Kannada New Movie: ವಿಜಯ್‌ ರಾಘವೇಂದ್ರ "ಗ್ರೇ ಗೇಮ್ಸ್" ಸಿನಿಮಾ ಗೆಲುವು - Vistara News

ಸ್ಯಾಂಡಲ್ ವುಡ್

Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

Kannada New Movie: ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

VISTARANEWS.COM


on

Vijay Raghavendra gray games success
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಂಗಾಧರ್ ಸಾಲಿಮಠ (Kannada New Movie) ನಿರ್ದೇಶನ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ (Vijay raghavendra) ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಸಂಭ್ರಮಿದೆ. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.

ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

ʻʻಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆʼʼ ಎಂದರು ನಿರ್ಮಾಪಕ ಆನಂದ್ ಮುಗದ್.

ಇದನ್ನೂ ಓದಿ: Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

ʻʻನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡುವುದಕ್ಕಿಂತ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. “ಗ್ರೇ ಗೇಮ್ಸ್” ಅನ್ನು ಜನ ಮೆಚ್ಚಿಕೊಂಡಿದ್ದಾರೆʼʼ ಎಂದು ನಟ ವಿಜಯ ರಾಘವೇಂದ್ರ ತಿಳಿಸಿದರು.

ʻʻನನ್ನ ಮಾವ ವಿಜಯ್ ರಾಘವೇಂದ್ರ ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆʼʼ ಎಂದರು ನವ ನಟ ಜೈ.

ನಟಿ ಭಾವನರಾವ್ ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

Actor Darshan : ದರ್ಶನ್‌‌‌ ನೋಡ್ಬೇಕೆಂದು ಜೈಲಿನ ಹೊರಗೆ ವಿಶೇಷಚೇತನ ಯುವತಿಯೊಬ್ಬಳು ಗೋಳಾಡಿದ್ದಾಳೆ. ದರ್ಶನ್‌ ಜೈಲುಪಾಲಾದ ದಿನದಿಂದ ಯುವತಿ ಊಟ ಬಿಟ್ಟು ಹಠ ಮಾಡುತ್ತಿದ್ದಾಳೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. ಗುರುವಾರವೂ ದರ್ಶನ್ ಭೇಟಿಗೆ ವಿಶೇಷ ಚೇತನ ಯುವತಿ ಆಗಮಿಸಿದ್ದಳು.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನ ನಿವಾಸಿ ಸೌಮ್ಯ ತನ್ನ ನೆಚ್ಚಿನ ನಟನನ್ನು ನೋಡಬೇಕೆಂದು ಹಠ ಹಿಡಿದಿದ್ದಳು. ದರ್ಶನ್‌ನನ್ನು ನೋಡುವ ತನಕ ಊಟ ಮಾಡುವುದಿಲ್ಲ ಎಂದಿದ್ದಾಳೆ. ಹೀಗಾಗಿ ಸೌಮ್ಯಳ ಪೋಷಕರು ಪರಪ್ಪನ ಅಗ್ರಹಾರಕ್ಕೆ ಭೇಟಿ ನಿಡಿದ್ದರು. ನಟ ದರ್ಶನ್‌ನ ಅಪ್ಪಟ ಅಭಿಮಾನಿಯಾಗಿರುವ ಸೌಮ್ಯ, ದರ್ಶನ್‌ ಜೈಲಿಗೆ ಹೋದ ದಿನದಿಂದ ಸರಿಯಾಗಿ ಊಟ ಮಾಡಿಲ್ಲ. ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿಯಾಗಬೇಕೆಂದು ಹಠ ಹಿಡಿದಿದ್ದಾಳೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ, ಪಟ್ಟಣಗೆರೆಯ ವಾಹನ ಶೆಡ್‌ (Pattanagere Shed) ಕಡೆ ಸುಳಿದಾಡಲು ವಾಹನ ಮಾಲಿಕರು ಅಂಜುತ್ತಿದ್ದಾರೆ. ಇಲ್ಲಿ ಸಾಲ ಬಾಕಿ (Loan default) ಉಳಿಸಿಕೊಂಡಿರುವವರ ವಾಹನಗಳನ್ನು ಸೀಜ್‌ (Seize) ಮಾಡಿ ತಂದಿಡಲಾಗುತ್ತಿದೆ. ಈಗ ಈ ವಾಹನಗಳನ್ನು ಬಿಡಿಸಿಕೊಳ್ಳಲು ಕೂಡ ಯಾರೂ ಈ ಶೆಡ್‌ ಕಡೆ ತಲೆ ಹಾಕುತ್ತಿಲ್ಲ.

ಸಾಲ ಬಾಕಿ ಉಳಿಸಿಕೊಂಡ ಪರಿಣಾಮ ಪಟ್ಟಣಗೆರೆ ಶೆಡ್‌ ಪಾಲಾಗಿರುವ ವಾಹನಗಳ ಮಾಲೀಕರಿಗೆ ಈಗ ಪಟ್ಟಣಗೆರೆಯ ಶೆಡ್ ಭಯವೇ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆಯ ನಡೆದ ತಾಣ ಹಾಗೂ ಅದರ ಬರ್ಬರತೆ ಇವರ ಕೈಕಾಲು ನಡುಗುವಂತೆ ಮಾಡಿದೆ. ʼನೋ ಆರ್ಗ್ಯುಮೆಂಟ್, ಓನ್ಲಿ ಸೆಟಲ್‌ಮೆಂಟ್‌ʼ ಎನ್ನುತ್ತ ಗಪ್‌ಚುಪ್‌ ಆಗಿ ಹಣ ಕಟ್ಟಿ ಬಿಡಿಸಿಕೊಂಡು ಬರುತ್ತಿದ್ದಾರೆ. ಇದರ ಆಸುಪಾಸಿನಲ್ಲಿ ಓಡಾಡುವವರು ಸಹ, ʼಇದೇ ಆ ಶೆಡ್‌ʼ ಎಂದು ಮಾತಾಡಿಕೊಳ್ಳುತ್ತ ಶೆಡ್ಡನ್ನು ನೋಡುತ್ತ ಬಿರಬಿರನೆ ಸಾಗುತ್ತಾರೆ!

ಪಟ್ಟಣಗೆರೆ ಶೆಡ್‌ಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಮಾಲೀಕರು ಕೆಲವೆಡೆ ಬ್ಯಾಂಕ್‌ಗೆ ಹೋಗಿ ಹಣ ಕಟ್ಟಿ, ʼನೀವೇ ವಾಹನ ತಂದುಕೊಡಿʼ ಎಂದೂ ಬ್ಯಾಂಕ್‌ನವರಿಗೆ ಮನವಿ ಮಾಡುತ್ತಿದ್ದಾರಂತೆ. ನಾವು ಶೆಡ್‌ಗೆ ಹೋಗಲ್ಲ‌ ಸರ್, ನೀವೆ ಹೋಗಿ ಎಂದು ದುಂಬಾಲು ಬೀಳುತ್ತಿದ್ದಾರೆ! ʼʼಕ್ರೂರವಾಗಿ ಸತ್ತವರು ದೆವ್ವಗಳಾಗುತ್ತಾರಂತೆ. ಅವರ ಆತ್ಮಗಳು ಅಲ್ಲೇ ಸುಳಿದಾಡ್ತಾ ಇರುತ್ತಾವಂತೆ, ನಮಗ್ಯಾಕೆ ಬೇಕು ಸಾರ್‌ ಇಲ್ಲದ ಉಪದ್ವ್ಯಾಪʼʼ ಎಂದು ಕೂಡ ಕೆಲವು ಮಾಲೀಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಕೂಡಿಹಾಕಿ ದರ್ಶನ್‌ ಮತ್ತು ಗ್ಯಾಂಗ್‌ ಭೀಕರವಾಗಿ ಹಲ್ಲೆ ನಡೆಸಿತ್ತು. ವಾಹನಗಳಿಗೆ ರೇಣುಕಾ ಸ್ವಾಮಿಯ ತಲೆ ಜಪ್ಪಿ, ದೊಣ್ಣೆಗಳಿಂದ ಥಳಿಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿತ್ತು. ಈ ಪೀಡನೆಯನ್ನು ತಾಳಲಾರದೆ ರೇಣುಕಾ ಸ್ವಾಮಿ ಜೀವ ಶೆಡ್‌ನಲ್ಲಿಯೇ ಹೋಗಿತ್ತು. ಕೆಲಕಾಲ ಶವವನ್ನು ಶೆಡ್‌ನಲ್ಲೇ ಇಟ್ಟಿದ್ದ ಡಿ ಗ್ಯಾಂಗ್‌, ನಂತರ ಅದನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿತ್ತು.

ದರ್ಶನ್‌ ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Vijayalakshmi Darshan: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ನಮಗೆ ನ್ಯಾಯ ಸಿಗಲಿದೆ ಎಂದು ಹೇಳುವ ಮೂಲಕ ಅವರು ಅಭಿಮಾನಿಗಳ ದುಃಖ, ಬೇಸರವನ್ನು ತಣಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

Vijayalakshmi Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ (Actor Darshan) ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಭೇಟಿಯಾಗಿ ಬಂದಿರುವ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. “ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ ಪೋಸ್ಟ್‌ ಹೀಗಿದೆ…

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

“ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ಇದನ್ನೂ ಓದಿ: Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Continue Reading

ಸ್ಯಾಂಡಲ್ ವುಡ್

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Actor Darshan: ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Darshan Full aggressive mode while he drunk
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಮಾತ್ರವಲ್ಲ ಹಲವು ಮಾಧ್ಯಮಗಳಿಗೆ ಈ ಬಗ್ಗೆ ಹೇಳಿಕೆ (Actor Darshan) ನೀಡಿದ್ದಾರೆ. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

ಭಾವನಾ ಬೆಳಗೆರೆ ಮಾತನಾಡಿ ʻʻದರ್ಶನ್‌ ಅವರು ಕುಡಿದು ಮಾತನಾಡುವಾಗ ಅಗ್ರೆಸಿವ್‌ ಆಗಿ ಮಾತಾಡ್ತಾರೆ. ಇಲ್ಲ ಅಂದರೆ ಆರಾಮಾಗಿ ಮಾತನಾಡುತ್ತಾರೆ. ಪ್ರತಿ ಬಾರಿ ಮಾತನಾಡುವಾಗ ಅಲ್ವಾ! ಎಂಬ ಉತ್ತರಕ್ಕೆ ಕಾಯುತ್ತಾರೆ. ಮಿಕ್ಕಿದ ದಿನದಲ್ಲಿ ಕ್ಯಾಮೆರಾಗೆ ಅಟ್ಯಾಕ್‌ ಮಾಡಲು ಬರುತ್ತಾರೆ. ಕುಡಿದಿದ್ದಾಗ ಯಾರು ಏನೇ ಹೇಳಿದ್ದರೂ ಒಪ್ಪಿಕೊಳ್ಳಲ್ಲ. ಇಂದು ನಾನು ತಂದೆಯವರೆ ಹಿಸ್ಟರಿ ಇಟ್ಟುಕೊಂಡು ಮಾತಾಡ್ತಾ ಇಲ್ಲ. ನನ್ನ ಸ್ವತಃ ಅಣುಭವ ಹಂಚಿಕೊಳ್ಳುತ್ತಿರುವೆʼʼಎಂದರು.

ಇದನ್ನೂ ಓದಿ: ‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

ʻʻಆಗಿನ ಕಾಲದ ನಟರನ್ನು ನಾವು ಪೂಜಿಸುತ್ತಿದ್ದೇವು. ಅಣ್ಣಾವ್ರ ಆಗಲಿ ಹಲವು ನಟರು ಇಷ್ಟವಾಗುತ್ತಿದ್ದರು. ಆದರೆ ಆಗ ಅಭಿಮಾನಿಗಳ ನಡುವೆ ಜಿದ್ದಾ ಜಿದ್ದಿ ಇರಲಿಲ್ಲ. ಆದರೆ ಈಗ ದರ್ಶನ್‌ ಅಥವಾ ಅಪ್ಪು, ಸುದೀಪ್‌ ಈ ರೀತಿ ಅಭಿಮಾನಿಗಳು ಮಾತನಾಡಲು ಶುರು ಮಾಡಿದ್ದಾರೆ. ಮುಂಚೆ ಎಲ್ಲರೂ ಒಟ್ಟಿಗೆ ನಿಂತು ಬೆಳೆಸುತ್ತಿದ್ದರು. ಆದರೀಗ ಒಬ್ಬರ ಫ್ಯಾನ್ಸ್‌ ಇನ್ನೊಬ್ಬರ ಸಿನಿಮಾ ಕೂಡ ನೋಡುತ್ತಿಲ್ಲʼʼಎಂದರು.

ನಮ್ಮ ತಂದೆ ಅವತ್ತು ಬುದ್ಧಿ ಹೇಳಿದ್ದೇ ತಪ್ಪಾ?

ʻʻನನ್ನ ತಂದೆ ದರ್ಶನ್‌ ಅವರಿಗೆ ವಿಜಯಲಕ್ಷ್ಮಿ ಅವರನ್ನು ಹೊಡೆಯಬೇಡ ಎಂದಿದ್ದಾಗ, ದರ್ಶನ್‌ ನನ್ನ ಹೆಂಡತಿ ಅವಳು ಹೊಡತ್ತೀನಿ, ನೀನು ಯಾರು ಎಂದು ಕೇಳಿದ್ದರು. ಆದರೆ ನನ್ನ ತಂದೆ ಬುದ್ಧಿ ಮಾತು ಹೇಳಿದ್ದರು. ಕುಡಿದಾಗ ಮಾತ್ರ ದರ್ಶನ್‌ ಹೀಗೆ. ಆದರೆ ಬೇರೆ ಸಮಯದಲ್ಲಿ ತುಂಬ ಸಾಫ್ಟ್‌. ಈ ಕೃತ್ಯ ಆದಾಗ ಅವರು ಕುಡಿದಾಗಲೇ ಮಾಡಿರೋದು. ಆದರೆ ಈಗ ಕಾನೂನು ಒಂದೇ. ಕುಡಿದು ಮಾಡಿದೆ ಅಂತ ಕ್ಷಮೆ ಏನು ಕಡಿಮೆ ಆಗಲ್ಲ. ಆದರೆ ದರ್ಶನ್‌ ಯಾವಾಗ ಈ ರೀತಿಯ ಗೂನವನ್ನು ಸರಿ ಮಾಡ್ಕೋತ್ತಾರೆ? ಆದರೆ ಮುಂದೆ ಏನಾಗುತ್ತೆ ಎನ್ನುವುದು ಗೊತ್ತಿಲ್ಲʼʼಎಂದರು.

ರೇಣುಕಾ ಸ್ವಾಮಿ ಚಿತ್ರದುರ್ಗದವರಾಗಿದ್ದು ಬಡ ಮಧ್ಯಮ ಕುಟುಂಬದವರಾಗಿದ್ದಾರೆ. ಕಳೆದ ವರ್ಷ ಇದೇ ತಿಂಗಳು ಮದುವೆಯಾಗಿದ್ದ ರೇಣುಕಾ ಸ್ವಾಮಿಯ ಪತ್ನಿ ಐದು ತಿಂಗಳ ಗರ್ಭಿಣಿ. ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ಶನಿವಾರ ಅಪಹರಣ ಮಾಡಿದ್ದ ನಟ ದರ್ಶನ್ ಸಹಚರರು ಪಟ್ಟಣಗೆರೆಯ ಶೆಡ್​ನಲ್ಲಿ ಕೂಡಿಹಾಕಿ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಚರಂಡಿಗೆ ಎಸಗಿ ಹೋಗಿದ್ದರು.

Continue Reading

ಸ್ಯಾಂಡಲ್ ವುಡ್

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Tharun Sudhir: ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

VISTARANEWS.COM


on

Tharun Sudhir and sonal monteiro love story support By Darshan
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗುವುದು ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಮದುವೆ ವಿಚಾರವನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿಲಿದೆ ಎನ್ನಲಾಗಿದೆ. ‘ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಇದನ್ನೂ ಓದಿ: Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಗಸ್ಟ್‌ 10ಕ್ಕೆ ತರುಣ್‌ ಅವರ ಮದುವೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading
Advertisement
IND vs ENG
ಕ್ರೀಡೆ7 mins ago

IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

Parliament Sessions
ದೇಶ19 mins ago

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Bengaluru Metro
Latest20 mins ago

Bengaluru Metro: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

Nitin Gadkari
ಪ್ರಮುಖ ಸುದ್ದಿ24 mins ago

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

IND vs ENG Semi Final
ಕ್ರೀಡೆ40 mins ago

IND vs ENG Semi Final: ಮೀಸಲು ದಿನ ಇರದ ಭಾರತ-ಇಂಗ್ಲೆಂಡ್​ ಸೆಮಿ ಪಂದ್ಯದ ಮಳೆ ನಿಯಮ ಹೇಗಿದೆ?

Droupadi Murmu
ದೇಶ52 mins ago

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Fazalhaq Farooqi
ಕ್ರೀಡೆ53 mins ago

Fazalhaq Farooqi : ವಿಶ್ವ ಕಪ್​ 2024ರಲ್ಲಿ ಹೊಸ ದಾಖಲೆ ಬರೆದ ಆಪ್ಘನ್ ಬೌಲರ್​ ಫಜಲ್ಹಾಕ್​ ಫಾರೂಕಿ

Vande Bharath Train
Latest56 mins ago

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Actor Darshan
ಸಿನಿಮಾ1 hour ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ2 hours ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌