Pooja Gandhi: ಮೃತ್ಯುಂಜಯ ಮಂತ್ರ ಪಠಣೆ ಮಾಡ್ತಾರಂತೆ ಪೂಜಾ ಗಾಂಧಿ; ನಟಿಯ ಕನ್ನಡಾಭಿಮಾನಕ್ಕೆ ಕನ್ನಡಿಗರು ಫಿದಾ! - Vistara News

ಸ್ಯಾಂಡಲ್ ವುಡ್

Pooja Gandhi: ಮೃತ್ಯುಂಜಯ ಮಂತ್ರ ಪಠಣೆ ಮಾಡ್ತಾರಂತೆ ಪೂಜಾ ಗಾಂಧಿ; ನಟಿಯ ಕನ್ನಡಾಭಿಮಾನಕ್ಕೆ ಕನ್ನಡಿಗರು ಫಿದಾ!

Pooja Gandhi: ಇದೀಗ ನಟಿ ʻʻಪ್ರತಿ ದಿನ ಮಂತ್ರ ಪಠಣ ಮಾಡುತ್ತೇನೆ ಹಾಗೇ ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ನನಗೆ ನಂಬಿಕೆ ಇದೆʼʼಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

VISTARANEWS.COM


on

Pooja Gandhi P reciting the Mrityunjaya mantra Kannadigas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ (Pooja Gandhi) ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚೆಗೆ ನಟಿ ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದರು. ಇದೀಗ ನಟಿ ʻʻಪ್ರತಿ ದಿನ ಮಂತ್ರ ಪಠಣ ಮಾಡುತ್ತೇನೆ ಹಾಗೇ ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ನನಗೆ ನಂಬಿಕೆ ಇದೆʼʼಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ಅವರಿಗೆ ನಂಬಿಕೆ ಇದೆ. ಇದು ನನಗೆ ಶಕ್ತಿ ನೀಡಿದೆ ಎನ್ನುವ ಅವರು, ಪ್ರತಿ ದಿನ, ಪ್ರತಿ ಕ್ಷಣವನ್ನು ಎಂಜಾಯ್ ಮಾಡಿ ಎಂಬ ಕಿವಿಮಾತು ಹೇಳಿದ್ದಾರೆ. ʻʻಒತ್ತಡ ಇಲ್ಲದೇ ಯಾರೂ ಈ ಪ್ರಪಂಚದಲ್ಲಿ ಇಲ್ಲ. ಮಕ್ಕಳಿಗೆ ಈಗ ಇದೆ. ನಿರುದ್ಯೋಗಿಗಳಿಗೆ ಇದೆ. ಬಡವರಿಗೆ ಎಲ್ಲರಿಗೂ ಅವರದ್ದೇ ಆದ ಒತ್ತಡ ಇದೆ. ಇದೀಗ ಜನ ಆಧ್ಯಾತ್ಮ ಕಡೆ ಬರುತ್ತಿದ್ದಾರೆʼʼ ಎಂದರು. ಹಾಗೆ ಕನ್ನಡಿಗರಿಗಾಗಿ ಅವರು ಹೊಸ ಪ್ರಾಜೆಕ್ಟ್ ಒಂದನ್ನು ತರುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡ್ತೇನೆ ಎಂದಿರುವ ಪೂಜಾ ಕರ್ನಾಟಕದ ಹೆಮ್ಮೆ ಮೈಸೂರ್ ಸ್ಯಾಂಡಲ್ ಸೋಪ್ ಬಳಕೆ ಮಾಡುತ್ತಾರೆ.

ಇದನ್ನೂ ಓದಿ: Pooja Gandhi: ಕುಪ್ಪಳಿಯ ಕವಿ ಶೈಲದಲ್ಲಿ ಪೂಜಾ ಗಾಂಧಿ ಜೋಡಿ!

ಹಿಂದಿ, ಬಂಗಾಳಿ ಚಿತ್ರಗಳಲ್ಲಿ ನಟಿಸುತ್ತಿದ್ದ ಪೂಜಾ ಗಾಂಧಿ 2006ರಲ್ಲಿ ತೆರೆಕಂಡ ʼಮುಂಗಾರು ಮಳೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರ ಕನ್ನಡದಲ್ಲಿ ದಾಖಲೆಯ ಕಲೆಕ್ಷನ್‌ ಮಾಡಿತ್ತು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೂಜಾ ಗಾಂಧಿ ಈ ಚಿತ್ರದ ಮೂಲಕ ಸ್ಟಾರ್‌ ಆಗಿ ಹೊರ ಹೊಮ್ಮಿದ್ದರು. ಬಳಿಕ ಪೂಜಾ ಗಾಂಧಿ ಪುನೀತ್‌ ರಾಜ್‌ ಕುಮಾರ್‌, ಯಶ್‌, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ. ಜತೆಗೆ ತಮಿಳು, ತೆಲುಗು, ಮಲೆಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Rishab Shetty: ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು; ಚಿಯಾನ್ ವಿಕ್ರಮ್ ಭೇಟಿ ಬಳಿಕ ರಿಷಬ್ ಶೆಟ್ಟಿ ರಿಯಾಕ್ಷನ್‌!

Rishab Shetty: ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

VISTARANEWS.COM


on

Rishab Shetty meets Chiyaan Vikram after 24 years
Koo

ಬೆಂಗಳೂರು: ಕನ್ನಡ ನಟ ರಿಷಬ್ ಶೆಟ್ಟಿ (Rishab Shetty) ಅವರು ಆಗಸ್ಟ್ 6ರಂದು ಬೆಂಗಳೂರಿನಲ್ಲಿ ತಮಿಳು ನಟ ಚಿಯಾನ್ ವಿಕ್ರಮ್ ಅವರನ್ನು ಭೇಟಿಯಾದರು. ಕೆಲವು ಕ್ಯಾಂಡಿಡ್ ಚಿತ್ರಗಳನ್ನು ಹಂಚಿಕೊಂಡ ರಿಷಬ್, ನಟನಾಗಿ ತನ್ನ ಪ್ರಯಾಣದಲ್ಲಿ ತನಗೆ ಸ್ಫೂರ್ತಿ ನೀಡಿದ ವಿಕ್ರಮ್ ಅವರನ್ನು ಭೇಟಿಯಾಗಲು 24 ವರ್ಷಗಳೇ ಬೇಕಾಯ್ತು ಎಂದು ಬರೆದುಕೊಂಡಿದ್ದಾರೆ. ಚಿಯಾನ್ ವಿಕ್ರಮ್ ಅವರು ಪಾ ರಂಜಿತ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ ‘ತಂಗಾಲನ್’ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಆಗ ರಿಷಬ್‌ ಅವರನ್ನು ನಟ ಭೇಟಿಯಾಗಿದ್ದಾರೆ.

ಆಗಸ್ಟ್ 6 ರಿಷಬ್ ಶೆಟ್ಟಿ ಜೀವನದಲ್ಲಿ ಮರೆಯಲಾಗದ ದಿನವಾಗಿದೆ. ಎಕ್ಸ್ ಪೇಜ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ರಿಷಬ್, “ನಟನಾಗುವಾಗ ನನ್ನ ಪ್ರಯಾಣದಲ್ಲಿ, ವಿಕ್ರಮ್ ಸರ್ ಯಾವಾಗಲೂ ನನಗೆ ಸ್ಫೂರ್ತಿಯಾಗಿದ್ದರು. 24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂದು ವಿಕ್ರಮ್‌ ಅವರನ್ನು ಭೇಟಿಯಾದೆ. ಹೀಗಾಗಿ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು, ತಂಗಲಾನ್‌ ಸಿನಿಮಾಗೆ ಶುಭ ಹಾರೈಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

‘ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್‌ನ ಚಿತ್ರೀಕರಣದಲ್ಲಿದ್ದಾರೆ, ಇದು ಡಿಸೆಂಬರ್ 2024 ರಲ್ಲಿ ಬಿಡುಗಡೆಯಾಗಲಿದೆ. ಚಿಯಾನ್ ವಿಕ್ರಮ್ ‘ತಂಗಲಾನ್’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಆಗಸ್ಟ್ 15 ರಂದು ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬರಲಿದೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Tharun Sudhir: ಸೋನಲ್ ಮಂಥೆರೋ ಸಹೋದರಿ ಹಾಗೂ ಅಮ್ಮ ಈ ಒಂದು ಬ್ಯಾಚುಲರ್ ಪಾರ್ಟಿ ಅರೇಂಜ್ ಮಾಡಿದ್ದಾರೆ. ಮಗಳ ಆಸೆಯನ್ನ ಗಮನದಲ್ಲಿಟ್ಟುಕೊಂಡೇ ಈ ಒಂದು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಸೋನಲ್‌ಗೆ ಸರ್ಪ್ರೈಸ್ ಮೇಲೆ ಸರ್ಪ್ರೈಸ್ ಕೊಟ್ಟಿದ್ದಾರೆ. ಈ ಮೂಲಕ ಇಡೀ ಫ್ಯಾಮಿಲಿ ಈ ಪಾರ್ಟಿಯಲ್ಲಿ ಎಂಜಾಯ್ ಮಾಡಿದೆ.

VISTARANEWS.COM


on

Tharun Sudhir sonal monteiro qualities she likes the most about tharun
Koo

ಬೆಂಗಳೂರು: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಮದುವೆಗೂ ಮುನ್ನ ಫ್ಯಾಮಿಲಿ ಜೊತೆ ಸೋನಾಲ್ ಬ್ಯಾಚುಲರೇಟ್ ಪಾರ್ಟಿ ಮಾಡಿಕೊಂಡಿದ್ದಾರೆ. ಇದೀಗ ತರುಣ್ ಅವರನ್ನು ಮುದ್ದಾಗಿ ಏನಂದು ಕರೆಯುತ್ತೀರಾ? ಎನ್ನುವ ಪ್ರಶ್ನೆ ಸೋನಲ್‌ಗೆ ಎದುರಾದಾಗ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೋನಲ್ ಮಂಥೆರೋ ಸಹೋದರಿ ಹಾಗೂ ಅಮ್ಮ ಈ ಒಂದು ಬ್ಯಾಚುಲರ್ ಪಾರ್ಟಿ ಅರೇಂಜ್ ಮಾಡಿದ್ದಾರೆ. ಮಗಳ ಆಸೆಯನ್ನ ಗಮನದಲ್ಲಿಟ್ಟುಕೊಂಡೇ ಈ ಒಂದು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಸೋನಲ್‌ಗೆ ಸರ್ಪ್ರೈಸ್ ಮೇಲೆ ಸರ್ಪ್ರೈಸ್ ಕೊಟ್ಟಿದ್ದಾರೆ. ಈ ಮೂಲಕ ಇಡೀ ಫ್ಯಾಮಿಲಿ ಈ ಪಾರ್ಟಿಯಲ್ಲಿ ಎಂಜಾಯ್ ಮಾಡಿದೆ. ತರುಣ್ ಅವರನ್ನು ಮುದ್ದಾಗಿ ಏನಂದು ಕರೆಯುತ್ತೀರಾ? ಎನ್ನುವ ಪ್ರಶ್ನೆ ಸೋನಲ್‌ಗೆ ಎದುರಾದಾಗ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ತರುಣ್, ಅದು ನಮ್ಮ ಪರ್ಸನಲ್. ಅದನ್ನೆಲ್ಲಾ ಹೇಳೋಕೆ ಆಗೊಲ್ಲ ಎಂದು ನಕ್ಕಿದ್ದಾರೆ. ಆದರೆ ನನ್ನನ್ನು ಬಹಳ ವಿಭಿನ್ನವಾಗಿ ಹಲೋ, ಹಲೋ ಕರೆಯುತ್ತಾರೆ ಎಂದು ಇಬ್ಬರು ನಕ್ಕಿದ್ದರು. ಇನ್ನು ಸೋನಲ್‌ ಕೂಡ ತರುಣ್‌ ಬಗ್ಗೆ ಈ ರೀತಿ ಹೇಳಿಕೊಂಡಿದ್ದರು. ʻʻನಮ್ಮಿಬ್ಬರ ನಡುವೆ ಟಿಪಿಕಲ್ ಸ್ಟೈಲ್ ಪ್ರಪೋಸ್ ಎನ್ನುವುದು ಆಗಲಿಲ್ಲ. ಪ್ರಪೋಸ್ ಎನ್ನುವುದಕ್ಕಿಂತ ಒಬ್ಬರನ್ನು ಒಬ್ಬರು ಹೆಚ್ಚು ಅರ್ಥ ಮಾಡಿಕೊಂಡಿದ್ದೇವೆʼʼ ಎಂದು ಇಬ್ಬರು ಹೇಳಿದ್ದಾರೆ. ಸೋನಲ್ ಮಾತನಾಡಿ “ತರುಣ್ ಜಂಟಲ್‌ಮನ್. ಒಂದು ಹುಡುಗಿಗೆ ತಾನು ಮದುವೆ ಆಗುವ ಹುಡುಗ ಹೇಗೆಲ್ಲಾ ಇರಬೇಕು ಎನ್ನುವ ಆಸೆ, ಕಲ್ಪನೆ ಇರುತ್ತದೆ. ತರುಣ್‌ಗೆ ಆ ಎಲ್ಲಾ ಗುಣಗಳು ಇವೆ. ತರುಣ್‌ಗೆ ಈಗೊ ಇಲ್ಲ. ಬಹಳ ಸಾಧು, ಹಂಬಲ್. ನಾನು ಸ್ವಲ್ಪ ಯೋಚಿಸುವುದು ಕಮ್ಮಿ. ನನಗೆ ಈ ರೀತಿ ಗೈಡ್ ಮಾಡುವವರೇ ಬೇಕು” ಎಂದಿದ್ದಾರೆ.

ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮ ನಡೆದರೆ ಆಗಸ್ಟ್ 11ರಂದು ವಿವಾಹ ಕಾರ್ಯಕ್ರಮ ನೆರವೇರುತ್ತಿದೆ.

ಇದನ್ನೂ ಓದಿ: Tharun Sudhir: ಸುಧೀರ್-ಸೋನಲ್ ವಿವಾಹ; ಲವ್‌ ಸ್ಟೋರಿ ರಿವೀಲ್‌ ಮಾಡಿದ   ಸ್ಯಾಂಡಲ್​ವುಡ್ ಜೋಡಿ!

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

Continue Reading

ಕರ್ನಾಟಕ

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Kannada New Movie: ‘ಸಿ’ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಇದು ಕಿರಣ್ ಸುಬ್ರಮಣಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

C Kannada movie release on August 23
Koo

ಬೆಂಗಳೂರು: ʼಸಿʼ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ (Kannada New Movie) ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದರ ಜತೆಗೆ ಸಿ ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ಬೆಂಬಲ ಕೂಡ ಸಿಕ್ಕಿದೆ‌.

ಅಂದಹಾಗೆ ‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ವಿಶೇಷ ಎಂದರೆ ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್ ಮಾಡಿದ್ದಾರೆ. ಹಾಡಿನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ನು ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಕೂಡ ಸಿ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಅವರು ಹಾರೈಸಿದ್ದಾರೆ.

‘ಸಿ’ ಚಿತ್ರವು ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Continue Reading

ಸಿನಿಮಾ

Spandana Vijay Raghavendra: ಸ್ಪಂದನ ಅಗಲಿ ಒಂದು ವರ್ಷ, ಭಾವುಕ ಪೋಸ್ಟ್‌ ಮಾಡಿದ ವಿಜಯ್‌ ರಾಘವೇಂದ್ರ

Spandana Vijay Raghavendra: ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ ಪತ್ನಿಯನ್ನು ನೆನೆದು ವಿಜಯ್​ ರಾಘವೇಂದ್ರ ಇಂದು ಸೋಶಿಯಲ್​ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯ ಸಂದೇಶ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದಾರೆ. ʼಐ ಲವ್ ಯು ಚಿನ್ನ.. ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದುʼ ಎಂದು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

VISTARANEWS.COM


on

spandana vijay raghavendra
Koo

ಬೆಂಗಳೂರು: ನಟ (Sandalwood Actor) ವಿಜಯ್​ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನ (Spandana Spandana Vijay Raghavendra) ಅವರು ಮೃತಪಟ್ಟು (Spandana Death) ಒಂದು ವರ್ಷವೇ ಕಳೆದಿದ್ದು, ಅಗಲಿದ ಪತ್ನಿಯನ್ನು ನೆನೆದುಕೊಂಡು ವಿಜಯ್‌ ರಾಘವೇಂದ್ರ ಸೋಶಿಯಲ್‌ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.

ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ ಪತ್ನಿಯನ್ನು ನೆನೆದು ವಿಜಯ್​ ರಾಘವೇಂದ್ರ ಇಂದು ಸೋಶಿಯಲ್​ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯ ಸಂದೇಶ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದಾರೆ. ʼಐ ಲವ್ ಯು ಚಿನ್ನ.. ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದುʼ ಎಂದು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಮ್ ಅವರ ಪುತ್ರಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು 2007ರ ಆಗಸ್ಟ್ 26ರಂದು ಮದುವೆ ಆಗಿದ್ದರು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ.

ಕಳೆದ ವರ್ಷ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ಮಾಡಲಾಯಿತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಆ.8ರಂದು ಬೆಂಗಳೂರಿಗೆ ತಂದು ಅತ್ಯಸಂಸ್ಕಾರಗಳನ್ನು ಮಾಡಲಾಗಿತ್ತು. ಸ್ಪಂದನಾ ಅವರ ನಿಧನ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಆಘಾತವನ್ನು ಉಂಟು ಮಾಡಿತ್ತು. ಹಲವು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ವಿಜಯ್‌ ರಾಘವೇಂದ್ರಗೆ ಸಾಂತ್ವನ ಹೇಳಿದ್ದರು.

ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್‌ ಸ್ಟಾರ್‌ ಯಶ್‌ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್‌ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.

ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ನಡುವೆ, ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ​ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಇದನ್ನೂ ಓದಿ: Spandana Vijay Raghavendra: ಸ್ಪಂದನಾ ಉತ್ತರ ಕ್ರಿಯೆಗೆ ಸಿದ್ಧತೆ; ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ

Continue Reading
Advertisement
Vinesh Phogat
ಪ್ರಮುಖ ಸುದ್ದಿ28 mins ago

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Niharika Konidela Nagendra Babu says Industry Is Not Our Father's Property
ಟಾಲಿವುಡ್37 mins ago

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Bangladesh Unrest
ದೇಶ53 mins ago

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Israel Palestine war
ವಿದೇಶ57 mins ago

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

nelamangala road accident
ಬೆಂಗಳೂರು58 mins ago

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Rishabh Pant
ಕ್ರೀಡೆ1 hour ago

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Akshay Kumar Riteish Fardeen recreate Heyy Babyy
ಬಾಲಿವುಡ್1 hour ago

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Viral Video
Latest2 hours ago

Viral Video: ಮೃಗಾಲಯದಲ್ಲಿ ಮಂಗನ ಎದುರು ಯುವತಿಯ ‘ಕಪಿ ಚೇಷ್ಟೆ’! ಪರಿಣಾಮ ಏನಾಯ್ತು ನೋಡಿ!

chemicals in food
ಬೆಂಗಳೂರು2 hours ago

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು19 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ20 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌