Pavithra Gowda: ದಚ್ಚುನ ಪ್ರೀತಿಯಿಂದ ʻಸುಬ್ಬʼ ಅಂತ ಕರೀತಾ ಇದ್ರಂತೆ ಪವಿತ್ರಾ! - Vistara News

ಸ್ಯಾಂಡಲ್ ವುಡ್

Pavithra Gowda: ದಚ್ಚುನ ಪ್ರೀತಿಯಿಂದ ʻಸುಬ್ಬʼ ಅಂತ ಕರೀತಾ ಇದ್ರಂತೆ ಪವಿತ್ರಾ!

Pavithra Gowda: ಅಭಿಮಾನಿಗಳಿಗೆ ದರ್ಶನ್‌ ʻಡಿ ಬಾಸ್ʼ ಆದ್ರೆ, ಪವಿತ್ರಾಗೆ ʻಸುಬ್ಬʼ ಆಗಿದ್ದರು. ದರ್ಶನ್‌ ಬರ್ತ್‌ಡೇಯ ಹೊಸ ಫೋಟೊವೊಂದು ವೈರಲ್‌ ಆಗುತ್ತಿದೆ. ಅದರಲ್ಲಿ ʻಸುಬ್ಬʼಎಂದು ಬರೆದಿದೆ. ಹೀಗಾಗಿ ಪವಿತ್ರಾ ಅವರು ದರ್ಶನ್‌ ಅವರನ್ನು ʻಸುಬ್ಬʼ ಎಂದು ಕರೆಯುತ್ತಿರುವುದು ಕೇಕ್‌ ಮೂಲಕ ರಿವೀಲ್‌ ಆಗಿದೆ. ಈಗಾಗಲೇ ಪವಿತ್ರ ಹಾಗೂ ದರ್ಶನ್ ಆತ್ಮಿಯತೆ ಬಗ್ಗೆ ಹಲವು ಸ್ಟೋರಿಗಳು ಹೊರ ಬಿದ್ದಿವೆ. ಇದೀಗ ಈ ನಿಕ್‌ ನೇಮ್‌ ವೈರಲ್‌ ಆಗುತ್ತಿದ್ದಂತೆ ʻಸುಬ್ಬ ಸುಬ್ಬಿʼ ಅಂದರ್ ಎಂದು ನೆಟ್ಟಿಗರು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ.

VISTARANEWS.COM


on

Pavithra Gowda called darshan as subba nickname
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ (Pavithra Gowda) ಹಾಗೂ ದರ್ಶನ್‌ ಇಬ್ಬರೂ (Actor Darshan) ಪರಪ್ಪನ ಅಗ್ರಹಾರದಲ್ಲಿ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇದಕ್ಕೂ ಮುಂಚೆ ಪವಿತ್ರಾ ಗೌಡ ಆಗಾಗ ದರ್ಶನ್‌ ಜತೆಗಿರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇದ್ದರು. ದಚ್ಚು ಪತ್ನಿ ವಿಜಯಲಕ್ಷ್ಮಿ ಜತೆ ಸೋಷಿಯಲ್‌ ಮೀಡಿಯಾ ಮೂಲಕ ವಾರ್‌ ನಡೆಸುತ್ತಿದ್ದರು. ಇದೀಗ ಮತ್ತೆ ಪವಿತ್ರಾ ಹಾಗೂ ದರ್ಶನ್‌ ಅವರ ವೈಯಕ್ತಿಕ ವಿಚಾರ ಹೊರ ಬಿದ್ದಿದೆ. ಪವಿತ್ರಾ ಅವರು ದರ್ಶನ್‌ ಅವರಿಗೆ ಕ್ಯೂಟ್‌ ಆಗಿರುವ ಒಂದು ನಿಕ್‌ನೆಮ್ ಬೇರೆ ಇಟ್ಟಿದ್ದಾರಂತೆ. ಪ್ರೀತಿಯಿಂದ ದಚ್ಚುನನ್ನು ʻಸುಬ್ಬʼ ಎಂದು ಕರೆಯತ್ತಿದ್ದರಂತೆ. ಹಾಗಾದ್ರೆ ಈ ಹೆಸರು ಹೇಗೆ ರಿವೀಲ್‌ ಆಯ್ತು ಎಂಬ ವಿಚಾರ ತಿಳಿದುಕೊಳ್ಳಲು ಮುಂದೆ ಓದಿ!

ಅಭಿಮಾನಿಗಳಿಗೆ ದರ್ಶನ್‌ ʻಡಿ ಬಾಸ್ʼ ಆದ್ರೆ, ಪವಿತ್ರಾಗೆ ʻಸುಬ್ಬʼ ಆಗಿದ್ದರು. ದರ್ಶನ್‌ ಬರ್ತ್‌ಡೇಯ ಹೊಸ ಫೋಟೊವೊಂದು ವೈರಲ್‌ ಆಗುತ್ತಿದೆ. ಅದರಲ್ಲಿ ʻಸುಬ್ಬʼ ಎಂದು ಬರೆದಿದೆ. ಹೀಗಾಗಿ ಪವಿತ್ರಾ ಅವರು ದರ್ಶನ್‌ ಅವರನ್ನು ʻಸುಬ್ಬʼ ಎಂದು ಕರೆಯುತ್ತಿರುವುದು ಕೇಕ್‌ ಮೂಲಕ ರಿವೀಲ್‌ ಆಗಿದೆ. ಈಗಾಗಲೇ ಪವಿತ್ರ ಹಾಗೂ ದರ್ಶನ್ ಆತ್ಮಿಯತೆ ಬಗ್ಗೆ ಹಲವು ಸ್ಟೋರಿಗಳು ಹೊರ ಬಿದ್ದಿವೆ. ಇದೀಗ ಈ ನಿಕ್‌ ನೇಮ್‌ ವೈರಲ್‌ ಆಗುತ್ತಿದ್ದಂತೆ ʻಸುಬ್ಬ ಸುಬ್ಬಿʼ ಅಂದರ್ ಎಂದು ನೆಟ್ಟಿಗರು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ.

ಇದನ್ನೂ ಓದಿ: Pavithra Gowda: ಜೈಲಿಗೆ ಪವಿತ್ರಾ ಪೋಷಕರು ಭೇಟಿ; ಕ್ಯಾಮೆರಾ ಕಂಡು ವೈಲೆಂಟ್ ಆದ ಪವಿತ್ರಾ ಗೌಡ ತಮ್ಮ!

ಈ ಪವಿತ್ರಾ ಗೌಡ ಯಾರು?

ಕಾಲೇಜು ದಿನಗಳಲ್ಲೇ ಬಣ್ಣದ ಜಗತ್ತಿನ ಕ್ರೇಜ್‌ ಹತ್ತಿಸಿಕೊಂಡು ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ್ದರು ಪವಿತ್ರಾ. ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. ಬೆಂಗಳೂರಿನಲ್ಲಿ ನಡೆದ ಮೂರು ಫ್ಯಾಷನ್ ಶೋಗಳಲ್ಲಿ ಮೂರು ಬಾರಿ ಶೋ ಟಾಪರ್ ಪಟ್ಟ ಗಿಟ್ಟಿಸಿಕೊಂಡವರು ಪವಿತ್ರಾ. ಇವರು ಮೂಲತಃ ಬೆಂಗಳೂರಿನ ಜೆ ಪಿ ನಗರದವರು. ಭೂಗತ ದೊರೆ ಎಂದು ಗುರುತಿಸಿಕೊಂಡಿದ್ದ ಎಂ.ಪಿ ಜಯರಾಜ್ ಮಗ ನಾಯಕನಾಗಿದ್ದ ಸಿನಿಮಾದಲ್ಲಿ ಪವಿತ್ರಾ ನಾಯಕಿಯಾಗಿ ಕಂಗೊಳಿಸಿದ್ದರು. ಇದಾದ ಬಳಿಕ ಕೆಲವು ಸಿನಿಮಾಗಳಲ್ಲಿ ನಾಯಕಿಯಾದರು.

ಜಗ್ಗು ದಾದಾʼಗೆ ಲಿಂಕ್‌ ಆದ ಬೆಡಗಿ!

ʼಜಗ್ಗುದಾದಾʼ ಸಿನಿಮಾ ಮೂಲಕ ದರ್ಶನ್‌ಗೆ ಪರಿಚಯವಾದವರು ಈ ಪವಿತ್ರಾ. ಹೀಗೆ ಶುರುವಾದ ಸ್ನೇಹ ಆ ನಂತರ ಪ್ರೇಮಕ್ಕೆ ತಿರುಗಲು ಹೆಚ್ಚೇನು ಸಮಯ ಬೇಕಾಗಲಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ 2016ರಲ್ಲಿ ʼಜಗ್ಗುದಾದಾʼ ತೆರೆಗೆ ಬಂದ ಬೆನ್ನಲ್ಲಿಯೇ, 2017ರಲ್ಲಿ ʻತಾರಕ್ʼ ಚಿತ್ರದ ಬಿಡುಗಡೆಯ ಸಮಯದಲ್ಲಿ ಪವಿತ್ರಾ ಗೌಡ ತನ್ನ ಪ್ರಿಯಕರ ದರ್ಶನ್ ಜೊತೆ ಅತ್ಯಾಪ್ತವಾದ ಫೋಟೊವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಸಂಜಯ್ ಸಿಂಗ್‌ಗೆ ಡಿವೋರ್ಸ್‌ ಕೊಟ್ಟ ಪವಿತ್ರಾ

ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ. ಡಿವೋರ್ಸ್‌ ಆಗಿದೆ. 12 ವರ್ಷಗಳ ಹಿಂದೆ ಬೆಂಗಳೂರು ತೊರೆದು ಹುಟ್ಟೂರು ಉತ್ತರ ಪ್ರದೇಶದಲ್ಲಿ ಸ್ವಂತ ಶಾಲೆ ನಡೆಸುತ್ತಿದ್ದಾರೆ ಸಂಜಯ್ ಸಿಂಗ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನ ಸೆರೆವಾಸ ಏಳನೇ ದಿನಕ್ಕೆ ಕಾಲಿಟ್ಟಿದೆ. ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಕುಡಿದು ದರ್ಶನ್‌ ತಡವಾಗಿ ನಿದ್ರೆಗೆ ಜಾರಿದರು. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡು ಎಂದಿನಂತೆ ಬಿಸಿನೀರು ಸೇವಿಸಿದ್ದಾರೆ ದರ್ಶನ್‌. ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

VISTARANEWS.COM


on

Actor Darshan special appeal to the fans
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಅವರು ಪರಪ್ಪನ ಅಗ್ರಹಾರದಲ್ಲಿದ್ದಾರೆ. ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ. ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ.ಹೀಗಾಗಿ ದರ್ಶನ್ ಅವರೇ ಈಗ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ. ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ದರ್ಶನ್‌ ಹೇಳಿದ್ದು ಹೀಗೆ ʻʻಅಭಿಮಾನಿಗಳು ಯಾರು ಕೂಡ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು. ಅದರಲ್ಲೂ ನಿನ್ನೆ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದು ಕೂಡ ಬೇಸರ ತಂದಿದೆʼʼಎಂದು ಸಂದೇಶ ರವಾನಿಸಿದ್ದಾರೆ.

ಇತ್ತೀಚೆಗೆ ಸೌಮ್ಯ ಹೆಸರಿನ ವಿಶೇಷ ಚೇತನ ಯುವತಿ ದರ್ಶನ್ ಭೇಟಿಗೆ ಬಂದಿದ್ದರು. ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದರು. ಇದನ್ನು ಕೇಳಿ ದರ್ಶನ್ ಬೇಸರಗೊಂಡಿದ್ದಾರೆ. ಅನ್ನ ಆಹಾರ ಸೇವಿಸದೇ ಹಠ ಮಾಡಿದ್ದರು ಸೌಮ್ಯ. ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜತೆ ಸೌಮ್ಯ ಆಗಮಿಸಿದ್ದರು. ಸೌಮ್ಯ ಜೈಲಿನ ಬಳಿ ಆಗಮಿಸಿದ್ದ ವಿಚಾರ ತಿಳಿದು ದರ್ಶನ್ ಬೇಸರಗೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿದ್ದ.ತ್ರಿ ವೀಲರ್ ಬೈಕ್‌ನಲ್ಲಿ ವಿಶೇಷ ಚೇತನ ಆಗಮಿಸಿದ್ದ . ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಈ ರೀತಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನ ಸೆರೆವಾಸ ಏಳನೇ ದಿನಕ್ಕೆ ಕಾಲಿಟ್ಟಿದೆ. ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಕುಡಿದು ದರ್ಶನ್‌ ತಡವಾಗಿ ನಿದ್ರೆಗೆ ಜಾರಿದರು. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡು ಎಂದಿನಂತೆ ಬಿಸಿನೀರು ಸೇವಿಸಿದ್ದಾರೆ ದರ್ಶನ್‌. ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್‌ ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

Continue Reading

ಸ್ಯಾಂಡಲ್ ವುಡ್

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Sonu Srinivas Gowda: ಈ ಮುಂಚೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ʻಬಿಗ್‌ಬಾಸ್‌ ಒಟಿಟಿ ಸೀಸನ್‌-1ʼರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) 11 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದರು. ಸೋನು ಗೌಡ ಅವರು ದರ್ಶನ್‌ ಪರವಾಗಿ ಮಾತನಾಡಿಲ್ಲ ಎಂದು ದಚ್ಚು ಫ್ಯಾನ್ಸ್‌ ಕಮೆಂಟ್‌ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ನಟಿ ವಿಡಿಯೊ ಮೂಲಕ ಆರೋಪಿಸಿದ್ದಾರೆ.

VISTARANEWS.COM


on

Sonu Srinivas Gowda harassed by darshan fans
Koo

ಬೆಂಗಳೂರು: ʻಬಿಗ್‌ಬಾಸ್‌ ಒಟಿಟಿ ಸೀಸನ್‌-1ʼರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಆಗಾಗ ಸುದ್ದಿಯಲ್ಲಿ ಇರುತ್ತಾರೆ (Sonu Srinivas Gowda). ಇದೀಗ ದರ್ಶನ್‌ ಕುರಿತಾಗಿ ನಾನು ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ. ಸೋನು ಗೌಡ ಅವರು ದರ್ಶನ್‌ ಪರವಾಗಿ ಮಾತನಾಡಿಲ್ಲ ಎಂದು ದಚ್ಚು ಫ್ಯಾನ್ಸ್‌ ಕಮೆಂಟ್‌ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ನಟಿ ವಿಡಿಯೊ ಮೂಲಕ ಆರೋಪಿಸಿದ್ದಾರೆ.

ವಿಡಿಯೊದಲ್ಲಿ ಸೋನು ಗೌಡ ಮಾತನಾಡಿ ʻʻಇನ್‌ಸ್ಟಾ ಗ್ರಾಮ್‌ ಹಾಗೂ ಯುಟ್ಯೂಬ್‌ನಲ್ಲಿ ತುಂಬ ಕೆಟ್ಟ ಕಮೆಂಟ್‌ಗಳು ನನಗೆ ಬರುತ್ತಿವೆ. ದರ್ಶನ್‌ ಅವರ ಬಗ್ಗೆ ನಾನು ಏನು ಮಾತನಾಡಿಲ್ಲ ಎಂದು. ನಾವು ಇನ್ನೂ ಚಿಕ್ಕವರು. ನಾವು ಅವರ ಬಗ್ಗೆ ಮಾತನಾಡುವಷ್ಟು ಇನ್ನೂ ಬೆಳೆದಿಲ್ಲ. ನಾವು ಒಂದ ಸಲ ಫ್ಯಾನ್‌ ಅಂತಾದರೆ, ಸಾಯುವರೆಗೂ ನಾವು ಫ್ಯಾನ್‌. ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಆಗೇ ಆಗುತ್ತೆ. ನಾವು ಒಳ್ಳೆಯವರಾಗಿರಬಹುದು, ಕೆಟ್ಟವರಾಗಿರಬಹುದು ಆದರೆ ತೀರ್ಪು ಬಂದೇ ಬರುತ್ತದೆ. ಅಲ್ಲಿಯವರೆಗೂ ಕಾಯಿರಿ. ಅಲ್ಲಿಯವರೆಗೆ ನಮಗೆ ಕೆಟ್ಟ ಕಮೆಂಟ್‌ ಮಾಡಬೇಡಿ. ಅಲ್ಲಿಯವರೆಗೆ ಆ ದೇವರು ಎರಡೂ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ. ನಮ್ಮ ಬಾಸ್‌ ದರ್ಶನ್‌ ಅವರು ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೋಪ್‌ ಇಟ್ಟುಕೊಂಡಿದ್ದೇನೆʼʼಎಂದು ಹೇಳಿಕೊಂಡಿದ್ದಾರೆ.

ಈ ಮುಂಚೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ʻಬಿಗ್‌ಬಾಸ್‌ ಒಟಿಟಿ ಸೀಸನ್‌-1ʼರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) 11 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

ಹಿಂದೊಮ್ಮೆ ಸೋನು ಅವರ ವಿಡಿಯೊ ಒಂದು ಲೀಕ್ ಆಗಿದ್ದೇ ಸೋನು ಗೌಡ ಪದೇ ಪದೇ ಟ್ರೋಲ್‌ ಆಗಲು ಕಾರಣ. ಸೋನು ಗೌಡ ತಮ್ಮ ನೋವನ್ನು ಈ ಹಿಂದೆ ವಿಡಿಯೊ ಮೂಲಕ ಹಂಚಿಕೊಂಡಿದ್ದರು. ಸೋನು ಗಳಗಳನೇ ಅತ್ತಿದ್ದರು. ಇದರ ಬೆನ್ನಲ್ಲೇ ಮಾಲ್ಡೀವ್ಸ್‌ ಪ್ರವಾಸಕ್ಕೆ ಹೋದರು. ಅಲ್ಲಿನ ಬೀಚ್‌ನಲ್ಲಿ ಬಿಂದಾಸ್‌ ಆಗಿ ಎಂಜಾಯ್‌ ಮಾಡುತ್ತಿರುವ ಚಿತ್ರಗಳನ್ನು ಸ್ವತಃ ಸೋನು ಗೌಡ ಹಂಚಿಕೊಂಡಿದ್ದರು. ಒಳ ಉಡುಪು ತೊಟ್ಟು, ಹಾಟ್‌ ಆಗಿ ಪೋಸ್ ನೀಡಿದ್ದ ಬೆನ್ನಲ್ಲೇ ಇದೀಗ ಬಿಕಿನಿ ವಿಡಿಯೊ ಶೇರ್‌ ಮಾಡಿಕೊಂಡಿದ್ದರು.

ಏನಿದು ರೇಣುಕಾ ಸ್ವಾಮಿ ಕೊಲೆ ಪ್ರಕರಣ?

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

ಟಾಲಿವುಡ್

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Actor Darshan: ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ. 2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan incident Naga Shaurya support
Koo

ಬೆಂಗಳೂರು: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ.

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

ಕರ್ನಾಟಕ

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Kannada New Movie: ಟರ್ಬೋ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ: ಎಂಬ ಹೊಸ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದಾರೆ.

VISTARANEWS.COM


on

roopantara Movie First Look Poster released
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುದ್ದ ಫಿಲಂಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಬಾಲಕೃಷ್ಣ ಅರ್ವನಕರ್ ತಿಳಿಸಿದ್ದಾರೆ.

Continue Reading
Advertisement
Actor Darshan special appeal to the fans
ಸ್ಯಾಂಡಲ್ ವುಡ್14 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ19 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ20 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Gold Rate Today
ವಾಣಿಜ್ಯ30 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್34 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ54 mins ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ1 hour ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Rohit Sharma
ಕ್ರೀಡೆ1 hour ago

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Payal Ghosh says she did not had physical relationship with anyone in past 9 years
ಬಾಲಿವುಡ್2 hours ago

Payal Ghosh: 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ, ಇರ್ಫಾನ್‌ ಪಠಾಣ್‌ನೇ ಕೊನೆ ಎಂದ ನಟಿ ಪಾಯಲ್‌ ಘೋಷ್‌ !

Delhi Rain
ದೇಶ2 hours ago

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌