Harshika Poonacha: ಮದುವೆ ಆದ್ರೂ ಮಕ್ಕಳು ಬೇಡ ಅನ್ನೋರಿಗೆ ಮುಟ್ಟಿ ನೋಡ್ಕೊಳ್ಳೋ ಹಾಗೆ ಉತ್ತರ ಕೊಟ್ಟ ಹರ್ಷಿಕಾ ಪೂಣಚ್ಚ ದಂಪತಿ! - Vistara News

ಸ್ಯಾಂಡಲ್ ವುಡ್

Harshika Poonacha: ಮದುವೆ ಆದ್ರೂ ಮಕ್ಕಳು ಬೇಡ ಅನ್ನೋರಿಗೆ ಮುಟ್ಟಿ ನೋಡ್ಕೊಳ್ಳೋ ಹಾಗೆ ಉತ್ತರ ಕೊಟ್ಟ ಹರ್ಷಿಕಾ ಪೂಣಚ್ಚ ದಂಪತಿ!

Harshika Poonacha: ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಇದೀಗ ಜೋಡಿ ಇಷ್ಟು ಬೇಗ ಮಗುನಾ? ಸಿನಿಮಾರಂಗ ಬಿಟ್ಟು ಬಿಡುತ್ತೀರಾ? ಎಂದೆಲ್ಲಾ ಪ್ರಶ್ನೆ ಮಾಡುವವರಿಗೆ ಈಗಾಗಲೆ ಉತ್ತರ ಕೊಟ್ಟಿದ್ದಾರೆ. ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

VISTARANEWS.COM


on

Harshika Poonacha Bhuvann Ponnannaa shares opinion about marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ (Harshika Poonacha) ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದರು. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ (Bhuvann Ponnannaa) ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಇದೀಗ ಜೋಡಿ ಇಷ್ಟು ಬೇಗ ಮಗುನಾ? ಸಿನಿಮಾರಂಗ ಬಿಟ್ಟು ಬಿಡುತ್ತೀರಾ? ಎಂದೆಲ್ಲಾ ಪ್ರಶ್ನೆ ಮಾಡುವವರಿಗೆ ಮಾಧ್ಯಮಗಳ ಮುಂದೆ ಉತ್ತರ ಕೊಟ್ಟಿದ್ದಾರೆ. 

ಭುವನ್ ಪೊನ್ನಣ್ಣ ಮಾತನಾಡಿ ʻʻತುಂಬ ಖುಷಿ ಇದೆ. ಈಗಿನ ಸನ್ನಿವೇಶದಲ್ಲಿ ಹೇಳೋದು ಏನೆಂದರೆ, ಈಗಿನ ಸಮಯದಲ್ಲಿ ಹಲವಾರು ಜನ ಫ್ಯಾಮಿಲಿ ಪ್ಲ್ಯಾನಿಂಗ್‌ ಎಂದುಕೊಂಡು ಮದುವೆಯಾಗಿ 5-10 ವರ್ಷ ಮಕ್ಕಳು ಮಾಡಿಕೊಳ್ಳದೇ ಹಾಗೇ ಇರ್ತಾರೆ. ನನ್ನ ಪ್ರಕಾರ ತಪ್ಪು. ಮದುವೆಯಾದ ಕೂಡಲೇ ಮಕ್ಕಳು ಮಾಡಿಕೊಳ್ಳಿ. ಈಗಿನ ಪೊಲಿಟಿಕಲ್‌ ಸಂದರ್ಭಗಳನ್ನು ನೋಡಿದರೆ, ಜಗತ್ತು ಎಷ್ಟು ದಿವಸ ಇರುತ್ತೋ ಇಲ್ಲವೋ ಗೊತ್ತಿಲ್ಲ. ಇದಷ್ಟು ದಿನ ಖುಷಿಯಾಗಿರಿ.ʼʼಎಂದರು.

ಇದನ್ನೂ ಓದಿ: Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

ಇನ್ನು ನಟಿ ಹರ್ಷಿಕಾ ಮಾತನಾಡಿ ʻʻಭುವನ್‌ ಅವರ ನಿರ್ಧಾರವೇ ನನ್ನದೂ ಆಗಿತ್ತು. ಸಾಕಷ್ಟು ವರ್ಷ ನಾವು ಸ್ನೇಹಿತರಾಗಿ ಆಮೇಲೆ ಮದುವೆ ಆದ್ವಿ. ನಮ್ಮ ನಿರ್ಧಾರ ಅದೇ ಇತ್ತು. ದೇವರು ಮಕ್ಕಳು ಕೊಟ್ಟರೆ ಮಾಡಿಕೊಳ್ಳಬೇಕು ಎಂದೇ ಇತ್ತು. ದೇವರ ಆಶೀರ್ವಾದಿಂದ ಒಳ್ಳೆಯದು ಆಗಿದೆ. ಮುಂದೆ ಸಿನಿಮಾ ಮಾಡುತ್ತೇನೆ. ತಾಯಿಯಾಗಿ ಮಗುವಿಗೆ ಎಷ್ಟು ಸಮಯ ಕೊಡಬೇಕು ಅಷ್ಟು ಕೊಡುತ್ತೇನೆ. ಅದರ ನಂತರ ಸಿನಿಮಾ ಮಾಡೋದು ಇದ್ದೇ ಇದೆʼಎಂದರು.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು.

2008ರಲ್ಲಿ ʼಪಿಯುಸಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹರ್ಷಿಕಾ ಬಳಿಕ ಕೊಡವ, ಕೊಂಕಣಿ, ತೆಲುಗು, ಮಲಯಾಳಂ, ಬೋಜಪುರಿ, ತಮಿಳು ಮುಂತಾದ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡದ ಕನ್ನಡದ ʼತಮಸ್ಸುʼ ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಅವರು ಸದ್ಯ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ 2010ರಲ್ಲಿ ತೆರೆಕಂಡ, ಸುದೀಪ್‌ ಅಭಿನಯದ ʼಜಸ್ಟ್‌ ಮಾತ್‌ ಮಾತಲ್ಲಿʼ ಚಿತ್ರದ ಮೂಲಕ ಬಣ್ಣ ಲೋಕ ಪ್ರವೇಶಿಸಿದ್ದರು. ಗಣೇಶ್‌ ಜತೆಗೆ ಕೂಲ್‌ ಚಿತ್ರದಲ್ಲಿಯೂ ನಟಿಸಿರುವ ಅವರು 2019ರಲ್ಲಿ ತೆರೆಕಂಡ ರಾಂಧವ ಸಿನಿಮಾದ ಮೂಲಕ ಜನಪ್ರಿಯರಾಗಿದ್ದಾರೆ. ಕೊಡಗು ಮೂಲದ ಭುವನ್‌ ಮತ್ತು ಹರ್ಷಿಕಾ ಈ ಹಿಂದೆ ನೆರೆ ಪೀಡಿತರಿಗೆ ನೆರವಾಗುವ ಮೂಲಕ ಅನೇಕ ಮಂದಿಯ ಕಷ್ಟಗಳಿಗೆ ಸಹಾಯ ಹಸ್ತ ಚಾಚಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ತಿರುಪತಿ ತಿಮ್ಮಪ್ಪನ `ದರ್ಶನ’ ಸಿಗಬಹುದು ಆದರೆ ʻಡಿ ಬಾಸ್‌ʼ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದ ನಟ!

Actor Darshan: ಇದಕ್ಕೂ ಮುಂಚೆ ದರ್ಶನ್ ಭೇಟಿಗೆ ಅವಕಾಶ ಸಿಗದೇ ಸಾಧುಕೋಕಿಲ ವಾಪಸ್‌ ಆಗಿದ್ದರು. ವಾರಕ್ಕೆ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇತ್ತು. ಒಂದು ಬಾರಿ ಭೇಟಿಗೆ ಐದು ಮಂದಿಗೆ ಅವಕಾಶ ಇರುವ ನಿಯಮವಿದೆ. ಈಗಾಗಲೇ ಒಂದು ಬಾರಿ ದರ್ಶನ್ ಭೇಟಿಗೆ ಕುಟುಂಬ ಹೋಗಿತ್ತು.

VISTARANEWS.COM


on

Actor Darshan meet fail what manoj said
Koo

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಸಾಧುಕೋಕಿಲ ಬಂದಿದ್ದರು. ಆದರೆ ಭೇಟಿಯಾಗದೇ ವಾಪಸ್‌ ಆದರು. ಇದೀಗ ದರ್ಶನ್ ಭೇಟಿಗೆ ಆಗಮಿಸಿದ್ದ ನಟ ಮನೋಜ್ ವಿವಾನ್ ಕೂಡ ಅವಕಾಶ ಸಿಗದೇ ವಾಪಸ್ ಆಗಿದ್ದಾರೆ.

ವಾರಕ್ಕೆ ಎರಡೇ ದಿನ ಭೇಟಿ ನೀಡುವ ಹಿನ್ನೆಲೆಯಲ್ಲಿ ಮನೋಜ್ ಅವರಿಗೆ ಸಿಬ್ಬಂದಿ ಅವಕಾಶ ನೀಡಿಲ್ಲ ಎನ್ನಲಾಗಿದೆ. ಇದೀಗ ನಟ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದು ಹೀಗೆ. ʻʻತಿರುಪತಿ ತಿಮ್ಮಪ್ಪನ ದರ್ಶನ ಸಿಗಬಹುದು. ಆದ್ರೆ ನಟ ದರ್ಶನ್ ಭೇಟಿಗೆ ಅವಕಾಶ ಸಿಗುತ್ತಿಲ್ಲ. ಇದೇ ತಿಂಗಳು 22ನೇ ತಾರೀಖು ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಸಿನಿಮಾ ಸೆಲೆಬ್ರಿಟಿ ಶೋ ಇತ್ತು. ಅಂದು ನಾನು ದರ್ಶನ್‌ ಫ್ಯಾನ್ಸ್‌ಗೆ ಸಿನಿಮಾ ನೋಡಿ ಅಂದಿದ್ದೆ. ಕನ್ನಡ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸಿ ಎಂದು ದರ್ಶನ್ ಸಾಕಷ್ಟು ಬಾರಿ ಹೇಳುತ್ತಿದ್ದರು. ಹಾಗಾಗಿ ನಟ ದರ್ಶನ್ ಫ್ಯಾನ್ಸ್‌ ಮತ್ತು ಕನ್ನಡಿಗರಿಗೆ ಸಿನಿಮಾ ನೋಡಿ ಎಂದು ಕರೆ ಕೊಟ್ಟಿದ್ದೆ. ಆದರೆ ಈ ಬಗ್ಗೆ ಪಾಸಿಟಿವ್‌ ಹಾಗೂ ನೆಗೆಟಿವ್‌ ಪ್ರತಿಕ್ರಿಯೆ ಎರಡೂ ಬಂದಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಟ್ರೈಲರ್ ಲಾಂಚ್ ನಟ ದರ್ಶನ್‌ರಿಂದ ಮಾಡಿಸಬೇಕಿತ್ತು. ಆದರೆ ದರ್ಶನ್ ರವರು ಕೊಲೆ ಕೇಸ್ ನಲ್ಲಿ ಸಿಲುಕಿದ್ದರಿಂದ ಸಾಧ್ಯವಾಗಲಿಲ್ಲ. ಇಂದು ಭೇಟಿ ಮಾಡಿ ಕನ್ನಡ ಸಿನಿಮಾಗಳನ್ನು ತಮ್ಮ ಫ್ಯಾನ್ಸ್‌ಗೆ ನೋಡುವಂತೆ ಸಂದೇಶ ಕೊಡಿ. ಹೊಸಬರ ಸಿನಿಮಾಗಳು ನೋಡಿ ಎಂದು ಮನವಿ ಮಾಡಲು ಬಂದಿದ್ದೆಆದ್ರೆ ಭೇಟಿ ಸಾಧ್ಯವಾಗಲಿಲ್ಲ. ಆದಷ್ಟು ಭೇಗ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿʼʼ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಕೆ ಶಿವಕುಮಾರ್‌ ಹೇಳಿದ್ದೇನು?

Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್ಇದನ್ನೂ ಓದಿ:

ಇದಕ್ಕೂ ಮುಂಚೆ ದರ್ಶನ್ ಭೇಟಿಗೆ ಅವಕಾಶ ಸಿಗದೇ ಸಾಧುಕೋಕಿಲ ವಾಪಸ್‌ ಆಗಿದ್ದರು. ವಾರಕ್ಕೆ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇತ್ತು. ಒಂದು ಬಾರಿ ಭೇಟಿಗೆ ಐದು ಮಂದಿಗೆ ಅವಕಾಶ ಇರುವ ನಿಯಮವಿದೆ. ಈಗಾಗಲೇ ಒಂದು ಬಾರಿ ದರ್ಶನ್ ಭೇಟಿಗೆ ಕುಟುಂಬ ಹೋಗಿತ್ತು. ಗುರುವಾರ ಮತ್ತೊಮ್ಮೆ ದರ್ಶನ್ ಫ್ಯಾಮಿಲಿ ಆಗಮಿಸುವ ಹಿನ್ನೆಲೆಯಲ್ಲಿ ಸಾಧುಕೋಕಿಲ ಅವರಿಗೆ ಅವಕಾಶ ಕಲ್ಪಿಸಿಕೊಟ್ರೆ ಮುಂದಿನ ದಿನಗಳಲ್ಲಿ ಫ್ಯಾಮಿಲಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ಗುರುವಾರ ಫ್ಯಾಮಿಲಿ ಜೊತೆಗೆ ಸಾಧುಕೋಕಿಲ ಅವರಿಗೆ ಬನ್ನಿ ಎಂದು ದರ್ಶನ್ ಜೈಲಾಧಿಕಾರಿಗಳ ಮೂಲಕ ಸಾಧುಕೋಕಿಲಗೆ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Umapathy Srinivas: ಬಡವರ ಸಾರಥಿ, ಭಗವಂತ ನೀನೆ ಕಣಯ್ಯಾ; ಉಮಾಪತಿ ಶ್ರೀನಿವಾಸ್ ಬರ್ತ್‌ಡೇ ಸಾಂಗ್‌ ಔಟ್‌!

Umapathy Srinivas: ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್‌” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

VISTARANEWS.COM


on

Umapathy Srinivas The Kaptan Song out
Koo

ಬೆಂಗಳೂರು:ʻ ‘ಹೆಬ್ಬುಲಿ’, ‘ಒಂದಲ್ಲಾ ಎರಡಲ್ಲಾ’, ‘ರಾಬರ್ಟ್’ ಹಾಗೂ ‘ಉಪಾಧ್ಯಕ್ಷ’ ಅಂತಹ ಸಿನಿಮಾವನ್ನು ನಿರ್ಮಾಣ ಮಾಡಿ ಬಾಕ್ಸಾಫೀಸ್‌ನಲ್ಲಿ (Umapathy Srinivas) ಲಾಭ ಕಂಡಿದ್ದಾರೆ. ಇತ್ತೀಚೆಗೆ ದರ್ಶನ್ ಜೈಲಿಗೆ ಹೋದ ಬಳಿಕ ಸಿಡಿದೆದ್ದು ರಾಜ್ಯಾದ್ಯಂತ ಸುದ್ದಿಯಲ್ಲಿ ಇದ್ದರು.ಕನ್ನಡ ಚಿತ್ರರಂಗದ ರೆಬೆಲ್ ನಿರ್ಮಾಪಕ ಅಂತಲೇ ಫೇಮಸ್ ಆಗಿರುವವರು ಉಮಾಪತಿ ಶ್ರೀನಿವಾಸ್ ಗೌಡ. ಈ ರೆಬೆಲ್ ನಿರ್ಮಾಪಕ ಉಮಾಪತಿ ಗೌಡ ಜುಲೈ 27ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿರ್ಮಾಪಕ ಬರ್ತ್‌ಡೇಗೆ ಇನ್ನೂ ನಾಲ್ಕು ದಿನಗಳು ಇರುವಾಗಲೇ ಹಾಡೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈಗಾಗಲೇ ‘ದ ಕಪ್ತಾನ್‌’ ಅನ್ನುವ ಆಲ್ಬಂ ಸಾಂಗ್ ಅನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್‌” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

“ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿʼʼ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.

ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ ಜೆ ಹಾಡಿ, ಸಂಗೀತ ನೀಡಿರುವ ಈ ” ದ ಕಪ್ತಾನ್‌ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಸದ್ಯ ಈ ಹಾಡಿನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ನಿರ್ಮಾಪಕರೊಬ್ಬರ ಹುಟ್ಟುಹಬ್ಬಕ್ಕೆ ಅಲ್ಬಂ ಸಾಂಗ್ ಮಾಡಿ ಉಡುಗೊರೆಯಾಗಿ ಕೊಟ್ಟಿರುವುದು ತೀರಾ ಅಪರೂಪ.ಸದ್ಯ ಹೊಸ ಸಿನಿಮಾದ ಘೋಷಣೆ ಮಾಡದೇ ಹೋದರೂ, ಹೊಸ ಕಥೆಗಳನ್ನು ಕೇಳುತ್ತಿರುವುದಾಗಿ ಈ ಹಿಂದೆ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ ಬಳಿಕ ಡಿಕೆ ಶಿವಕುಮಾರ್‌ ಹೇಳಿದ್ದೇನು?

Actor Darshan: ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಚರ್ಚಿಸಲೆಂದೇ ವಿಜಯಲಕ್ಷ್ಮಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗಿತ್ತು. ಆದರೆ ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದು ಹೀಗೆ.

VISTARANEWS.COM


on

Actor Darshan wife Vijayalakshmi Met DCM DK Shivakumar
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಸೇರಿದ್ದಾರೆ. ಇಂದು (ಜುಲೈ 24) ವಿಜಯಲಕ್ಷ್ಮಿ ದರ್ಶನ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಜೊತೆಗೆ ದರ್ಶನ್ ಸಹೋದರ ದಿನಕರ್ ತೂಗುದೀಪ ಸಹ ಇದ್ದರು. ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಚರ್ಚಿಸಲೆಂದೇ ವಿಜಯಲಕ್ಷ್ಮಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗಿತ್ತು. ಆದರೆ ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದು ಹೀಗೆ.

ಡಿಸಿಎಂ ಶಿವಕುಮಾರ್ ಮಾತನಾಡಿ ʻʻನೆನ್ನೆ ಭೇಟಿಗೆ ವಿಜಯಲಕ್ಷ್ಮಿ ಬಂದಿದ್ರು , ಅಲ್ಲಿ ಭೇಟಿಗೆ ನಾನು ಒಪ್ಪಲಿಲ್ಲ.ಬೆಳಗ್ಗೆ ಮನೆಯಲ್ಲಿ ಭೇಟಿಯಾಗುವಂತೆ ಹೇಳಿದ್ದೆ. ಹಿಂದೆ ಅವರ ಮಗುಗೆ ನನ್ನ ಸ್ಕೂಲ್‌ಗೆ ಸೀಟ್ ಕೊಟ್ಟಿದ್ದೆ. ಅವರ ಮಗ ವಿನೀಶ್‌ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೀನಿ, ಕೇಸ್ ವಿಚಾರವಾಗಿ ಮಾತನಾಡಲು ಅವರು ಬಂದಿರಲಿಲ್ಲ’ ಎಂದಿದ್ದಾರೆ.

ʻʻಈ ಕೇಸ್‌ಗೆ ನಾವು ಇಂಟರ್‌ಫೀಯರ್‌ ಆಗಲು ಆಗಲ್ಲ. ಸಮಸ್ಯೆ, ತೊಂದರೆ ಆಗಿದ್ದರೆ ಕಾನೂನು ಇದೆ. ನಿನ್ನೆ ನಮ್ಮ ಕ್ಷೇತ್ರದ ಹುಡುಗರು ಗಲಾಟೆ ಮಾಡಿ ಕೂಗಿದ್ದರು. ಯಾವ ಬಾಸ್ ಗೊತ್ತಿಲ್ಲ, ಬಾಸ್ ಬಾಸ್ ಅಂತ ಕೂಗುತ್ತಿದ್ದರು. ಮಗುಗೆ ಸಹಾಯ ಮಾಡುತ್ತೇನೆ. ಮಾಧ್ಯಮದಲ್ಲಿ ‌ಏನು ಬರ್ತಿದೆ ಎಂದು ನೋಡಲು ನನಗೆ ಸಮಯವಿ ಲ್ಲ.ಒಂದೊಂದು ಟಿವಿಯಲ್ಲಿ ಒಂದೊಂದು ಬರ್ತದೆ. ನಾನು ಗೃಹ ಸಚಿವ‌ ಅಲ್ಲ. ಪೊಲೀಸ್‌ ತನಿಖೆಯಲ್ಲಿ ನಾವು ಇಂಟರ್ ಫಿಯರ್ ಆಗಲು ಸಾಧ್ಯವಿಲ್ಲ. ಮಗು ಶಿಕ್ಷಣದ ಬಗ್ಗೆ ಅವರಿಗೆ ಕನ್ಸರ್ನ್‌ ಇದೆ , ಮಕ್ಕಳ ವಿಚಾರ ದೊಡ್ಡದು. ಹೆಣ್ಣು ಮಗಳು ಏನಾದರೂ ಅನ್ಯಾಯ ಆಗಿದ್ರೆ ಅವರಿಗೆ ಸಹಾಯ ಮಾಡಿರುತ್ತಿದ್ದೆ. ಆದರೆ ಈಗ ಕಾನೂನು ಕ್ರಮ ನಡೆಯುತ್ತಿದೆ. ಇಂಥಹಾ ಸಮಯದಲ್ಲಿ ಮಧ್ಯೆ ಪ್ರವೇಶ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟು ಅಡಿ ಏನಾದರೂ ಮಾಡೋಣ ಅಂತ ನಿನ್ನೆ ಹೇಳಿದ್ದೆ, ಹುಡುಗರು ನಿನ್ನೆ ಒತ್ತಾಯ ಮಾಡಿದ್ದರು. ನಾನು ಈ ವಿಚಾರದಲ್ಲಿ ಮಧ್ಯ ಬರೋದಿಲ್ಲ, ಸ್ಕೂಲ್ ವಿಚಾರದಲ್ಲಿ ಅಷ್ಟೇ ನಾನು ಮಾತನಾಡುತ್ತೇವೆ, ಸಹಾಯ ಮಾಡುತ್ತೇನೆʼʼಎಂದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಇನ್ನು ನಿರ್ದೇಶಕ ಪ್ರೇಮ್‌ ಕೂಡ ಇದೇ ಹೇಳಿಕೆ ಕೊಟ್ಟಿದ್ದಾರೆ. ʻʻಈ ಬಗ್ಗ ಜೋಗಿ ಪ್ರೇಮ್‌ ಮಾತನಾಡಿ ʻʻನಟ ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ನಾನು ದರ್ಶನ್ ವಿಚಾರ ಮಾತನಾಡೋಕೆ ಬಂದಿರಲಿಲ್ಲ ನಾನು ಆಗಾಗ ಡಿಸಿಎಂನ ಭೇಟಿ ಮಾಡೊಕೆ ಬರ್ತಾ ಇರ್ತೀನಿ. ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಅವರ ಪತ್ನಿ ಮತ್ತು ದರ್ಶನ್‌ ಸಹೋದರ ಭೇಟಿ ಮಾಡೋಕೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಸ್ಕೂಲ್ ವಿಚಾರ ಮಾತಾಡೋಕೆ ಬಂದಿದ್ದರು.ನನ್ನ ಮಗ ಅವರ ಮಗ ಇಬ್ಬರು ಒಂದೇ ಕಡೆ ಓದುತ್ತ ಇದ್ದರು. ವಿನೀಶ್ ಈಗ ಬೇರೆ ಸ್ಕೂಲ್ ಶಿಷ್ಟ್ ಆಗಿದ್ದಾನೆ. ಹಾಗಾಗಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇವೆ. ದರ್ಶನ್ ನನ್ನ ಸ್ನೇಹಿತ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಭೇಟಿಗೂ ಇದಕ್ಕೂ ಸಂಬಂಧ ಇಲ್ಲʼʼಎಂದಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಡಿಕೆಶಿ ಭೇಟಿ ಮಾಡಿದ ದರ್ಶನ್‌ ಪತ್ನಿ:ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ ಎಂದ ʻಜೋಗಿʼ ಪ್ರೇಮ್‌!

Actor Darshan: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೇ 25 ಕ್ಕೆ ಇ ಬಗ್ಗೆ ತೀರ್ಪು ಬರಲಿದೆ. ಈ ನಡುವೆ ಡಿಕೆಶಿ ಅವರನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ.

VISTARANEWS.COM


on

Actor Darshan wife met by DK shivakumar
Koo

ಬೆಂಗಳೂರು: ಜು.23ರಂದು ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಕರಗ ಮಹೋತ್ಸವದ ಕಾರ್ಯಕ್ರಮದಲ್ಲೂ ನಟ ದರ್ಶನ್ ಹೆಸರು ಪ್ರಸ್ತಾಪವಾಗಿದೆ. ಸಭಾ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಲು ಆಗಮಿಸ್ತಿದ್ದಂತೆ ಜನರು ಡಿ ಬಾಸ್ ಅಂತ (Actor Darshan) ಕೂಗಿದ್ದಾರೆ. ದರ್ಶನ್ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ದರ್ಶನ್ ಪತ್ನಿ ವಿಜಯಲಕ್ಷ್ಮೀ ನನ್ನ ಭೇಟಿಗೆ ಸಮಯ ಕೇಳಿದ್ದಾರೆ. ಅವರನ್ನು ಭೇಟಿಯಾಗಿ ಮಾತನಾಡ್ತೀನಿ. ಏನಾದರೂ ತಪ್ಪಾಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೀನಿ. ನಾವೆಲ್ಲರೂ ದೇಶದ ಕಾನೂನಿಗೆ ಬೆಲೆ ಕೊಡಲೇಬೇಕು. ಯಾರಿಗೆ ಅನ್ಯಾಯ ಆಗಿದ್ದರೂ ನಾವೆಲ್ಲರೂ ಸೇರಿ ಸರಿಪಡಿಸೋಣ ಎಂದು ಹೇಳಿದ್ದರು. ಇದೀಗ ಡಿಸಿಎಂಸಿಎಂ ಭೇಟಿ ಮಾಡಿದ್ದಾರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೇ 25 ಕ್ಕೆ ಬಗ್ಗೆ ತೀರ್ಪು ಬರಲಿದೆ. ಈ ನಡುವೆ ಡಿಕೆಶಿ ಅವರನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ಇದೀಗ ಈ ನಡೆ ತೀವ್ರ ಕುತೂಹಲ ಮೂಡಿಸಿದೆ. ಡಿಕೆಶಿ ಜತೆ ಮಾತನಾಡಿ ಮನೆ ಊಟಕ್ಕೆ ಅನುವು ಕೋಡುವಂತೆ ಮನವಿ ಮಾಡಿರಬಹುದು ಎನ್ನಲಾಗಿದೆ. ದರ್ಶನ್‌ ಪತ್ನಿ ಜತೆ ಜೋಗಿ ಪ್ರೇಮ್‌ ಕೂಡ ಇದ್ದರು.

ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ

ಈ ಬಗ್ಗ ಜೋಗಿ ಪ್ರೇಮ್‌ ಮಾತನಾಡಿ ʻʻನಟ ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ನಾನು ದರ್ಶನ್ ವಿಚಾರ ಮಾತನಾಡೋಕೆ ಬಂದಿರಲಿಲ್ಲ ನಾನು ಆಗಾಗ ಡಿಸಿಎಂನ ಭೇಟಿ ಮಾಡೊಕೆ ಬರ್ತಾ ಇರ್ತೀನಿ. ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಅವರ ಪತ್ನಿ ಮತ್ತು ದರ್ಶನ್‌ ಸಹೋದರ ಭೇಟಿ ಮಾಡೋಕೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಸ್ಕೂಲ್ ವಿಚಾರ ಮಾತಾಡೋಕೆ ಬಂದಿದ್ದರು.ನನ್ನ ಮಗ ಅವರ ಮಗ ಇಬ್ಬರು ಒಂದೇ ಕಡೆ ಓದುತ್ತ ಇದ್ದರು. ವಿನೀಶ್ ಈಗ ಬೇರೆ ಸ್ಕೂಲ್ ಶಿಷ್ಟ್ ಆಗಿದ್ದಾನೆ. ಹಾಗಾಗಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇವೆ. ದರ್ಶನ್ ನನ್ನ ಸ್ನೇಹಿತ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಭೇಟಿಗೂ ಇದಕ್ಕೂ ಸಂಬಂಧ ಇಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿಗೆ ಆಗಮಿಸಿದ ಸಾಧುಕೋಕಿಲ ಭೇಟಿ ನಿರಾಕರಿಸಿದ ದರ್ಶನ್!

ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

Continue Reading
Advertisement
Karnataka Weather
ಕರ್ನಾಟಕ2 mins ago

Karnataka Weather: ಇಂದು ಕರಾವಳಿ, ಬೆಳಗಾವಿ, ವಿಜಯಪುರ ಸೇರಿ ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ!

Tips For Teenager Parents
ಆರೋಗ್ಯ17 mins ago

Tips For Teenager Parents: ಉತ್ತಮ ಪೋಷಕರಾಗಿ; ಹರೆಯದ ಮಕ್ಕಳನ್ನು ಅರ್ಥ ಮಾಡಿಕೊಳ್ಳಿ!

Contact Lens
ಆರೋಗ್ಯ32 mins ago

Contact Lens: ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುತ್ತೀರಾ? ಈ ವಿಷಯಗಳು ತಿಳಿದಿರಲಿ!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಈ ರಾಶಿಯವರು ಅತ್ಯುತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ!

BJP Protest
ಕರ್ನಾಟಕ6 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ7 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ7 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ8 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ9 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ9 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ7 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ7 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌