Namratha Gowda: ನವಿಲಂತೆ ಕುಣಿದ ನಮ್ರತಾ ಗೌಡ- ಕಿಶನ್; ʻಸಪ್ತ ಸಾಗರದಾಚೆʼ ಚಿತ್ರದ ಹಾಡಿಗೆ ಹೊಸ ಟಚ್ ಕೊಟ್ಟ ಜೋಡಿ!​ - Vistara News

ಸ್ಯಾಂಡಲ್ ವುಡ್

Namratha Gowda: ನವಿಲಂತೆ ಕುಣಿದ ನಮ್ರತಾ ಗೌಡ- ಕಿಶನ್; ʻಸಪ್ತ ಸಾಗರದಾಚೆʼ ಚಿತ್ರದ ಹಾಡಿಗೆ ಹೊಸ ಟಚ್ ಕೊಟ್ಟ ಜೋಡಿ!​

Namratha Gowda: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಸ್ಪರ್ಧಿ ನಮ್ರತಾ ಗೌಡ (Namratha Gowda) ಮತ್ತು ಬಿಗ್‌ಬಾಸ್‌ ಕನ್ನಡ ಸೀಸನ್‌ 7ರ ಕಿಶನ್‌ ಬಿಳಗಲಿ ಆಗಾಗ ಒಟ್ಟಿಗೆ ಡ್ಯಾನ್ಸ್‌ ಮಾಡಿರುವ ವಿಡೊಯೊ ಪೋಸ್ಟ್‌ ಮಾಡುತ್ತಲೇ ಇರುತ್ತಾರೆ. ಹಿಂದಷ್ಟೇ ಇವರಿಬ್ಬರು ರವಿಚಂದ್ರನ್‌ ನಟನೆಯ ಶಾಂತಿಕ್ರಾಂತಿ ಸಿನಿಮಾದ “ಮಧ್ಯರಾತ್ರಿಲಿ ಹೈವೆ ರಸ್ತೇಲಿ” ಹಾಡಿಗೆ ನರ್ತಿಸಿದ್ದರು.

VISTARANEWS.COM


on

Namratha Gowda Kishan Bilagali Kathak dance saptha sagara song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಸ್ಪರ್ಧಿ ನಮ್ರತಾ ಗೌಡ (Namratha Gowda) ಮತ್ತು ಬಿಗ್‌ಬಾಸ್‌ ಕನ್ನಡ ಸೀಸನ್‌ 7ರ ಕಿಶನ್‌ ಬಿಳಗಲಿ ಆಗಾಗ ಒಟ್ಟಿಗೆ ಡ್ಯಾನ್ಸ್‌ ಮಾಡಿರುವ ವಿಡಿಯೊ ಪೋಸ್ಟ್‌ ಮಾಡುತ್ತಲೇ ಇರುತ್ತಾರೆ. ಹಿಂದಷ್ಟೇ ಇವರಿಬ್ಬರು ರವಿಚಂದ್ರನ್‌ ನಟನೆಯ ಶಾಂತಿಕ್ರಾಂತಿ ಸಿನಿಮಾದ “ಮಧ್ಯರಾತ್ರಿಲಿ ಹೈವೆ ರಸ್ತೇಲಿ” ಹಾಡಿಗೆ ನರ್ತಿಸಿದ್ದರು. ಬಳಿಕ ಪರವಶನಾದೆನು ಹಾಡಿಗೆ ಹೆಜ್ಜೆ ಹಾಕಿ ಅಭಿಮಾನಿಗಳ ಹೃದಯ ಗೆದ್ದಿದ್ದರು. ಇದೀಗ ಈ ಜೋಡಿ ʻಸಪ್ತಸಾಗರದಾಚೆ ಎಲ್ಲೋʼ ಹಾಡಿಗೆ ಡಾನ್ಸ್ ಮಾಡಿದೆ.

ಈ ಹಾಡಿನಲ್ಲಿ ಸಿನಿಮಾ ಸಾಂಗ್​ ಜೊತೆ ಶಾಸ್ತ್ರೀಯ ಸಂಗೀತ ಟಚ್​ ಕೂಡ ನೀಡಲಾಗಿದೆ. ಕಥಕ್​ ಮಿಶ್ರಣ ಮಾಡಿ ಈ ನೃತ್ಯ ಮಾಡಲಾಗಿದೆ.

ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ  ಹಾಕಿದ್ದರು.

ಇದನ್ನೂ ಓದಿ: Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

 ಕಿಶನ್​ ಅವರು ಮೂಲತಃ ಡಾನ್ಸರ್​ ಚಿಕ್ಕಮಗಳೂರಿನ ಇವರು ಬಿಗ್​ಬಾಸ್​ 7ರಿಂದ ಸಕತ್​ ಫೇಮಸ್​ ಆಗಿದ್ದರೂ, 2018 ರ ಹಿಂದಿ ರಿಯಾಲಿಟಿ ಷೋ ಡ್ಯಾನ್ಸ್ ದಿವಾನಿಯ ವಿಜೇತರು ಕೂಡ.
ನಮ್ರತಾ ಗೌಡ ಬಿಗ್​ಬಾಸ್​ 10 ಮೂಲಕ ಸಕತ್​  ಫೇಮಸ್​ ಆಗಿದ್ದಾರೆ.
ನಮ್ರತಾ ತರ ನಾಗಿಣಿ 2 ಧಾರಾವಾಹಿಯ ಶಿವಾನಿ ಪಾತ್ರದ ಮೂಲಕ ಗಮನ ಸೆಳೆದರು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜ್‌ಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜ್‌ಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಚೇತನ್‌ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೆರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೆಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರ ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

Hc grants interim bail to actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading
Advertisement
Latest13 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest13 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest14 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ15 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest15 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest16 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest17 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest19 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ20 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest20 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌