Site icon Vistara News

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Niveditha Gowda chandan divorce main reason told by advocate

ಬೆಂಗಳೂರು: ಚಂದನ್‌ ಹಾಗೂ ನಿವೇದಿತಾ (Niveditha Gowda) ಅವರು ಡಿವೋರ್ಸ್‌ ಪಡೆದ ಕಾರಣಗಳ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. `ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ನಿವೇದಿತಾ ಗೌಡ ಪೋಸ್ಟ್‌

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಶೆಟ್ಟಿ ಬಳಿಕ ಮದುವೆಯಾಗಿದ್ದರು.

Exit mobile version