Niveditha Shivarajkumar: ʻಫೈರ್ ಫ್ಲೈ' ಸಿನಿಮಾಗೆ 'ಹೆಂಗೆ ನಾವು' ಹುಡುಗಿ ನಾಯಕಿ! ಯಾವಾಗ ತೆರೆಗೆ? - Vistara News

ಸ್ಯಾಂಡಲ್ ವುಡ್

Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

Niveditha Shivarajkumar: ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ (Niveditha Shivarajkumar) ಯಾರು ಅನ್ನೋದನ್ನು ಅನಾವರಣ (rachana inder) ಮಾಡಿದೆ.

VISTARANEWS.COM


on

Niveditha Shivarajkumar Fire fly rachana inder Heroine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ. ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷಯವಾದರೆ, ಮತ್ತೊಂದು ಕಾರಣ ಸಿನಿಮಾದ ತಾರಾಬಳಗ. ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ (Niveditha Shivarajkumar) ಯಾರು ಅನ್ನೋದನ್ನು ಅನಾವರಣ (rachana inder) ಮಾಡಿದೆ.

ಲವ್ ಮಾಕ್‌ಟೇಲ್‌, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್‌ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ.‌ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ’ ಎಂದಿದ್ದಾರೆ.

Kannada New Movie: ‘ಫಾರೆಸ್ಟ್’ ಸಿನಿಮಾದ “ಓಡೋ ಓಡೋ” ಹಾಡಿಗೆ ಅಭಿಮಾನಿಗಳು ಫಿದಾಇದನ್ನೂ ಓದಿ:

ಫೈರ್ ಫ್ಲೈ ಸಿನಿಮಾವನ್ನು ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ನಾಯಕ- ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ. ಈ ಸಂಸ್ಥೆಯ ಮೊದಲ ಕೂಸು ಫೈರ್ ಫ್ಲೈ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Kannada New Movie: ಭಾರ್ಗವ್ ಕೃಷ್ಣ ಅಭಿನಯದ `ಓಂ ಶಿವಂ’ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

Kannada New Movie: ಭಾರ್ಗವ್ ಕೃಷ್ಣ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ‌. ಹಾಡು ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

VISTARANEWS.COM


on

Om shiva, Kannada movie team song out
Koo

ಬೆಂಗಳೂರು: ಕನ್ನಡದಲ್ಲಿ ಹೊಸ ನಾಯಕನಟರ ಆಗಮನವಾಗುತ್ತಿರುತ್ತದೆ‌. ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ ಕೂಡ ಸೇರಿದ್ದಾರೆ. ಪ್ರಸ್ತುತ ಭಾರ್ಗವ್ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ “ಓಂ ಶಿವಂ” ನ ಲಿರಿಕಲ್ ಸಾಂಗ್ ಇತ್ತೀಚಿಗೆ ಬಿಡುಗಡೆಯಾಯಿತು. ಭಾರ್ಗವ್ ಕೃಷ್ಣ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ‌. ಹಾಡು ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

“ಆಲ್ವಿನ್ ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ಬಂದು ಕಥೆ ಹೇಳಿದರು. ನಾನು ಕಥೆ ಚೆನ್ನಾಗಿದೆ. ನಾಯಕನನ್ನು ಹುಡುಕಿ. ಚಿತ್ರ ಆರಂಭಿಸೋಣ ಎಂದೆ. ಅದಕ್ಕೆ ಆಲ್ವಿನ್ ಅವರು ನಿಮ್ಮ ಮಗ ಭಾರ್ಗವ್, ನನ್ನ ಕಥೆ ಗೆ ಸರಿ ಹೊಂದುತ್ತಾರೆ. ಅವರೆ ನಮ್ಮ ಚಿತ್ರದ ನಾಯಕ ಎಂದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ” ಎಂದರು ನಿರ್ಮಾಪಕ ಕೃಷ್ಣ.

“ರಾಜ್ ಬಹದ್ದೂರ್” ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು ಎಂದು ಮಾತನಾಡಿದ ನಿರ್ದೇಶಕ ಆಲ್ವಿನ್, “ಓಂ ಶಿವಂ” ಲವ್ ಜಾನರ್ ನ ಚಿತ್ರ. ಆದರೆ ಚಿತ್ರದಲ್ಲಿ ಬರೀ ಲವ್ ಮಾತ್ರ ಇಲ್ಲ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ನಮ್ಮ ಚಿತ್ರಕ್ಕೆ ಇಪ್ಪತ್ತೊಂದು ವಯಸ್ಸಿನ ನಾಯಕ ಬೇಕಾಗಿತ್ತು. ಭಾರ್ಗವ್ ಅವರಿಗೂ ಅಷ್ಟೇ ವಯಸ್ಸು. ಹಾಗಾಗಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮೊದಲ ಪ್ರಯತ್ನದಲ್ಲೇ ಭಾರ್ಗವ್ ಚೆನ್ನಾಗಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳು, ಅದ್ದೂರಿ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಇದನ್ನೂ ಓದಿ: Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

“ಮೊದಲು ನಾನು ನನ್ನ ತಂದೆಗೆ ಧನ್ಯವಾದ ತಿಳಿಸುತ್ತೇನೆ. ಆಲ್ವಿನ್ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿರುವುದಾಗಿ” ನಾಯಕ ಭಾರ್ಗವ್ ಕೃಷ್ಣ ತಿಳಿಸಿದರು.

ನಾಯಕಿ ವಿರಾಣಿಕ ಶೆಟ್ಟಿ ಅಂಜಲಿ ನನ್ನ ಪಾತ್ರದ ಹೆಸರು ಎಂದು ಹೇಳಿದರು. ನಟರಾದ ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ನಟಿಯರಾದ ಅಪೂರ್ವ, ಲಕ್ಷ್ಮೀ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲೆ, ಛಾಯಾಗ್ರಾಹಕ ವೀರೇಶ್ ಹಾಗೂ ಸಾಹಸ ನಿರ್ದೇನ ಇದೆ.

Continue Reading

ಕರ್ನಾಟಕ

Kannada New Movie: ‘ಫಾರೆಸ್ಟ್’ ಸಿನಿಮಾದ “ಓಡೋ ಓಡೋ” ಹಾಡಿಗೆ ಅಭಿಮಾನಿಗಳು ಫಿದಾ

Kannada New Movie: ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ, ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ “ಓಡೋ ಓಡೋ” ಹಾಡು ಎನ್.ಎಂ.ಕೆ. ಸಿನಿಮಾಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದ್ದು, ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Kannada New Movie Forest Kannada movie Odo Odo song hit
Koo

ಬೆಂಗಳೂರು: ಕನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳದೇ ಕಾರುಬಾರು. ಉತ್ತಮ ಕಂಟೆಂಟ್ ಇರುವ ಚಿತ್ರಗಳು ಇತ್ತೀಚಿಗೆ ಯಶಸ್ವಿಯಾಗಿರುವ ಉದಾಹರಣೆಗಳು ಕನ್ನಡದಲ್ಲಿ ಸಾಕಷ್ಟಿದೆ. ಅಂತಹುದೇ ಉತ್ತಮ ಕಂಟೆಂಟ್‌ನೊಂದಿಗೆ ಕನ್ನಡಿಗರ ಮುಂದೆ ಬರಲಿದೆ “ಫಾರೆಸ್ಟ್” (Kannada New Movie) ಚಿತ್ರ.

ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ. ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ “ಓಡೋ ಓಡೋ” ಹಾಡು ಎನ್.ಎಂ.ಕೆ. ಸಿನಿಮಾಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಈ ಮಲ್ಟಿಸ್ಟಾರರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ “ಫಾರೆಸ್ಟ್” ಚಿತ್ರಕ್ಕಿದೆ.

ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Continue Reading

ಕರ್ನಾಟಕ

Rakshit Shetty: ಕಾಪಿ ರೈಟ್ಸ್ ಉಲ್ಲಂಘನೆ; ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

Rakshit Shetty: ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

VISTARANEWS.COM


on

Rakshit Shetty
Koo

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರೀಕ್ಷಿತ ಜಾಮೀನಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ನ್ಯಾಯ ಎಲ್ಲಿದೆ ಚಿತ್ರದ ʼನ್ಯಾಯ ಎಲ್ಲಿದೆʼ ಹಾಡು ಹಾಗೂ ಗಾಳಿ ಮಾತು ಚಿತ್ರದ ʼಒಮ್ಮೆ ನಿನ್ನನ್ನುʼ ಹಾಡಿನ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ದೂರು ನೀಡಿದ್ದರು. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್‌ ಶೆಟ್ಟಿ, ಬೆಂಗಳೂರಿನ‌ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಕ್ಷಿತ್ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲಾವಕಾಶ ಕೋರಿದ್ದು, ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ.

ಇದನ್ನೂ ಓದಿ | Rakshit Shetty: ಬ್ಯಾಚಲರ್‌ ಪಾರ್ಟಿ ‌’ಕಿರಿಕ್’; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದರು. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿತ್ತು.

ಏನಿದು ಪ್ರಕರಣ?

ಈ ಹಿಂದೆ ‘ಸಿಂಪಲ್ ಸ್ಟಾರ್ರಕ್ಷಿತ್ ಶೆಟ್ಟಿ ಅಭಿನಯದ ರಿಷಬ್ ಶೆಟ್ಟಿ (Rakshit Shetty)ನಿರ್ದೇಶನದ ‘ಕಿರಿಕ್ ಪಾರ್ಟಿ’ 2016ರಲ್ಲಿ ತೆರೆಗೆ ಬಂದಿತ್ತು. ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು. ಇದೀಗ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಸರದಿ.

ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜೊತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ | Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಈ ಮುಂಚೆ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆಯಾದ ಒಂದು ಹಾಡಿನ ವಿರುದ್ಧ ಲಹರಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಕಾಪಿರೈಟ್ ನಿಯಮ ಉಲ್ಲಂಘಿಸಿ ತಮ್ಮ ಸಂಸ್ಥೆಯ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಅನುಮತಿ ಇಲ್ಲದೆ ಹಾಡು ಬಳಸಲಾಗಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಕೇಸ್ ಹಾಕಿತ್ತು.

Continue Reading

ಸ್ಯಾಂಡಲ್ ವುಡ್

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ `ಕೃಷ್ಣಂ ಪ್ರಣಯ ಸಖಿ’ ಆಗಸ್ಟ್ 15ರಂದು ತೆರೆಗೆ!

Golden Star Ganesh: “ದಂಡುಪಾಳ್ಯ” ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು. “ಕೃಷ್ಣಂ ಪ್ರಣಯ ಸಖಿ” ಉತ್ತಮ ಕಥಾಹಂದರ ಹೊಂದಿರುವ ಚಿತ್ರ.

VISTARANEWS.COM


on

Golden Star Ganesh Krishnam Pranaya Sakhi will hit the screens
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದೆ. ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

“ದಂಡುಪಾಳ್ಯ” ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು. “ಕೃಷ್ಣಂ ಪ್ರಣಯ ಸಖಿ” ಉತ್ತಮ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು. ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ . “ಕೃಷ್ಣಂ ಪ್ರಣಯ ಸಖಿ” ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್ ನ ಚಿತ್ರ. ಆಗಸ್ಟ್ 15 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹಿಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ಇದು ಗಣೇಶ್ ಅವರಿಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ “ಚಿನ್ನಮ್ಮ” ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಆಗಸ್ಟ್ 15, ನಮ್ಮ ಚಿತ್ರ ತೆರೆ ಕಾಣಲಿದೆ. ನೋಡಿ ಹಾರೈಸಿ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

ಚಿತ್ರ ಉತ್ತಮವಾಗಿ ಮೂಡಿಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದರು. ನಾಯಕಿಯರಾದ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು “ಕೃಷ್ಣಂ ಪ್ರಣಯ ಸಖಿ” ಚಿತ್ರದ ಕುರಿತು ಮಾತನಾಡಿದರು.

Continue Reading
Advertisement
PM Narendra Modi
ಬೆಂಗಳೂರು6 mins ago

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

IPL 2025
ಕ್ರೀಡೆ18 mins ago

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

nipah virus
ದೇಶ45 mins ago

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

HD Kumaraswamy
ಹಾಸನ57 mins ago

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Police viral video
ಕರ್ನಾಟಕ58 mins ago

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

kalaburagi News
ಕಲಬುರಗಿ1 hour ago

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Guru Purnima 2024
ಕ್ರೀಡೆ2 hours ago

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Divya Vasanthamother requests darshan fans not get troll her daughter
ಸಿನಿಮಾ2 hours ago

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Kedarnath Landslide
ದೇಶ2 hours ago

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

HD Kumaraswamy
ಹಾಸನ2 hours ago

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌