Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ 'ದ ಜಡ್ಜ್ ಮೆಂಟ್' ಟ್ರೈಲರ್‌! - Vistara News

ಸ್ಯಾಂಡಲ್ ವುಡ್

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Kannada New Movie: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

VISTARANEWS.COM


on

Kannada New Movie The judgement Trailer Out Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ʻ ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆʼʼ ಎಂದರು.

ಇದನ್ನೂ ಓದಿ: Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

ʻʻನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮʼʼ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kiccha Sudeep: ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು.

VISTARANEWS.COM


on

Kichcha Sudeep joined hands with Sandesh
Koo

ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ (kiccha sudeep) ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಘೋಸ್ಟ್‌” ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಜತೆಗೆ ಕೈ ಜೋಡಿಸಿದ್ದಾರೆ ನಿರ್ಮಾಪಕ ಎನ್‌. ಸಂದೇಶ್‌.

ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಸೆಟ್ಟೇರಲಿದೆ.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಹಾಗಾದರೆ ಯಾವಾಗ ಶುರು?

ಸದ್ಯಕ್ಕೆ ಕಿಚ್ಚ ಸುದೀಪ್‌ ಸಂದೇಶ್‌ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಯಾವಾಗ ಶುರು, ನಿರ್ದೇಶಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ. ಈ ನಡುವೆ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪ್ರಭುದೇವ ನಟನೆಯ “ವುಲ್ಫ್” ಸಿನಿಮಾ ರೆಡಿಯಾಗಿದೆ. ಸೃಜನ್‌ ಲೋಕೇಶ್‌ ಜತೆಗಿನ ಜಿಎಸ್‌ಟಿ ಚಿತ್ರದ ಶೂಟಿಂಗ್‌ ಕೆಲಸಗಳೂ ಮುಕ್ತಾಯವಾಗಿದ್ದು, ಬಿಡುಗಡೆಯ ಹೊಸ್ತಿಲಲ್ಲಿದೆ. ಇದರ ಜತೆಗೆ “ಘೋಸ್ಟ್‌ 2” ಅಥವಾ ಶಿವಣ್ಣನ ಜತೆಗಿನ “ದಳವಾಯಿ ಮುದ್ದಣ್ಣ”, “ಬೀರಬಲ್ 2” ಸಿನಿಮಾಗಳೂ ಸೆಟ್ಟೇರಲಿವೆ.

Continue Reading

ಸ್ಯಾಂಡಲ್ ವುಡ್

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Actor Jaggesh: ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

VISTARANEWS.COM


on

Actor Jaggesh talk about body shame
Koo

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) ಅವರು ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ಈ ಬಗ್ಗೆ ಒಂದು ಇಂಟ್ರೆಸ್ಟಿಂಗ್ ಸಂಗತಿ ಬಿಚ್ಚಿಟ್ಟಿದ್ದಾರೆ.

ಜಗ್ಗೇಶ್‌ ಪೋಸ್ಟ್‌ನಲ್ಲಿ ʻʻನನ್ನನ್ನು ಕಪ್ಪು ಎಂದು ಅಣಕ ಮಾಡುತ್ತಿದ್ದರು ಬಾಲ್ಯದಲ್ಲಿ ಎಲ್ಲರು..!!
ಆಗ ನನಗೆ ಬಹಳ ಸಿಟ್ಟು ಬರುತ್ತಿತ್ತು. ನಾನು ಯವ್ವನದಲ್ಲಿ ಬೆಳ್ಳಗಾಗಲು ಅನೇಕ ಕೆಟ್ಟ ಪ್ರಯತ್ನ ಮಾಡಿದ್ದುಂಟು!
ನಟನಾದ ಮೇಲೆ ನನ್ನ ಮ್ಯಾಕ್ಸ್‌ ಫ್ಯಾಕ್ಟರ್‌ (max factor) ಮೇಕಪ್‌, ಅಂಬರೀಶ್‌ ಅವರ, ರಜನಿಯವರ, ವಿಜಯಕಾಂತ್, ಶಿವಣ್ಣ ಕೂಡ ಬಳಸುತ್ತಿದ್ದರು. ನಾನು ಬಳಸುತ್ತಿದ್ದ ಪ್ಯಾನ್‌ ಕೇಕ್‌ ಇಂದು ವಿಶ್ವದಲ್ಲಿ ಮರೆಯಾದ ಪ್ಯಾನ್‌ ಕೇಕ್‌ . ಆದರೆ ನನ್ನ ಅದೃಷ್ಟ ಅದು ನನ್ನ ಬಳಿ ಇನ್ನೂ 50 ಸಿನಿಮಾಗೆ ಸಾಕಾಗುತ್ತದೆ ಅಪ್ಟಿದೆ. ಅನೇಕರು ಕೇಳಿದರು ಈ ಪ್ಯಾನ್‌ ಕೇಕ್‌ ಕೊಡಿ ಎಂದು (pancake). ನಾನು ನೀಡುವುದಿಲ್ಲಾ ಎಂದೆ. ಕಾರಣ ಅದರ ಮೇಲಿನ ವಿಪರೀತ ಪ್ರೀತಿ ಹಾಗೂ ಭಕ್ತಿ. ಅದು ಹಚ್ಚಿದರೆ ನನ್ನ ಕಪ್ಪು ಅಂದವರು ಮೌನವಾಗುತ್ತಾರೆ. ಇದನ್ನು ಬಳಸುವಾಗ ಅಯ್ಯೋ ನಾನು ನಿಜವಾಗಲು ಈ ಬಣ್ಣ ಹೊಂದಿದ್ದರೆ ಚೆನ್ನಾಗಿರುತ್ತಿತ್ತು ಎನ್ನಿಸುತ್ತದೆ. ಆದರೆ ನನ್ನ ಮೊಮ್ಮಗ ಅರ್ಜುನ ಯಾವ pancake ಬಳಸದಂತೆ ಬಣ್ಣ ಹಚ್ಚಿಕೊಂಡೇ ಬಂದಿದ್ದಾನೆ. ಭೂಮಿಗೆ ಇಷ್ಟು ಹೇಳಲು ಕಾರಣ ಇಂದು ಇವನು 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಅಂದರೆ ಅವನ ಹುಟ್ಟುಹಬ್ಬ. ಹುಟ್ಟು ಹಬ್ಬದ ಶುಭಾಶಯಗಳು ಕಂದ. ದೇವರು ಒಳ್ಳೆಯದು ಮಾಡಲಿʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Jaggesh: ರಂಗ ನಾಯಕ, ʻಕಿತ್ತೋದ್‌ ನನ್ಮಗʼ ಮಾತಿಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ ಜಗ್ಗೇಶ್‌!

ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

ʻಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್‌ ಅವರು ಮುದ್ದಿನ ಶ್ವಾನ ಅರ್ಜುನನನ್ನು ನೆನೆದು ಭಾವುಕರಾಗಿದ್ದರು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್ ಅವರು ʻಅರ್ಜುನʼ ಎಂಬ ಹೆಸರಿನ ಸಾಕು ನಾಯಿಯ ಜತೆ ಇರುವ ಫೋಟೊವನ್ನು ತೋರಿಸಿದಾಗ, ʻಇವನ ಹೆಸರನ್ನೇ ನಾನು ನನ್ನ ಮೊಮ್ಮಗನಿಗೆ ಇಟ್ಟಿದ್ದೇನೆ. ಕಾರಣವೇನೆಂದರೆ, ಲ್ಯಾಬ್ರೇಡರ್ ನಾಯಿ ಜಾಸ್ತಿ ದಿನ ಬದುಕುವುದಿಲ್ಲ. ಆದರೆ ಅವನು ಹದಿನಾಲ್ಕುವರೆ ವರ್ಷ ನಮ್ಮ ಜತೆ ಬದುಕಿದ್ದʼ ಎಂದಿದ್ದರು. ಸಿನಿಮಾಗಳ ವಿಚಾರಕ್ಕೆ ಬಂದರೆ ಕೊನೆಯದಾಗಿ ಜಗ್ಗೇಶ್ ನಟಿಸಿದ ‘ರಂಗನಾಯಕ’ ಸಿನಿಮಾ ತೆರೆಗೆ ಬಂದಿತ್ತು. ಆದರೆ ಚಿತ್ರ ಗೆಲ್ಲಲಿಲ್ಲ.

Continue Reading

ಸ್ಯಾಂಡಲ್ ವುಡ್

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

Kannada Cinema In OTT: ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು.

VISTARANEWS.COM


on

Kannada Cinema In OTT bad manners 02 Kannada Movie
Koo

ಬೆಂಗಳೂರು: ಇತ್ತೀಚಿಗೆ ‘ಯುವ’, ‘ಬ್ಲಿಂಕ್’, ‘ಅವತಾರ ಪುರುಷ’-2, ‘ಶಾಖಾಹಾರಿ’, ‘ಜೂನಿ’ ರೀತಿಯ ಸಿನಿಮಾಗಳು ವೀಕ್ಷಕರನ್ನು (Kannada Cinema In OTT) ರಂಜಿಸಿವೆ. ಅದರಲ್ಲೂ ‘ಬ್ಲಿಂಕ್’ ಹಾಗೂ ‘ಶಾಖಾಹಾರಿ’ ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿವೆ. ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ, ಆಶಿಕಾ ರಂಗನಾಥ್ ನಟನೆಯ ‘O2’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿವೆ.

ʼಬ್ಯಾಡ್‌ ಮ್ಯಾನರ್ಸ್‌ʼ

ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರಕ್ಕೆ ದುನಿಯಾ ಸೂರಿ ನಿರ್ದೇಶನವಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಅಭಿಷೇಕ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು ಡಿಂಪಲ್‌ ಕ್ವೀನ್‌ ರಚಿತಾ ರಾಮ್‌. ಕಳೆದ ವರ್ಷ ನವೆಂಬರ್ 24ಕ್ಕೆ ತೆರೆಗಪ್ಪಳಿಸಿದ್ದ ‘ಬ್ಯಾಡ್‌ ಮ್ಯಾನರ್ಸ್’ ಸಿನಿಮಾ ಇದೀಗ ಸನ್‌ನೆಕ್ಸ್ಟ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಬ್ಯಾಡ್ ಮ್ಯಾನರ್ಸ್‌ ಹಾಡಿಗೆ ಧನು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದರು. ಸಿನಿಮಾಟೋಗ್ರಾಫರ್ ಶೇಖರ್ ಅದನ್ನು ಅಷ್ಟೇ ಅದ್ಭುತವಾಗಿ ಸೆರೆ ಹಿಡಿದಿದ್ದರು.ಯುಗಾದಿ ಹಬ್ಬಕ್ಕೆ ಬ್ಯಾಡ್‌ ಮ್ಯಾನರ್ಸ್ ಟೈಟಲ್‌ ಟ್ರ್ಯಾಕ್‌ ಸಿನಿರಸಿಕರಿಗೆ ಸಖತ್‌ ಕಿಕ್‌ ನೀಡಿತ್ತು.

ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ನಿರ್ದೇಶಕ ದುನಿಯಾ ಸೂರಿ ಅವರ ಕಲ್ಪನೆಯ ಈ ಗೀತೆಯ ಮೇಕಿಂಗ್ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಹವಾ ಕ್ರಿಯೇಟ್‌ ಮಾಡಿತ್ತು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

‘O2’ ಸಿನಿಮಾ

ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು. ನೀವು ನೋಡಿ ಎಂದು ಸಲಹೆ ನೀಡಿದ್ದರು. ಪುನೀತ್ ರಾಜ್‌ಕುಮಾರ್ ಕಥೆ ಕೇಳಿ ಒಪ್ಪಿ ತಮ್ಮ ಬ್ಯಾನರ್‌ನಲ್ಲಿ ಆರಂಭಿಸಿದ್ದ ಕೊನೆಯ ಸಿನಿಮಾ ‘O2’. ಆಶಿಕಾ ರಂಗನಾಥ್‌ ಜೊತೆ ಪ್ರವೀಣ್‌ ತೇಜ, ರಾಘವ್‌ ನಾಯಕ್‌, ಸಿರಿ ರವಿಕುಮಾರ್, ಗೋಪಾಲ್‌ ದೇಶಪಾಂಡೆ, ಪ್ರಕಾಶ್‌ ಬೆಳವಾಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಇನ್ನು ಆಶಿಕಾ ರಂಗನಾಥ್ ಮುಖ್ಯಭೂಮಿಕೆಯಲ್ಲಿರುವ ಥ್ರಿಲ್ಲರ್ ಸಿನಿಮಾ ‘O2’ ಅಮೇಜಾನ್ ಪ್ರೈಂನಲ್ಲಿ ಸಿಗುತ್ತಿದೆ. ಸೂರಿ ನಿರ್ದೇಶನದ ‘ಬ್ಯಾಡ್‌ ಮ್ಯಾನರ್ಸ್’ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡಿರಲಿಲ್ಲ. ’02’ ಒಂದು ಮೆಡಿಕಲ್‌ ಥ್ರಿಲ್ಲರ್‌ ಸಿನಿಮಾ.

Continue Reading

ಸ್ಯಾಂಡಲ್ ವುಡ್

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

Dolly Dhananjay: ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

VISTARANEWS.COM


on

Dolly Dhananjay kotee distribution rights held by KRG Studios
Koo

ಬೆಂಗಳೂರು: ಡಾಲಿಯ ʻಕೋಟಿʼ (Dolly Dhananjay) ಸಿನಿಮಾ ಹವಾ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ʻಕೋಟಿʼ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆಯ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳೋದು ಸಲೀಸಿನ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ಸಂಗತಿ. ಯಾಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನಡಾಗಿಸಿಕೊಳ್ಳುತ್ತೆ. ಇದೀಗ ಕೋಟಿ ವಿತರಣಾ ಹಕ್ಕು ಕೆಆರ್ ಜಿ ಪಾಲಾಗಿರೋದೇ, ಈ ಚಿತ್ರದೆಡೆಗಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಕೋಟಿ ಸಿನಿಮಾವನ್ನು ಇಡೀ ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, “ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧವು ‘ಕೋಟಿ’ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ನಾನು ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

Continue Reading
Advertisement
Exit Poll 2024
ದೇಶ20 mins ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ31 mins ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ41 mins ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್45 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ56 mins ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ1 hour ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ1 hour ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ1 hour ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News2 hours ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್2 hours ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌