಳಿಸಿರುವ ಆ ಸಂಸ್ಥೆ ‘ಪೆಪೆ’ ತಂಡಕ್ಕೆ ಸಾಥ್ ಕೊಟ್ಟಿದೆ. ಕೆಆರ್ ಜಿ ಸಂಸ್ಥೆಯ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರ ವಿತರಣೆ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ವಿನಯ್ ರಾಜ್‌ಕುಮಾರ್ ಇಲ್ಲಿವರೆಗೂ ಸಾಫ್ಟ್ ಚಿತ್ರಗಳನ್ನೆ ಮಾಡಿದ್ದಾರೆ. ಆದರೆ ಪೆಪೆ ಚಿತ್ರ ವಿಭಿನ್ನವಾಗಿಯೇ ಇವೆ. ಪೆಪೆ ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ‌ ಕಾಣಿಸಿಕೊಂಡಿದ್ದಾರೆ. ಕ್ಲಾಸ್ ಹೀರೋನಿಂದ ಮಾಸ್ ಲುಕ್ ಆಗಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಶ್ರೀಲೇಶ್ ಎಸ್ ನಾಯರ್ ಚೊಚ್ಚಲ ನಿರ್ದೇಶನದಲ್ಲಿಯೇ ಭರವಸೆ ಮೂಡಿಸಿದ್ದಾರೆ. ಮೊದಲ ಹೆಜ್ಜೆಯಲ್ಲಿಯೇ ಒಂದು ರೀತಿ ಪರಿಪೂರ್ಣ ವಿಭಿನ್ನ ಕಥೆ ಹೊತ್ತು ಬರುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Kannada New Movie: ಸದಭಿರುಚಿಯ ’ಬ್ಲಿಂಕ್’ ’ಜಲಪಾತ’ ’ಶಾಖಾಹಾರಿ’ ’ಕೆರೆಬೇಟೆ’ ’4ಎನ್6’ ಮತ್ತು ’ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರಗಳ ನಿರ್ಮಾಪಕರು, ನಿರ್ದೇಶಕರು, ’ಹಾಸ್ಟಲ್ ಹುಡುಗರು ಬೇಕಾಗಿದ್ದಾರೆ’ ವಾರ್ಡನ್ ಖ್ಯಾತಿಯ ಮಂಜುನಾಥ್ ಮತ್ತು ವಕೀಲರುಗಳು ಆಗಮಿಸಿ ಸ್ನೇಹಿತನಿಗೆ ಶುಭ ಹಾರೈಸಿದರು. ’ಇದು ನಮ್ಮ ಸಿನಿಮಾದ ಡೆತ್ ಲುಕ್ ಪೋಸ್ಟರ್’ ಎಂದು ವೈಕುಂಠ ಸಮಾರಾಧನೆ ಪತ್ರಿಕೆ ರೀತಿಯಲ್ಲಿಯೇ ಕಪ್ಪು ಬಿಳುಪಿನಲ್ಲಿ ಸಿದ್ದಗೊಂಡಿದ್ದು, ಜನನ, ಮರಣ ಇರುವಂತೆ ಇದರಲ್ಲಿ ಮುಹೂರ್ತ 10.8.24 ರಿಲೀಸ್ 12.12.25 ಎಂಬುದಾಗಿ ಹೇಳಿಕೊಂಡಿದೆ.

VISTARANEWS.COM


on

Kannada New Movie vaikuntha samaradhane movie
Koo

ಬೆಂಗಳೂರು: ಜನರನ್ನು ಚಿತ್ರಮಂದಿರಕ್ಕೆ ಕರೆತರಲು ವಿನೂತನ ರೀತಿಯ ಶೀರ್ಷಿಕೆ, ಪ್ರಚಾರ ನಡೆಸುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ವೈಕುಂಠ ಸಮಾರಾಧನೆ’ (Vaikunta Samaaraadhane) ಚಿತ್ರವೊಂದು ಸೇರ್ಪಡೆಯಾಗಿದೆ. ವೃತ್ತಿಯಲ್ಲಿ ಹೆಸರು ಮಾಡಿರುವ ಅಡ್ವೋಕೇಟ್ ರಜತ್ ಮೌರ್ಯ (Rajat Maurya) ಅವರ ಪ್ರವೃತ್ತಿ ಬಣ್ಣದಲೋಕ. ಬಿಡುವಿನ ವೇಳೆಯಲ್ಲಿ ನಟನೆ, ನಿರ್ದೇಶನದ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಮಾಡೆಲ್ ಆಗಿದ್ದು, ಇವರ ಅಭಿನಯದ ಜಾಹಿರಾತುಗಳು ಐಪಿಎಲ್ ಪಂದ್ಯಗಳಲ್ಲಿ ಸ್ಟ್ರೀಮಿಂಗ್ ಆಗಿದೆ. ಇದರ ಅನುಭವದಿಂದಲೇ ಸಿನಿಮಾಕ್ಕೆ ಕಥೆ,ಚಿತ್ರಕಥೆ,ನಿರ್ದೇಶನ ಮತ್ತು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಗೇರ್‌ಗಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಆಶಾ ಗೇರ್‌ಗಲ್ ನಿರ್ಮಾಣ ಮಾಡುತ್ತಿದ್ದಾರೆ. ಕಲ್ಕಿ ಜಯಂತಿ ಶ್ರಾವಣ ಶನಿವಾರ ಶುಭ ದಿನದಂದು ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.

ಸದಭಿರುಚಿಯ ’ಬ್ಲಿಂಕ್’ ’ಜಲಪಾತ’ ’ಶಾಖಾಹಾರಿ’ ’ಕೆರೆಬೇಟೆ’ ’4ಎನ್6’ ಮತ್ತು ’ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರಗಳ ನಿರ್ಮಾಪಕರು, ನಿರ್ದೇಶಕರು, ’ಹಾಸ್ಟಲ್ ಹುಡುಗರು ಬೇಕಾಗಿದ್ದಾರೆ’ ವಾರ್ಡನ್ ಖ್ಯಾತಿಯ ಮಂಜುನಾಥ್ ಮತ್ತು ವಕೀಲರುಗಳು ಆಗಮಿಸಿ ಸ್ನೇಹಿತನಿಗೆ ಶುಭ ಹಾರೈಸಿದರು. ’ಇದು ನಮ್ಮ ಸಿನಿಮಾದ ಡೆತ್ ಲುಕ್ ಪೋಸ್ಟರ್’ ಎಂದು ವೈಕುಂಠ ಸಮಾರಾಧನೆ ಪತ್ರಿಕೆ ರೀತಿಯಲ್ಲಿಯೇ ಕಪ್ಪು ಬಿಳುಪಿನಲ್ಲಿ ಸಿದ್ದಗೊಂಡಿದ್ದು, ಜನನ, ಮರಣ ಇರುವಂತೆ ಇದರಲ್ಲಿ ಮುಹೂರ್ತ 10.8.24 ರಿಲೀಸ್ 12.12.25 ಎಂಬುದಾಗಿ ಹೇಳಿಕೊಂಡಿದೆ. ಈಗಾಗಲೇ ಡೆತ್ ಲುಕ್ ಪೋಸ್ಟರ್ ರೀಲ್ಸ್ ವೈರಲ್ ಆಗಿದ್ದು, ಎಲ್ಲಾ ಕಡೆ ಸದ್ದು ಮಾಡುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ’ಸಾವಿಲ್ಲದ ಮನೆಯಲ್ಲಿ ಸಾಸುವೆ ಕಾಳು ತಂದಂತೆ’, ’ವೈಕುಂಠ ಸಮಾರಾಧನೆ ಇಲ್ಲದ ಮನೆ ಸಿಗೋದಿಲ್ಲ’. ಮನೆಯಲ್ಲಿ ಅಜ್ಜ,ಅಪ್ಪ, ಅಮ್ಮ ನನಗೆ ಪ್ರೇರಣೆ. ಅದರಲ್ಲೂ ಬಾಲ್ಯವನ್ನು ಅಜ್ಜನೊಂದಿಗೆ ಕಳೆದಿದ್ದೇನೆ. ಇದೆಲ್ಲಾದರ ಏಳೆಯನ್ನು ತೆಗೆದುಕೊಂಡು ಅದಕ್ಕೆ ಭಾವನಾತ್ಮಕ, ಮನರಂಜನೆ, ಫ್ಯಾಮಿಲಿ ಡ್ರಾಮಾ, ಪ್ರೀತಿ, ಸಸ್ಪೆನ್ಸ್, ಹಳ್ಳಿ, ಪಟ್ಟಣ ಎಲ್ಲವನ್ನು ಮಿಶ್ರಣ ಮಾಡಿಕೊಂಡು, ತಂಡದೊಂದಿಗೆ ಸೇರಿಕೊಂಡು ಕಥೆಯನ್ನು ವಿಸ್ತರಿಸಲಾಗಿದೆ. ನಾಯಕಿ ಸೇರಿದಂತೆ ಕಲಾವಿದರ ಆಯ್ಕೆ ಸದ್ಯದಲ್ಲೆ ಮುಗಿಯಲಿದೆ. ಮೂರು ಹಾಡುಗಳು, ಫೈಟ್ ಇರುತ್ತದೆ. ಮಿಕ್ಕಂತೆ ಮತ್ತಷ್ಟು ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಹೇಳಿಕೊಂಡರು.

ಇದನ್ನೂ ಓದಿ: 70th National Film Awards : ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ಹೀಗೆ!

ಸಂಗೀತ ರುತ್ವಿಕ್‌ಮುರಳಿಧರ್, ಛಾಯಾಗ್ರಹಣ ಹರ್ಷಿತ್.ಬಿ.ಗೌಡ, ಕಾರ್ಯಕಾರಿ ನಿರ್ಮಾಪಕ ನಾಗೇಂದ್ರ ಯಡಿಯಾಳ್ ಅವರದಾಗಿದೆ. ಆದರ್ಶ್‌ಬೆಳ್ಳೂರು, ದರ್ಶನ್‌ಕುಮಾರ್, ಸಿದ್ದಾನ್ ವಿಜಯ್, ನವೀನ್, ಸಚ್ಚಿನ್ ನಿರ್ದೇಶನ ತಂಡದಲ್ಲಿ ಇರುತ್ತಾರೆ. ಶೇಕಡ 60 ರಷ್ಟು ಮಲೆನಾಡು, ಉಳಿದುದನ್ನು ಬೆಂಗಳೂರು ಸುತ್ತಮತ್ತ ಚಿತ್ರೀಕರಿಸಲು ಯೋಜನೆ ರೂಪಿಸಲಾಗಿದೆ.

Continue Reading
Advertisement
murder case
ಚಿಕ್ಕಬಳ್ಳಾಪುರ12 mins ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ17 mins ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Chhaava teaser Vicky Kaushal Rashmika M
ಸ್ಯಾಂಡಲ್ ವುಡ್1 hour ago

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Road Accident
ಬೆಂಗಳೂರು1 hour ago

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Uttarakhand Horror
ದೇಶ1 hour ago

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

muda case congress protest
ಪ್ರಮುಖ ಸುದ್ದಿ2 hours ago

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Vettaiyan VS Kanguva Vettaiyan to clash with Suriya's Kanguva
ಕಾಲಿವುಡ್2 hours ago

Vettaiyan VS Kanguva: ರಜನಿಕಾಂತ್ ಹೊಸ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌; ʻಕಂಗುವʼ ಜತೆ ಕ್ಲ್ಯಾಶ್‌!

Viral Video
Latest2 hours ago

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Duniya Vijay 20 crore collection till today
ಸ್ಯಾಂಡಲ್ ವುಡ್2 hours ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ2 hours ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌