Kannada New Movie: ಬಿಡುಗಡೆಗೆ ಸಜ್ಜಾದ ʻನಾ ನಿನ್ನ ಬಿಡಲಾರೆʼ: ಅನಂತನಾಗ್ ಸಿನಿಮಾಗೆ ನಂಟಿದೆಯಾ? - Vistara News

ಸ್ಯಾಂಡಲ್ ವುಡ್

Kannada New Movie: ಬಿಡುಗಡೆಗೆ ಸಜ್ಜಾದ ʻನಾ ನಿನ್ನ ಬಿಡಲಾರೆʼ: ಅನಂತನಾಗ್ ಸಿನಿಮಾಗೆ ನಂಟಿದೆಯಾ?

Kannada New Movie: ಈಗಾಗಲೇ ಬಿಡುಗಡೆಯಾಗಿರುವ ʻನಾ ನಿನ್ನ ಬಿಡಲಾರೆʼ ಚಿತ್ರದ ಫಸ್ಟ್ ಲುಕ್, ಒಂದು ಮಟ್ಟದ ಸುದ್ದಿ ಮಾಡಿದ್ದು ಟೈಟಲ್ ತುಂಬಾ ಕುತೂಹಲವನ್ನ ಕೆರಳಿಸಿದೆ. ಮೇಲಾಗಿ ನಾ ನಿನ್ನ ಬಿಡಲಾರೆ ಅನ್ನುವಂತಹ ಒಂದು ಶೀರ್ಷಿಕೆ ಬಗ್ಗೆ ನಾವು ಮಾತನಾಡಿದರೆ ಬಹಳ ವರ್ಷಗಳಿಂದ ಇದೇ ಶೀರ್ಷಿಕೆಯಲ್ಲಿ ಬರುವಂತಹ ಸಿನಿಮಾ ರೆಕಾರ್ಡ್ ಮಾಡಿದ್ದು ನೆನಪಿಸಿಕೊಳ್ಳಬಹುದು.

VISTARANEWS.COM


on

Kannada New Movie Naa Ninna Bidalaare Movie shoot compleate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಭಿನ್ನವಾದ ಕಂಟೆಂಟ್‌, ಪ್ರತಿಭಾವಂತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ತಮ್ಮಲ್ಲಿರುವಂತಹ ವಿಭಿನ್ನವಾದoತಹ ಪ್ರತಿಭೆ ಹಾಗೂ ಪ್ರಯತ್ನಗಳೊಂದಿಗೆ ಹೊಸ ರೀತಿಯ ಸಿನಿಮಾಗಳನ್ನ ಮಾಡುತ್ತಲೇ ಬಂದಿದ್ದಾರೆ.
ಈಗ ಚಿತ್ರ ರಂಗದಲ್ಲಿ ಇರುವಂತವರು ಮೊದಲು ಬಂದಾಗ ಹೊಸಬರಾಗಿದ್ದರು. ಈಗ (Kannada New Movie) ನಿಧಾನವಾಗಿ ತಮ್ಮ ಒಳ್ಳೆಯ ಸಿನಿಮಾಗಳ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ನಿಟ್ಟಿನಲ್ಲಿ ಸ್ಯಾಂಡಲ್‌ವುಡ್‌ ಮತ್ತೊಂದು ಯುವ ತಂಡ, ಉತ್ಸಾಹಿ ಕಲಾವಿದರ ಬಳಗ ಬಂದು ನಿಂತಿದೆ. ಅದುವೇ ʻನಾ ನಿನ್ನ ಬಿಡಲಾರೆʼ!

ಈಗಾಗಲೇ ಬಿಡುಗಡೆಯಾಗಿರುವ ʻನಾ ನಿನ್ನ ಬಿಡಲಾರೆʼ ಚಿತ್ರದ ಫಸ್ಟ್ ಲುಕ್, ಒಂದು ಮಟ್ಟದ ಸುದ್ದಿ ಮಾಡಿದ್ದು ಟೈಟಲ್ ತುಂಬಾ ಕುತೂಹಲವನ್ನ ಕೆರಳಿಸಿದೆ. ಮೇಲಾಗಿ ನಾ ನಿನ್ನ ಬಿಡಲಾರೆ ಅನ್ನುವಂತಹ ಒಂದು ಶೀರ್ಷಿಕೆ ಬಗ್ಗೆ ನಾವು ಮಾತನಾಡಿದರೆ ಬಹಳ ವರ್ಷಗಳಿಂದ ಇದೇ ಶೀರ್ಷಿಕೆಯಲ್ಲಿ ಬರುವಂತಹ ಸಿನಿಮಾ ರೆಕಾರ್ಡ್ ಮಾಡಿದ್ದು ನೆನಪಿಸಿಕೊಳ್ಳಬಹುದು.

ಆದರೆ ಹಿರಿಯ ನಟ ಅನಂತನಾಗ್ ಹಾಗೂ ಜ್ಯೂಲಿ ಲಕ್ಷ್ಮಿ ರವರ ಕಾಂಬಿನೇಷನಲ್ಲಿ ಬಂದಂತಹ ʻನಾ ನಿನ್ನ ಬಿಡಲಾರೆʼ ಚಿತ್ರಕ್ಕೂ ನಮ್ಮ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಇದು ಹೊಸ ರೀತಿಯ ಕಂಟೆಂಟ್‌ ಹೊಂದಿದೆ ಎನ್ನುವುದು ಚಿತ್ರತಂಡದ ಮಾತು. ಇತ್ತೀಚೆಗಷ್ಟೇ ʻನಾ ನಿನ್ನ ಬಿಡಲಾರೆʼ ಚಲನಚಿತ್ರದ ಚಿತ್ರಿಕರಣ ಮುಗಿದು ಕುಂಬಳಕಾಯಿಯನ್ನ ಒಡೆಯಲಾಗಿದೆ.

ಇದನ್ನೂ ಓದಿ: Kannada New Movie: ಕಬಡ್ಡಿ ಆಟಗಾರನ ದುರಂತ ಕಥೆ ‘ಪರ್ಶು’: ಸಪ್ತಮಿಗೌಡ ತಂದೆ ಸಾಥ್!

ಕಮಲ ಉಮಾ ಭಾರತಿ ನಿರ್ಮಾಣ ಸಂಸ್ಥೆಯಲ್ಲಿ ಬರುತ್ತಿರುವಂತಹ, ಶ್ರೀಮತಿ ಭಾರತಿ ಬಾಳಿ ನಿರ್ಮಾಣದ, ನವೀನ್ ಜಿ ಎಸ್ ನಿರ್ದೇಶನದ, ಎಂ ಎಸ್ ತ್ಯಾಗರಾಜ ಸಂಗೀತ ನಿರ್ದೇಶನದ, ವೀರೇಶ್ ಛಾಯಾಗ್ರಣದ, ʻನಾ ನಿನ್ನ ಬಿಡಲಾರೆʼ ಚಿತ್ರದ ತಾರಾಗಣದಲ್ಲಿ ಪಂಚಿ ಮತ್ತು ಅಂಬಾಲಿ ಭಾರತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಷ್ಟೇ ಕುಂಬಳಕಾಯಿ ಒಡೆದಿರುವಂತಹ ʻನಾ ನಿನ್ನ ಬಿಡಲಾರೆʼ ಚಿತ್ರವು ಬಿಡುಗಡೆಯ ತಯಾರಿ ಮಾಡಿಕೊಳ್ಳುತ್ತಿದೆ.

ಪ್ರತಿ ಹೊಸಬರ ಚಿತ್ರವು ತನ್ನ ಕಂಟೆಂಟ್ ಮೂಲಕ ಎಲ್ಲರ ಮನಸ್ಸನ್ನು ಸೆಳೆಯುತ್ತಿರುವ ಈ ಜಮಾನದಲ್ಲಿ ʻನಾ ನಿನ್ನ ಬಿಡಲಾರೆʼ ಚಿತ್ರವು ಸಹ ಎಲ್ಲರ ಮನಸ್ಸನ್ನು ಗೆಲ್ಲುವ ಭರವಸೆಯಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Actor Kiran Raj: ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

VISTARANEWS.COM


on

Actor Kiran Raj Ronny Movie Reels with Fans Song
Koo

ಬೆಂಗಳೂರು: ʻಕನ್ನಡತಿ ಧಾರಾವಾಹಿʼ (Kannadathi serial) ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್‌ರಾಜ್‌ (Actor Kiran Raj) ನಾಯಕನಾಗಿ ನಟಿಸುತ್ತಿರುವ ʻರಾನಿʼ (Ronny Movie) ಸಿನಿಮಾ ಒಂದೊಲೊಂದು ಸುದ್ದಿ ಮಾಡುತ್ತಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ.

“ನೀನೆಂದರೆ ನೀನೆಂದರೆ ನನಗೊಂತರ ಅರಿಯದ ಅಮಲು” ಎನ್ನುವ ಸಾಲಿನಿಂದ ಶುರುವಾಗುವ ಹಾಡಿಗೆ ಸಾವಿರಾರು ಜನ ಇನ್‌ಸ್ಟಾ ರೀಲ್ಸ್ ಮಾಡುವ ಮುಖಾಂತರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಾಡು ಹಿಟ್ ಮಾಡಿದ ಅಭಿಮಾನಿಗಳೊಂದಿಗೆ ಕಿರಣ್ ರಾಜ್ ಇದೆ ಭಾನುವಾರ ರೀಲ್ಸ್ ಮಾಡುತ್ತಿದ್ದಾರೆ.ಪೊಸ್ಟರ್,ಟೀಸರ್,ಹಾಡುಗಳಿಂದ ಭಾರಿ ನಿರೀಕ್ಷೆ ಹುಟ್ಟಿಸಿರುವ “ರಾನಿ” ಚಿತ್ರ ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಟೀಸರ್‌ ಹೇಗಿತ್ತು?

 ʻನಾನು ಮನುಷ್ಯನಾಗಬಯಸುತ್ತೇನೆ, ಡಾನ್‌ ಅಲ್ಲʼ ಎಂದು ಕಿರಣ್‌ರಾಜ್‌ ಅಬ್ಬರಿಸುವ ದೃಶ್ಯವೊಂದು ಇದರಲ್ಲಿತ್ತು. ಇದರೊಂದಿಗೆ ಇದು ಆಕಸ್ಮಿಕವಾಗಿ ಭೂಗತ ಜಗತ್ತು ಪ್ರವೇಶಿಸಿದ ಅಮಾಯಕ ಯುವಕನೊಬ್ಬನ ಕಥೆಯಂತೆ ಕಾಣಿಸುತ್ತಿತ್ತು. ಜತೆಗೆ ಸಖತ್‌ ರೊಮ್ಯಾನ್ಸ್‌ ಕೂಡಾ ಕಾಣಿಸಿತ್ತು. ಟೀಸರ್‌ನಲ್ಲಿ ಕಿರಣ್‌ರಾಜ್‌ ಅವರ ಆಕ್ಷನ್‌, ರವಿಶಂಕರ್‌ ಅವರ ಅಬ್ಬರ ಕಣ್ಮನ ತಣಿಸುವಂತಿತ್ತು. ಕಿರಣ್‌ ಅಂತೂ ಕಿಲ್ಲರ್‌ ಲುಕ್‌ನಿಂದ ಕೊಲ್ಲುತ್ತಾರೆ. ಮಣಿಕಾಂತ್‌ ಕದ್ರಿ ಅವರ ಹಿನ್ನೆಲೆ ಸಂಗೀತವೂ ಟೀಸರ್‌ಗೆ ಹೊಸ ರೂಪ ನೀಡಿತ್ತು.

ಈ ಚಿತ್ರದಲ್ಲಿ ಕಿರಣ್‌ ರಾಜ್‌ ಜತೆಗೆ ರವಿಶಂಕರ್‌, ಮೈಕೋ ನಾಗರಾಜ್‌, ನಾಗತಿಹಳ್ಳಿ ಚಂದ್ರಶೇಖರ್‌, ಬಿ ಸುರೇಶ್‌, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್‌ ಹೆಗ್ಡೆ, ಪ್ರಥ್ವೀರಾಜ್‌, ಯಶ್‌ ಶೆಟ್ಟಿ, ಉಮೇಶ್‌, ಸುಜಯ್‌ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್‌ ಮಲಾನಿ, ಅನಿಲ್‌, ಧರ್ಮೇಂದ್ರ ಅರಸ್‌, ಮನಮೋಹನ ರೈ ಮೊದಲಾದವರು ಇದ್ದಾರೆ. ಪ್ರಮೋದ್‌ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್‌ ಕದ್ರಿ ಟ್ಯೂನ್‌ ಹಾಕಿದ್ದಾರೆ.

ಇದೊಂದು ಪಕ್ಕಾ ಆಕ್ಷನ್‌ ಚಿತ್ರವಾಗಿದೆ. ಆದರೆ, ಅತ್ಯಂತ ಸೂಕ್ಷ್ಮ ಅಂಶಗಳನ್ನು ಬೆಸೆದುಕೊಂಡು ಕಟ್ಟಿದ ದೃಶ್ಯ ಕಾವ್ಯ ಎಂಬುದು ಟೀಸರ್‌ನಿಂದ ಸ್ಪಷ್ಟವಾಗುತ್ತದೆ. ರಾನಿ ಸಿನಿಮಾದಲ್ಲಿ ಆರು ಆಕ್ಷನ್‌ ಸೀನ್‌ಗಳಿವೆ ಎಂದು ಚಿತ್ರತಂಡ ಹೇಳಿದೆ.


ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವುದು ಸದ್ಯದ ಲೆಕ್ಕಾಚಾರ. ಹಿಂದಿ ಟೀಸರ್‌ ಔಟ್‌ ಆಗಿರುವುದರಿಂದ ಹಿಂದಿಗೆ ಡಬ್‌ ಆಗಿ ಬಿಡುಗಡೆಯಾದರೂ ಅಚ್ಚರಿ ಇಲ್ಲ.

Continue Reading

ಸ್ಯಾಂಡಲ್ ವುಡ್

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Samarjit Lankesh: ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕಿದರು. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

VISTARANEWS.COM


on

Samarjit Lankesh Love you Samantha Song Teaser
Koo

ಬೆಂಗಳೂರು: ಸಾಂಸ್ಕೃತಿಕ ನಗರಿ (Samarjit Lankesh) ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಕಾರಣ ಈ ಕಾಲೇಜಿನ ಕ್ಲಾಸ್ ರೂಂನಲ್ಲಿ ʻಗೌರಿ’ ಚಿತ್ರತಂಡ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ (Love you Samantha Song Teaser) ಮಾಡಿದೆ. ಕರ್ನಾಟಕದ ಹೆಮ್ಮೆಯ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು.

ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತ ʻಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿದರು.

ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಫಿದಾ ಆಗಿದ್ದಾರೆ. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕಾ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ʻಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿಗಿದೆ.
ʻಲವ್ ಯೂ ಸಮಂತಾ’ಗೆ ಸಾಹಿತ್ಯ ಕವಿರಾಜ್ ಅವರದ್ದಾದರೆ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನವಿದೆ.
ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sreenath Bhasi Movie: ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶೀಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

VISTARANEWS.COM


on

Sreenath Bhasi Movie Shashidhar direction new Movie
Koo

ಬೆಂಗಳೂರು: ʻಮಂಜುಮ್ಮೆಲ್ ಬಾಯ್ಸ್ʼ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ. ವಿಶ್ವಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡುತ್ತಿದ್ದಾರೆ. ಪಾತ್ರಧಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಂಚೂ ಮಾತನಾಡುತ್ತಿದ್ದಾರೆ. ಇದೇ ವೇಳೆ ʻಡಾಟರ್ ಆಫ್ ಪಾರ್ವತಮ್ಮʼ, ವೀರಂ, ʻಶುಗರ್ ಲೆಸ್ʼ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶಿಧರ ಅವರು ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ‌ ಚಿತ್ರವನ್ನ ನಿರ್ದೇಶನ‌ ಮಾಡಲು‌ ಹೊರಟಿದ್ದಾರೆ. ಈ ಮೂಲಕ ಇದು ಶಶಿಧರ ಅವರ ಸಿನಿಜರ್ನಿಯ (Sreenath Bhasi Movie) ಎರಡನೇ ಡೈರೆಕ್ಷನ್‌ನ ಸಿನಿಮಾವಾಗಲಿದೆ.

ಸಿಬಿಲ್ ಸ್ಕೋರ್‌ನಲ್ಲಿ ಶ್ರೀನಾಥ್ ಭಾಸಿ

ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ, ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶಿಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

ಇದನ್ನೂ ಓದಿ: Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

ಈ‌ ಸಿನಿಮಾವನ್ನು ಕನ್ನಡದ ನಿರ್ದೇಶಕರೇ ನಿರ್ದೇಶನ ಮಾಡುತ್ತಿದ್ದು, ಹಾಗೇ ಮಲಯಾಳಂ ಸಿನಿಮಾ ಆಗಿರುವುದರಿಂದ ಈ ಸಿನಿಮಾದಲ್ಲಿ ಟೆಕ್ನಿಶಿಯನ್ಸ್ ಆರ್ಟಿರ್ಸ್ಟ್ ಕನ್ನಡ ಹಾಗೂ ಮಲಯಾಳಂನವರಾಗಿರುತ್ತಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸೋಹನ್ ಸೀನುಲಾಲ್, ದೀಪಕ್ ಪ್ರಿನ್ಸ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ದಿ ಎಮೋಷನ್ಸ್ ಫ್ಯಾಕ್ಟರಿ ಗ್ರೂಪ್(EFG) ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ವಿವೇಕ್ ಶ್ರೀಕಂಠಯ್ಯ ಬಂಡವಾಳ ಹೂಡುತ್ತಿದ್ದಾರೆ. ಕೋ ಪ್ರೊಡ್ಯೂಸರ್ ಆಗಿ ವಿಕ್ರಮ್, ಲೈನ್ ಪ್ರೊಡ್ಯೂಸರ್ ಆಗಿ ದೀಪು ಕರುಣಾಕರಣ್ ಎಕ್ಸೆಕ್ಯೂಟೀವ್ ಪ್ರೊಡ್ಯೂಸರ್ ಆಗಿ ಶಾಜಿ ಫ್ರಾನ್ಸಿಸ್ ಕೈ ಜೋಡಿಸಿದ್ದಾರೆ. ಸಿನಿಮಾದ ಛಾಯಾಗ್ರಹಣ ಪ್ರದೀಪ್ ನಾಯರ್, ಡೈಲಾಗ್ಸ್ ಅರ್ಜುನ್ ಟಿ ಸತ್ಯನ್, ಸೋಬಿನ್ ಕೆ ಸೋಮನ್ ಸಂಕಲನವಿದೆ. ಇನ್ನೂ ಕ್ರಿಯೇಟಿವ್ ಹೆಡ್ ಆಗಿ ಶರತ್ ವಿನಾಯಕ್ ಸಿನಿಮಾಗೆ ಜತೆಯಾಗಿದ್ದಾರೆ.

Continue Reading

ಸ್ಯಾಂಡಲ್ ವುಡ್

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Kiccha Sudeep: ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Kiccha Sudeep Max cinema Pre climax Photo leak
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ‘ಮ್ಯಾಕ್ಸ್’ ಬಗ್ಗೆ ಏನಾದರೂ ಅಪ್‌ಡೇಟ್ ಕೊಡ್ತಾರ ಎಂದು ಕಿಚ್ಚ ಫ್ಯಾನ್ಸ್‌ ಕಾದಿದ್ದರು. ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ (Max cinema Pre climax) ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ವಾರದ ಹಿಂದೆ ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಆದರೀಗ ಸಿನಿಮಾದ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌ ಆಗಿದೆ ಎಂದು ಹೇಳಲಾಗುತ್ತಿದೆ. ಜಾತ್ರೆಯ ಸೆಟಪ್‌, ಕಾಳೀಮಾತೆಯ ವಿಗ್ರಹ. ಸುದೀಪ್ ಕಾಳಿ ವಿಗ್ರಹ ಮುಂದೆ ನಡೆದು ಬರುತ್ತಿರುವುದನ್ನು ಕಂಡು ಕ್ಲೈಮ್ಯಾಕ್ಸ್ ಅಥವಾ ಇಂಟ್ರವಲ್‌ ವೇಳೆಗೆ ಬರುವ ಸನ್ನಿವೇಶ ಎಂದು ಜನ ಊಹಿಸುತ್ತಿದ್ದಾರೆ.

`ಪ್ರೀ-ಕ್ಲೈಮ್ಯಾಕ್ಸ್ ನಿಮ್ಮೆಲ್ಲರಿಗೂ ಮ್ಯಾಕ್ಸಿಮಮ್‌ ಹಬ್ಬವನ್ನು ಆನಂದಿಸುವಂತೆ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಯಾವ ರೀತಿ ನೋಡಲು ಬಹಳ ದಿನಗಳಿಂದ ಕಾಯುತ್ತಿದ್ದಾರೋ, ನಿಜಕ್ಕೂ ಸುದೀಪ್ ಅಣ್ಣ ಹಾಗೇ ಕಾಣುತ್ತಾರೆʼʼಎಂದು ಪ್ರದೀಪ್‌ ಎಂಬುವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading
Advertisement
K Raghupathi Bhat
ಪ್ರಮುಖ ಸುದ್ದಿ38 seconds ago

K Raghupathi Bhat: ಬಂಡಾಯ ಸ್ಪರ್ಧೆ; ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

Indigo Flight
ದೇಶ23 mins ago

IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Labours fall sick
ಕರ್ನಾಟಕ46 mins ago

Workers Fall Sick: ಹಲ್ಲಿ ಬಿದ್ದ ಆಹಾರ ಸೇವಿಸಿ ಒಬ್ಬ ಕಾರ್ಮಿಕ ತೀವ್ರ ಅಸ್ವಸ್ಥ, ಹಲವರಿಗೆ ವಾಂತಿ-ಭೇದಿ

Natasa Stankovic
ಪ್ರಮುಖ ಸುದ್ದಿ51 mins ago

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ58 mins ago

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Devotees chant Jai Shri Ram as CM Siddaramaiah enters Dharmasthala temple
ದಕ್ಷಿಣ ಕನ್ನಡ1 hour ago

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

MLC Chalavadi Narayanaswamy latest statement
ಕರ್ನಾಟಕ1 hour ago

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

BJP Raitha Morcha State President Former MLA A S Patil Nadahalli latest Statement
ಕರ್ನಾಟಕ1 hour ago

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Former Minister Araga jnanendra latest statement in Shivamogga
ಶಿವಮೊಗ್ಗ1 hour ago

Araga jnanendra: ಠಾಣೆಗೇ ನುಗ್ಗಿ ಜನ ಪೊಲೀಸರಿಗೆ ಹೊಡೆಯುವಂತಾಗಿದೆ; ಆರಗ ಜ್ಞಾನೇಂದ್ರ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌