Kannada New Movie: ಮಂಜುನಾಥನ ಸನ್ನಿಧಿಯಲ್ಲಿ 'ಗಾಡ್ ಪ್ರಾಮಿಸ್' ಸ್ಕ್ರಿಪ್ಟ್‌ ಪೂಜೆ; ನಟಿಸಲು ನಿಮಗೂ ಇದೆ ಚಾನ್ಸ್‌ - Vistara News

ಸ್ಯಾಂಡಲ್ ವುಡ್

Kannada New Movie: ಮಂಜುನಾಥನ ಸನ್ನಿಧಿಯಲ್ಲಿ ‘ಗಾಡ್ ಪ್ರಾಮಿಸ್’ ಸ್ಕ್ರಿಪ್ಟ್‌ ಪೂಜೆ; ನಟಿಸಲು ನಿಮಗೂ ಇದೆ ಚಾನ್ಸ್‌

Kannada New Movie: ಹೊಸ ನಿರೀಕ್ಷೆಗಳೊಂದಿಗೆ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿರುವ ಯುವ ಪ್ರತಿಭೆ ಸೂಚನ್ ಶೆಟ್ಟಿ ‘ಗಾಡ್ ಪ್ರಾಮಿಸ್’ ಚಿತ್ರದಲ್ಲಿ ನಟನಾಗಿ ಬಣ್ಣ ಹಚ್ಚುವುದರ ಜತೆಗೆ ನಿರ್ದೇಶನವನ್ನೂ ಮಾಡಲಿದ್ದಾರೆ. ಸದ್ಯ ಚಿತ್ರದ ಸ್ಕ್ರಿಪ್ಟ್‌ ಪೂಜೆ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ನೆರವೇರಿತು.

VISTARANEWS.COM


on

god promise
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಗಾಡ್ ಪ್ರಾಮಿಸ್’ (God Promise) ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ (Suchan Shetty) ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ಗಾಡ್ ಪ್ರಾಮಿಸ್’ ಸಿನಿಮಾದ ಸ್ಕ್ರಿಪ್ಟ್‌ ಪೂಜೆ ಸರಳವಾಗಿ ಧರ್ಮಸ್ಥಳ (Dharmasthala)ದಲ್ಲಿ ನೆರವೇರಿದೆ (Kannada New Movie).

ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇತ್ತೀಚೆಗಷ್ಟೇ ಸೂಚನ್ ಚೊಚ್ಚಲ ನಿರ್ದೇಶನದ ʼಗಾಡ್ ಪ್ರಾಮಿಸ್ʼ ಸಿನಿಮಾದ ಸ್ಕ್ರಿಪ್ಟ್‌ ಪೂಜೆ ನಡೆದಿದೆ. ಪೂಜೆಯಲ್ಲಿ ಸೂಚನ್ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಮೇ ಮೊದಲ ವಾರದಿಂದ ʼಗಾಡ್ ಪ್ರಾಮಿಸ್ʼ ಶೂಟಿಂಗ್ ಆರಂಭವಾಗಲಿದೆ. ಚಿತ್ರೀಕರಣದ ಅಖಾಡಕ್ಕೆ ಇಳಿಯುವುದಕ್ಕೂ ಮೊದಲೇ ಚಿತ್ರತಂಡ ಆಡಿಷನ್‌ ಕರೆದಿದೆ.

ʼಗಾಡ್ ಪ್ರಾಮಿಸ್ʼ ತಂಡಕ್ಕೆ ತಲುಪಿದ್ದು 3,800 ಅರ್ಜಿ

ʼಗಾಡ್ ಪ್ರಾಮಿಸ್ʼ ಚಿತ್ರತಂಡ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಆಡಿಷನ್ ಕರೆಯಲಾಗಿದೆ. ಅದರಂತೆ ಆನ್‌ಲೈನ್‌ನಲ್ಲಿ ಬರೋಬ್ಬರಿ 3,800 ಅರ್ಜಿಗಳು ಬಂದಿವೆ. ಇದೇ ತಿಂಗಳ 31ರಂದು ಆಡಿಷನ್ ನಡೆಯುತ್ತಿದ್ದು, ಎಲ್ಲ ವರ್ಗದ ವಯೋಮಾನದವರು ಭಾಗಿಯಾಗಿ ತಮ್ಮ ಪ್ರತಿಭೆ ಪ್ರದರ್ಶಿಸಬಹುದು.

ʼಗಾಡ್ ಪ್ರಾಮಿಸ್ʼ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್‌ನ ಅಡಿಯಲ್ಲಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ʼಹಫ್ತಾʼ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಹೌಸ್‌ನ ಎರಡನೇ ಕಾಣಿಕೆ ʼಗಾಡ್ ಪ್ರಾಮಿಸ್ʼ. ಈ ಮೂಲಕ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಮೊದಲ ಕನಸಿಗೆ ಜತೆಯಾಗಿದೆ.

ʼಗಾಡ್ ಪ್ರಾಮಿಸ್ʼ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.

ಸೌಂಡ್ ಮಾಡಲು ‘ಖಾಲಿ ಡಬ್ಬ’ ರೆಡಿ

ಬೆಂಗಳೂರು: ʼಖಾಲಿ ಡಬ್ಬʼ (Khali Dabba) ಹೀಗೊಂದು ಶೀರ್ಷಿಕೆಯ ಸಿನಿಮಾ ಬರುತ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ. ಅಂಬ್ಳೆ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್ ಗುಡಿ ನಾಯಕನಾಗಿ ನಟಿಸಿದ್ದು, ಆದ್ಯಾ ಪ್ರಿಯಾ, ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಬೆಂಗಳೂರಿನ ಎಸ್.ಆರ್.ವಿ. ಥಿಯೇಟರ್‌ನಲ್ಲಿ ಮಾರ್ಚ್‌ 25ರಂದು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Kannada Movie Review: ʼಬ್ಲಿಂಕ್‌ʼ; ಸಮಯದ ಹಿಂದೆ ಮಾಯೆಯ ಸವಾರಿ!

ʼಖಾಲಿ ಡಬ್ಬʼ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಬೆಂಗಳೂರು ಮಂಡ್ಯ ಮೈಸೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ಕುರಿ ಪ್ರತಾಪ್, ಮಜಾಭಾರತ ಸೀತಾರಾಮ್, ಸುಧಾ, ಹನುಮಕ್ಕ ಹಾಗೂ ವಿ.ನಾಗೇಂದ್ರ ಪ್ರಸಾದ್ ತಾರಾಬಳಗದಲ್ಲಿದ್ದಾರೆ. ಎಸ್.ಯು.ಎ. ಎಂಟರ್‌ಟೈನ್‌ಮೆಂಟ್‌ನಡಿ ಮಂಜು ಗುರಪ್ಪ ನಿರ್ಮಾಣ ಮಾಡಿದ್ದು, ಅಪ್ಪಾಜಿ, ಸೌಮ್ಯಾ ರಾಮ್, ಲಕ್ಷ್ಮೀ ಮಹೇಂದ್ರ, ಚಿಕ್ಕೇಗೌಡ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Vinay Gowd: . ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Got three Film Offer
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವಿನಯ್‌ ಗೌಡ ( Vinay Gowda) ಅವರಿಗೆ ಹಲವು ಆಫರ್‌ಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ವಿನಯ್‌ ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಇದರಲ್ಲಿ ಸಖತ್‌ ಹೆಸರು ಗಳಿಸಿದ್ದರು.

ಹಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸಿದ್ದರು ವಿನಯ್‌. ಇದೀಗ ಮಾಧ್ಯಮದವೊಂದರಲ್ಲಿ ತಮಗೆ ಬಂದ ಆಫರ್‌ಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾಗಳು, ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

Continue Reading

ಸಿನಿಮಾ

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

Family Drama Trailer: ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ ಆಕರ್ಷ್ ಈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ.

VISTARANEWS.COM


on

Family Drama Trailer Out
Koo

ಬೆಂಗಳೂರು: 2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದೇ ಸುದ್ದಿ. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ‘ (Family Drama Trailer) ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ ಅಂತೀರಾ? ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾ ತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ ‘ಫ್ಯಾಮಿಲಿ ಡ್ರಾಮ’.

ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ಬಿಡುಗಡೆಗೆ ರೆಡಿಯಾಗಿರುವ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜತೆಗೆ ಒಂದಿಷ್ಟು ಕಿರು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

ಇನ್ನೂ ಈ ಸಿನಿಮಾದಲ್ಲಿ ʻಆಚಾರ್ ಆ್ಯಂಡ್ ಕೋʼ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ, ʻಡೇರ್ ಡೆವಿಲ್ ಮುಸ್ತಾಫʼ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ʻಆಚಾರ್ ಆ್ಯಂಡ್ ಕೋʼ ಬಳಿಕ ಸಿಂಧು (Sindhu Sreenivasa Murthy) ಒಪ್ಪಿಕೊಂಡ ಚಿತ್ರ ಇದಾಗಿದೆ. ‘ಫ್ಯಾಮಿಲಿ ಡ್ರಾಮ’ ಡಾರ್ಕ್‌ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ತಂಡ.

ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು.

ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.

Continue Reading

ಸ್ಯಾಂಡಲ್ ವುಡ್

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

Dheeren Rajkumar: ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

VISTARANEWS.COM


on

dheeren rajkumar announces a new film change his name
Koo

ಬೆಂಗಳೂರು: ‘ಶಿವ 143’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಧೀರೇನ್ ರಾಮ್‌ಕುಮಾರ್ (Dheeren Ramkumar) ಮೊದಲ ಪ್ರಯತ್ನದಲ್ಲಿ ಸೋತಿದ್ದರು. ಎರಡು ವರ್ಷದ ಹಿಂದೆ ಬಂದಿದ್ದ ‘ಶಿವ 143’ ಸಿನಿಮಾ ಅಷ್ಟಾಗಿ ಸದ್ದು ಮಾಡಲಿಲ್ಲ. ಇದೀಗ ಹೊಸ ಸಿನಿಮಾ ಸಾಹಸಕ್ಕೆ ಧೀರೇನ್ ಮುಂದಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೊಸ ಸಿನಿಮಾ ಮೂಲಕ ಹೊಸ ಜರ್ನಿ ಎಂದಿದ್ದಾರೆ.

ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ. ಸ್ಟುಡಿಯೋಸ್‌ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. “ರತ್ನನ್ ಪ್ರಪಂಚ” ಮೂಲಕ ರೋಹಿತ್ ಪದಕಿ, “ಪೌಡರ್” ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, “ಗುರುದೇವ್ ಹೊಯ್ಸಳ” ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದೆ.

ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ. ಪ್ರಸ್ತುತವಾಗಿ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರ ಸೆಟ್ಟೇರಿದ್ದು, “ಪೌಡರ್” ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ವರನಟ ರಾಜಕುಮಾರ್ ಪುತ್ರಿ ಪೂರ್ಣಿಮಾ ಮಗ ಧೀರೇನ್‌ ರಾಮ್‌ಕುಮಾರ್‌ (ಧೀರೇನ್ ರಾಜ್‌ಕುಮಾರ್ʼ).

ಇದನ್ನೂ ಓದಿ: Shiva 143 | ಧೀರೇನ್‌ ರಾಮ್‌ಕುಮಾರ್‌ ಚಿತ್ರ ಶಿವ 143 ರಾಜ್ಯಾದ್ಯಂತ ಬಿಡುಗಡೆ : ಅಪ್ಪು ಕಟೌಟ್ ಮುಖ್ಯ ಆಕರ್ಷಣೆ!

ʻʻಶಿವ 143ʼʼ ಸಿನಿಮಾ

ತೆಲುಗಿನ ‘RX100’ ಸಿನಿಮಾ ರೀಮೇಕ್ ಆಗಿದ್ದ ‘ಶಿವ 143’ ಚಿತ್ರಕ್ಕೆ ಅರ್ಜುನ್ ಜನ್ಯಾ ಟ್ಯೂನ್ ಹಾಕಿದ್ದರು. ಅವಿನಾಶ್, ಚರಣ್ ರಾಜ್, ಚಿಕ್ಕಣ್ಣ, ಸಾಧು ಕೋಕಿಲ, ಶೋಭರಾಜ್ ಸೇರಿ ದೊಡ್ಡ ತಾರಾಗಣವೇ ಚಿತ್ರದಲ್ಲಿತ್ತು.
ಈ ಚಿತ್ರ ಜಯಣ್ಣ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಮೂಡಿ ಬಂದಿತ್ತು. ಛಾಯಾಗ್ರಹಣ ಜವಾಬ್ದಾರಿಯನ್ನು ಶಿವ ಹೊತ್ತಿದ್ದರು. ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಚಿತ್ರ ನಿರ್ಮಾಣ ಮಾಡಿದ್ದರು. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದರು.

ನಾಯಕಿಯಾಗಿ ಮಾನ್ವಿತಾ ಕಾಮತ್‌ ನಟಿಸಿದ್ದರು. ಚರಣ್‌ ರಾಜ್‌ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು

ಧೀರೇನ್ ಸಹೋದರಿ ಧನ್ಯಾ ರಾಮ್‌ಕುಮಾರ್ ಕೂಡ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಧನ್ಯಾ ಬಳಿಕ ‘ಹೈಡ್ ಅಂಡ್ ಸೀಕ್’, ‘ಕಾಲಾಪತ್ಥರ್’, ‘ಎಲ್ಲಾ ನಿನಗಾಗಿ’ ಸಿನಿಮಾಗಳಲ್ಲಿ ನಟಿಸಿದರು.

Continue Reading

ಸಿನಿಮಾ

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

Ramana Avatara Trailer: ʻರಾಮನ ಅವತಾರ’ ಈ ಚಿತ್ರದ ಟ್ರೈಲರ್‌ (Ramana Avatara Trailer) ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಗಿಸಲು ಬರುತ್ತಿದ್ದಾರೆ.ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

VISTARANEWS.COM


on

Ramana Avatara trailer out
Koo

ಬೆಂಗಳೂರು: ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೊಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ʻರಾಮನ ಅವತಾರ ಈ ಚಿತ್ರದ ಟ್ರೈಲರ್‌ (Ramana Avatara Trailer) ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ʻರಾಮನ ಅವತಾರ ಸಿನಿಮಾʼದ ಮೊದಲ ನೋಟ ಅನಾವರಣ ಮಾಡಲಾಯಿತು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಟ ರಿಷಿ ಮಾತನಾಡಿ, ʻʻಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ʻಆಪರೇಷನ್ ಅಲಮೇಲಮ್ಮʼ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್ಟೈನಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರಿತ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ʻಆಪರೇಷನ್ ಅಲಮೇಲಮ್ಮʼ ಮ್ಯಾಜಿಕ್. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು. ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024ರಲ್ಲಿ ನಡೆಯುವ ಘಟನೆಗೆ ರಾಮಾಯಣ (Ramana Avatara Trailer) ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಸಿನಿಮಾ ಮೇ‌ 10ರಂದು ರಿಲೀಸ್ ಆಗುತ್ತಿದೆ. ಹಾಡುಗಳು ನನಗೆ ತುಂಬಾ ಇಷ್ಟ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದʼʼ ಎಂದರು.

ನಿರ್ದೇಶಕ ವಿಕಾಸ್ ಪಂಪಾಪತಿ ಮಾತನಾಡಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ಹೇಳಿದರು.

ಇದನ್ನೂ ಓದಿ: Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

ನಟಿ ಪ್ರಣೀತಾ ಸುಭಾಷ್ ಮಾತನಾಡಿ, ʻʻರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ರಿಷಿ ಬೇರೆ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತುʼʼ ಎಂದು ಹೇಳಿದರು.

ನಟಿ ಶುಭ್ರ ಅಯ್ಯಪ್ಪ ಮಾತನಾಡಿ, ʻʻನಿರ್ದೇಶಕರು ನನ್ನ ಪಾತ್ರದ ಹೇಳಿದಾಗ ನಾನು ಎಕ್ಸೈಟ್ ಆದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ನನ್ನನ್ನು ನಾನು ನೋಡಲು ಕಾತುರನಾಗಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೇ 10ಕ್ಕೆ‌ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಇರಲಿʼʼಎಂದರು.

ರಾಮನ‌ ಅವತಾರ ಟ್ರೈಲರ್‌ ಪ್ರಾಮಿಸಿಂಗ್ ಆಗಿದೆ. ಟ್ರೇಲರ್‌ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಗಿಸಲು ಬರುತ್ತಿದ್ದಾರೆ.

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ಇದನ್ನೂ ಓದಿ: Actor Rishi: ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್!

‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಮರನಾಥ್ ಸಂಕಲನ ಚಿತ್ರಕ್ಕಿದೆ. ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

Continue Reading
Advertisement
Karnataka Weather
ಕರ್ನಾಟಕ26 mins ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ27 mins ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ51 mins ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ1 hour ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ2 hours ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ2 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು2 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ2 hours ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್2 hours ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20248 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202410 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌