Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್! - Vistara News

ಸ್ಯಾಂಡಲ್ ವುಡ್

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

Mudhol Movie: ‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ.

VISTARANEWS.COM


on

Mudhol Movie Sanjana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್‌ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ (Mudhol Movie) ಬಳಗ ಸೇರಿಕೊಂಡಿದ್ದಾರೆ. ‌ʻಕೆಮಿಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೊ ಜತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ʻಸಲಗ‌ʼ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜತೆಗೆ ತೆಲುಗುವಿಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜತೆ ರೊಮ್ಯಾನ್ಸ್ ಮಾಡಲು ಓಕೆ ಎಂದಿದ್ದಾರೆ.

‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ʻಮುಧೋಳ್ʼ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ರಮ್‌ ಅವರಿಗೆ ನಾಯಕಿಯಾಗಿ ಸಂಜನಾ ನಟಿಸುತ್ತಿದ್ದಾರೆ.‌ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷಯ ಹರಿದಾಡಿತ್ತು. ಆದರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.

ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

ಸಂಜನಾ ಆನಂದ್ ʻಮುಧೋಳ್ʼ ಸಿನಿಮಾ ಜತೆಗೆ ದಿನಕರ್ ತೂಗುದೀಪ ನಿರ್ದೇಶನದ ʻರಾಯಲ್ʼ ಹಾಗೂ ತೆಲುಗಿನ ʻಫುಲ್ ಬಾಟೆಲ್ʼ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ʻಹಯಗ್ರೀವ್ʼ ಗೂ ನಾಯಕಿಯಾಗಿದ್ದಾರೆ ಸಂಜನಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ. ಈಗಾಗಲೇ ಅನಂತ್‌ ನಾಗ್‌, ಶಿವಣ್ಣ ಮತದಾನ ಹಾಕಲು ಬಂದಿದ್ದಾರೆ. ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್‌ ಅವರು ಮತ ಚಲಾಯಿಸಿದರು. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ ಎನದರು.

VISTARANEWS.COM


on

Lok Sabha Election 2024 Anant Nag outrage against non-voters
Koo

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ (Lok Sabha Election 2024) ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿದೆ. ಮತದಾನ ಮುಕ್ತಾಯಕ್ಕೆ ಇನ್ನು ಎರಡು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ. ಈಗಾಗಲೇ ಅನಂತ್‌ ನಾಗ್‌, ಶಿವಣ್ಣ ಮತದಾನ ಹಾಕಲು ಬಂದಿದ್ದಾರೆ. ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್‌ ಅವರು ಮತ ಚಲಾಯಿಸಿದರು.

ಮತಹಾಕದವರ ವಿರುದ್ಧ ಹಿರಿಯ ನಟ ಅನಂತ್ ನಾಗ್ ಅವರು ಆಕ್ರೋಶ ಹೊರ ಹಾಕಿದರು. ಅನಂತ್‌ ನಾಗ್‌ ಮಾತನಾಡಿ ʻಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ. ಅಲ್ಲಿ ಯೋಧರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದಾರೆ. ಇವರು ಮನೆಯಿಂದ ಹೊರಬಂದು ಒಂದು ಓಟ್ ಮಾಡೋಕಾಗಲ್ವ? ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಇನ್ನೂ ಎಂಥಹ ಜಾಗೃತಿ ಬೇಕು?. ಇಲ್ಲಿ ಯುವಕರು, ಹಿರಿಯರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರನ್ನೂ ಒಂದೇ ತರಹ ನೋಡಿ. 75 ವರ್ಷಗಲ್ಲಿ ಆಗದ ಕೆಲಸ ಮುಂದೆ ಬರುವ ಸರ್ಕಾರ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿದರೆ ಉಳಿದ ಹನ್ನೊಂದು ಕ್ಷೇತ್ರಗಳಲ್ಲಿ ಶರವೇಗದ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೂ ಮತಗಟ್ಟೆ ಕಡೆ ಉತ್ಸಾಹದಿಂದ ಮತದಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್‌ಗಳಲ್ಲಿ ಇರೋ ಜನರಿಂದ ಈ ಬಾರಿ ದಾಖಲೆ ಮತದಾನವಾಗಿದೆ. ಡಾಲರ್ಸ್ ಕಾಲೋನಿ, ಸದಾಶಿವನಗರ ಹಾಗೂ ಆರ್‌ಆರ್ ನಗರ, ಆನೇಕಲ್‌ ಬೂತ್ನಲ್ಲಿ 3 ಗಂಟೆವರೆಗೂ ಶೇಕಡಾ ಶೇ.65 ಮತದಾನ ದಾಖಲಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

Raj B Shetty: ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

VISTARANEWS.COM


on

Raj B Shetty entry in duniya Vijay Movie
Koo

ಬೆಂಗಳೂರು: ನಟ ರಾಜ್‌ ಬಿ ಶೆಟ್ಟಿ (Raj B Shetty) ಅವರ `ಟೋಬಿ’ ಸಿನಿಮಾ ಬಿಡುಗಡೆಯಾಗಿ, ಅಷ್ಟೇನೂ ಕಲೆಕ್ಷನ್‌ ಮಾಡಿರಲಿಲ್ಲ. ಅಷ್ಟೋತ್ತಿಗಾಗಲೇ ರಾಜ್‌ ಅವರು ಮಲಯಾಳಂ ಸಿನಿಮಾದಲ್ಲಿ ಬ್ಯುಸಿಯಾದರು. ಮೊದಲ ಮಾಲಿವುಡ್ ಸಿನಿಮಾ ‘ರುಧೀರಂ’ ಶೂಟಿಂಗ್ ಕೂಡ ಮುಗಿದು ರಿಲೀಸ್‌ಗೂ ರೆಡಿಯಾಗಿದೆ. ಮಲಯಾಳಂ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ’45’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ದುನಿಯಾ ವಿಜಯ್ (Duniya Vijay) ಜತೆ ಸೇರಿ ಒಂದು ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ದುನಿಯಾ ವಿಜಯ್ 29ನೇ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಆ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ. ಇದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರು ಬರೆದಿರುವ ‘ಚೋಮನ ದುಡಿ’ ಕಾದಂಬರಿ ಪ್ರೇರಿತ ಸಿನಿಮಾ ಎನ್ನಲಾಗಿದೆ. ಜಡೇಶ ಹಂಪಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Raj B Shetty: ಒಟಿಟಿಯಲ್ಲಿ ಅಬ್ಬರಿಸಲಿದೆ ʻಟೋಬಿʼ!

ರಾಜ್‌ ಬಿ ಶೆಟ್ಟಿ ಅವರು ʼಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ʻಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಟರ್ಬೊದಲ್ಲಿ ತೆಲುಗು ನಟ ಸುನಿಲ್ ಕೂಡ ಕಾಣಿಸಿಕೊಂಡಿದ್ದಾರೆ.

Continue Reading

Lok Sabha Election 2024

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

Lok Sabha Election 2024: ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ ಎಂದರು ಸುದೀಪ್‌.

VISTARANEWS.COM


on

Lok Sabha Election 2024 sandalwood celebrities reaction
Koo

ಬೆಂಗಳೂರು:  ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು. ಅಶ್ವಿನಿ ಪುನೀತ್, ಡಾಲಿ ಧನಂಜಯ್, ಸಪ್ತಮಿ ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. 

ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ನಟ ಮಾಧ್ಯಮದ ಜತೆ ಮಾತನಾಡಿ ʻʻತಲೆ ಇರುವವರು, ಬುದ್ಧಿ ಇರುವವರು, ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಯಾರು ವೋಟ್‌ ಹಾಕಲು ಬರುತ್ತ ಇಲ್ಲವೋ ಅವರ ಬಗ್ಗೆ ತುಂಬ ತೆಲೆ ಕೆಡಿಸಿಕೊಳ್ಳುವುದನ್ನು ಬಿಡೋಣʼʼಎಂದರು.

ಇದನ್ನೂ ಓದಿ: Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

ನಟ ಉಪೇಂದ್ರ ಮಾತನಾಡಿ ʻʻವೋಟ್‌ ಮಾಡಲು ತುಂಬ ಜನ ಬರುತ್ತ ಇದ್ದಾರೆ. ಎಲ್ಲರಿಗೂ ಮಹತ್ವ ಗೊತ್ತಿದೆ. ಖಂಡತ ಎಲ್ಲರೂ ಬರ್ತಾರೆ. ಯುವಕರು ಬಂದು ವೋಟ್‌ ಮಾಡಿ. ಪ್ರಜೆಗಳು ವಿಚಾರ ಮಾಡಿ ಮತ ಹಾಕಿʼʼಎಂದರು.

ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ಈ ವೇಳೆ ವಿಸ್ತಾರ ಜತೆಗೆ ಮಾತನಾಡಿ ʻʻಮತದಾನ ಪರ್ಸಂಟೇಜ್‌ ಜಾಸ್ತಿ ಆಗಬೇಕು. ನಾವು ಮತ ಚಲಾಯಿಸಬೇಕು. ಯುವಕರಿಗೆ ಹೇಳೋದು ಏನಂದರೆ ಯೋಚನೆ ಮಾಡಿ ಮತ ಹಾಕಿ. ನೋಡೋದು, ಕೇಳೋದು ಯಾವತ್ತೂ ಸತ್ಯ ಇರುವುದಿಲ್ಲ. ನಮ್ಮ ಭವಿಷ್ಯಕ್ಕೆ ಏನು ಬೇಕು ಎಂದು ಅರಿತು ವೋಟ್‌ ಮಾಡಬೇಕು. ನಮ್ಮ ಮತ ಖಂಡಿತ ಒಳ್ಳೆಯ ನಾಯಕರಿಗೆ ಆಗರುತ್ತೆʼʼಎಂದರು.

ಮತದಾನದ ಬಳಿಕ ನಟಿ ತಾರಾ ಮಾತನಾಡಿ ʻಇವತ್ತು ರಾಷ್ಟ್ರ ಕಟ್ಟುವ ಸಮಯ. ಇಲ್ಲಿ ನಮ್ಮ ನೆಚ್ಚಿನ ನಾಯಕನ್ನು ಆರಿಸುವ ಸಮಯ. ವೋಟ್‌ ಮಾಡುವ ಸಂಭ್ರಮ ನೋಡಿ ಖುಷಿ ಆಗುತ್ತದೆ. ತುಂಬ ಯುವಕರು ವೋಟ್‌ ಮಾಡುತ್ತಿದ್ದಾರೆ. ದೇಶದ ಪ್ರಜೆಯಾಗಿ ವೋಟ್‌ ಮಾಡುವುದು ತುಂಬ ಮುಖ್ಯ. ಎಲ್ಲ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮಗಿಂತ ಹೆಚ್ಚಾಗಿ ನೀವು ಮನೆ ಮನೆಗೆ ತಲುಪಿ ಮತದಾನದ ಅರಿವು ಮೂಡಿಸಿದ್ದೀರಿʼʼ ಎಂದರು.

ನಟ ಯಶ್ ಮಾತನಾಡಿ ʻʻಮತ ಹಾಕೋದು ನಮ್ಮೆಲ್ಲರ ಕರ್ತವ್ಯ. ಅದು ನಮ್ಮ ಹಕ್ಕು. ದೇಶಕ್ಕಾಗಿ ಮತ ಚಲಾವಣೆ ಮಾಡಬೇಕು. ನಿಮ್ಮ ನಿರ್ಧಾರಗಳಿಂದ ಕಲಿಯುವುದಕ್ಕೆ ಅವಕಾಶ ಸಿಗಲಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯ ಮುಖ್ಯ. ಸಮಯ ಕಳೆದಂತೆ ಮತದಾನ ಹೆಚ್ಚಾಗಬಹುದು. ಅಭಿವೃದ್ಧಿ ಅನ್ನೋದು ಮುಖ್ಯ. ದೇಶಕ್ಕೆ ಈಗ ಒಳ್ಳೆಯ ಅವಕಾಶ ಇದೆ. ಒಳ್ಳೆಯ ಸಮಯʼʼಎಂದು ಹೇಳಿದರು.

ನಟ ಸೃಜನ್ ಲೋಕೇಶ್ ಮಾತನಾಡಿ ʻʻಮತ ಹಾಕಿರುವುದು ಖುಷಿ ಕೊಟ್ಟಿದೆ. ಒತ್ತಾಯದಿಂದ ಯಾರು ಮತದಾನ ಮಾಡಬಾರದು. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಅದು ನಮ್ಮ ಮೂಲ ಹಕ್ಕುʼʼಎಂದರು.

ಮತದಾನ ಮಾಡಿದ ಬಳಿಕ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಾತನಾಡಿ ʻʻಮತದಾನ ನಮ್ಮಲ್ಲೆರ ಹಕ್ಕು. ಯೋಚನೆ ಮಾಡಿ ಮತದಾನ ಮಾಡಿ. ದೇಶದ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಮತದಾನ ಮಾಡಿ ಅಂತ ಹೇಳುತ್ತೇನೆ. ಬಂದು ಮತ ಹಾಕಿ ಎಲ್ಲಿಗಾದರೂ ಹೋಗಿ. ಯಾಕೆಂದರೆ ಮತಕ್ಕೆ ತುಂಬಾ ಬೆಲೆ ಇದೆʼʼಎಂದರು.

ನಟಿ ಅಮೂಲ್ಯ ಪತಿ ಜಗದೀಶ್ ಮಾತನಾಡಿ ʻʻವೋಟ್ ಮಾಡಿದ್ದೇವೆ,ಇದು ಎಲ್ಲರ ಹಕ್ಕು. ಈ ಬಾರೀ ತುಂಬಾ ಜನ ವೋಟ್ ಮಾಡ್ತಿದ್ದಾರೆ. ಹೆಚ್ಚು ಜನರು ವೋಟಿಂಗ್‌ಗೆ ಬಂದಿರೋದು ಖುಷಿಯಾಯ್ತು. ಎಲ್ಲರೂ ತಪ್ಪದೇ ಮತದಾನ ಮಾಡಬೇಕುʼʼಎಂದರು.

ಈಗಾಗಲೇ ಡಿಂಪಲ್‌ ಕ್ಷೀನ್‌ ರಚಿತಾ ರಾಮ್‌, ನಿರಂಜನ್‌ ದೇಶಪಾಂಡೆ, ದರ್ಶನ್‌, ವಿಜಯ್‌ ರಾಘವೇಂದ್ರ ಸೇರಿದಂತೆ ಸ್ಟಾರ್ಸ್‌ಗಳು ಮತಚಲಾಯಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024: : ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು.ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಡಾಲಿ ಧನಂಜಯ ಮತದಾನ ಮಾಡಿದರು. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್‌ನಲ್ಲಿ ಬಂದು ಹಕ್ಕು ಚಲಾಯಿಸಿದರು ಧನಂಜಯ್‌.

VISTARANEWS.COM


on

Lok Sabha Election 2024 Kannada Celeb vote Pictures
Koo

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆಗುತ್ತಿದೆ. ಅಶ್ವಿನಿ ಪುನೀತ್, ಡಾಲಿ ಧನಂಜಯ್, ಸಪ್ತಮಿ ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. ದೊಡ್ಡಬಿದರಕಲ್ಲು ರೆಡ್ಡಿಕಟ್ಟೆ ಸರ್ಕಾರಿ ಶಾಲೆಯಲ್ಲಿ ನಟ ದೊಡ್ಡಣ್ಣ ಹೆಂಡತಿ ಜತೆ ಮತದಾನ ಮಾಡಿದ್ದಾರೆ.

ನಟಿ ಅಮೂಲ್ಯ ಅವರು ಪತಿ ಜತೆ ಮುಂಜಾನೆಯೇ ಮತ ಚಲಾಯಿಸಲು ಆಗಮಿಸಿದ್ದರು.

ಜೆ.ಪಿ ನಗರದಲ್ಲಿರುವ ಸೇಂಟ್ ಪೌಲ್ ಸ್ಕೂಲ್​ನಲ್ಲಿ ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ ಮತದಾನ ಮಾಡಿದರು.

ಡಾ. ರಾಜ್ ಕುಮಾರ್ ಕುಟುಂಬದ Smiling ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ನಟ ಕೋಮಲ್‌ ವೋಟ್‌ ಮಾಡಿ ಕ್ಯಾಮೆರಾಗೆ ಪೋಸ್‌ ಕೊಟ್ಟರು.

JP ನಗರದ ಎ.ವಿ.‌ಎಜುಕೇಷನ್ ಸ್ಕೂಲ್‌ನಲ್ಲಿ ಹಿರಿಯ ನಟಿ ತಾರಾ ಮತ್ತು ಅವರ ಪತಿ ಎಚ್ ಸಿ ವೇಣು ಮತದಾನ ಮಾಡಿದರು.

ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಕೂಡ ಮತದಾನ ಮಾಡಿದರು.

ನಟ ಶ್ರೀಮುರಳಿ ಮತದಾನ ಮಾಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಕುಟುಂಬದ ಜತೆ ಬಂದು ಅವರು ಮತ ಚಲಾಯಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ದಂಪತಿ ವೋಟ್‌ ಮಾಡಿ, ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಜನತೆಗೆ ಮನವಿ ಮಾಡಿದರು.

ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಡಾಲಿ ಧನಂಜಯ ಮತದಾನ ಮಾಡಿದರು. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್‌ನಲ್ಲಿ ಬಂದು ಹಕ್ಕು ಚಲಾಯಿಸಿದರು ಧನಂಜಯ್‌.

ಪ್ರಕಾಶ್‌ ರಾಜ್‌, ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ , ರವಿಶಂಕರ ದಂಪತಿ ಕೂಡ ಮುಂಜಾನೆಯೇ ಮತ ಚಲಾಯಿಸಿದರು.

ಗಿರಿನಗರದಲ್ಲಿ ಗಾಯಕ ವಾಸುಕಿ ವೈಭವ್‌ ಮತ ಚಲಾಯಿಸಿದರು.

ಚೈತ್ರಾ ಆಚಾರ್‌, ನಮ್ರತಾ ಗೌಡ, ಭಾರತಿ ವಿಷ್ಣುವರ್ಧನ್‌ ಮತದಾನ ಮಾಡಿದರು.

ಜೆಪಿ ನಗರದ ಆಕ್ಸ್ಫರ್ಡ್ ಶಾಲೆಯಲ್ಲಿ ಮಗಳ ಜತೆ ಮತದಾನ ಮಾಡಿದರು ಸುದೀಪ್.

ಆರ್ ಆರ್ ನಗರದ ಮೌಂಟ್ ಕಾರ್ಮಲ್‌ನಲ್ಲಿ ನಟ ದರ್ಶನ್ ಮತದಾನ ಮಾಡಿದರು.

ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರು ಉಡುಪಿಯ ಕುಕ್ಕಿಕಟ್ಟೆ ಶಾಲೆಯಲ್ಲಿ ಮತ ಚಲಾಯಿಸಿದರು.

ಪೂಜಾ ಗಾಂಧಿ ಹಾಗೂ ನಟ ಉಪೇಂದ್ರ ಅವರು ವೋಟ್‌ ಮಾಡಿ ಸಂಭ್ರಮಿಸಿದರು.

Continue Reading
Advertisement
ಕರ್ನಾಟಕ9 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ13 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ14 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್15 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ16 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ18 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Anupama Parameswaran Paradha next
ಟಾಲಿವುಡ್41 mins ago

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

PU Board exam girl writing exam
ಪ್ರಮುಖ ಸುದ್ದಿ1 hour ago

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

ಕ್ರೈಂ1 hour ago

Child Welfare commission: ಅಕ್ರಮವಾಗಿ ಸಾಗಿಸುತ್ತಿದ್ದ 95 ಮುಸ್ಲಿಂ ಮಕ್ಕಳ ರಕ್ಷಣೆ

jai sriram slogan viral news
ವೈರಲ್ ನ್ಯೂಸ್2 hours ago

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202424 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌