Kannada New Movie: ’ಶಾಖಾಹಾರಿ’ ಸಿನಿಮಾಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್! - Vistara News

ಸ್ಯಾಂಡಲ್ ವುಡ್

Kannada New Movie: ’ಶಾಖಾಹಾರಿ’ ಸಿನಿಮಾಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

Kannada New Movie: ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

VISTARANEWS.COM


on

Kannada New Movie ashwini puneeth rajkumar suppor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದ (Kannada New Movie) ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ʻಶಾಖಾಹಾರಿʼ. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ.

ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ `ಶಾಖಾಹಾರಿ’ ಸಿನಿಮಾ ತೆರೆಗೆ ಬರುತ್ತಿದೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ʻʻಈ ಹಿಂದೆ ನಾವು ಯೋಗರಾಜ್ ಮಣಿ ಎಂಬ ಸಿನಿಮಾ ಮಾಡಬೇಕಾದರೆ ರಘು ಸರ್ ಸಗುತ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆʼʼ ಎಂದರು.

ಇದನ್ನೂ ಓದಿ: Kannada New Movie: ಸಂಕ್ರಾಂತಿಯಲ್ಲಿ ಮುಹೂರ್ತ ಕಂಡಿದ್ದ ʻಶಭ್ಬಾಷ್’ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ರಂಗಾಯಣ ರಘು ಮಾತನಾಡಿ, “ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀ್ಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದ ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೇ ಸಾಲದು. ನನ್ನದು 350 ಸಿನಿಮಾವಾಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ jತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ’ ಎಂದರು.

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, “ಇದೇ ತಿಂಗಳ 16 ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ರೆಡಿಯಾಗುವವರೆಗೂ ಅದೊಂದು ಆರ್ಟ್. ರೆಡಿಯಾದ್ಮೇಲೆ ಅದೊಂದು ಪ್ರಾಡಕ್ಟ್‌. ಪ್ರಾಡೆಕ್ಟ್ ಬಳಿಕ ಬ್ಯುಸಿನೆಸ್ ಆಗುತ್ತದೆ. ಬ್ಯುಸಿನೆಸ್ ಬಳಿಕ ಮಾರ್ಕೆಟ್ ಬರುತ್ತದೆ. ಒಂದೊಳ್ಳೆ ಪ್ರಾಡಕ್ಟ್‌ಗೆ ಒಂದೊಳ್ಳೆ ಬ್ಯುಸಿನೆಸ್ ಆಗುತ್ತೇ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಸಿನಿಮಾ ತೆರೆಗೆ ಬರ್ತಿದ್ದು, ನಿಮ್ಮ ಬೆಂಬಲ ಇರಲಿ” ಎಂದರು.

ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ‘ಶಾಖಾಹಾರಿ’ ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಸಂದೀಪ್‌ ಜೊತೆಗಾಗಿ ವಿಶ್ವಜಿತ್ ರಾವ್ ಕ್ಯಾಮರಾ, ಶಶಾಂಕ್ ನಾರಾಯಣ ಎಡಿಟಿಂಗ್, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಯಲ್ಲಿರುವ ಚಿತ್ರತಂಡ ಇದೇ ತಿಂಗಳ 16ರಂದು ಚಿತ್ರವನ್ನು ತೆರೆಗೆ ತರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು. ಆದರೆ, ಇದಕ್ಕೆ ಸ್ಯಾಂಡಲ್‌ವುಡ್‌ ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Theatre
Koo

ಬೆಂಗಳೂರು: ಐಪಿಎಲ್‌ (IPL), ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿತ್ತು. ಇದರಂತೆ, ಐಪಿಎಲ್‌, ಚುನಾವಣೆ ಜತೆಗೆ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ (Karnataka) ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ, ಫಿಲಂ ಚೇಂಬರ್‌ನಲ್ಲಿ (Film Chamber) ನಿರ್ಮಾಪಕರ ಸಭೆ ನಡೆದಿದ್ದು, ಥಿಯೇಟರ್‌ಗಳನ್ನು (Theatres) ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು” ಎಂದು ನಿರ್ಮಾಪಕರು ಆಗ್ರಹಿಸಿದರು.

ಸ್ಟಾರ್‌ ನಟರ ಜತೆ ಚರ್ಚೆಗೆ ನಿರ್ಧಾರ

ಕರ್ನಾಟಕದಲ್ಲಿ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆಯಾಗದಿರುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಕನ್ನಡ ಚಿತ್ರರಂಗ ದಯನೀಯ ಸ್ಥಿತಿಗೆ ತಲುಪುವ ಕುರಿತು ಕೂಡ ಅಭಿಪ್ರಾಯ ವ್ಯಕ್ತವಾಯಿತು. ಸ್ಟಾರ್‌ ನಟರು ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ಮನವಿ ಮಾಡಲು ಕೂಡ ನಿರ್ಧರಿಸಲಾಯಿತು. ಚಿತ್ರರಂಗದ ಉಳಿವು, ಮುಂದಿನ ದಿನಗಳಲ್ಲಿ ಮಾಡಬೇಕಾದ ಬದಲಾವಣೆಗಳು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಬಂದ್‌ ನಿರ್ಧಾರ ನಿಲ್ಲ ಎಂದ ಎನ್.ಎಂ.ಸುರೇಶ್‌

ಸಭೆಯ ಬಳಿಕ ಮಾತನಾಡಿದ ಎನ್‌.ಎಂ.ಸುರೇಶ್‌, “ಕರ್ನಾಟಕದಲ್ಲಿ ಥಿಯೇಟರ್‌ಗಳನ್ನು ಮುಚ್ಚುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ದೇವೆ. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ” ಎಂದು ತಿಳಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ. ಸುರೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟಗರು, UI ಚಿತ್ರಗಳ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕಬ್ಜ ಖ್ಯಾತಿಯ ಆರ್. ಚಂದ್ರು, ಜಯಣ್ಣ, ತರುಣ್ ಶಿವಪ್ಪ, ಲಹರಿ ವೇಲು, ಹೊಂಬಾಳೆ ಫಿಲಮ್ಸ್‌ ಪ್ರತಿನಿಧಿ ಚಿದಾನಂದ್ ಸೇರಿ ಹಲವು ನಿರ್ಮಾಕರು ಭಾಗವಹಿಸಿದರು. ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು.

ಇದನ್ನೂ ಓದಿ: Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Continue Reading

ಸಿನಿಮಾ

Actor Dhananjay: ʻಕೋಟಿʼ ಸಿನಿಮಾದ ‘ಜನತಾ ಸಿಟಿ’ ಹಾಡು ಔಟ್‌

Actor Dhananjay: ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಕೆಲವು ದಿನಗಳ ಹಿಂದೆ ‘ಮಾತು ಸೋತು’ ಹಾಡು ಬಿಡುಗಡೆ ಮಾಡಿ ಗಮನ ಸೆಳೆದಿದ್ದ ಚಿತ್ರತಂಡ ಇದೀಗ ಮತ್ತೊಂದು ವಿಶೇಷ ಹಾಡನ್ನು ಹೊರ ತಂದಿದೆ. ʼಕೋಟಿʼ ಚಿತ್ರವನ್ನು ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ನಾಯಕಿಯಾಗಿ ಮೋಕ್ಷಾ ಕುಶಾಲ್‌ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Actor Dhananjay
Koo

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತಹ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ (Kotee Movie) ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೊವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದು.

ವಾಸುಕಿ ವೈಭವ್ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂ. ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ತುಂಬಾ ಚಾಲೆಂಜಿಂಗ್ ಆಗಿತ್ತು. ಈ ಹಾಡಿನ ತಯಾರಿ ವೇಳೆ ಸಖತ್ ಮಜ ಮಾಡಿದೀನಿ” ಎಂದು ಹೇಳಿದ್ದಾರೆ.

“ಕೋಟಿʼ ಸಿನಿಮಾದಲ್ಲಿ ‘ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟ. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳ‌ಲ್ಲಿ ಬದುಕುವ ಎಲ್ಲರಿಗೂ ತುಂಬಾ ಹತ್ತಿರ ಆಗಲಿದೆ” ಎಂದು ʼಕೋಟಿʼಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

ʼಕೋಟಿʼ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ʼ777 ಚಾರ್ಲಿʼ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ʼಕಾಂತಾರʼ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ʼಕೋಟಿʼಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಾಮನ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆಲವು ದಿನಗಳ ಹಿಂದೆ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Blink Movie: ಥಿಯೇಟರ್ ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4 ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

VISTARANEWS.COM


on

Blink Movie in half centuru with good in OTT
Koo

ಬೆಂಗಳೂರು: ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” (Blink Movie) ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವಾದದ ನಡುವೆ ʻಬ್ಲಿಂಕ್ʼ ಆಫ್ ಸೆಂಚುರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ಹಂಚಿಕೊಂಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ರವಿಚಂದ್ರ ಎ ಜೆ ಮಾತನಾಡಿ, ʻʻಸಿನಿಮಾ ಈ ಲೆವೆಲ್‌ಗೆ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ತಂಡ ಖುಷಿಯಾಗಬೇಕು ಎಂದರೆ ಅಂದುಕೊಂಡಿರುವ ದೊಡ್ಡ ಬರಬೇಕು. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಿನಿಮಾಗೆ ಭಾಷೆಯ ಎಲ್ಲೆ ಇಲ್ಲʼʼ ಎಂದರು.

ಇದನ್ನೂ ಓದಿ: Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ʻʻಬಹಳ ಖುಷಿಯಾಗುತ್ತಿದೆ. ಎಷ್ಟೋ ವರ್ಷಗಳ ನಂತರ ಹೊಸಬರ ತಂಡ 50 ದಿನಗಳ ಕಾಲ ಸಿನಿಮಾವನ್ನು ಥಿಯೇಟರ್‌ನಲ್ಲಿ ಉಳಿಸಿಕೊಂಡಿದ್ದೇವೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೇವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರ 50 ದಿನ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ ಎಂದು ಭಾವಿಸಿದ್ದೇನೆ. ಈ ಗೆಲುವಿಗೆ ಕಾರಣರಾದ ಇಡೀ ತಂಡಕ್ಕೆ ಧನ್ಯವಾದʼʼ ತಿಳಿಸಿದರು.

ಹೊಂದಿಸಿ ಬರೆಯಿರಿ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ , ಐವತ್ತು ಬರೀ ನಂಬರ್ ಅಷ್ಟೇ ಅಲ್ಲ. ಅದಕ್ಕೂ ಮೀರಿ ಸಿನಿಮಾವನ್ನು ಚಿತ್ರತಂಡ ತೆಗೆದುಕೊಂಡು ಹೋದ ರೀತಿ ನಾವು ಹೊಂದಿಸಿ ಬರೆಯಿರಿ ಮಾಡುವ ಟೈಮ್ ನಲ್ಲಿ ಮಾಡಿದ ರೀತಿ ಇತ್ತು. ಆ ಜರ್ನಿಯೇ ರೋಚಕ. ಬ್ಲಿಂಕ್ ಸಿನಿಮಾ ನೋಡಿದಾಗ ಇದು ಬೇರೆನೇ ಇದೆ ಎನಿಸಿತು. ಮೂರು ವರ್ಷ ಟ್ರಾವೆಲ್ ಆಗಿ ಸಿನಿಮಾ ಮಾಡುವುದು ಒಂದು ಜರ್ನಿಯಾದರೆ. ಸಿನಿಮಾ ತಲುಪಿಸಲು ಅಷ್ಟೇ ಟ್ರಾವೆಲ್ ಆಗಬೇಕು. ಸಿನಿಮಾ ಮಾಡಿ ಸುಮ್ಮನೇ ಆಗಬಾರದು. ಸಿನಿಮಾ ಚೆನ್ನಾಗಿ ಇದ್ದಾಗ ನಿಲ್ಲಿಸಲು ಓಡಾಡಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಒಟಿಟಿಯಲ್ಲಿಯೂ ಬ್ಲಿಂಕ್‌ಗೆ ಬಹುಪರಾಕ್

ಥಿಯೇಟರ್‌ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದು ಮೂರರಲ್ಲಿ ಮತ್ತೊಂದು ಸಿನಿಮಾ ಎಂದೇ ಅಂದುಕೊಳ್ಳಲಾಗಿತ್ತು. ಆದರೆ ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋದವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿತ್ತು. ಹೀಗಾಗಿ ಶೋ ಹೆಚ್ಚಳದಿಂದ ಪ್ರೇಕ್ಷಕರ ಪ್ರೀತಿಯೂ ಪಡೆದ ಬ್ಲಿಂಕ್ ಸಿನಿಮಾ ಆಫ್ ಸೆಂಚುರಿ ಬಾರಿಸಿದೆ.

Continue Reading

ಸ್ಯಾಂಡಲ್ ವುಡ್

Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

Daredevil Mustafa: ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ.

VISTARANEWS.COM


on

daredevil mustafa book release
Koo

ಬೆಂಗಳೂರು: ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ʻಡೇರ್ ಡೆವಿಲ್ ಮುಸ್ತಾಫಾʼ (Daredevil Mustafa) . ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಪ್ರೀತಿ ಪಡೆದಿತ್ತು. ಶಶಾಂಕ ಸೋಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ʻಡೇರ್ ಡೆವಿಲ್ ಮುಸ್ತಾಫಾʼ ಚಿತ್ರವೀಗ ಪುಸ್ತಕ ರೂಪ ಪಡೆದಿದೆ.

ʻಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ, ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಇದನ್ನೂ ಓದಿ: Dare devil Mustafa: ಸದ್ದಿಲ್ಲದೇ ಒಟಿಟಿಗೆ ಬಂದೇ ಬಿಡ್ತು ʻಡೇರ್‌ಡೆವಿಲ್‌ ಮುಸ್ತಾಫಾ‌ʼ

ಪುಸ್ತಕದ ವಿಶೇಷತೆಗಳೇನು?

ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ. ಒಂದು ಸಣ್ಣ ಕಥೆ ಎತ್ತಿಕೊಂಡು ಸ್ಕ್ರೀನ್ ಪ್ಲೇ, ಕಥೆ ಡೈಲಾಗ್ ಬರೆದು ದೃಶ್ಯ ರೂಪಕ್ಕೆ ಹೇಗೆ ಇಳಿಸಲಾಯಿತು.? ಸಣ್ಣ ಕಥೆ ಚಿತ್ರ ಕಥೆ ಆಗಿದ್ದೇಗೆ? ಕಥೆ ಸಿನಿಮಾವಾಗಿದ್ದೇಗೆ ಎಂಬ ವಿಷಯಗಳು ಈ ಪುಸ್ತಕ ಓದಿದರೆ ತಿಳಿಯುತ್ತದೆ.

ಇದನ್ನೂ ದ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಸಿನಿಮಾ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳ ಕೊರತೆ ಇದೆ.‌ಅದರಲ್ಲಿಯೂ ಇಂಗ್ಲೀಷ್ ಭಾಷೆಯಲ್ಲಿ ಕಥೆ ಬರೆದು ಸಿನಿಮಾ ಮಾಡುವವರು ಹೆಚ್ಚಿರುವಾಗ ಕನ್ನಡದಲ್ಲಿ ಸ್ಕ್ರೀಪ್ಟ್ ಬರೆದು ಸಿನಿಮಾ ಮಾಡಿದ್ದೇವೆ ಅನ್ನೋದನ್ನು ಡೇರ್ ಡೆವಿಲ್ ಮುಸ್ತಾಫಾ ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದ ಸದ್ಯದ ಸಿನಿಮಾರಂಗ ಇರುವ ಪರಿಸ್ಥಿತಿಯಲ್ಲಿ ಸಿನಿಮಾ ಸೂಕ್ಷ್ಮಗಳ ಬಗ್ಗೆ ಅರಿವು ಹುಟ್ಟಿಸಬಲ್ಲ ಇಂಥ ಕೃತಿಗಳ ಅಗತ್ಯ ಖಂಡಿತ ಇದೆ.

Continue Reading
Advertisement
Rajakaluve
ಸಂಪಾದಕೀಯ7 mins ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ7 mins ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ13 mins ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ51 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ2 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ2 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ2 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ2 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ19 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌