Actor Darshan: ಸ್ತ್ರೀಯರನ್ನು ಅವಮಾನಿಸಿರುವ ನಟ ದರ್ಶನ್ ಅರೆಸ್ಟ್ ಮಾಡಿ; ಠಾಣೆಗೆ ಮುತ್ತಿಗೆ ಹಾಕಿ ಮಹಿಳೆಯರ ದೂರು - Vistara News

ಸ್ಯಾಂಡಲ್ ವುಡ್

Actor Darshan: ಸ್ತ್ರೀಯರನ್ನು ಅವಮಾನಿಸಿರುವ ನಟ ದರ್ಶನ್ ಅರೆಸ್ಟ್ ಮಾಡಿ; ಠಾಣೆಗೆ ಮುತ್ತಿಗೆ ಹಾಕಿ ಮಹಿಳೆಯರ ದೂರು

Actor Darshan:  ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ಬಂಧನಕ್ಕೆ ಆಗ್ರಹಿಸಿದ್ದಾರೆ. ಅವರು ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

More than 50 women gathered at the police station and filed a complaint against Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದು ದರ್ಶನ್ (Actor Darshan) ಮಾತಿನ ಭರದಲ್ಲಿ ಹೇಳಿದ್ದು ಈಗ ಭಾರಿ ವಿವಾದ ಸೃಷ್ಟಿಸಿದೆ. ಈಗಾಗಲೇ ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ . ಇದರ ಬೆನ್ನಲ್ಲೇ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ನಾವು ಬಂದಿದ್ದು, ಯಾವುದೇ ರಾಜಕೀಯ ಉದ್ದೇಶದಿಂದ ಇಲ್ಲಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಮಹಿಳೆಯರು ದೂರು ನೀಡಿದ್ದು, ʻʻಕರ್ನಾಟಕದಲ್ಲಿ ಖ್ಯಾತಿ ಹೊಂದಿರುವ ನಟ ದರ್ಶನ್‌ ಅವರು ಹಲವಾರು ಬಾರಿ ಮಹಿಳೆಯರ ಹಾಗೂ ಮಹಿಳೆಯರ ಘನತೆಗೆ ಅವಮಾನ ಆಗುವ ರೀತಿಯಲ್ಲಿ ಟಿ.ವಿ ಸಂದರ್ಶನಗಳಲ್ಲಿ ಮತ್ತು ಕೆಲವೊಂದು ವೇದಿಕೆಗಳಲ್ಲಿ ಬಹಳ ಕೆಟ್ಟದಾಗಿ ಬಿಂಬಿಸಿರುತ್ತಾರೆ. ಬಹಳ ದಿನಗಳಿಂದ ಸಹಿಸಿಕೊಂಡು ಬಂದ ನಾವು ಇನ್ನು ಮುಂದೆ ಸಹಿಸಿಕೊಳ್ಳಲು ಆಗುವುದಿಲ್ಲ. ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ಬೆಳ್ಳಿ ಸಂದರ್ಭದಲ್ಲಿ ದರ್ಶನ್‌ ಅವರು ಮಹಿಳೆಯರಿಗೆ ಅವಮಾನವಾಗುವ ರೀತಿಯಲ್ಲಿ ಮಾನ್ಯ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಮಧ್ಯದಲ್ಲಿ ಘಂಟಾಘೋಷವಾಗಿ ನಿಂದಿಸಿದ್ದಾರೆ. ಹಾಗೂ ಅವರ ವೈಯಕ್ತಿಕ ಜೀವನದ ವಿಚಾರದಲ್ಲಿ ತಮ್ಮ ಹೆಂಡತಿಯನ್ನು ಸಹ ಸುಮಾರು ವರ್ಷಗಳಂದ ಕಿರುಕುಳ ನೀಡುತ್ತಿದ್ದು ಅದರ ವಿಚಾರವಾಗಿ ಕಾರಾಗೃಹಕ್ಕೂ ಹೋಗಿ ಬಂದಿರುತ್ತಾರೆ. ಇಡೀ ದೇಶವೇ ಪೂಜಿಸಿ ಆರಾಧಿಸುವ೦ತಹ ಮಹಾಲಕ್ಷ್ಮೀಯು ಸಹ ಒಂದು ಹೆಣ್ಣಾಗಿದ್ದು, ಆ ದೇವತೆಯನ್ನು ಸಹ ಬೆತ್ತಲೆ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಇದರ ಸಂಬಂಧ ವೀಡಿಯೋ ಮತ್ತು ಆಡಿಯೋಗಳು ನಮ್ಮ ಬಳಿ ಸಾಕ್ಷಿ ಇರುತ್ತವೆ. ಮತ್ತು ಹೆಣ್ಣು ಮಕ್ಕಳನ್ನು ಹೆದರಿಸಿ-ಬೆದರಿಸಿ, ಕೆಟ್ಟ-ಕೆಟ್ಟ ಅವಾಚ್ಯ ಶಬ್ದಗಳಂದ ಬೈದು ಜೀವ ಬೆದರಿಕೆಯನ್ನು ಸಹ ಹಾಕಿರುತ್ತಾರೆ. ಅದ್ದರಿಂದ ಈ ರೀತಿ ಪದೇ ಪದೇ ಹೇಳೆ ನೀಡಿ ಮಹಿಳೆಯರಿಗೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ನಟ ದರ್ಶನ್‌ ಅವರ ವಿರುದ್ಧ ಸೂಕ್ತವಾದ ಕಾನೂನು ಕ್ರಮ ಜರುಗಿಸಿ, ಬಂಧಿಸಬೇಕೆಂದು ಕೇಳಿಕೊಳ್ಳುತ್ತೇವೆʼʼ ಎಂದು ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: Actor Darshan: `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದ ದರ್ಶನ್‌ಗೆ ಧಿಕ್ಕಾರ ಎಂದಿದೆ ಗೌಡತಿಯರ ಸೇನೆ!

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರು ಕನ್ನಡ ಚಿತ್ರರಂಗಕ್ಕೆ (Actor Darshan) ಪದಾರ್ಪಣೆ ಮಾಡಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸಲು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನು ಯಾವುದೇ ಮುಚ್ಚು ಮರೆಯಿಲ್ಲದೇ ಹಂಚಿಕೊಂಡರು. ಇಷ್ಟೆಲ್ಲ ಮಾತಾಡಿ ʻʻಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದಿದ್ದರುʼʼ ದರ್ಶನ್. ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆ ಈಗ ವಿವಾದ ಸೃಷ್ಟಿಯಾಗಿದೆ. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

IPL 2024: ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

VISTARANEWS.COM


on

IPL 2024 The people paid revenge for the controversial post ashwini Puneeth Rajkumar
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕೀಳುಮಟ್ಟದ ಟ್ವೀಟ್‌ ಬಗ್ಗೆ ಸಮಾಧಾನವಾಗಿಯೇ ಉತ್ತರ ಕೊಟ್ಟಿದ್ದ ದೊಡ್ಮನೆ ಸೊಸೆ!

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Kannada New Movie: ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie anartha cinema teaser Out
Koo

ಬೆಂಗಳೂರು: ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ (Kannada New Movie) ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೊದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೀಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು ʻʻಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಒಂದು ಮಟ್ಟಕ್ಕೆ ಪ್ರೀತಿಸಿರುತ್ತಾರೆ. ನಾವುಗಳು ಬ್ರೇಕ್‌ಅಪ್ ಎನ್ನುವ ಪದವನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಿದ ನಂತರ, ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ. ನೋಡುಗರಿಗೆ ಊಹಿಸಲಾಗದ ತಿರುವುಗಳಿವೆ. ಕ್ಲೈಮಾಕ್ಸ್‌ದಲ್ಲಿ ಹೀಗೂ ಆಗಬಹುದು ಎನ್ನುವಲ್ಲಿಗೆ ಶುಭಂ ಬರುತ್ತದೆ. ನಮ್ಮ ಚಿತ್ರವು ಎಲ್ಲಾ ಕಮರ್ಷಿಯಲ್ ಸಿನಿಮಾಗಳ ಅಂಶಗಳನ್ನು ಹೊಂದಿದ್ದರೂ, ಒಂದು ಅಂಶವು ಖಂಡಿತ ಭಿನ್ನವಾಗಿದೆ. ಅದನ್ನು ತಿಳಿಯಲು ನೀವುಗಳು ಚಿತ್ರಮಂದಿರಕ್ಕೆ ಬನ್ನಿರೆಂದುʼʼ ಕೋರಿದರು.



ನಾಯಕನಾಗಬೇಕೆಂದು ಆಸೆ ಪಟ್ಟಿದ್ದೆ. ಉದ್ಯಮದಲ್ಲಿ ಯಶಸ್ಸು ಕಂಡು, ಈಗ ತೇಜಸ್ ಸಿನಿ ಕ್ರಿಯೇಶನ್ಸ್ ಮೂಲಕ ನಿರ್ಮಾಪಕನಾಗಿದ್ದೇನೆ ಎನ್ನುತ್ತಾರೆ ಶ್ರೀಧರ್.ಎನ್.ಸಿ.ಹೊಸಮನೆ. ನಟ ಮಂಡ್ಯರಮೇಶ್ ಬಳಿ ತರಭೇತಿ ಪಡೆದುಕೊಂಡಿರುವ ವಿಶಾಲ್ ಮಣ್ಣೂರು ನಾಯಕ. ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮಂಡ್ಯದ ವಿಹಾನಿ, ಕಿರುಚಿತ್ರಗಳಲ್ಲಿ ನಟಿಸಿ, ಈಗ ನಾಯಕಿಯಾಗಿ ಬಡ್ತಿಗೊಂಡಿದ್ದಾರೆ. ಉಳಿದಂತೆ ಸಿ.ವಿಜಯ್‌ಕುಮಾರ್, ರಕ್ಷಿತ್, ಗಣೇಶ್, ಪ್ರಸನ್ನ ಬಾಗೀನ, ಅರ್ಪಿತ ಮುಂತಾದವರು ನಟಿಸಿದ್ದಾರೆ.

ಸಾಹಿತ್ಯ-ಸಂಗೀತ ಡಾ.ವಿ.ನಾಗೇಂದ್ರಪ್ರಸಾದ್, ಛಾಯಾಗ್ರಹಣ ಕುಮಾರ್‌ಗೌಡನಾಗವಾರ, ಸಂಕಲನ ನಿಷಿತ್‌ಪೂಜಾರಿ-ವಿನಯ್, ಹಿನ್ನಲೆ ಶಬ್ದ ನಿತಿನ್, ಸಾಹಸ ಕುಂಗು ಫು ಚಂದ್ರು ಅವರದಾಗಿದೆ. ವಿತರಕ ಎಂ.ರಮೇಶ್ ಒಡೆತನದ ಅಕ್ಷರ ಫಿಲಿಂಸ್ ಮುಖಾಂತರ ಚಿತ್ರವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಸಿನಿಮಾ

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Kannada New Movie: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಚಿತ್ರದ ಪೋಸ್ಟರ್ ಈಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಸಿಂಪಲ್ ಸುನಿ, ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

VISTARANEWS.COM


on

Bank of Bhagyalakshmi movie poster released
Koo

ಬೆಂಗಳೂರು: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ. ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಚಿತ್ರದ ಪೋಸ್ಟರ್ (Kannada New Movie) ಬಿಡುಗಡೆಯಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್ ಸುನಿ ಅವರು ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌

ದಿಯಾ , ದಸರಾ, ಕೆಟಿಎಂ ಹಾಗೂ ಬ್ಲಿಂಕ್ ಸಿನಿಮಾಗಳಲ್ಲಿ ಅಭಿನಯದಲ್ಲಿ ಹೆಸರು ಮಾಡಿ, ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಸಿನಿಮಾದ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ. ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನಿಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ ವಿಎಫ್‌ಎಕ್ಸ್‌ (VFX) ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

ಹಾಸ್ಯ ಪ್ರಧಾನ ಕಥಾಹಂದರ

ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವನ್ನು ಈ ಚಿತ್ರವು ಒಳಗೊಂಡಿದೆ. ಸಹ ಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಸೇರಿದಂತೆ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಶೀಘ್ರದಲ್ಲೇ ಚಿತ್ರೀಕರಣ ಮುಕ್ತಾಯ

ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತಮುತ್ತ ಶೇ.80 ರಷ್ಟು ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಇನ್ನು ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾವನ್ನು ನಿರ್ಮಾಪಕ ಎಚ್.ಕೆ ಪ್ರಕಾಶ್, ಕನ್ನಡದ ಜತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ. ಕಾಸರಗೋಡು ಅವರ ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಅವರ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇವರು ಧರಿಸಿರುವ ಅನಾರ್ಕಲಿ ಗೌನ್‌ ವಿಶೇಷತೆ ಏನು? ಇಲ್ಲಿದೆ ಒಂದಿಷ್ಟು ಟಿಪ್ಸ್.

VISTARANEWS.COM


on

Milana Nagaraj Anarkali border gown worn
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಆಕರ್ಷಕವಾಗಿ ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಮಹಿಳೆಯರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಮಿಲನಾ ನಾಗರಾಜ್‌ ಈಗ ಗರ್ಭಿಣಿ.
ಈಗಷ್ಟೇ ವಿದೇಶದಲ್ಲಿ ಬೇಬಿ ಮೂನ್‌ ಮುಗಿಸಿ ಪತಿ ಡಾರ್ಲಿಂಗ್‌ ಕೃಷ್ಣ ಅವರೊಂದಿಗೆ ಮರಳಿರುವ ಮಿಲನಾ ಅವರು ನಾನಾ ಇವೆಂಟ್‌ನಲ್ಲಿ ಒಂದಲ್ಲ ಒಂದು ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಬೇಬಿ ಬಂಪ್‌ ಹೈಲೈಟಾಗದಂತೆ ಡ್ರೆಸ್‌ಗಳನ್ನು ಧರಿಸುತ್ತಾರೆ. ಡೀಸೆಂಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದು ಫ್ಯಾಷನ್‌ ವಿಮರ್ಶಕರ ಪ್ರಶಂಸೆಗೂ ಒಳಗಾಗುತ್ತಿರುತ್ತಾರೆ.

ಅನಾರ್ಕಲಿ ಗೌನ್‌ನಲ್ಲಿ ಮಿಲನಾ ಸ್ಟೈಲ್‌ & ಸ್ಮೈಲ್‌:

“ಪ್ರೆಗ್ನೆಂಟ್‌ ಆಗಿರುವ ಮಿಲನಾ ನಾಗರಾಜ್‌ ಅವರ ಬೇಬಿ ಬಂಪ್‌ ಎಲ್ಲಿಯೂ ಹೈಲೈಟ್‌ ಆಗುತ್ತಿಲ್ಲ ಎನ್ನುವುದಕ್ಕಿಂತ ಅವರು ಧರಿಸುತ್ತಿರುವ ಉಡುಪುಗಳ ಡಿಸೈನ್‌ ಅಷ್ಟೊಂದು ನೀಟಾಗಿದೆ. ಅವರು ಧರಿಸಿರುವ ಒಂದೊಂದು ಔಟ್‌ಫಿಟ್‌ ಕೂಡ ಡಿಸೆಂಟ್‌ ಲುಕ್‌ ನೀಡುವುದರೊಂದಿಗೆ ಅವರಿಗೆ ಕಂಫರ್ಟಬಲ್‌ ಫೀಲ್‌ ನೀಡಿದೆ” ಎನ್ನುತ್ತಾರೆ ಫ್ಯಾಷನಿಸ್ಟಾಗಳು.

ಇದನ್ನೂ ಓದಿ: Milana Nagaraj: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಲವ್‌ ಮಾಕ್ಟೆಲ್‌ʼ ಜೋಡಿ!

ಗೋಲ್ಡನ್‌ ಅನಾರ್ಕಲಿ ಡಿಟೇಲ್ಸ್‌

ಎಥ್ನಿಕ್‌ವೇರ್‌ ಡಿಸೈನ್‌ಗಳಿಗೆ ಖ್ಯಾತಿ ಗಳಿಸಿರುವ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿಯವರ ಡಿಸೈನರ್‌ವೇರ್‌ ಇದು. ಕ್ರಶ್ಡ್‌ ಟಿಶ್ಯೂ ಮೆಟೀರಿಯಲ್‌ನ ಈ ಫ್ಯಾಬ್ರಿಕ್‌ ಅನಾರ್ಕಲಿ ವಿನ್ಯಾಸವನ್ನು ಒಳಗೊಂಡಿದೆ. ಮಿಲನಾಗೆ ಎಲಿಗೆಂಟ್‌ ಲುಕ್‌ ನೀಡಿರುವ ಈ ಅನಾರ್ಕಲಿ ಗೌನ್‌ಗೆ ಸ್ಲೀವ್‌ ಹಾಗೂ ಡಿಸೈನರ್‌ವೇರ್‌ ಕೆಳಗೆ ಇರುವ ಬಿಗ್‌ ಬಾರ್ಡರ್‌ ಕಂಪ್ಲೀಟ್‌ ಟ್ರೆಡಿಷನಲ್‌ ಲುಕ್‌ ನೀಡಿದೆ. ಇದರೊಂದಿಗೆ ಕಾಂಟ್ರಸ್ಟ್‌ ಶೇಡ್‌ನ ಬನಾರಸಿ ಬಾರ್ಡರ್‌ ಬಗೆಯ ಸೊಂಟದ ಪಟ್ಟಿ ಅಂದರೆ ಟೈಯಿಂಗ್‌ ಹ್ಯಾಂಡ್‌ ವರ್ಕ್‌ ಎಂಬ್ರಾಯ್ಡರಿ ಮಾಡಿರುವ ವೇಸ್ಟ್‌ ಬೆಲ್ಟ್‌ ಅಥವಾ ಕಮರ್‌ಬಾಂದ್‌ ಗೌನನ್ನು ಇನ್ನಷ್ಟು ಆಕರ್ಷಕವಾಗಿಸಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ರೆಡ್‌ ಪ್ಯೂರ್‌ ಅರ್ಗಾನ್ಜಾ ದುಪಟ್ಟಾ ಕೂಡ ಸಖತ್‌ ಲುಕ್‌ ನೀಡಿದೆ ಎಂದು ವಿವರಿಸುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿ. ಅವರ ಪ್ರಕಾರ, ಅನಾರ್ಕಲಿ ಡಿಸೈನ್‌ನಲ್ಲೂ ಟ್ರೆಡಿಷನಲ್‌ ಲುಕ್‌ ನೀಡಬಹುದು ಎನ್ನುವುದಕ್ಕೆ ಈ ಡಿಸೈನರ್‌ವೇರ್‌ ಸಾಕ್ಷಿ ಎನ್ನುತ್ತಾರೆ.

ಮಿಲನಾ ನಾಗರಾಜ್‌ ಆಕರ್ಷಕ ಲುಕ್‌

ನಟಿ ಮಿಲನಾ ನಾಗರಾಜ್‌ ಖಾಸಗಿ ಕಾರ್ಯಕ್ರಮಕ್ಕೆಂದು ಧರಿಸಿದ ಈ ಅನಾರ್ಕಲಿ ಗೌನ್‌ನ ಸ್ಟೈಲಿಂಗ್‌ ಸ್ಟೈಲಿಸ್ಟ್‌ಗಳಾದ ತೇಜು ಹಾಗೂ ಖುಷಿ ಮಾಡಿದ್ದಾರೆ. ಇನ್ನು, ವರಹಾ ಸಿಲ್ವರ್‌ ಜ್ಯುವೆಲರಿ ಧರಿಸಿರುವ ಮಿಲನಾ ಲೈಟ್‌ ಮೇಕಪ್‌ನಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಮಿಲನಾಗೆ ಈ ಡಿಸೈನರ್‌ವೇರ್‌ ಸಖತ್‌ ಇಷ್ಟವಾಗಿದೆಯಂತೆ. ಅದರಲ್ಲೂ ಟ್ರೆಡಿಷನಲ್‌ ಲುಕ್‌ ನೀಡುವ ಈ ಔಟ್‌ಫಿಟ್‌ ಲೈಟ್‌ವೈಟ್‌ ಆಗಿರುವುದು ಮತ್ತಷ್ಟು ಕಂಫರ್ಟಬಲ್‌ ಆಗಿಸಿದೆಯಂತೆ. ಯಾವುದೇ ಉಡುಪನ್ನು ನಾನು ಇಷ್ಟಪಟ್ಟು ಧರಿಸುತ್ತೇನೆ ಎನ್ನುತ್ತಾರೆ ಅವರು.

ಮಿಲನಾ ಎಲಿಗೆಂಟ್‌ ಫ್ಯಾಷನ್‌ ಮಂತ್ರ

ಈ ಹಿಂದೆ ವಿಸ್ತಾರ ನ್ಯೂಸ್‌ನ ಫ್ಯಾಷನ್‌ ಕುರಿತ ಸಂದರ್ಶನದಲ್ಲಿ ಮಿಲನಾ ಅವರೇ ಹೇಳಿದಂತೆ, ಯಾವುದೇ ಔಟ್‌ಫಿಟ್‌ ಹಾಗೂ ಡಿಸೈನರ್‌ವೇರ್‌ ಕಂಫರ್ಟಬಲ್‌ ಫೀಲ್‌ ನೀಡಿದಾಗ ತಂತಾನೇ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ. ನಮ್ಮ ಪರ್ಸನಾಲಿಟಿಗೆ ತಕ್ಕಂತೆ ಧರಿಸಿದಾಗ ಇನ್ನಷ್ಟು ಸುಂದರವಾಗಿ ಕಾಣುತ್ತದೆ ಎಂಬುದು ಸತ್ಯಕ್ಕೆ ಹತ್ತಿರ ಎಂಬುದು ತಿಳಿದು ಬರುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading
Advertisement
Prajwal Revanna Case
ಕರ್ನಾಟಕ10 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ17 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ20 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ22 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ28 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ29 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್52 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ29 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌