Site icon Vistara News

Kannada Movie Posters: ಯುಗಾದಿಗೆ ಬಂತು ಚಂದನವನದಿಂದ ಬಿಗ್‌ ಅಪ್‌ಡೇಟ್‌; ‘ಕ’ ಅಕ್ಷರವೇ ಪ್ರಮುಖ ಹೈಲೈಟ್‌!

Kannada Movie Posters Ugadi update

ಬೆಂಗಳೂರು: ಯುಗಾದಿ ಬಂತು ಅಂದರೆ ಸಿನಿಮಾಗಳು (Kannada Movie Posters) ಹೊಸ ಅಪ್‌ಡೇಟ್‌ ನೀಡುತ್ತಲೇ ಇರುತ್ತವೆ. ಸಿನಿರಸಿಕರಿಗೆ ಅಂದು ಭರ್ಜರಿ ಗುಡ್‌ ನ್ಯೂಸ್‌. ಈ ಬಾರಿ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಯುಗಾದಿ ಹಬ್ಬ ಜೋರಾಗಿದೆ. ಕೆಲವು ಸಿನಿಮಾಗಳ ಪೋಸ್ಟರ್‌ಗಳು ಗಮನ ಸೆಳೆದಿವೆ. ಇದರಲ್ಲಿ ವಿಶೇಷ ಅಂದರೆ ಎಲ್ಲ ಸಿನಿಮಾಗಳ ಹೆಸರು ʻಕʼದಿಂದ ಶುರುವಾಗಿದೆ. ಯಾವೆಲ್ಲ ಸಿನಿಮಾಗಳು ಅವು? ಬನ್ನಿ ನೋಡೋಣ!

‘ಕೋಟಿ’

ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು (ಪರಮ್‌) ಪರಮೇಶ್ವರ್ ಗುಂಡ್ಕಲ್ (parameshwar gundkal).‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ.

ಯುಗಾದಿ ಹಬ್ಬದ ದಿನವಾದ ಇಂದು (ಏ.9) ʻಕೋಟಿʼ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌
ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಇದೇ ಏಪ್ರಿಲ್ 13ಕ್ಕೆ‌ ಸಂಜೆ 5 ಗಂಟೆಗೆ ‘ಕೋಟಿ’ ಟೀಸರ್ ರಿಲೀಸ್ ಆಗುತ್ತಿದೆ.

‘ಕೃಷ್ಣಂ ಪ್ರಣಯ ಸಖಿ’

ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದೆ. ಶ್ರೀನಿವಾಸರಾಜು (Srinivas Raju) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ನಟಿಸಿದ್ದಾರೆ.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ಕರಾವಳಿ

ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯುಗಾದಿ ಹಬ್ಬಕ್ಕೆ ಸಿನಿಮಾ ತಂಡ ಹೊಸ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸೈಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ ಹೊಸ ಸಿನಿಮಾ ಹೆಸರು ಅನೌನ್ಸ್‌! ಪರಮ್‌ ಆ್ಯಕ್ಷನ್‌ ಕಟ್‌!

ಕಲ್ಟ್

ʻಬನಾರಸ್ʼ ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ (Zaid Khan) ಹಾಗೂ ಈ ವರ್ಷದ ಮೊದಲ ಹಿಟ್ ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ (Anil Kumar) ಕಾಂಬಿನೇಶನ್‌ನಲ್ಲಿ ‘ಕಲ್ಟ್’ ಸಿನಿಮಾ ಮೂಲಕ ತೆರೆಗೆ ಬರುತ್ತಿದ್ದಾರೆ. ಝೈದ್ ಖಾನ್ ನಟನೆಯ ಎರಡನೇ ಚಿತ್ರ ಇದಾಗಿದ್ದು, ಶೀರ್ಷಿಕೆ ಬಗ್ಗೆ ಈಗಿನಿಂದಲೇ ಕುತೂಹಲ ಮೂಡಿಸಿದೆ.ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Exit mobile version