Kannada New Movie: 'ಪೌಡರ್' ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ? - Vistara News

ಸ್ಯಾಂಡಲ್ ವುಡ್

Kannada New Movie: ‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ?

Kannada New Movie: ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.

VISTARANEWS.COM


on

Kannada New Movie powder Movie release date announce
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ʻಪೌಡರ್ʼ. ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.

ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್ ನಲ್ಲಿ ಕ್ಲ್ಯಾಷ್ ಆಗಲಿದೆ. ಕಲೆಕ್ಷನ್ ಮೇಲೆಯೂ ಹೊಡೆತ ಬೀಳಲಿದೆ. ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎಂಬುದನ್ನು ಅರಿತ ಕೆಆರ್ ಜಿ ಸಂಸ್ಥಾಪಕಾರದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Naveen Sajju: ಗುಡ್‌ ನ್ಯೂಸ್‌ ಕೊಟ್ಟ ʻಚುಕ್ಕಿತಾರೆ ಸೀರಿಯಲ್‌ʼ ನಟ ನವೀನ್‌ ಸಜ್ಜು: ಶುಭ ಕೋರಿದ ಫ್ಯಾನ್ಸ್‌!

Naveen Sajju: ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್‌ ಎಸ್‌-ನವೀನ್‌ ಸಜ್ಜು ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.

VISTARANEWS.COM


on

Naveen Sajju debuts movie titled first look out
Koo

ಬೆಂಗಳೂರು: ತಮ್ಮ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್‌ ಸಜ್ಜು (Naveen Sajju) ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ತಾರೆಯರು ಸಾಥ್ ಕೊಟ್ಟಿದ್ದಾರೆ. ʻಲೋ ನವೀನʼ ಸಿನಿಮಾದ ಟೈಟಲ್ ನ್ನು ಸ್ಯಾಂಡಲ್‌ ವುಡ್‌ ಹಾಗೂ ಕಿರುತೆರೆಯ 100 ಜನ ನಟ- ನಟಿಯರು ತಮ್ಮ, ತಮ್ಮ ಸೋಷಿಯಲ್‌ ಮೀಡಿಯಾಗಳ ಮೂಲಕ ನವೀನ್ ಸಜ್ಜು ಚೊಚ್ಚಲ ಸಿನಿಮಾಗೆ ಶುಭ ಕೋರಿದ್ದಾರೆ.

ಲೋ ನವೀನ, ಹಳ್ಳಿ ಸೊಗಡಿನ ಚಿತ್ರವಾಗಿದ್ದು. ಸ್ವತಃ ನವೀನ್‌ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಧನುರ್ದಾರಿ ಪವನ್‌ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಮೂರು ಜನ ಸಿನಿಮಾಟೋಗ್ರಾಫರ್‌ ಗಳಿರುವುದು ವಿಶೇಷ. ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್‌ ಎಸ್‌-ನವೀನ್‌ ಸಜ್ಜು ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: Naveen Sajju | ನವೆಂಬರ್‌ನಲ್ಲಿ ಬರ್ತಿದೆ ನವೀನ್ ಸಜ್ಜು ನಟನೆಯ ಮ್ಯಾನ್ಷನ್ ಹೌಸ್ ಮುತ್ತು

ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ. ನವೀನ್ ಸಜ್ಜು ಮುಖ್ಯಪಾತ್ರದಲ್ಲಿ ನಟಿಸಿರುವ ಮ್ಯಾನ್‌ ಷನ್‌ ಹೌಸ್‌ ಮುತ್ತು ಚಿತ್ರವು ಬಿಡುಗಡೆಗೆ ಸಿದ್ದಗೊಂಡಿರುವ ಹೊತ್ತಿನಲ್ಲೇ ಲೋ ನವೀನ ಚಿತ್ರ ಸೆಟ್ಟೇರಿದೆ. ಕಲರ್ಸ್‌ ಕನ್ನಡದ ಚುಕ್ಕಿ ತಾರೆ ಧಾರಾವಾಹಿಯಲ್ಲಿ ಮಾಗಡಿ ರೋಡ್‌ ಮಲ್ಲಿಕಾರ್ಜುನನಾಗಿ ತಮ್ಮ ನಟನಾ ಕೌಶಲ್ಯದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಸಿಂಗರ್ ನವೀನ್‌ ಸಜ್ಜು ಬೆಳ್ಳಿ ತೆರೆಯ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Actor Darshan: ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

VISTARANEWS.COM


on

Actor Darshan Ganesh Rao Visits Renukaswamy Family and spport In Chitradurga
Koo

ಬೆಂಗಳೂರುಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಹಲವು ನಾಯಕರು, ಸೆಲೆಬ್ರಿಟಿಗಳು ರೇಣುಕಾ ಸ್ವಾಮಿ ಕುಟುಂಬಕ್ಕೆ ಸಹಾಯವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ವಿನೋದ್‌ ರಾಜ್‌ ಅವರು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಇದೀಗ   ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ (Ganesh Rao) ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.

ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

ಗಣೇಶ್ ರಾವ್ ಮಾತನಾಡಿ ʻʻನಾವು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಜತೆ ನಾವು 13 ಸಿನಿಮಾಗಳನ್ನು ಮಾಡಿದ್ದೇವೆ. ಆ ಮನುಷ್ಯ ಅಷ್ಟು ಕ್ರೂರಿ ಅಲ್ಲ. ಸೆಲೆಬ್ರಿಟಿ ಆದ ಕಾರಣ ಹೆಸರು ಮುನ್ನಲೆಗೆ ಬರುತ್ತಿದೆ. ನನಗೆ ಆತ್ಮ ಸಾಕ್ಷಿ ಹೇಳುತ್ತ ಇದೆ. ದರ್ಶನ್‌ ಅವರು ಆ ಮಟ್ಟಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಜತೆ ಇದ್ದ ಸಂಗಡಿಗರು ಹೀಗೆ ಮಾಡಿದ್ದರಿಂದ ಅಪವಾಧ ಅವರ ಮೇಲೆ ಹೀಗೆ ಬಂದಿದೆ. ಇಲ್ಲಿ ಬಿಂಬಿಸುತ್ತಿರುವುದು ದರ್ಶನ್‌ ಅವರನ್ನು. ನ್ಯಾಯಾಲಕ್ಕೆ ಮುಂಚೆನೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಬಿಟ್ಟಿದ್ದಾರೆ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಆದರೆ ತಪ್ಪು ಮಾಡದೇನೇ ಅಪವಾಧ ಹೊರಿಸುವುದು ಸರಿಯಲ್ಲ. ಕೆಲವರು ಅವರೇ ಕಣ್ಣಾರೆ ನೋಡಿರೋ ತರ ಮಾತನಾಡುತ್ತಾರೆ. ಈ ದುರ್ಘಟನೆ ನಡೆಯಬಾರದಿತ್ತು. ರೇಣುಕಾಸ್ವಾಮಿ ಮನೆಯವರು ನೋವು ಅನುಭವಿಸುತ್ತಿದ್ದಾರೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ಕೊಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮಾನವೀಯತೆ ದೃಷ್ಟಿಯಿಂದ ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ವಿʼʼ ಎಂದರು.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಇದಕ್ಕೂ ಮುಂಚೆ ಮುಂಚೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದ್ದರು. .

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

Actor Darshan: ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

VISTARANEWS.COM


on

Actor Darshan case Police Serve Notice To Siddarudha Who Claimed To Met Darshan
Koo

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ (Renuka Swamy Murder case) ಕೂಡಾ ನಟ ದರ್ಶನ್ (Actor Darshan) ಅಭಿಮಾನಿಯಾಗಿದ್ದವನು. ಆದರೆ ಅದೇ ಅಭಿಮಾನಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ನನ್ನು ಸಿದ್ಧಾರೂಢ ಎಂಬ ಮಾಜಿ ಕೈದಿ ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ ನೋಟಿಸ್‌ ನೀಡಿದೆ.

ಸನ್ನಡತೆ ಆಧಾರದಲ್ಲಿ ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿದ್ದ ಸಿದ್ಧಾರೂಢ ಅವರು ದರ್ಶನ್‌ನ ಭೇಟಿ ಮಾಡಲೇಬೇಕು ಎನ್ನುವ ಆಸೆ ಹೊಂದಿದ್ದರು. ಅದಕ್ಕಾಗಿ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಜೈಲು ಅಧಿಕಾರಿ ಕೂಡ ಒಪ್ಪಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಸಿದ್ಧರೂಢರನ್ನು ಭೇಟಿಯಾಗೋದಿಕ್ಕೆ ದರ್ಶನ್‌ ಒಪ್ಪುತ್ತಾರಾ? ಅವರಿಗೆ ಮನಸಿದ್ಯಾ ಅಂತ ಅಧಿಕಾರಿಗಳು ದರ್ಶನ್‌ನ ಕೇಳಿದ್ದರು. ಆದರೆ ದರ್ಶನ್‌ ಹಿಂದೂ ಮುಂದೂ ನೋಡಲೇ ಇಲ್ಲ. ಒಂಚೂರು ಯೋಚನೆ ಮಾಡದೇ ತನ್ನನ್ನು ಭೇಟಿಯಾಗಲು ಬಯಸುತ್ತಿರುವ ಅಭಿಮಾನಿಯ ಭೇಟಿಗೆ ಒಪ್ಪಿಕೊಂಡಿದ್ದರು. ಸಿದ್ಧಾರೂಢ ಅವರನ್ನು ಒಳ ಕಳುಹಿಸುವಂತೆ ಮನವಿ ಮಾಡಿದ್ದರು. ಎನ್ನಲಾಗಿತ್ತು. ಸಿದ್ಧಾರೂಢ, ತಾವು ದರ್ಶನ್ ಅನ್ನು ಜೈಲಿನಲ್ಲಿ ಭೇಟಿಯಾಗಿದ್ದು, ದರ್ಶನ್​ಗೆ ಯೋಗ ಹೇಳಿಕೊಟ್ಟೆ, ಧ್ಯಾನ ಹೇಳಿಕೊಟ್ಟೆ, ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.

ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲು ಅಧಿಕಾರಿಗಳು

ಜೈಲಲ್ಲಿ ನಟ ದರ್ಶನ್ ಭೇಟಿಯಾಗದೆ‌ ಸಿದ್ದರೂಢ ಸುಳ್ಳು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ. ದರ್ಶನ್ ಭೇಟಿ ಮಾಡಿಸಲೇ ಇಲ್ಲವೆಂದು ಕಾರಾಗೃಹ ಇಲಾಖೆಗೆ ಜೈಲಾಧಿಕಾರಿಗಳು ರಿಪೋರ್ಟ್ ಕೊಟ್ಟಿದ್ದಾರೆ. ಸನ್ನಡತೆ ಮೇಲೆ ರಿಲೀಸ್ ಆಗಿರುವ ಸಿದ್ದರೂಢ ಮಾಧ್ಯಮ ಹೇಳಿಕೆ ಬಗ್ಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದಾರೆ.  ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

ಇದನ್ನೂ ಓದಿ: Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

ಇದೇ ತಿಂಗಳ ಎಂಟನೇ ತಾರೀಖು ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಿದ್ಧಾರೂಢ ಬಂದಿದ್ದ. ಆತನನ್ನು ಒಂಬತ್ತನೇ ತಾರೀಖು ಬಿಡುಗಡೆ ಮಾಡಿದ್ದೆವು. ಆತ ಇಲ್ಲಿ ದರ್ಶನ್ ಅನ್ನು ಭೇಟಿ ಆಗಿಲ್ಲ. ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲಧಿಕಾರಿಗಳು ಹೇಳಿದ್ದಾರೆ.

ಸಿದ್ಧಾರೂಢ ಮಾಧ್ಯಮದ ಮುಂದೆ ಹೇಳಿದ್ದೇನು?

ʻʻನಿನ್ನನ್ನ ಕಾನೂನು ಕ್ಷಮಿಸಿ ಒಂದು ಅವಕಾಶವನ್ನು ಕೊಟ್ಟಿದೆ. ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ಹೆಂಡತಿ ಮಕ್ಕಳ ಜತೆ ಪ್ರೀತಿಯಿಂದ ಬದುಕು ಅಂತ ಸಲಹೆಯನ್ನು ಕೊಟ್ಟಿದ್ದರಂತೆ. ದರ್ಶನ್ ಆಡಿರುವ ಈ ಮಾತುಗಳನ್ನು ಕೇಳಿದರೆ ನಿಜಕ್ಕೂ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಮಾಡಿರುವ ತಪ್ಪಿನ ಅರಿವು ಆದಂತಿದೆʼʼ ಎಂದು ಸಿದ್ಧಾರೂಢ ತಿಳಿಸಿದ್ದರು.

ಜುಲೈ 8ರಂದು ಜೈಲಾಧಿಕಾರಿಗಳ ಅನುಮತಿ ಪಡೆದು ನಟ ದರ್ಶನ್‌ರನ್ನು ಭೇಟಿಯಾದ ಸಿದ್ಧರೂಢ, ಪಿರಮಿಡ್‌ ಧ್ಯಾನವನ್ನು ಹೇಳಿಕೊಟ್ಟಿದ್ದರಂತೆ. ನಾನು ನಿಮ್ಮ ಅಭಿಮಾನಿ ಎಂದಾಗ ಸಿದ್ಧರೂಢರನ್ನು ದರ್ಶನ್‌ ತಬ್ಬಿಕೊಂಡರಂತೆ. ಹತ್ತು ನಿಮಿಷ ಧ್ಯಾನ ಮಾಡಿದ ದರ್ಶನ್‌ ಇದು ಚೆನ್ನಾಗಿದೆ, ನಾನು ಇನ್ಮೆಲೆ ಇದನ್ನೂ ಮಾಡ್ತಿಲಿ ಎಂದು ಜೈಲಿನಿಂದ ಬಿಡುಗಡೆಗೊಂಡ ಕೈದಿ ಸಿದ್ಧಾರೂಢ ಹೇಳಿದ್ದಾರೆ. ದರ್ಶನ್‌ ಅವರನ್ನು ನೋಡಿದಾಗ ಬೇಸರ ಆಯಿತು. ಆದರೆ ಅವರು ನೀನು ನಾನ್‌ ಸೆಲೆಬ್ರಿಟಿ, ನಾನು ನಿನ್ನ ಸೆಲೆಬ್ರಿಟಿ ಎಂದು ಆಟೋಗ್ರಾಫ್‌ ಕೊಟ್ಟರು ಅಂತ ದರ್ಶನ್‌ ಕುರಿತು ಸಿದ್ಧರೂಢ ವಿವರಿಸಿದ್ದರು.

Continue Reading

ಸ್ಯಾಂಡಲ್ ವುಡ್

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Golden Star Ganesh: ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

VISTARANEWS.COM


on

Golden Star Ganesh krishnam pranaya sakhi in famous social media
Koo

ಬೆಂಗಳೂರು: ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading
Advertisement
Paris Olympics 2024
ಕ್ರೀಡೆ4 mins ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Stock Market
ವಾಣಿಜ್ಯ5 mins ago

Stock Market: ಭರ್ಜರಿಯಾಗಿಯೇ ಕಂಬ್ಯಾಕ್‌ ಮಾಡಿದ ಷೇರುಪೇಟೆ; ಸಾರ್ವಕಾಲಿಕ ಗರಿಷ್ಠ ಅಂಕಕ್ಕೆ ತಲುಪಿದ ಸೆನ್ಸೆಕ್ಸ್‌

robbery case brahmavara
ಕ್ರೈಂ13 mins ago

Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ

Viral Video
Latest20 mins ago

Viral Video: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

Actor Dhanush Raayan box office Day 3
ಕಾಲಿವುಡ್23 mins ago

Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

Deepika Padukone Were Not Easy Task For Siddhant Chaturvedi Gehraiyaan Deepika Padukone Were Not Easy Task For Siddhant Chaturvedi Gehraiyaan
ಬಾಲಿವುಡ್43 mins ago

Deepika Padukone: ದೀಪಿಕಾ ಜತೆ ಹಸಿ ಬಿಸಿ ದೃಶ್ಯಗಳನ್ನು ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ ಎಂದ ಸಿದ್ಧಾಂತ್ ಚತುರ್ವೇದಿ!

Donald Trump
ವಿದೇಶ49 mins ago

Donald Trump: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೂಗಲ್‌ ಹಸ್ತಕ್ಷೇಪ: ರಿಪಬ್ಲಿಕನ್‌ ಪಾರ್ಟಿಯ ಆರೋಪಕ್ಕೆ ಕಾರಣವೇನು?

shiradi landslide railway track
ಪ್ರಮುಖ ಸುದ್ದಿ1 hour ago

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

US Mass Shooting
ವಿದೇಶ2 hours ago

US Mass Shooting: ಅಮೆರಿಕದ ಪಾರ್ಕ್‌ನಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಒಬ್ಬ ವ್ಯಕ್ತಿ ಬಲಿ, 6 ಜನಕ್ಕೆ ಗಾಯ

Janhvi Kapoor interview Kamiya Jani trolled for calling idli-chicken curry weird combination
ಬಾಲಿವುಡ್2 hours ago

Janhvi Kapoor: ಇಡ್ಲಿ- ಚಿಕನ್ ಕರಿ ಕಾಂಬಿನೇಶನ್‌ಗೆ ಮುಖ ಕಿವುಚಿಕೊಂಡ ಖ್ಯಾತ ಯುಟ್ಯೂಬರ್‌; ತಿನ್ನಲು ಕೈ ಬಳಸಿ ಎಂದ ಜಾಹ್ನವಿ ಕಪೂರ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ17 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ19 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ21 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ22 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌