Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ! - Vistara News

ಸ್ಯಾಂಡಲ್ ವುಡ್

Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM


on

Niveditha Gowda chandan matters told by Prashanth Sambargi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ.  ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದೀಗ ಚಂದನ್‌ ಹಾಗೂ ನಿವೇದಿತಾ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಕೆಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ʻʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದಾರೆ.

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದರು ಪ್ರಶಾಂತ್‌ ಸಂಬರಗಿ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ (Renuka Swamy Murder) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಗ್ಯಾಂಗ್‌ ಬಂಧಿತರಾಗಿದ್ದಾರೆ. ಇದೀಗ ದರ್ಶನ್‌ ಹಲ್ಲೆ ನಡೆಸಿದ್ದನ್ನು ವಿಡಿಯೋ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Renuka swamy Murder case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದ್ದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Niveditha Gowda: ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ.

VISTARANEWS.COM


on

Niveditha Gowda new reels after divorce
Koo

ಬೆಂಗಳೂರು:  ಚಂದನ್‌ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್‌ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದು ಹಲವು ವದಂತಿಗೆ ತೆರೆ ಎಳೆದಿದ್ದಾರೆ. ಇದೀಗ ಡಿವೋರ್ಸ್‌ ಆದ ಬಳಿಕ ನಿವೇದಿತಾ ಮೊದಲ ಬಾರಿಗೆ ರೀಲ್ಸ್‌ ಶೇರ್‌ ಮಾಡಿಕೊಂಡಿದ್ದಾರೆ. ನಿವೇದಿತಾ ರೀಲ್ಸ್‌ಗೆ ನೆಗೆಟಿವ್‌ ಕಮೆಂಟ್‌ಗಳು ಹೆಚ್ಚಾಗಿವೆ. ನಿವೇದಿತಾ ರೀಲ್ಸ್ ಪೋಸ್ಟ್ ಮಾಡಿ 55 ನಿಮಿಷಕ್ಕೆ 4ಲಕ್ಷ 15ಸಾವಿರ ವೀವ್ಸ್, 17ಸಾವಿರ ಲೈಕ್ಸ್ ಬಂದಿವೆ.

ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ-ಚಂದನ್‌

ʻʻಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

Duniya Vijay: ದುನಿಯಾ ವಿಜಯ್ ಅವರ ನಟನೆ ಮತ್ತು ಆ ಒಂದು ಸನ್ನಿವೇಶ ಪ್ರೇಕ್ಷಕರನ್ನು ಭಾವುಕರನ್ನಾಗಿ ಮಾಡುತ್ತದೆ’ ಎಂದು ಪ್ರೇಕ್ಷಕರು ಸೋಷಿಯಲ್ ಮೀಡಿಯಾಗಳಲ್ಲಿ ದುನಿಯಾ ವಿಜಯ್ ಕ್ಯಾಮಿಯೋಗೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

VISTARANEWS.COM


on

Duniya Vijay In kotee movie special Role
Koo

ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಯಾದ (Duniya Vijay) ಡಾಲಿ ಧನಂಜಯ ನಟನೆಯ ‘ಕೋಟಿ’ ಸಿನಿಮಾ ‘ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್’ ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು “ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ” ಎಂದಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಥಿಯೇಟರ್ ಕಡೆ ಹೆಚ್ಚೆಚ್ಚು ಬರುತ್ತಿದ್ದು ‘ಕೋಟಿ’ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.

ಧನಂಜಯ್ – ರಮೇಶ್ ಇಂದಿರಾ – ತಾರಾ ಅವರ ನಟನೆ, ಕಲರ್ಫುಲ್ ಕ್ಲೈಮ್ಯಾಕ್ಸ್‌ಗೆ ‌ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ. ಇವೆಲ್ಲದರ ಜತೆ ‘ದುನಿಯಾ ವಿಜಯ್’ ಅವರ ವಿಶೇಷ ಕ್ಯಾಮಿಯೋಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶೇಷ ಪಾತ್ರದಲ್ಲಿ ದುನಿಯಾ ವಿಜಯ್

‘ಸಲಗ’ ಮೂಲಕ ತಮ್ಮ ವೃತ್ತಿಜೀವನಕ್ಕೆ ಹೊಸ ಬಣ್ಣ ತುಂಬಿರುವ ದುನಿಯಾ ವಿಜಯ್ ‘ಕೋಟಿ’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ನೋಡಿದ ಪ್ರೇಕ್ಷಕರು ಅಚ್ಚರಿಯಿಂದಲೇ ಈ ವಿಶೇಷ ಪಾತ್ರವನ್ನು ಮೆಚ್ಚಿದ್ದಾರೆ. ಈ ಹಿಂದೆ ವಿಜಯ್ ಅವರ ‘ಸಲಗ’ ಸಿನೆಮಾದಲ್ಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

‘ದುನಿಯಾ ವಿಜಯ್ ಅವರ ನಟನೆ ಮತ್ತು ಆ ಒಂದು ಸನ್ನಿವೇಶ ಪ್ರೇಕ್ಷಕರನ್ನು ಭಾವುಕರನ್ನಾಗಿ ಮಾಡುತ್ತದೆ’ ಎಂದು ಪ್ರೇಕ್ಷಕರು ಸೋಷಿಯಲ್ ಮೀಡಿಯಾಗಳಲ್ಲಿ ದುನಿಯಾ ವಿಜಯ್ ಕ್ಯಾಮಿಯೋಗೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

“ಕೋಟಿ ಸಿನಿಮಾದಲ್ಲಿ ದುನಿಯಾ ವಿಜಯ್ ಬರುವ ಸನ್ನಿವೇಶ ನನಗೆ ತುಂಬಾ ಇಷ್ಟದ ಸನ್ನಿವೇಶಗಳಲ್ಲೊಂದು. ಥಿಯೇಟರ್ಗಳಲ್ಲಿ ಪ್ರೇಕ್ಷಕರು ತೋರಿಸುತ್ತಿರುವ ಪ್ರೀತಿ ವಿಶೇಷವಾದದ್ದು” ಎಂದು ನಿರ್ದೇಶಕ ಪರಮ್ ಹೇಳಿದರು.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ರಾಜಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ.

Continue Reading

ಸಿನಿಮಾ

Actor Darshan: ಘಟಾನುಘಟಿಗಳ ಕಲಾವಿದರ ಜತೆ ʻದರ್ಶನ್‌ʼ ಕಿರಿಕ್‌ ಒಂದೆರಡಲ್ಲ; ದೂರಾದವರೆಷ್ಟು ಮಂದಿ?

Actor Darshan: ಸ್ಯಾಂಡಲ್‌ವುಡ್‌ನ ನಟರೊಂದಿಗೆ, ನಿರ್ದೇಶಕರೊಂದಿಗೆ ದರ್ಶನ್ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಆದರೆ ಈಗ ಅನೇಕ ಕಲಾವಿದರು ದರ್ಶನ್‌ ಜತೆ ಸ್ನೇಹಿತರಾಗಿಲ್ಲ. ದೂರವಾಗಿ ಉಳಿದ್ದಿದ್ದಾರೆ. ಕಾರಣ ಏನು? ಆ ಕಲಾವಿದರು ಯಾರು?

VISTARANEWS.COM


on

Actor Darshan ended their friendship sandalwood actors
Koo

ಬೆಂಗಳೂರು: ದರ್ಶನ್‌ (Actor Darshan) ಅಭಿನಯದ ಕಾಟೇರ ಸಿನಿಮಾ ರಿಲೀಸ್‌ ವೇಳೆ ಅನೇಕ ಹಿರಿಯ ಕಲಾವಿದರು ದರ್ಶನ್‌ ಅವರ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿದ್ದರು. ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ದರ್ಶನ್ ಪರ ದೊಡ್ಡ ಸ್ನೇಹ ವರ್ಗವೇ ಇತ್ತು. ಸ್ಯಾಂಡಲ್‌ವುಡ್‌ನ ನಟರೊಂದಿಗೆ, ನಿರ್ದೇಶಕರೊಂದಿಗೆ ದರ್ಶನ್ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಆದರೆ ಈಗ ಅನೇಕ ಕಲಾವಿದರು ದರ್ಶನ್‌ ಜತೆ ಸ್ನೇಹಿತರಾಗಿಲ್ಲ. ದೂರವಾಗಿ ಉಳಿದ್ದಿದ್ದಾರೆ. ಕಾರಣ ಏನು? ಆ ಕಲಾವಿದರು ಯಾರು?

ಅರ್ಜುನ್ ಸರ್ಜಾ- ಧ್ರುವ ಸರ್ಜಾ

‘ಪ್ರೇಮಬರಹ’ ಸಿನಿಮಾ ರಿಲೀಸ್‌ಗೂ ಮೊದಲು ದರ್ಶನ್ ಹಾಗೂ ಸರ್ಜಾ ಕುಟುಂಬದ ನಡುವೆ ಆತ್ಮೀಯತೆ ಇತ್ತು. ಆದರೆ, ರಿಲೀಸ್ ಬಳಿಕ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್ ವ್ಯವಹಾರದಲ್ಲಿ ಮೋಸ ಮಾಡಿದ್ದರು. ಇದನ್ನು ಕೇಳುವುದಕ್ಕೆ ದರ್ಶನ್ ಬಳಿ ಅರ್ಜುನ್ ಸರ್ಜಾ ಹೋಗಿದ್ದರು. ಆ ವೇಳೆ ದರ್ಶನ್ ಅವಮಾನ ಮಾಡಿದ್ದರು ಎನ್ನಲಾಗಿತ್ತು. ಹೀಗಾಗಿ ಧ್ರುವ ಅವರು ದರ್ಶನ್‌ ಅವರನ್ನು ದೂರ ಇಟ್ಟಿದ್ದರು ಎನ್ನಲಾಗಿತ್ತು.

ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌ (Actor Darshan) ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ (Dhruva Sarja) ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದರು. ದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಗೆ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕುʼ ಎಂದಿದ್ದರು. ʼನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲʼ ಎಂದಿದ್ದರು.

ಇದನ್ನೂ ಓದಿ: Actor Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪವಿತ್ರಾ ಗೌಡ ಮಾಜಿ ಪತಿಯಿಂದ ಕೇಸ್!

ಸೃಜನ್ ಲೋಕೇಶ್-ರವಿಚೇತನ್

ಕೋವಿಡ್ ಬಳಿಕ ದರ್ಶನ್ ಜೊತೆಗಿದ್ದ ಸಂಗಡಿಗರು ಬದಲಾಗಿದ್ದರು. ಅವರೊಂದಿಗೆ ಸದಾ ಸಂಪರ್ಕದಲ್ಲಿ ಇರುತ್ತಿದ್ದವರನ್ನೇ ದೂರ ಇಡುವುದಕ್ಕೆ ಶುರು ಮಾಡಿದ್ದರು. ಹೀಗಾಗಿ ರವಿ ಚೇತನ್ ಬೇಸರ ಆಗಿತ್ತು. ಸೃಜನ್‌ ಲೋಕೇಶ್‌ ಕೂಡ ಇದೇ ಕಾರಣಕ್ಕೆ ದರ್ಶನ್‌ರಿಂದ ದೂರ ಆಗಿದ್ದರು ಎನ್ನಲಾಗಿದೆ.

ಸುದೀಪ್‌-ದರ್ಶನ್‌

ಒಂದು ಕಾಲದಲ್ಲಿ ದರ್ಶನ್‌ ಹಾಗೂ ಸುದೀಪ್‌ ಒಳ್ಳೆಯ ಸ್ನೇಹಿತರಾಗಿದ್ದರು ಒಂದು ದಿನ ಇದ್ದಕ್ಕಿದಂತೆ ದರ್ಶನ್ ಟ್ವೀಟ್ ಮಾಡಿ ಇನ್ನು ಮುಂದೆ ನಾನು ಸುದೀಪ್ ಸ್ನೇಹಿತರಲ್ಲ ಎಂದು ಘೋಷಿಸಿಬಿಟ್ಟರು. ಬಳಿಕ ಇಬ್ಬರೂ ಎಂದೂ ಒಟ್ಟಿಗೆ ಕಾಣಿಸಿಕೊಳ್ಳಲಿಲ್ಲ. ಪರಸ್ಪರ ಅಂತರ ಕಾಯ್ದುಕೊಂಡೇ ಬಂದಿದ್ದರು.ಸುದೀಪ್ ಸಾಕಷ್ಟು ಬಾರಿ ದರ್ಶನ್ ಕುರಿತು ಮಾತನಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ದರ್ಶನ್ ಕುರಿತಾದ ವಿಚಾರಗಳಿಗೆ ಪ್ರತಿಕ್ರಿಯಿಸಿದ್ದರು.

ಇತ್ತೀಚೆಗೆ ಸುದೀಪ್ ಮತ್ತು ದರ್ಶನ್ ಒಂದೇ ವೇದಿಕೆ ಮೇಲೆ 6 ವರ್ಷದ ನಂತರ ಕಾಣಿಸಿಕೊಂಡಿದ್ದರು. ಈ ಕುರಿತು ತಮ್ಮ ಹುಟ್ಟುಹಬ್ಬದಂದು ಸುದೀಪ್‌ ರಿಯಾಕ್ಟ್ ಮಾಡಿದ್ದರು. ದರ್ಶನ್ ಕುರಿತು ಖುಷಿಯಿಂದಲೇ ಮಾತನಾಡಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ಸುದ್ದಿ ಆದಾಗ ಖುಷಿ ತಂದಿತ್ತು. ದರ್ಶನ್ ದೊಡ್ಡ ನಟ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ಕಿತ್ತಾಡಿಕೊಂಡ್ರು, ಜಗಳ ಮಾಡಿಕೊಂಡ್ರು ಅನ್ನುವುದು ಕಲ್ಪನೆ ಅಷ್ಟೇ. ಗೋಡೆ ಮುರಿಬೇಕು, ಆದರೆ ಕಲ್ಪನೆ ಇರಬಾರದು. ಇಬ್ಬರೂ ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ಖುಷಿ ತಂದಿದೆ. ನಂಗೂ ಕೆಲವು ಪ್ರಶ್ನೆಗಳು ಇವೆ. ದರ್ಶನ್‌ಗೂ ಇವೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ನನ್ನ ಕಣ್ಣಲ್ಲಿ ಕಣ್ಣಿಟ್ಟು ಹೇಳಿದ್ರೆ ಒಪ್ತೀನಿ ಎಂದು ಸುದೀಪ್‌ ಹೇಳಿದ್ದರು. ಇದೀಗ ಮತ್ತೆ ದರ್ಶನ್‌ ಬಗ್ಗೆ ಸುದೀಪ್‌ ಮಾತನಾಡಿದ್ದರು.

ಜಗ್ಗೇಶ್- ದರ್ಶನ್

ತೋತಾಪುರಿ’ ಸಿನಿಮಾ ಚಿತ್ರೀಕರಣ ಸೆಟ್‌ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿ ಜಗ್ಗೇಶ್ ವಿರುದ್ಧ ಧಿಕ್ಕಾರ ಕೂಗಿದ್ದು ವಿವಾದ ಸೃಷ್ಟಿಸಿತ್ತು. ದರ್ಶನ್ ಹುಡುಗರ ಬಗ್ಗೆ ನಟ ಜಗ್ಗೇಶ್ ಹಗುರವಾಗಿ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೊ ಕ್ಲಿಪ್ ವೈರಲ್ ಆಗಿ ಭಾರೀ ಸುದ್ದಿ ಆಗಿತ್ತು. ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಕ್ಷಮೆ ಕೇಳುವಂತೆ ಜಗ್ಗೇಶ್ ಅವರಲ್ಲಿ ಪಟ್ಟು ಹಿಡಿದಿದ್ದರು. ಸಂದರ್ಶನವೊಂದರಲ್ಲಿ ಈ ಘಟನೆ ಬಗ್ಗೆ ಜಗ್ಗೇಶ್‌ಗೆ ಸ್ವತಃ ದರ್ಶನ್ ಕ್ಷಮೆ ಕೇಳಿದ್ದರು.

ಇನ್​ಸ್ಪೆಕ್ಟರ್ ವಿಕ್ರಂ ಚಿತ್ರದ ನಿರ್ಮಾಪಕ ವಿಖ್ಯಾತ್​ರವರೊಂದಿಗೆ ನಟ ಜಗ್ಗೇಶ್​ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಅಭಿಮಾನಿಗಳ ಬಗ್ಗೆ ಮಾತನಾಡುವ ವೇಳೆ ನನ್ನ ಬಳಿ ಇರುವವರೆಲ್ಲರೂ ತುಂಬಾ ಒಳ್ಳೆಯವರು. ಆದರೆ ದರ್ಶನ್ ಥರ, ಅವರ ಥರ ತಲೆ ಮಾಂಸ ಕಳಿಸಿ ಅಣ್ಣಾ, ನೂರು ಕುರಿ ಕಳಿಸಿ ಅಣ್ಣಾ ಎನ್ನುವವರು ಯಾರೂ ನಮ್ಮ ಬಳಿ ಇಲ್ಲ ಎಂದು ಜಗ್ಗೇಶ್ ಹೇಳಿದ್ದಾರೆ. ಇದೇ ವಿಚಾರಕ್ಕೆ ಸಿಟ್ಟಿಗೆದ್ದ ದರ್ಶನ್ ಅಭಿಮಾನಿಗಳು ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿದ್ದರು.

ಉಮಾಪತಿ-ಸಂದೇಶ್ ನಾಗರಾಜ್

ಇನ್ನು ದರ್ಶನ್ ಜೊತೆ ಹೆಚ್ಚಾಗಿ ಗುರುತಿಸಿಕೊಂಡಿದ್ದ ನಿರ್ಮಾಪಕರಲ್ಲಿ ಉಮಾಪತಿ ಹಾಗೂ ಸಂದೇಶ್ ನಾಗರಾಜ್ ಪ್ರಮುಖರು. ಆದರೆ, ಸಂದೇಶ್ ನಾಗರಾಜ್ ಹೋಟೆಲ್‌ನ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡಿದ್ದರು. ಹೀಗಾಗಿ ದರ್ಶನ್ ಹಾಗೂ ಸಂದೇಶ್ ನಾಗರಾಜ್ ದೂರ ಆಗಿದ್ದರು.

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.ದರ್ಶನ್‌ ಅರೆಸ್ಟ್‌ (Actor Darshan) ಆದ ಬೆನ್ನಲ್ಲೇ ನಿರ್ಮಾಪಕ ಉಮಾಪತಿ ಅವರು ದರ್ಶನ್‌ ಕುರಿತಾಗಿ ಸಾಕಷ್ಟು ಹೇಳಿಕೆ ಜತೆಗೆ ಪೋಸ್ಟ್‌ ಕೂಡ ಮಾಡಿದ್ದರು. ʻನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆʼಎಂದು ದರ್ಶನ್‌ ಕುರಿತಾಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

Continue Reading
Advertisement
CM Siddaramaiah
ಪ್ರಮುಖ ಸುದ್ದಿ8 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು19 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ20 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ21 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ23 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು28 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ53 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌