Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ' ಅವತಾರದಲ್ಲಿ! - Vistara News

ಸ್ಯಾಂಡಲ್ ವುಡ್

Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ’ ಅವತಾರದಲ್ಲಿ!

Kannada News Movie: ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

VISTARANEWS.COM


on

Kannada New Movie Gumti new post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು (Kannada New Movie) ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’ ಎಂದು ಹೆಸರಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ತೆರೆಮೇಲೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ‘ಡಬಲ್ ರೋಲ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

ಈಗಾಗಲೇ ಸದ್ದಿಲ್ಲದೆ ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರತಂಡ ‘ಗುಂಮ್ಟಿ’ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಇದೀಗ ‘ಗುಂಮ್ಟಿ’ ಸಿನಿಮಾದ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಎರಡು-ಮೂರು ತಿಂಗಳಿನಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಇದನ್ನೂ ಓದಿ: Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

ಕನ್ನಡ ಸೇರಿದಂತೆ ಮಲಯಾಳಂ ಸಿನಿಮಾದಲ್ಲೂ ಕೂಡ ಸಂದೇಶ್ ಶೆಟ್ಟಿ ಅವರು ಅಭಿನಯಿಸಿದ್ದಾರೆ. ‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ.

ಸಿನಿಮಾದಲ್ಲಿ ನಾಯಕ ಸಂದೇಶ್ ಶೆಟ್ಟಿ ಆಜ್ರಿ ಅವರಿಗೆ ವೈಷ್ಣವಿ ನಾಡಿಗ್ ಹಾಗೂ ನೇಹಾ ಗೌಡ ಜೋಡಿಯಾಗಿದ್ದಾರೆ. ,ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಗುಂಮ್ಟಿ’ ಸಿನಿಮಾ ಅನೀಶ್ ಡಿಸೋಜಾ ಕ್ಯಾಮರದ ಕೈಚಳಕದಲ್ಲಿ ಮೂಡಿ ಬಂದಿದ್ದು, ಸಿನಿಮಾಕ್ಕೆ ಮೋಹನ್ ಸಂಗೀತ ಸಂಯೋಜಿಸಿದ್ದಾರೆ.

‘ಗುಂಮ್ಟಿ’ ಸಿನಿಮಾಕ್ಕೆ ಶಿವರಾಜ್ ಮೇಹು ಸಂಕಲನವಿದೆ. ‘ಯುಗಾದಿ’ ಹಬ್ಬದ ಸಂದರ್ಭದಲ್ಲಿ ‘ಗುಂಮ್ಟಿ’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ‘ಗುಂಮ್ಟಿ’ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಕರ್ನಾಟಕ

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಹಾಸ್ಯನಟ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹಾಜರಾಗಿದ್ದು, ನಟ ದರ್ಶನ್‌ ಜತೆ (Actor Darshan) ಜೂನ್‌ 8ರಂದು (ಇದೇ ರಾತ್ರಿ ರೇಣುಕಾಸ್ವಾಮಿ ಹತ್ಯೆಯಾಗಿದ್ದು) ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ್ದು ನಿಜ ಎಂಬುದಾಗಿ ನಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

ಪೊಲೀಸ್‌ ಠಾಣೆಯಲ್ಲಿ ಚಿಕ್ಕಣ್ಣ

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಸ್ಯಾಂಡಲ್ ವುಡ್

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Rakshit Shetty: ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Rakshit Shetty Ekam web series release date announce
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಈ ವೆಬ್‌ ಸಿರೀಸ್‌ ಜುಲೈ 13ರಂದು ರಿಲೀಸ್‌ ಆಗುತ್ತಿದೆ. ಈ ಬಗ್ಗೆ ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದು ಹೀಗೆ.  

ʻʻ2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ! ಇರಲಿ. ಪರಂವಃ ಹಾಗು ಜರ್ನಿಮ್ಯಾನ್‌
ಫಿಲಂಸ್‌ ಒಟ್ಟಿಗೆ “ಏಕಂ” ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ
ಉತ್ಸಾಹ ನಮ್ಮಲ್ಲಿ. ಕನ್ನಡದಲ್ಲೊಂದು ವೆಬ್‌ ಸೀರೀಸ್‌ ಹೊರ ಬರಲು ಇದೆ ಸೂಕ್ತ ಸಮಯ
ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್‌ ವಕ್ಕರಿಸಿತು! ಜಗತ್ತೇ ತಲೆ ಕೆಳಗಾದ ಸಮಯ.
ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು.

ಅಕ್ಟೋಬರ್‌ 2021. “ಏಕಂ”ನ ಫೈನಲ್‌ ಕಟ್‌ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು.
ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು! “ಏಕಂ”
ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ! ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು| ಯಾವುದೇ
ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎ೦ದು ನಾನು
ಭಾವಿಸುತ್ತೇನೆ.

ಇದನ್ನೂ ಓದಿ: Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಹಾಗಾಗಿ, “ಏಕಂ” ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ.
‘ಏಕಂ” ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು
ನಿರ್ಲಕ್ಷಿಸುವಂತಿಲ್ಲ ಎ೦ಬುದನ್ನು ನಾನು ಬಲವಾಗಿ. ನಂಬಿದ್ದೇನೆ. “ಏಕಂ” ಒಂದು ಶ್ಲಾಘನೀಯ ಪ್ರಯತ್ನ.
ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ
ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆʼʼಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಇನ್ನು ಪೋಸ್ಟರ್‌ ಮಾಹಿತಿ ಪ್ರಕಾರ ಈ ಸಿರೀಸ್‌ ಜುಲೈ 13ರಂದು www.ekamtheseries.comನಲ್ಲಿ ರಿಲೀಸ್‌ ಆಗಲಿದೆ.

ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Kannada New Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

VISTARANEWS.COM


on

Kannada New Movie RAMARASA Hero Introduction By Kiccha Sudeepa
Koo

ಬೆಂಗಳೂರು: ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ “ರಾಮರಸ” ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಎಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಆದರೆ, ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೋ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ಅದು ಅವರಿಗೆ ಗೊತ್ತು. “ಬಿಗ್ ಬಾಸ್” ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌. ಕಾರ್ತಿಕ್ ಸರಿಯಾದ ಹಾದಿಯಲ್ಲಿದ್ದಾರೆ. ಪ್ಯಾಷನೇಟ್‍ ಜನರು ಅವರ ಜೊತೆಯಾಗಿದ್ದಾರೆ. ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ’ ಎಂದು ಹಾರೈಸಿದರು. ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದ ಶೈಲಿ ಹಾಗೂ ನಿರ್ದೇಶಕ ಗಿರಿರಾಜ್ ಅವರ ಕಾರ್ಯವೈಖರಿಯನ್ನು ಸುದೀಪ್ ಶ್ಲಾಘಿಸಿದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ನಾಯಕ ಕಾರ್ತಿಕ್‍ ಮಹೇಶ್‍ ಮಾತನಾಡಿ, ʻʻಮೊದಲಿನಿಂದಲೂ ನನಗೆ ಸುದೀಪ್ ಸರ್ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ “ಬಿಗ್ ಬಾಸ್” ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆʼʼ ಎಂದರು.

ʻʻಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ‌ ನಿರ್ಮಾಪಕರು ಸಿಗಬೇಕು.‌ ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆʼʼ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. “ರಾಮರಸ” ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

Continue Reading
Advertisement
Lockie Ferguson
ಕ್ರಿಕೆಟ್29 mins ago

Lockie Ferguson: 4 ಓವರ್‌ ಎಸೆದು, ಒಂದೂ ರನ್‌ ಕೊಡದೆ 3 ವಿಕೆಟ್‌ ಕಿತ್ತ ಲಾಕಿ ಫರ್ಗ್ಯೂಸನ್;‌ ವಿಶ್ವದಾಖಲೆ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ2 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ3 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು3 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ3 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ3 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ3 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ3 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ4 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು11 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು12 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌