Kannada New Movie: ದಿನಕರ್ ತೂಗುದೀಪ್ ನಿರ್ದೇಶನದ ʻರಾಯಲ್ʼ ಸಿನಿಮಾ ಮೊದಲ ಹಾಡು ರಿಲೀಸ್! - Vistara News

ಸ್ಯಾಂಡಲ್ ವುಡ್

Kannada New Movie: ದಿನಕರ್ ತೂಗುದೀಪ್ ನಿರ್ದೇಶನದ ʻರಾಯಲ್ʼ ಸಿನಿಮಾ ಮೊದಲ ಹಾಡು ರಿಲೀಸ್!

Kannada New Movie: ಕಿಸ್ ಸಿನಿಮಾ ಮೂಲಕ ಕನ್ನಡ ಚಿತ್ರ ಜಗತ್ತಿಗೆ ಪರಿಚಿತರಾದ ವಿರಾಟ್ ನಾಯಕನಾಗಿ ನಟಿಸುತ್ತಿದ್ದು, ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಲವ್ ಮಾಕ್‌ಟೇಲ್ ಖ್ಯಾತಿಯ ಅಭಿಲಾಷ್ ತಾರಾಬಳಗದಲ್ಲಿದ್ದಾರೆ. ರಾಯಲ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಸಂಕೇತ್ ಮೈಸ್ ಅವರ ಛಾಯಾಗ್ರಹಣವಿದೆ.

VISTARANEWS.COM


on

Kannada New Movie Naane Krishna Naane Shaam Video Song Sanjith Hegde
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನಕರ್ ತೂಗುದೀಪ್ (Kannada New Movie) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ʻರಾಯಲ್ʼ. ಜಯಣ್ಣ ಫಿಲ್ಮಂಸ್ ಬ್ಯಾನರ್ ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ಸರಿಗಮ ಕನ್ನಡ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದ ಬರೆದʻ ನಾನೇ ಕೃಷ್ಣ..ನಾನೇ ಶಾಮ್ʼ ಗೀತೆಗೆ ಸಂಜಿತ್ ಹೆಗ್ಡೆ ಹಾಗೂ ಎಂ ಎಂ ಮನವಿ ಧ್ವನಿಯಾಗಿದ್ದಾರೆ. ಚರಣ್ ರಾಜ್ ಎಂ ಆರ್ ಸಂಗೀತ ನಿರ್ದೇಶನ ಮಾಡಿದ್ದು, ನಾಯಕ ವಿರಾಟ್ ಲಲನೆಯರ ಜೊತೆ ಹಾಡಿಗೆ ಹೆಜ್ಕೆ ಹಾಕಿದ್ದಾರೆ.

ಕಿಸ್ ಸಿನಿಮಾ ಮೂಲಕ ಕನ್ನಡ ಚಿತ್ರ ಜಗತ್ತಿಗೆ ಪರಿಚಿತರಾದ ವಿರಾಟ್ ನಾಯಕನಾಗಿ ನಟಿಸುತ್ತಿದ್ದು, ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಲವ್ ಮಾಕ್‌ಟೇಲ್ ಖ್ಯಾತಿಯ ಅಭಿಲಾಷ್ ತಾರಾಬಳಗದಲ್ಲಿದ್ದಾರೆ. ರಾಯಲ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಸಂಕೇತ್ ಮೈಸ್ ಅವರ ಛಾಯಾಗ್ರಹಣವಿದೆ.

ಸಂಕೇತ್ ಸಿನಿಮಾಟೋಗ್ರಫಿ ‘ರಾಯಲ್’ ಚಿತ್ರಕ್ಕಿದೆ. ಚರಣ್ ಸಂಗೀತ ಮತ್ತೊಂದು ಹೈಲೆಟ್. ಅನಿಲ್ ಮಂಡ್ಯ ಚಿತ್ರ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ‘ಕಿಸ್’ ಸಿನಿಮಾದಲ್ಲಿ ವಿರಾಟ್ ಲವರ್ ಬಾಯ್ ಆಗಿ ಮಿಂಚಿದ್ದರು. ‘ರಾಯಲ್’ ಚಿತ್ರದಲ್ಲಿ ಪಕ್ಕಾ ಮಾಸ್, ಎನರ್ಜಿಟಿಕ್ ಹೀರೊ ಆಗಿ ಅಬ್ಬರಿಸೋಕೆ ಬರ್ತಿದ್ದಾರೆ. ಕಂಪ್ಲೀಟ್ ಫ್ಯಾಮಿಲಿ ನೋಡಬಹುದಾದ ಸಿನಿಮಾ ಇದು. ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಪ್ರಯತ್ನ ನಡೀತಿದೆ. ‘ಜೊತೆ ಜೊತೆಯಲಿ’, ‘ನವಗ್ರಹ’, ‘ಸಾರಥಿ’ ರೀತಿಯ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ದಿನಕರ್ ಈ ಬಾರಿ ಮತ್ತೊಂದು ಅದ್ಭುತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ನಿರೀಕ್ಷೆಯಿದೆ.

ಇದನ್ನೂ ಓದಿ: Kannada New Movie: `ಕ್ರೆಡಿಟ್ ಕುಮಾರ’ನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪತ್ರಕರ್ತ ಹರೀಶ್!

ಸರಿಗಮ ತೆಕ್ಕೆಗೆ ಆಡಿಯೊ ಹಕ್ಕು

ಈ ಚಿತ್ರದ ಆಡಿಯೋ ಭಾರೀ ಮೊತ್ತಕ್ಕೆ ಬಿಕರಿಯಾಗಿದೆ. ಸರಿಗಮ ಮ್ಯೂಸಿಕ್ ಕಂಪನಿ ಒಳ್ಳೆ ಮೊತ್ತ ಕೊಟ್ಟು ರಾಯಲ್ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

Jyothi Rai: ತಮ್ಮ ಪ್ರೊಫೈಲ್‌ಗೆ ಬರುತ್ತಿದ್ದ ಅಶ್ಲೀಲ ಹಾಗೂ ಕೆಟ್ಟ ಮೆಸೇಜ್‌ಗಳಿಂದ ಹೈರಾಣಾಗಿದ್ದ ಜ್ಯೋತಿ ರೈ ದೊಡ್ಡ ನಿರ್ಧಾರ ಮಾಡಿದ್ದಾರೆ.

VISTARANEWS.COM


on

jyothi poorvaaj jyothi rai says she blocked 1 thousand accounts
Koo

ನಟಿ ಜ್ಯೋತಿ ರೈ ಇತ್ತೀಚೆಗೆ ಸಖತ್‌ ಹಾಟ್‌ ಫೋಟೊಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಜ್ಯೋತಿ ಪೂರ್ವಜ್‌ ಅಲಿಯಾಸ್‌ ಜ್ಯೋತಿ ರೈ ಇದೀಗ ಕೆಟ್ಟದ್ದಾಗಿ ಕಮೆಂಟ್‌ ಮಾಡುವರಿಗೆ ಸಖತ್‌ ಕ್ಲಾಸ್‌ ತೆಗದುಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

ತಮ್ಮ ಪ್ರೊಫೈಲ್‌ಗೆ ಬರುತ್ತಿದ್ದ ಅಶ್ಲೀಲ ಹಾಗೂ ಕೆಟ್ಟ ಮೆಸೇಜ್‌ಗಳಿಂದ ಹೈರಾಣಾಗಿದ್ದ ಜ್ಯೋತಿ ರೈ ದೊಡ್ಡ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

‘ಇನ್‌ಸ್ಟಾಗ್ರಾಮ್‌ ಬ್ಲಾಕ್‌ ಫೀಚರ್‌ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಮೆಂಟ್‌ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್‌ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದುಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಧನಾತ್ಮಕ ಪರಿಸರವನ್ನು ರಚನೆ ಮಾಡಲು ನೀವೂ ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ.’ ಎಂದು ಅವರು ಬರೆದುಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Pramod Shetty: ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ 2 ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದಾರೆ. ಸಿನಿಮಾ ಆಗಸ್ಟ್ 30ಕ್ಕೆ ಬಿಡುಗಡೆ ಆಗಲಿದೆ.ಲಾಫಿಂಗ್ ಬುದ್ಧ’ ಸಿನಿಮಾ ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಆಗಿತ್ತು.

VISTARANEWS.COM


on

Laughing Buddha Trailer out Pramod Shetty Diganth Rishab Shetty
Koo

ಬೆಂಗಳೂರು: ಪ್ರಮೋದ್ ಶೆಟ್ಟಿ (Pramod Shetty) ಅವರು ‘ಲಾಫಿಂಗ್ ಬುದ್ಧ’ ನಟಿಸಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ದಿನಾಂಕ ಸಹ ಘೋಷಣೆ ಆಗಿದೆ. ಪೊಲೀಸ್ ಠಾಣೆ, ಪೊಲೀಸ್ ಠಾಣೆಯ ಕಾನ್​ಸ್ಟೆಬಲ್​ಗಳು, ಅವರ ಸುತ್ತ ನಡೆಯುವ ಘಟನೆಗಳು ಇಂಥಹಾ ಸರಳ ಕತೆಯನ್ನು ಹೊಂದಿರುವ ಈ ಸಿನಿಮಾ ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ 2 ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದಾರೆ. ಸಿನಿಮಾ ಆಗಸ್ಟ್ 30ಕ್ಕೆ ಬಿಡುಗಡೆ ಆಗಲಿದೆ.ಲಾಫಿಂಗ್ ಬುದ್ಧ’ ಸಿನಿಮಾ ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಆಗಿತ್ತು. ಇದೊಂದು ಕಾಮಿಡಿ ಹಾಗೂ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಎಂ. ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಬಹಳ ದಿನಗಳ ಬಳಿಕ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಾರೆ.

ಇದನ್ನೂ ಓದಿ: Pramod Shetty: ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಕಂಪ್ಲೀಟ್‌

ತಮ್ಮ ದಢೂತಿ ದೇಹದಿಂದ ತಮಾಷೆಗೆ ಒಳಪಡುವ ಮಾತ್ರವಲ್ಲದೆ, ಹಿರಿಯ ಅಧಿಕಾರಿಗಳಿಂದ ಟೀಕೆ, ನಿಂದನೆಗೆ ಗುರಿಯಾಗುವ ಕಾನ್​ಸ್ಟೆಬಲ್ ಅದರ ಮಧ್ಯೆ ಠಾಣೆಯಲ್ಲಿ ನಡೆಯುವ ಒಂದು ಭೀಕರ ಘಟನೆ ಅದರಿಂದ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿಯ ಮೇಲಾಗುವ ಪರಿಣಾಮ ಈವೆಲ್ಲವೂ ಕಟ್ಟಿಕೊಡುವಂತಿದೆ ಟ್ರೈಲರ್‌. ಪ್ರಮೋದ್ ಶೆಟ್ಟಿ ನಾಯಕ ನಟರಾಗಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಪ್ರಮೋದ್ ಶೆಟ್ಟಿ ಜೊತೆಗೆ ತೇಜು ಬೆಳವಾಡಿ, ಸುಂದರ್ ರಾಜ್ ಇನ್ನಿತರರು ನಟಿಸಿದ್ದಾರೆ. ಸಿನಿಮಾದಲ್ಲಿ ನಟ ದಿಗಂತ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ‘ಲಾಫಿಂಗ್ ಬುದ್ಧ’ ಚಿತ್ರಕ್ಕಿದೆ. ಇದೊಂದು ಹೊಸ ಬಗೆಯ ಕಥೆಯನ್ನು ಹೊಂದಿರುವ ಸಿನಿಮಾವಾಗಿದೆ. ಕನ್ನಡದಲ್ಲಿ ‘ತೂತು ಮಡಿಕೆ’ ಸಿನಿಮಾ ನಿರ್ಮಾಣ ಮಾಡಿ ಮೆಚ್ಚುಗೆ ಗಳಿಸಿದ್ದ ನಿರ್ಮಾಪಕ ಮಧುಸೂಧನ್ ರಾವ್ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವುದಕ್ಕೆ ರೆಡಿಯಾಗಿದ್ದಾಗಿ ಸುದ್ದಿಯಾಗಿತ್ತು.

Continue Reading

ಸ್ಯಾಂಡಲ್ ವುಡ್

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳು ಕೃಷ್ಣಂ ಪ್ರಣಯ ಸಖಿ ಸಿನಿಮಾ ನೋಡಿದ ಬಳಿಕ ಮತ್ತಷ್ಟು ಇಷ್ಟ ಪಡುವುದಕ್ಕೆ ಶುರು ಮಾಡುತ್ತಾರೆ. ಇದೊಂದು ಅದ್ಭುತ ಸಿನಿಮಾ” ಎಂದು ನೆಟ್ಟಿಗರೊಬ್ಬರು ಗಣೇಶ್ ಸಿನಿಮಾ ಕೃಷ್ಣಂ ಪ್ರಣಯ ಸಖಿ ನೋಡಿ ಬರೆದುಕೊಂಡಿದ್ದಾರೆ.

VISTARANEWS.COM


on

Golden Star Ganesh Krishnam Pranaya Sakhi review
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆಗಸ್ಟ್‌ 15 ಇಂದು ಅದ್ಧೂರಿಯಾಗಿ ರಾಜ್ಯಾದ್ಯಂತ ತೆರೆ ಕಂಡಿದೆ.ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳು ಕೃಷ್ಣಂ ಪ್ರಣಯ ಸಖಿ ಸಿನಿಮಾ ನೋಡಿದ ಬಳಿಕ ಮತ್ತಷ್ಟು ಇಷ್ಟ ಪಡುವುದಕ್ಕೆ ಶುರು ಮಾಡುತ್ತಾರೆ. ಇದೊಂದು ಅದ್ಭುತ ಸಿನಿಮಾ” ಎಂದು ನೆಟ್ಟಿಗರೊಬ್ಬರು ಗಣೇಶ್ ಸಿನಿಮಾ ಕೃಷ್ಣಂ ಪ್ರಣಯ ಸಖಿ ನೋಡಿ ಬರೆದುಕೊಂಡಿದ್ದಾರೆ.

“ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳುಗಳು ಬಿಡುಗಡೆಯಾಗಿ ಸಖತ್‌ ಕ್ರೇಜ್‌ ಹುಟ್ಟು ಹಾಕಿತ್ತು. ಬಿಡುಗಡೆಯ ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿತ್ತು.

ಇದನ್ನೂ ಓದಿ; Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

ಈ ಸಿನಿಮಾ ನಿಮ್ಮನ್ನು ನಗುವಂತೆ ಮಾಡುತ್ತೆ. ಈ ಸಿನಿಮಾ ನಿಮ್ಮನ್ನು ಅಳಿಸುತ್ತೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಪಕ್ಕಾ ಕೌಟುಂಬಿಕ ಸಿನಿಮಾ. ಮಿಸ್ ಮಾಡಿಕೊಳ್ಳಬೇಡಿ. ತಪ್ಪದೇ ನೋಡಿ” ಎಂದು ಮತ್ತೊಮ್ಮ ನೆಟ್ಟಗರ ಸಿನಿಮಾ ಬಗ್ಗೆ ಪಾಸಿಟಿವ್ ಆಗಿ ಮಾತಾಡಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading

ಬೆಂಗಳೂರು

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Album Song: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Album Song
Koo

ಬೆಂಗಳೂರು: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ (Album Song) ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ. ಗಿರೀಶ್ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಹಾಡಿನಲ್ಲಿ ಅಭಿನಯಿಸಿರುವ ರಕ್ಕಿ ಸುರೇಶ್ ನಮ್ಮ ಕುಟುಂಬಕ್ಕೆ ಆಪ್ತರು. ಈ ಹಾಡಿನಲ್ಲಿ ರಕ್ಕಿ ಅವರು ಚೆನ್ನಾಗಿ ಅಭಿನಯಿಸಿದ್ದಾರೆ. ಹಾಡು ಚೆನ್ನಾಗಿದೆ. ಯಶಸ್ವಿಯಾಗಲಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾರೈಸಿದರು.

ನಾನು ಹುಟ್ಟಿದ್ದು ಇಲ್ಲಿ. ಆದರೆ ಬೆಳೆದದ್ದು ಜರ್ಮನ್‌ನಲ್ಲಿ. ಮೈಸೂರಿನ ಬಳಿಯ ಸಾಲಿಗ್ರಾಮ ನಮ್ಮ ಊರು. ಡಾ. ರಾಜಕುಮಾರ್ ಅವರ “ಹೊಸಬೆಳಕು” ಚಿತ್ರ ನಿರ್ಮಿಸಿದ್ದ ರಾಜಶೇಖರ್ ಅವರು ನನ್ನ ತಾತಾ ಎಂದು ತಮ್ಮ ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಿದ ನಟ ರಕ್ಕಿ ಸುರೇಶ್, ಜರ್ಮನ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಮುಗಿಸಿ ಐಟಿ ಉದ್ಯೋಗದಲ್ಲಿದ್ದೇನೆ. ನಟನೆ ನನ್ನ ಹವ್ಯಾಸ. ಅದರ ಮೊದಲ ಹೆಜ್ಜೆಯಾಗಿ “ಹನಿ ಹನಿ” ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದೇನೆ‌. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಗಣ್ಯರಿಗೆ ಧನ್ಯವಾದ ಎಂದು ತಿಳಿಸಿದರು.

ನಾನು ಐದು ವರ್ಷಗಳಿಂದ ಜರ್ಮನ್‌ನಲ್ಲಿ ವಾಸಿಸುತ್ತಿದ್ದೇನೆ. ಅನಿವಾಸಿ ಕನ್ನಡಿಗರು ಸೇರಿ ಈ ಹಾಡನ್ನು ನಿರ್ಮಿಸಿದ್ದೇವೆ. ನಾನೇ ನಿರ್ದೇಶನವನ್ನು ಮಾಡಿದ್ದೇನೆ. ಭಾರತದ ರೂಪಾಯಿ ಪ್ರಕಾರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಹಾಡು ಯೂರೋಪ್‌ನಲ್ಲಿ ಚಿತ್ರೀಕರಣಗೊಂಡಿದೆ. ರಕ್ಕಿ ಸುರೇಶ್, ಅನಾಮಿಕ ಸ್ಟಾರ್ಕ್ ದತ್ತ‌ ಹಾಗೂ ಅಮೃತ ಮಂಡಲ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಶಾಲ್ ನೈದೃವ್ ಸಂಗೀತ ನೀಡುವುದರ ಜತೆಗೆ ಹಾಡಿದ್ದಾರೆ. ಆಲ್ಬರ್ಟ್ ಜೊಸ್ ಹಾಗೂ ತೇಜಸ್ ಅಹೋಬಲ ಅವರ ಛಾಯಾಗ್ರಹಣ ಈ ಹಾಡಿಗಿದೆ. ನಮ್ಮ ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡನ್ನು ನೋಡಬಹುದು ಎಂದರು ನಿರ್ದೇಶಕ ರಾಘವ ರೆಡ್ಡಿ.

ನಾನು 23 ವರ್ಷಗಳಿಂದ ಕೀ ಬೋರ್ಡ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಖ್ಯಾತ ಸಂಗೀತ ನಿರ್ದೇಶಕರ ಜತೆಗೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. “ಹನಿ ಹನಿ” ಆಲ್ಬಂ ಸಾಂಗ್‌ಗೂ ಸಂಗೀತ ನೀಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಶಾಲ್ ನೈದೃವ್ ಹೇಳಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ನಿರ್ದೇಶಕ ವೆಂಕಟ್ ಹಾಗೂ ಗಿರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Gold Rate Today
ಚಿನ್ನದ ದರ9 mins ago

Gold Rate Today: ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಿಲ್ಲ; ಇಂದಿನ ದರ ಇಷ್ಟಿದೆ

jyothi poorvaaj jyothi rai says she blocked 1 thousand accounts
ಸ್ಯಾಂಡಲ್ ವುಡ್23 mins ago

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

bike wheeling
ಬೆಂಗಳೂರು ಗ್ರಾಮಾಂತರ27 mins ago

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

Independence Day 2024
ಕರ್ನಾಟಕ34 mins ago

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Independence Day 2024
ಕರ್ನಾಟಕ1 hour ago

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Laughing Buddha Trailer out Pramod Shetty Diganth Rishab Shetty
ಸ್ಯಾಂಡಲ್ ವುಡ್2 hours ago

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Independence Day 2024
ಕರ್ನಾಟಕ2 hours ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ2 hours ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Golden Star Ganesh Krishnam Pranaya Sakhi review
ಸ್ಯಾಂಡಲ್ ವುಡ್2 hours ago

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Independence Day 2024
ಬೆಂಗಳೂರು3 hours ago

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌